No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಗುಣಶೀಲ ಆಸ್ಪತ್ರೆಗೆ ಸ್ತ್ರೀರೋಗ – ಸಂತಾನ ಸಾಫಲ್ಯ ಚಿಕಿತ್ಸೆಯಲ್ಲಿ 50 ವರ್ಷಗಳ ಸಾರ್ಥಕ ಸಂಭ್ರಮ

ಆಸ್ಪತ್ರೆಯ ಹೊಸ ರೂಪ ಮತ್ತು ಆಕ್ಸಾನ್ ಚೈಲ್ಡ್ ಡೆವಲಪ್‌ಮೆಂಟ್ ಸೆಂಟರ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 6, 2025
in Special Articles
0
ಗುಣಶೀಲ ಆಸ್ಪತ್ರೆಗೆ ಸ್ತ್ರೀರೋಗ – ಸಂತಾನ ಸಾಫಲ್ಯ ಚಿಕಿತ್ಸೆಯಲ್ಲಿ 50 ವರ್ಷಗಳ ಸಾರ್ಥಕ ಸಂಭ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಂತಾನೋತ್ಪತ್ತಿ (ಐ.ವಿ.ಎಫ್) ಸಂಬಂಧಿ ಚಿಕಿತ್ಸೆಗಳು ಹಾಗೂ ಸ್ತ್ರೀರೋಗಗಳ ಚಿಕಿತ್ಸೆಯಲ್ಲಿ ಭಾರತದಲ್ಲೇ ಮುಂಚೂಣಿಯಲ್ಲಿರುವ ಗುಣಶೀಲ ಸರ್ಜಿಕಲ್ ಮತ್ತು ಮೆಟರ್ನಿಟಿ ಆಸ್ಪತ್ರೆಗೆ ಇದೀಗ 50 ವರ್ಷಗಳು ತುಂಬಿದ್ದು, ಇಂದು ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿತು. ಗುಣಶೀಲದ ಸೇವಾಯಾನದಲ್ಲಿ ಮಹತ್ವದ ಮೈಲುಗಲ್ಲಾಗಿರುವ ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ #Minister Dinesh Gundurao ಅವರು ಭಾಗವಹಿಸಿ, ಆಸ್ಪತ್ರೆಯ ನವೀಕೃತ ಸ್ವರೂಪವನ್ನು ಅನಾವರಣಗೊಳಿಸಿದರು.

ಜೊತೆಗೆ ಸಂತಾನೋತ್ಪತ್ತಿ ಚಿಕಿತ್ಸೆಯಲ್ಲಿ ಮಹತ್ವದ ಪಾತ್ರವಹಿಸುವ ‘ಮುಖಚರ್ಯೆ ಗುರುತಿಸುವ ತಂತ್ರಜ್ಞಾನ’ ಮತ್ತು ಮಗುವಿನ ಬೆಳವಣಿಗೆ ಮತ್ತು ಪ್ರಗತಿಗೆ ಮೀಸಲಾದ ಜಾಗತಿಕ ದರ್ಜೆಯ ‘ಆಕ್ಸಾನ್ ಚೈಲ್ಡ್ ಡೆವಲಪ್‌ಮೆಂಟ್ ಸೆಂಟರ್’ ಅನ್ನು ಉದ್ಘಾಟಿಸಿದರು. ಬಸವನಗುಡಿ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಸುಬ್ರಮಣ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹೊಸದಾಗಿ ಪ್ರಾರಂಭವಾದ ಆಕ್ಸಾನ್ ಚೈಲ್ಡ್ ಡೆವಲಪ್‌ಮೆಂಟ್ ಸೆಂಟರ್ – ಇದು ಸಮಗ್ರ ಮಕ್ಕಳ ಬೆಳವಣಿಗೆ ಮತ್ತು ಅಭಿವೃದ್ಧಿ ಕೇಂದ್ರವಾಗಿದ್ದು, ಮಕ್ಕಳ ದೈಹಿಕ, ಬೌದ್ಧಿಕ, ಭಾವನಾತ್ಮಕ ಮತ್ತು ಸಾಮಾಜಿಕ ಸಾಮರ್ಥ್ಯವನ್ನು ಸುಧಾರಿಸುವ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಈ ಮೂಲಕ, ಗುಣಶೀಲ ಆಸ್ಪತ್ರೆ ತನ್ನ ಸೇವೆಯನ್ನು ಸ್ತ್ರೀರೋಗ ಮತ್ತು ಸಂತಾನಫಲ ಚಿಕಿತ್ಸೆಗಳ ಜೊತೆಗೆ ಮಕ್ಕಳ ಆರೋಗ್ಯ ಬೆಳವಣಿಗೆ ಕಡೆಗೂ ವಿಸ್ತರಿಸಿದಂತಾಗಿದೆ.

