Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮೈಕ್ರೋ ಫೈನಾನ್ಸ್ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ | ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ

February 5, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಧ್ಯಮ  ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ  ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್  ಕಂಪನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು,  ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ #Shalini Rajaneesh ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ. ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ, ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ  ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು  ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ  ಅಧ್ಯಕ್ಷತೆಯಲ್ಲಿ ಸಭೆ

ಕಳೆದ ಜನವರಿ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ #Micro Finance ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ ಬ್ಯಾಂಕ್‌ (RBI) ನ ಪ್ರಾಂತೀಯ ನಿರ್ದೇಶಕರು, ಹಾಗೂ ಸಾ-ಧನ್ (SADHAN), ಎಕೆಎಂಐ, ಎಂಎಫ್ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು , ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕರು, ಅಧಿಕಾರಿಗಳು , ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ.  ಕಿರುಕುಳವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೆಶನ ನೀಡಿದ್ದಾರೆ.
ಕರ್ನಾಟಕದ ಅಧಿನಿಯಮಗಳು:

ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961 ಅಡಿಯಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.

ಈ ಅಧಿನಿಯಮದಡಿಯಲ್ಲಿ 2024ರ ಡಿಸೆಂಬರ್ 31 ರವರೆಗೆ  20,425 ಸಂಸ್ಥೆಗಳು ನೋಂದಣಿಯಾಗಿವೆ.  ಅದರಲ್ಲಿ 6590 ಲೇವಾದೇವಿದಾರರು, 6772 ಪಾನ್‌ ಬ್ರೋಕರ್‌ಗಳು, 7063 ಹಣಕಾಸಿನ ಸಂಸ್ಥೆಗಳು (Finance Corporation) ಇವೆ.

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ  ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16  ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ  ನಿಗದಿಪಡಿಸಲಾಗಿದೆ.

ಇಂತಹ ಮಾಹಿತಿಗಳನ್ನು ಸಾರ್ವಜನಿಕವಾಗಿ ಫಲಕಗಳ ಮೂಲಕ ಪ್ರದರ್ಶಿದಲು ಸಂಸ್ಥೆಗಳು ಹಾಗೂ ಸಂಬಂಧಿಸಿದ ಕಚೇರಿಗಳಿಗೆ ತಿಳಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು.  ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.
ಸೂಕ್ಷ್ಮ ಹಣಕಾಸು (Micro finance) ಸಂಸ್ಥೆಗಳು ಎಂದರೇನು?:

3 ಲಕ್ಷ ರೂ.ವರೆಗೂ ಆದಾಯವಿರುವ ಸಾರ್ವಜನಿಕರಿಗೆ ಸಾಲವನ್ನು ಒದಗಿಸುವ ವ್ಯವಸ್ಥೆಯನ್ನು ಮೈಕ್ರೋ ಫೈನಾನ್ಸ್‌ ಎಂದು ಘೋಷಿಸಲಾಗಿದೆ.  ಬ್ಯಾಂಕುಗಳಲ್ಲದ  ಸಹಕಾರ ಸಂಘಗಳು, ಎನ್‌ಬಿಎಫ್‌ಸಿಗಳು, ಸರ್ಕಾರೇತರ ಸಂಸ್ಥೆಗಳು, ಟ್ರಸ್ಟ್‌ಗಳು, ಸಣ್ಣ ಅಂಗಡಿ ಮಾಲೀಕರು, ಇನ್ನಿತರರು ಸಾಲ ನೀಡುತ್ತಾರೆ.

ಸಹಕಾರಿ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಸಹಕಾರ ಇಲಾಖೆ. ಬ್ಯಾಂಕ್‌ ಅಲ್ಲದ ಆರ್ಥಿಕ  ಸಂಸ್ಥೆಗಳ (ಎನ್‌ಬಿಎಫ್‌ಸಿ) ಮೇಲ್ವಿಚಾರಣೆಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮೂಲಕ ನೋಂದಣಿ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾ-ಧನ್ (SA-Dhan) ಮತ್ತು  ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್‌ವರ್ಕ್ (MFIN) ಸಂಸ್ಥೆಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಸ್ವಯಂ ನಿಯಂತ್ರಣಾ ಸಂಸ್ಥೆಗಳನ್ನಾಗಿ (self-regulatory organisation)  ನೇಮಿಸಿದೆ.ನಿಗದಿತ  ಉತ್ತಮ ಲೇವಾದೇವಿ ಪದ್ದತಿಗಳನ್ನು ಅನುಷ್ಠಾನಗೊಳಿಸಲು ಈ ಸಂಸ್ಥೆಗಳನ್ನು ರಚಿಸಲಾಗಿದೆ.

