Wednesday, October 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಗೋದೀಪ | ಗೋಸಂರಕ್ಷಣೆ – ಲೋಕಕಲ್ಯಾಣಕ್ಕಾಗಿ ಇಂದು ಸಂಜೆ ವಿಶ್ವಜನನಿಯ ವಿಶಿಷ್ಟ ಪೂಜೆ

ರಾಘವೇಶ್ವರ ಶ್ರೀಗಳಿಂದ ಗೋ ಸಂದೇಶ, ದೀಪಾವಳೀ ವಿಶೇಷ ಗೋಪೂಜೆ | ಗೋ ಗಾನಾಮೃತ, ಗೋಸೂಕ್ತ ಪಾರಾಯಣ, ಗೋಸೂಕ್ತ ಹವನ

October 22, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗೋಸಂರಕ್ಷಣೆ ಹಾಗೂ ಲೋಕಕಲ್ಯಾಣದ ಮಹಾಸಂಕಲ್ಪದೊಂದಿಗೆ ದೀಪಾವಳಿಯ #Deepawali ಪುಣ್ಯಪರ್ವದಲ್ಲಿ ವಿಶ್ವಜನನಿಯ ವಿಶಿಷ್ಟ ಪೂಜಾ ಕಾರ್ಯಕ್ರಮ ‘ಗೋದೀಪ – ದೀಪಾವಳೀ ವಿಶೇಷ ಗೋಪೂಜೆ’ಯು ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಶಾಖೆಯಾದ ಶ್ರೀರಾಮಾಶ್ರಮದಲ್ಲಿ ನ.22ರ ಬುಧವಾರ ಸಂಜೆ 5 ಗಂಟೆಯಿಂದ ನಡೆಯಲಿದೆ.

ಶ್ರೀರಾಮಚಂದ್ರಾಪುರ ಮಠದ #Shri Ramachandrapura Mutt ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ #Raghaveshwara Shri ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ದೀಪಾವಳಿ ಗೋಪೂಜೆಯ ಗೋಸಂದೇಶವನ್ನು ಶ್ರೀಗಳು ಅನುಗ್ರಹಿಸಲಿದ್ದಾರೆ.
ಆಹ್ವಾನಿತ ಗಣ್ಯ-ಮಾನ್ಯ ದಂಪತಿಗಳಿಂದ ಏಕಕಾಲಕ್ಕೆ ವಿಶೇಷರೀತಿಯಲ್ಲಿ ಸಾಲಂಕೃತ ಗೋವುಗಳಿಗೆ ಪೂಜೆ ನಡೆಯಲಿದ್ದು, ಗೋಮಾತೆಯ ಅನುಗ್ರಹ ಪ್ರಾಪ್ತಿಗಾಗಿ ಗೋಸೂಕ್ತ ಪಾರಾಯಣ, ಗೋಸೂಕ್ತ ಹವನ ನಡೆಯಲಿದೆ. ಶಿವಶ್ರೀ ಸ್ಕಂದಪ್ರಸಾದ್ ಹಾಗೂ ತಂಡದವರಿಂದ ‘ಗೋ ಗಾನಾಮೃತ’ ವಿಶೇಷ ಸಂಗೀತ ಕಾರ್ಯಕ್ರಮ ನಡೆಯಲಿದೆ. ನೂರಾರು ಮಾತೆಯರಿಂದ ಗೋಮಯ ಹಣತೆಯಲ್ಲಿ ಗೋ ಆರತಿ ನಡೆಯಲಿದ್ದು, ಬೆಳಗಿನಿಂದಲೇ ಸಾರ್ವಜನಿಕರಿಗೆ ಸಾಮೂಹಿಕ ಗೋಪೂಜೆಯನ್ನು ನಡೆಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಪಾರಂಪರಿಕ ರೀತಿಯಲ್ಲಿ ಗೋಪೂಜೆ ನಡೆಯಲಿದೆ.

