ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಡಳಿತದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿ ಭವಿಷ್ಯದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗುವುದರೊಂದಿಗೆ ಇತರ ರಾಜ್ಯಗಳಿಗೆ ಮಾದರಿಯಾಗಬಲ್ಲದು ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ #Minister Priyank Kharge ಹೇಳಿದರು.
ಎನ್ಐಎಸ್ಜಿಯ ಡಿಜಿಟಲ್ ಪರಿಣತಿಯೊಂದಿಗೆ ರಾಜ್ಯದ ಇ-ಆಡಳಿತದಲ್ಲಿ ಮಹತ್ವದ ಬೆಳವಣಿಗೆ ರೂಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎನ್ಐಎಸ್ಜಿಯ ಹಿರಿಯ ಅಧಿಕಾರಿಗಳ ನಡುವೆ ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸಲು ಮತ್ತು ಕರ್ನಾಟಕದ ಡಿಜಿಟಲ್ ರೂಪಾಂತರವನ್ನು ವೇಗಗೊಳಿಸಲು ಸಭೆ ಆಯೋಜಿಸಲಾಗಿತ್ತು.
Also read: Energy Minister K.J.George Announces Recruitment of 3,000 Linemen by the end of April 2025
ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು, ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರಗಳು, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರಿಂದ ಇ-ಆಡಳಿತದಲ್ಲಿ ಮಹತ್ವದ ಬದಲಾವಣೆಯನ್ನು ತರಬಹುದಾಗಿದೆ. ಹಾಗಾಗಿ ಕರ್ನಾಟಕ ಸರ್ಕಾರ ಎನ್ಐಎಸ್ಜಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್) ಜೊತೆ ಸಹಯೋಗಕ್ಕೆ ಮುಂದಾಗಿದ್ದು, ಇದರಿಂದ ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಬಲಪಡಿಸುವಂತಾಗುತ್ತದೆ. ಕರ್ನಾಟಕದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ಇ-ಆಡಳಿತ ಪರಿಹಾರಗಳನ್ನು ಸುಗಮಗೊಳಿಸಲು ಎನ್ಐಎಸ್ಜಿ ಸಂಸ್ಥೆಯ ಡಿಜಿಟಲ್ ತಂತ್ರಜ್ಞಾನ ನೆರವಾಗಲಿದೆ ಹಾಗೂ ಸಾರ್ವಜನಿಕ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ, ಸೇವಾ ವಿತರಣಾ ದಕ್ಷತೆಯನ್ನು ಸುಧಾರಿಸಿ, ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಎಐ- ಚಾಲಿತ ಆಡಳಿತ ಮಾದರಿಗಳನ್ನು ಸಂಯೋಜಿಸುವಲ್ಲಿ ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಎನ್ಐಎಸ್ಜಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವ್ ಬನ್ಸಾಲ್ ಮಾತನಾಡಿ, ನವೀನ ಡಿಜಿಟಲ್ ತಂತ್ರಜ್ಞಾನಗಳನ್ನು ರೂಪಿಸುವ ಮೂಲಕ ಕರ್ನಾಟಕದ ಇ-ಆಡಳಿತದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಎನ್ಐಎಸ್ಜಿ ಬದ್ಧವಾಗಿದೆ. ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವುದು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಲಪಡಿಸುವುದು ಮತ್ತು ವಾಯುಯಾನ ಕ್ಷೇತ್ರ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳನ್ನು ಅನ್ವೇಷಿಸುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖಗೊಂಡು ಕರ್ನಾಟಕದ ಸುಧಾರಿತ ಇ-ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತೇವೆ ಎಂದು ತಿಳಿಸಿದರು.
ಸಭೆಯಲ್ಲಿ ಸಿಎಫ್ಒ ವೀರಾಜು ನಾಯ್ಡು, ಎನ್ಐಎಸ್ಜಿಯ ಯೋಜನಾ ಅಧಿಕಾರಿ ಸ್ಟೀನ್ ಅನುರಾಗ್ ಪ್ರಾಥಿಪತಿ ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post