ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪಕ್ಷಾತೀತವಾಗಿ ಕುರುಬ ಸಮುದಾಯಕ್ಕೆ ಕನಿಷ್ಠ 40 ಕ್ಷೇತ್ರಗಳಲ್ಲಿ ಟಿಕೇಟ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರಮುಖರು, ಕರ್ನಾಟಕದಲ್ಲಿ ಪ್ರಬಲ ಜಾತಿಗಳ ಪೈಕಿ 3ನೆಯ ಸ್ಥಾನದಲ್ಲಿರುವ ಕುರುಬ ಸಮುದಾಯವು ಸುಮಾರು 75 ಅಧಿಕ ಜನಸಂಖ್ಯೆ ಹೊಂದಿದೆ. ರಾಜ್ಯದ 150ಕ್ಕೂ ಹೆಚ್ಚಿನ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಸುವಲ್ಲಿ ನಿರ್ಣಾಯಕರಾಗಿದ್ದಾರೆ ಎಂದಿದ್ದಾರೆ.
ರಾಜ್ಯದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕುರುಬ ಸಮಾಜದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ ಕಳೆದ ಹಲವು ದಶಕಗಳಂದ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಸೂಕ್ತ ಪ್ರಾತಿನಿಧ್ಯ ನೀಡದೇ ಸಮಾಜವನ್ನು ಕೇವಲ ಮತದಾನಕ್ಕಾಗಿ ಉಪಯೋಗಿಸಿಕೊಳ್ಳುತ್ತಿವೆ. ಸಮಾಜದ ಅಭ್ಯರ್ಥಿಗಳು ಗೆಲ್ಲುವ ಕಡೆಗೂ ಟಿಕೇಟ್ ನೀಡದೇ ಇರುವುದು ನಮ್ಮನ್ನು ಜಾಗೃತಗೊಳಿಸಿದೆ. ಆದ್ದರಿಂದ ಈ ಬಾರಿಯ 2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ನಮ್ಮ ಸಮಾಜದ ಕನಿಷ್ಠ 40 ಆಕಾಂಕ್ಷಿಗಳನ್ನು ಗುರುತಿಸಿ – ಗೆಲ್ಲುವಂತಹ ಕ್ಷೇತ್ರಗಳಲ್ಲಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.
Also read: ಮಾರ್ಚ್ 9: ಪಿಇಎಸ್ ಕಾಲೇಜಿನಲ್ಲಿ ಟೊಯೋಟಾ ಕಿರ್ಲೋಸ್ಕರ್’ನಿಂದ ಉದ್ಯೋಗಕ್ಕೆ ಸಂದರ್ಶನ
ತನ್ನದೇ ರಾಜಕೀಯ ಹಿನ್ನೆಲೆ ಹೊಂದಿರುವ ಸ್ವಾತಂತ್ರ ಸಂದರ್ಭದಲ್ಲಿ 1951ರಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದ ಕೊಲ್ಲೂರು ಮಲ್ಲಪ್ಪ ಅವರು ಸುರಪುರ ಕ್ಷೇತ್ರದಿಂದ ಪ್ರಥಮ ಬಾರಿಗೆ ಆಯ್ಕೆಯಾಗುವ ಮೂಲಕ ಕುರುಬ ಸಮುದಾಯವನ್ನು ಪ್ರತಿನಿಧಿಸಿದರು. ಅಲ್ಲಿಂದೀಚೆಗೆ ಮದ್ರಾಸ್ ಪ್ರಾಂತ್ಯದಲ್ಲಿ ನಾಗನಗೌಡ, ಟಿ. ಮರಿಯಪ್ಪ, ವೈ. ರಾಮಚಂದ್ರ, ನಂತರ ಎರಡು ಬಾರಿ ಉಪಮುಖ್ಯಮಂತ್ರಿಯಾಗಿ, ಒಂದು ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರ ವರೆಗೂ ಹಲವು ಮಂದಿ ರಾಜಕೀಯ ನೇತಾರರು ಕುರುಬ ಸಮುದಾಯದ ಪ್ರಾತಿನಿಧ್ಯ ವಹಿಸಿ, ರಾಜ್ಯಕ್ಕೆ ತಮ್ಮದೇ ಕೊಡುಗೆಗಳನ್ನು ನೀಡಿದ್ದಾರೆ. ಒಟ್ಟಾರೆಯಾಗಿ 1952 ರಿಂದ 2018ರ ವರೆಗೆ 15 ವಿಧಾನಸಭಾ ಚುನಾವಣಿ ಹಾಗೂ ಎರಡು ಉಪಚುನಾವಣೆಗಳಲ್ಲಿ ನಮ್ಮ ಸಮಾಜದ ನಾಯಕರು ವಿಧಾನಸಭೆ ಪ್ರವೇಶಿಸಿದ್ದಾರೆ. ಅಲ್ಲದೇ 2019ರವರೆಗೆ ಲೋಕಸಭಾ ಚುನಾವಣಿಗೂ ಸ್ಪರ್ಧಿಸಿದ್ದಾರೆ ಎಂದರು.
ರಾಜ್ಯದ 30 ಅಂದಾಜಿನಂತ ಕುರುಬ ಸಮುದಾಯಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹಾಗೂ ಇತರೆ ಜಿಲ್ಲೆಗಳ ಪೈಕಿ, ಎಲ್.ಜಿ. ಹಾವನೂರು ವರದಿಯ ರಾಜಕೀಯ ಪಕ್ಷಗಳಿಂದ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈಗಾಗಲೇ ಕೆಲವು ಕ್ಷೇತ್ರಗಳಲ್ಲಿ ಜಯ ಸಾಧಿಸಿರುವ ರಾಜಕೀಯ ನಾಯಕರು ತಮ್ಮ ವರ್ಚಸ್ಸಿನಿಂದಲೇ ಗೆದ್ದುಬಂದವರಾಗಿದ್ದಾರೆ. ಉಳದವರು ಗೆಲ್ಲಲು ಶಕ್ತರಾಗಿದ್ದರೂ ಟಿಕೆಟ್ ವಂಚಿತರಾಗಿ ರಾಜಕೀಯವಾಗಿ ಸ್ಥಾನಮಾನ ಕಳೆದುಕೊಳ್ಳುವಂತಾಗಿದೆ. ಕುರುಬ ಸಮಾಜದ ಮತದಾರರು ರಾಜ್ಯದಾದ್ಯಂತ ಹರಡಿರುವು ದರಿಂದ 2023ರ ಚುನಾವಣೆಯಲ್ಲಿ ಈ ಹಿಂದಿನಂತೆ ಅನ್ಯಾಯ ಮುಂದುವರಿಯಬಾರದು ಎಂದಿದ್ದಾರೆ.
2008ರಲ್ಲಿ ಒಟ್ಟು ಸಿದ್ದರಾಮಯ್ಯರವರು ಸೇರಿ ಒಟ್ಟು 6 ಮಂದಿ ಶಾಸಕರಾಗಿದ್ದರು, 2013ರಲ್ಲಿ 14 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ 12 ಮಂದಿ ಆಯ್ಕೆಯಾಗಿದ್ದರು. ಇವರಲ್ಲಿ ಕಾಂಗ್ರೆಸ್’ನ 8 ಮಂದಿ, ಒಬ್ಬರು ಬಿಜೆಪಿ ಮತ್ತು ಇಬ್ಬರು ಜೆಡಿಎಸ್’ನಿಂದ ಹಾಗೂ ಪಕ್ಷೇತರರಾಗಿ ಒಬ್ಬರು ಆಯ್ಕೆಯಾಗಿದ್ದರು. 2018ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಿಯಲ್ಲಿ ಕಾಂಗ್ರೆಸ್ ಪಕ್ಷದಿಂದ 20 ಮಂದಿ, ಜೆಡಿಎಸ್ ಪಕ್ಷದಿಂದ 11 ಮಂದಿ, ಬಿಜೆಪಿ ಪಕ್ಷದಿಂದ 5 ಮಂದಿಗೆ ಟಿಕೆಟ್ ನೀಡಿದ್ದು, ಅದರಲ್ಲೂ ಕುರುಬರಿಗೆ ಅನ್ಯಾಯವಾಗಿದೆ ಎಂದು ಕಿಡಿ ಕಾರಿದ್ದಾರೆ.
ಮಾಧ್ಯಮಗಳ ವರದಿಗಳ ಪ್ರಕಾರ ಸಿದ್ದರಾಮಯ್ಯರವರ ಅವಧಿಯ ಸರ್ಕಾರದಲ್ಲಿ ನಡೆಸಲಾದ ಜಾತಿ ಗಣತಿ 2016ರ ಆಧಾರದಲ್ಲಿ ಕುರುಬರ ಸಂಖ್ಯೆ ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಕನಿಷ್ಠ 40 ಮಂದಿಗೆ ಟಿಕೆಟ್ ನೀಡಬೇಕು ಎಂದು ಸಂಘ ಆಗ್ರಹಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