Also read: ಬೈಕ್ ವೀಲ್ಹಿಂಗ್‌ | ಯುವಕನಿಗೆ ಐದು ಸಾವಿರ ರೂ. ದಂಡ

ಕರ್ನಾಟಕ ರಾಜ್ಯದಲ್ಲಿ ಕೇವಲ 31 ಮೈಕ್ರೋ ಫೈನಾನ್ಸ್ ಇಂಡಸ್ಟ್ರಿಗಳು ಅಸ್ತಿತ್ವದಲ್ಲಿ ಇವೆ.  ಈ 31 ಸಂಸ್ಥೆಗಳು ಅಸೋಸಿಯೇಷನ್ ಆಫ್ ಕರ್ನಾಟಕ ಮೈಕ್ರೋ ಫೈ‌ನಾನ್ಸ್ ಇನಸ್ಟಿಟ್ಯೂಷನ್ (AKMI) ಸದಸ್ಯತ್ವ ಪಡೆದಿವೆ.  ರಾಜ್ಯದಲ್ಲಿ ಈ ಸಂಸ್ಥೆಗಳ 3090 ಶಾಖೆಗಳಿದ್ದು 37,967 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. 1,09,88,332 ಖಾತೆಗಳಲ್ಲಿ 59,367.76 ಕೋಟಿ ರೂ‌. ಬಾಕಿ ಉಳಿದಿದೆ.

ನಿಯಮಗಳನ್ನು ಪಾಲಿಸದ ಹಣಕಾಸು ಸಂಸ್ಥೆಗಳ ಬಗ್ಗೆ  ಮೇಲ್ವಿಚಾರಣಾ ಸಂಸ್ಥೆಗಳ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕಿಗೆ ವರದಿ ನೀಡಲಾಗುತ್ತದೆ , ಆರ್‌ಬಿಐ ಒಪ್ಪಿಗೆಯೊಂದಿಗೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗುತ್ತದೆ.

ದಬ್ಬಾಳಿಕೆಯ ಸಾಲ ಮರುಪಾವತಿ ಕ್ರಮದಿಂದ ಸಂರಕ್ಷಿಸಲು ಅಧಿಕೃತವಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳು

ಎಲ್ಲಾ ಎನ್‌ಬಿಎಫ್‌ಸಿ-ಎಂಎಫ್‌ಐಗಳು ಬಡ್ಡಿಯ ದರ, ಮರುಪಾವತಿಯ ಕಂತು ಮತ್ತು ಅಸಲು ಸಾಲ ಮುಂತಾದವುಗಳ ಬಗ್ಗೆ ʼಫ್ಯಾಕ್ಟ್ ಶೀಟ್‌ನಲ್ಲಿ ಸಾಲ ವಿತರಣೆಯ ಸಮಯದಲ್ಲಿ ಪ್ರತಿಯೊಬ್ಬ ಸಾಲಗಾರನಿಗೆ ಮಾಹಿತಿ ಒದಗಿಸಬೇಕು.
ಮೈಕ್ರೋ ಫೈನಾನ್ಸ್  ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು

ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್ (ಎಂಎಫ್ಐ) , ಮನಿ ಲೆಂಡಿಂಗ್ ಏಜೆನ್ಸಿ ಅಥವಾ ಸಂಸ್ಥೆಯಿಂದ ನೀಡುವ  ಎಲ್ಲಾ ಸಾಲಗಳ ಮಂಜೂರಾತಿ, ವಿತರಣೆಯ ಪ್ರಕ್ರಿಯೆಯಲ್ಲಿ ಈ  ಅಂಶಗಳನ್ನು  ಅನುಸರಿಸಬೇಕು:

  • ಸಾಲಗಾರನಿಗೆ ಸಾಲದ ನಿಯಮಗಳ ಬಗ್ಗೆ   ಸ್ಥಳೀಯ ಭಾಷೆಯಲ್ಲಿ ಅಥವಾ ಆತನಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು
  • ಸಾಲದ ಅರ್ಜಿಯಲ್ಲಿ ಷರತ್ತುಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಬೇಕು.
  • ಯಾವ ದಾಖಲೆಗಳನ್ನು ನೀಡುವ ಅವಶ್ಯಕತೆ ಇದೆ ಎನ್ನುವ ಸೂಕ್ತ ಮಾಹಿತಿ ನೀಡಬೇಕು.
  • ನಗದು ಪುಸ್ತಕ, ಲೆಡ್ಜರ್ ಮತ್ತು  ಇತರ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.
  • ಸಾಲ ನೀಡಿದ ದಿನಾಂಕದಿಂದ ಏಳು ದಿನಗಳ ಒಳಗೆ ಸಾಲಗಾರನಿಗೆ ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ ,ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ,  ಸಂಸ್ಥೆಯ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಯನ್ನು ತಲುಪಿಸಬೇಕು.
  • ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು.
  • ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ  ಸಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯ ನಕಲನ್ನು ನೀಡಬೇಕು.
  • ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ  ತಿಳಿಸಬೇಕು\ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು.  ತಮ್ಮ ಅಧಿಕೃತ ಹಕ್ಕುಗಳು,ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

ಸ್ವಸಹಾಯ ಗುಂಪುಗಳಲ್ಲಿ ಸಾಲ

ಮಹಿಳಾ ಸ್ವ-ಸಹಾಯ ಗುಂಪುಗಳಿಂದ  ಹಲವು ಕಡೆ ಬಳಕೆ ಸಾಲವನ್ನು (Consumption Loan) ಪಡೆಯುವ ವ್ಯವಸ್ಥೆ ಇದೆ. ಇವುಗಳಲ್ಲಿ ಶೇ. 99 ರಷ್ಟು ಯಶಸ್ವಿಯಾಗಿ ಮರುಪಾವತಿ ಕೂಡ ಆಗುತ್ತವೆ.  ಬ್ಯಾಂಕುಗಳಲ್ಲಿ ಇರುವಂತೆ ದಾಖಲಾತಿ ಒದಗಿಸುವ, ಜಾಮೀನು ನೀಡುವ ಹಾಗೂ ತಮ್ಮ ಆಸ್ತಿಗಳ ಅಡಮಾನ ಮಾಡುವ ಕ್ಲಿಷ್ಟ ವಿಧಾನ ಇಲ್ಲಿರುವುದಿಲ್ಲ. ಸರಳ ವಿಧಾನ ಅನುಸರಿಸಿ ಸಾಲ ಸಿಗುವುದರಿಂದ ಜನರು ಇಂತಹ ವ್ಯವಸ್ಥೆಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾರೆ.

ಸಹಾಯವಾಣಿ

ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು  ಸಹಾಯವಾಣಿ ಸಂಖ್ಯೆಗಳಿಗೆ ದೂರು ನೀಡಬಹುದು. ಸೂಕ್ಷ್ಮ ಹಣಕಾಸು ಸಂಸ್ಥೆ (MFI) ,ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಸಹಾಯವಾಣಿ ಸಂಖ್ಯೆ 14448 ಗೆ ಮಾಹಿತಿ ನೀಡಬಹುದು. ರಾಜ್ಯ ಸರ್ಕಾರವು  ಮೈಕ್ರೋ ಫೈನಾನ್ಸ್‌ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902   ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMicro FinanceNews_in_KannadaNews_KannadaShalini Rajaneeshಡಾ. ಶಾಲಿನಿ ರಜನೀಶ್ಬೆಂಗಳೂರುಮೈಕ್ರೋ ಫೈನಾನ್ಸ್ ಸಂಸ್ಥೆ
Previous Post

ಬೈಕ್ ವೀಲ್ಹಿಂಗ್‌ | ಯುವಕನಿಗೆ ಐದು ಸಾವಿರ ರೂ. ದಂಡ

Next Post

ಶಿವಮೊಗ್ಗ | ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ತಪಾಸಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ತಪಾಸಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!