ಶ್ರೀರಾಮಚಂದ್ರಾಪುರ ಮಠವು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ರಾಷ್ಟ್ರಮಟ್ಟದಲ್ಲಿ ಹತ್ತಾರು ಗೋಜಾಗರಣದ ಕಾರ್ಯಕ್ರಮಗಳನ್ನು ನಡೆಸಿದ್ದು, ದೇಶಾದ್ಯಂತ ಲಕ್ಷಾಂತರ ಗೋಪ್ರೇಮಿಗಳಿಗೆ ಪ್ರೇರಣೆಯನ್ನೂ, ಮಾರ್ಗದರ್ಶನವನ್ನೂ ಮಾಡಿದೆ. ಶ್ರೀಮಠದಿಂದ ನಡೆದ ‘ವಿಶ್ವ ಗೋಸಮ್ಮೇಳನ’ವು ಗೋಜಾಗರಣಕ್ಕೆ ವೇದಿಕೆಯನ್ನು ಕಲ್ಪಿಸಿದರೆ, ‘ವಿಶ್ವ ಮಂಗಲ ಗೋಗ್ರಾಮ ಯಾತ್ರೆ’ಯು ದೇಶಾದ್ಯಂತ 9 ಕೋಟಿ ಸಹಿಗಳನ್ನು ಸಂಗ್ರಹಿಸಿ, ರಾಷ್ಟ್ರಪತಿಗಳಿಗೆ ಸಲ್ಲಿಸಿತ್ತು. ‘ಮಂಗಲ ಗೋಯಾತ್ರೆ’ಯು ನಾಡಿನಾದ್ಯಂತ ಸಂಚರಿಸಿ ಕೋಟಿಗೂ ಅಧಿಕ ಗೋಸಂರಕ್ಷಣೆಯ ಹಕ್ಕೊತ್ತಾಯ ಪತ್ರಗಳನ್ನು ಸಂಗ್ರಹಿಸಿತ್ತು. ಇದಲ್ಲದೇ ಶ್ರೀಮಠದಿಂದ ನಡೆದ ಹತ್ತಾರು ಕಾರ್ಯಕ್ರಮಗಳು, ಗೋಸಂರಕ್ಷಣೆಗೆ ನಿರಂತರವಾಗಿ ನಡೆಯುತ್ತಿರುವ ಹತ್ತಾರು ಯೋಜನೆಗಳು, ಗವ್ಯೋತ್ಪನ್ನಗಳ ಮೂಲಕ ರೈತರಿಗೆ ಆರ್ಥಿಕ ಬಲ ತುಂಬುವ ಕಾರ್ಯಗಳು, ಗೋಸಂರಕ್ಷಣೆಯಲ್ಲಿ ನಿರತವಾಗಿರುವ ಶ್ರೀಮಠದ ಹತ್ತಾರು ಗೋಶಾಲೆಗಳು, ವಿಶ್ವದ ಪ್ರಥಮ ಗೋಬ್ಯಾಂಕ್, ವಿಶಿಷ್ಟ ಗೋಸ್ವರ್ಗ, ೩೦ಕ್ಕೂ ಅಧಿಕ ವಿಶಿಷ್ಟ ಭಾರತೀಯ ಗೋತಳಿಗಳ ಸಂರಕ್ಷಣಾ ವ್ಯವಸ್ಥೆ ಮುಂತಾದವುಗಳು ಶ್ರೀರಾಮಚಂದ್ರಾಪುರ ಮಠದ ವಿಶೇಷತೆಗಳಾಗಿದ್ದು, ಇದೀಗ ದೀಪಾವಳಿಯಂದು ವಿಶೇಷವಾಗಿ ಗೋಪೂಜೆಯ ಮೂಲಕ ಗೋಸಂರಕ್ಷಣೆಯ ಸಂದೇಶವನ್ನು ಸಾರಲು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಗೋದೀಪ – ದೀಪಾವಳೀ ವಿಶೇಷ ಗೋಪೂಜೆಯ ಆಮಂತ್ರಣ ಪತ್ರಿಕೆಯನ್ನು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಲೋಕಾರ್ಪಣೆ ಮಾಡಿ, ಗೋಸಂರಕ್ಷಣೆಯ ಪುಣ್ಯಕಾರ್ಯದಲ್ಲಿ ಎಲ್ಲಾ ಗೋಪ್ರೇಮಿಗಳು ವಿಶೇಷವಾಗಿ ಭಾಗಿಗಳಾಗುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿಗಳಾದ ಅರುಣ್ ಶ್ಯಾಮ್, ಶ್ರೀಮಠದ ವಿತ್ತಾಧ್ಯಕ್ಷ ಗಣೇಶ್ ಜಿ.ಎಲ್, ಯೋಜನಾ ಖಂಡದ ಶ್ರೀಸಂಯೋಜಕ ವಿದ್ವಾನ್ ಜಗದೀಶ ಶರ್ಮಾ ಸಂಪ, ಲೋಕಸಂಪರ್ಕ ಖಂಡದ ಶ್ರೀಸಂಯೋಜಕ ರಾಮಚಂದ್ರ ಭಟ್ಟ ಕೆಕ್ಕಾರು ಮುಂತಾದವರು ಉಪಸ್ಥಿತರಿದ್ದರು. ಗೋದೀಪ ಕಾರ್ಯಕ್ರಮದ ಸಂಚಾಲಕ ವಾದಿರಾಜ ಸಾಮಗ ಮಾತನಾಡಿ, ವಿವಿಧ ಕ್ಷೇತ್ರಗಳ 10 ಗಣ್ಯ ದಂಪತಿಗಳಿಂದ ಗೋಪೂಜೆ ನಡೆಯಲಿದ್ದು, 10 ವಿವಿಧ ಭಾರತೀಯ ಗೋತಳಿಗಳಿಗೆ ಪೂಜೆ ಸಲ್ಲಲಿದೆ. ಆನಂತರ ನೂರಾರು ಮಾತೆಯರಿಂದ ಗೋ ಆರತಿ ನಡೆಯಲಿದ್ದು, ಶಿವಶ್ರೀ ಸ್ಕಂದಪ್ರಸಾದ್ ಹಾಗೂ ತಂಡದವರಿಂದ ‘ಗೋ ಗಾನಾಮೃತ’ ವಿಶೇಷ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreDeepawaliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaghaveshwara shriShri Ramachandrapura Muttದೀಪಾವಳಿಬೆಂಗಳೂರುಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಶ್ರೀರಾಮಚಂದ್ರಾಪುರ ಮಠ
Previous Post

