No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏಷಿಯನ್ ಗೇಮ್ಸ್, ಕಾಮನ್ ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಎ ಉದ್ಯೋಗ: ಸಿಎಂ ಬೊಮ್ಮಾಯಿ

kalpa News by kalpa News
December 7, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕ್ರೀಡಾಇಲಾಖೆಯ ಅಪರಮುಖ್ಯಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ ನೀಡಿ, ಪದವೀಧರರಾದ ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Governor Thavarchand Gehlot ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.
ಪದವೀಧರರಾಗಿರುವ ಏಷಿಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದರು.

ರಾಜ್ಯ ಸರ್ಕಾರದಿಂದ 75 ಕ್ರೀಡಾಪಟುಗಳಿಗೆ ತರಬೇತಿ :
ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತುಪಡೆದು, ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಲಕ್ಷ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಬೇಕು ಎಂದರು.
ಕ್ರೀಡೆ ರಾಷ್ಟ್ರೀಯ ಸಂಕೇತವಾಗುತ್ತಿದೆ :
ಯುವ ಕ್ರೀಡಾ ಪ್ರತಿಭೆಗಳು ದೇಶದ ಆಸ್ತಿ. ಏಕಾಗ್ರತೆ, ಹಾಗೂ ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವವನ್ನು ನೀಡಿದೆ. ಕ್ರೀಡೆ ಹವ್ಯಾಸವಾಗಿ ಪ್ರಾರಂಭವಾಗಿ ರಾಷ್ಟ್ರೀಯ ಸಂಕೇತವಾಗಿ ಇತ್ತೀಚೆಗೆ ಪರಿಗಣಿಸಲಾಗುತ್ತಿದೆ.ಒಂದು ರಾಷ್ಟ್ರವನ್ನು ಅದರ ಕ್ರೀಡಾ ಸಾಧನೆಯ ಮೇಲೆ ಗುರುತಿಸಲಾಗುತ್ತಿದೆ. ಭಾರತದಂತಹ ರಾಷ್ಟ್ರದಲ್ಲಿ ಕ್ರೀಡೆಯನ್ನು ಮುಖ್ಯವಾಹಿನಿಗೆ ತರಲು ಪ್ರಧಾನಿ ಮೋದಿಯವರು ಯಶಸ್ವಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಎಂಬ ಕಾರ್ಯಕ್ರಮಗಳ ಮೂಲಕ ಕ್ರೀಡೆಗಳ ಬಗ್ಗೆ ಜಾಗೃತಿ ಮೂಡಿದೆ. ಇದರ ಪರಿಣಾಮವಾಗಿ ಹಿಂದಿನ ಒಲಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವಂತಾಯಿತು. ಪ್ಯಾರಾ ಒಲಂಪಿಕ್ಸ್ ನಲ್ಲಿಯೂ ಭಾರತ ಮಹತ್ತರ ಸಾಧನೆಗಳನ್ನು ಮಾಡಿದೆ. ಇದಕ್ಕಾಗಿ ಎಲ್ಲ ಕ್ರೀಡಾಸಾಧಕರನ್ನು ಅಭಿನಂದಿಸುತ್ತೇನೆ ಎಂದರು.

ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆಗೆ ಯುವನೀತಿ :
ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ.ಕ್ರೀಡೆಗೆ ದೇಹದ ಹಾಗೂ ಮನಸ್ಸಿನ ಆರೋಗ್ಯದ ಜೊತೆಗೆ ಗೆಲ್ಲಲೇಬೇಕೆಂದು ಆಡುವುದು ಬಹಳ ಮುಖ್ಯ. ಕೇವಲ ಸೋಲಬಾರದು ಎಂದು ಆಡುವ ಭಾವನೆ ಕ್ರೀಡಾಪಟುಗಳಲ್ಲಿರಬಾರದು. ಗೆಲ್ಲಲೇಬೇಕೆಂಬ ಸಕಾರಾತ್ಮಕ ಭಾವನೆಯಿಂದ ಆಡಿದರೆ ಗೆಲುವು ನಿಮ್ಮದಾಗುತ್ತದೆ. ರಾಜ್ಯ ಸರ್ಕಾರ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಬಹಳ ಮಹತ್ವ ನೀಡುತ್ತಿದೆ. ಗೃಹ ಇಲಾಖೆಯ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರದಲ್ಲಿ ಕ್ರೀಡೆಗಳಿಗೆ ಪ್ರಾಶಸ್ತ್ಯ ನೀಡುವ ನಾಯಕರು, ಆಡಳಿತಗಾರರು ನಮ್ಮಲ್ಲಿದ್ದಾರೆ. ಇದರಿಂದಾಗಿ ಕ್ರೀಡೆಗೆ ಉತ್ತೇಜನ ನೀಡುವಂತಹ ನೀತಿಗಳನ್ನು ಜಾರಿಗೆ ತರಲು ಸಾಧ್ಯವಾಗಿದೆ ಎಂದರು.
ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ:
ಗ್ರಾಮಗಳಲ್ಲಿ ನಿಜವಾದ ಕ್ರೀಡಾಪ್ರತಿಭೆಗಳಿದ್ದು, ಅವರಿಗೆ ಸೂಕ್ತ ತರಬೇತಿ ನೀಡಿದ್ದಲ್ಲಿ ಮಹತ್ತರ ಸಾಧನೆಗಳನ್ನು ಮಾಡಲು ಶಕ್ತರಾಗಿರುತ್ತಾರೆ. ಆದ್ದರಿಂದ ಗ್ರಾಮ, ತಾಲ್ಲೂಕು, ಜಿಲ್ಲಾಪಂಚಾಯತಿ ಹಂತಗಳಲ್ಲಿ ಗ್ರಾಮೀಣ ಕ್ರೀಡಾಕೂಟವನ್ನು ಈ ವರ್ಷದಿಂದ ಪ್ರಾರಂಭಿಸಲಾಗಿದ್ದು, ಕೋಕೋ, ಕಬ್ಬಡ್ಡಿ, ಕುಸ್ತಿ, ವಾಲಿಬಾಲ್, ಕಂಬಳ ದಂತಹ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಕ್ರೀಡೆಗಳಲ್ಲಿ ತೊಡಗಿದವರು ಹೆಚ್ಚಾಗಿ ಕ್ರೀಡಾಮನೋಭಾವವನ್ನು ಹೊಂದಿದವರಾಗಿರುತ್ತಾರೆ. ಇಂತಹ ಕ್ರೀಡಾಪಟುಗಳು ಸೋಲನ್ನೂ ಸಹ ಗೆಲುವಿಗೆ ಪರಿವರ್ತಿಸಲು ಶ್ರಮಿಸುತ್ತಾರೆ. ಸೋಲಿಗೆ ಹೆದರುವ ಸ್ವಭಾವದವರಲ್ಲ.ಕ್ರೀಡಾಸಾಧಕರ ಬೆಂಬಲವಾಗಿ ಅವರ ಕುಟುಂಬವರ್ಗದವರು, ತರಬೇತುದಾರರ ಪರಿಶ್ರಮವೂ ಇರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕ ಓಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiGovernor Thavarchand gehlotKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶರಾವತಿ ಮುಳುಗಡೆ ಸಂತ್ರಸ್ತರ ಜಮೀನು ಸರ್ವೇ ಸಮಸ್ಯೆ ಹಿನ್ನೆಲೆ ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

Next Post

ಉದ್ದಿಮೆದಾರರಿಗೆ ತೆರಿಗೆ ಇಲಾಖೆಯಲ್ಲಾಗುವ ಬದಲಾವಣೆಗಳ ಬಗ್ಗೆ ಸೂಕ್ತ ಮಾರ್ಗದರ್ಶನ ಅಗತ್ಯ

kalpa News

kalpa News

Next Post
ಉದ್ದಿಮೆದಾರರಿಗೆ ತೆರಿಗೆ ಇಲಾಖೆಯಲ್ಲಾಗುವ ಬದಲಾವಣೆಗಳ ಬಗ್ಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಉದ್ದಿಮೆದಾರರಿಗೆ ತೆರಿಗೆ ಇಲಾಖೆಯಲ್ಲಾಗುವ ಬದಲಾವಣೆಗಳ ಬಗ್ಗೆ ಸೂಕ್ತ ಮಾರ್ಗದರ್ಶನ ಅಗತ್ಯ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL