ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾದ ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯಕ್ಕೆ ರಾಜಾರಾಂ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನದ ವತಿಯಿಂದ ಸಹಾಯ ಧನವನ್ನು ಮಂಜೂರು ಮಾಡಲು ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕೆಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಗ್ರಂಥಾಲಯಗಳು ಶ್ರೀಸಾಮಾನ್ಯನ ವಿಶ್ವವಿದ್ಯಾನಿಲಯಗಳೇ ಆಗಿವೆ. ಗ್ರಂಥಾಲಯ ಸೇವೆಯಂತಹ ಸಾರ್ವಜನಿಕ ಹಿತದೃಷ್ಟಿಯ ಹಾಗೂ ಸಾಮಾಜಿಕ ಕಳಕಳಿಯ ಸೇವೆಯ ಮೇಲೆ ದುಷ್ಕರ್ಮಿಗಳು ಈ ರೀತಿಯ ಪ್ರಹಾರ ನಡೆಸಿದ್ದು, ನಿಜಕ್ಕೂ ನೋವಿನ ಸಂಗತಿಯಾಗಿದೆ. ಹಾಗಾಗಿ ನಾವು ಇವರ ನೆರವಿಗೆ ಬರಬೇಕಾದದ್ದು ನಮ್ಮೆಲ್ಲರ ಕರ್ತವ್ಯವೂ ಆಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post