ಎಂಟು ರೈಲು ನಿಲ್ದಾಣಗಳ ಹೆಸರು ಬದಲಾವಣೆ | ಮರುನಾಮಕರಣಗೊಂಡ ನಿಲ್ದಾಣಗಳ ವಿವರ ಹೀಗಿದೆ

Next Post

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025

ಗೋದೀಪ | ಗೋಸಂರಕ್ಷಣೆ – ಲೋಕಕಲ್ಯಾಣಕ್ಕಾಗಿ ಇಂದು ಸಂಜೆ ವಿಶ್ವಜನನಿಯ ವಿಶಿಷ್ಟ ಪೂಜೆ

October 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು -ಬರೌನಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

October 22, 2025

ದೀಪಾವಳಿ ಹಬ್ಬ | ಹೈದರಾಬಾದ್ – ಬೆಳಗಾವಿ ನಡುವೆ ವಿಶೇಷ ರೈಲು ಸೇವೆ

October 22, 2025
Image Courtesy: Internet

ಅ.29ರವರೆಗೂ ರಾಜ್ಯದಲ್ಲಿ ಭಾರಿ ಮಳೆ | ಈ ಜಿಲ್ಲೆಗಳಿಗೆ ಆರೆಂಜ್, ಯಲ್ಲೋ ಅಲರ್ಟ್

October 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!