ಸಂತಾನ ಫಲ ಚಿಕಿತ್ಸೆಗಳಲ್ಲಿ ಐದು ದಶಕಗಳ ಸಾರ್ಥಕ ಸೇವೆಗಾಗಿ ಗುಣಶೀಲ ಆಸ್ಪತ್ರೆಯ #Gunasheela Hospital ತಂಡವನ್ನು ಅಭಿನಂದಿಸಿದ ದಿನೇಶ್ ಗುಂಡೂರಾವ್ ಅವರು, “ಕರ್ನಾಟಕದ ಎಲ್ಲೆಡೆ ದಂಪತಿಗಳು ಮತ್ತು ಮಹಿಳೆಯರಿಗೆ ಸುಧಾರಿತ ಸಂತಾನೋತ್ಪತ್ತಿ ಸೇವೆ ಮತ್ತು ಸ್ತ್ರೀರೋಗ ಚಿಕಿತ್ಸೆಯ ಸೌಕರ್ಯಗಳನ್ನು ಒದಗಿಸಲಿ,” ಎಂದು ಸಲಹೆ ನೀಡಿದರು.
ಸುವರ್ಣ ಸಂಭ್ರಮದ ಕಾರ್ಯಕ್ರಮದಲ್ಲಿ ಮಾತನಾಡಿದ ಗುಣಶೀಲ ಸರ್ಜಿಕಲ್ ಮತ್ತು ಮೆಟರ್ನಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಂತಾನಸಾಫಲ್ಯ ತಜ್ಞೆ ಡಾ. ದೇವಿಕಾ ಗುಣಶೀಲ, “ಇಂದು ಗುಣಶೀಲದ ಇತಿಹಾಸದಲ್ಲಿ ಒಂದು ಮಹತ್ವದ ಮೈಲುಗಲ್ಲಿಟ್ಟ ದಿನ. ಐವತ್ತು ವರ್ಷಗಳ ಹಿಂದೆ ನನ್ನ ತಾಯಿ ಡಾ. ಸುಲೋಚನಾ ಗುಣಶೀಲ ಅವರು ಆರಂಭಿಸಿದ ಈ ಆಸ್ಪತ್ರೆ ಇಂದು ಸಾವಿರಾರು ಕುಟುಂಬಗಳ ಭವಿಷ್ಯವನ್ನೇ ಬದಲಿಸಿದೆ. ದಕ್ಷಿಣ ಭಾರತದ ಮೊದಲ ಪ್ರನಾಳ ಶಿಶು 1988ರಲ್ಲಿ ಜನಿಸಿದ್ದರಿಂದ ಆರಂಭಿಸಿ ಇವತ್ತಿನವರೆಗೆ ಗುಣಶೀಲ ಆಸ್ಪತ್ರೆಯು ಹೊಸ ಭರವಸೆ, ನಾವೀನ್ಯತೆ ಹಾಗೂ ಕಾರುಣ್ಯತೆಯ ಪ್ರತಿಕವಾಗಿ ನಿಂತಿದೆ. ಕಾಲ ಕಾಲಕ್ಕೆ ಜಾಗತಿಕ ಗುಣಮಟ್ಟದ ವೈದ್ಯಕೀಯ ತಂತ್ರಜ್ಞಾನಗಳನ್ನು ನಾವು ಅಳವಡಿಸಿಕೊಳ್ಳುತ್ತಾ ಬಂದಿದ್ದೇವೆ. ಸಂತಾನೋತ್ಪತ್ತಿ ಮತ್ತು ಗರ್ಭಧಾರಣೆಗೆ ಸಂಬಂಧಿಸಿದ ಅತ್ಯಂತ ಸೂಕ್ಷ್ಮ ಸಮಸ್ಯೆಗಳಿಗೂ ಪರಿಹಾರ ನೀಡುವ ಪ್ರಯತ್ನ ಮಾಡುತ್ತಾ, ಬಂಜೆತನ ಹೊಂದಿರುವ ಪ್ರತಿಯೊಂದು ದಂಪತಿಯೂ ಮಗುವನ್ನು ಹೊಂದಲು ಸೂಕ್ತ ಚಿಕಿತ್ಸೆ ನೀಡುತ್ತಾ ಬಂದಿದ್ದೇವೆ. ಐ.ವಿ.ಎಫ್ ‌ನಿಂದ ಹಿಡಿದು ವಂಶವಾಹಿ ಪರೀಕ್ಷೆಯವರೆಗೂ ಒಂದೇ ಸೂರಿನಡಿಯಲ್ಲಿ ಸೇವೆ ನೀಡುತ್ತಿದ್ದೇವೆ. ಇದೀಗ ಆಕ್ಸಾನ್ ಚೈಲ್ಡ್ ಡೆವಲಪ್‌ಮೆಂಟ್ ಸೆಂಟರ್ ಮೂಲಕ ದೂರದರ್ಶಿತ್ವವನ್ನು ಮಗುವಿನ ಸಮಗ್ರ ಆರೋಗ್ಯ ಮತ್ತು ಬೆಳವಣಿಗೆಗೆ ವಿಸ್ತರಿಸಿದ್ದೇವೆ,” ಎಂದರು.

ಗುಣಶೀಲ ಆಸ್ಪತ್ರೆಯ ಎರಡು ಮಿಷನ್‌ಗಳಾದ ಗುಣಮಟ್ಟದ ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣದ ಕುರಿತು ಮಾಹಿತಿ ನೀಡಿದ ಗುಣಶೀಲ ಸರ್ಜಿಕಲ್ ಮತ್ತು ಮೆಟರ್ನಿಟಿ ಆಸ್ಪತ್ರೆಯ ನಿರ್ದೇಶಕ ಡಾ. ರಾಜಶೇಖರ್ ನಾಯಕ್, “ಗುಣಶೀಲ ಯಾವತ್ತಿಗೂ ಒಂದು ಆಸ್ಪತ್ರೆಗಿಂತ ಹೆಚ್ಚಾಗಿ ಜ್ಞಾನ, ಕರುಣೆ ಮತ್ತು ನಾವೀನ್ಯತೆಯ ಕೇಂದ್ರದ ರೀತಿಯಲ್ಲಿ ಸೇವೆ ನೀಡುತ್ತಾ ಬಂದಿದೆ. ಈವರೆಗೆ ನಾವು 250ಕ್ಕೂ ಹೆಚ್ಚು ವೈದ್ಯರನ್ನು ಮತ್ತು 100ಕ್ಕೂ ಹೆಚ್ಚು ಭ್ರೂಣಶಾಸ್ತ್ರಜ್ಞರನ್ನು ತರಬೇತುಗೊಳಿಸಿದ್ದೇವೆ. ತನ್ಮೂಲಕ ಡಾ. ಸುಲೋಚನಾ ಗುಣಶೀಲ ಅವರ ಪರಂಪರೆ ಮುಂದುವರೆಯುವಂತೆ ನೋಡಿಕೊಂಡು, ಮುಂದಿನ ತಲೆಮಾರಿನ ವೃತ್ತಿಪರರನ್ನು ಸಜ್ಜುಗೊಳಿಸುತ್ತಿದ್ದೇವೆ. ಮುಂದಿನ ಹಂತದಲ್ಲಿ ನಾವು ಕರ್ನಾಟಕದ 2 ಮತ್ತು 3 ನೇ ಸ್ತರದ ನಗರಗಳಲ್ಲಿ ನಮ್ಮ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದ್ದೇವೆ. ಅದರೊಂದಿಗೆ ರಾಜ್ಯದ ಮೂಲೆ ಮೂಲೆಗೂ ಸುಧಾರಿತ ಸಂತಾನೋತ್ಪತ್ತಿ ಚಿಕಿತ್ಸೆಯ ಸೌಕರ್ಯಗಳು ತಲುಪಬೇಕು ಎಂಬುದು ನಮ್ಮ ಆಶಯ. 2024ರಲ್ಲಿ ಬಳ್ಳಾರಿಯಲ್ಲಿ ನಮ್ಮ ಘಟಕ ಆರಂಭಿಸುವ ಮೂಲಕ ಈ ಕನಸಿಗೆ ಸಾಕಾರದ ರೂಪ ನೀಡುವ ಕಾರ್ಯ ಆರಂಭವಾಗಿದೆ. ನಮ್ಮ ಮುಖ್ಯ ಆಸ್ಪತ್ರೆ ಬಸವನಗುಡಿಯಲ್ಲಿದ್ದು, ಇದು ಸಂತಾನಸಾಫಲ್ಯ ಚಿಕಿತ್ಸೆಯ ಯಾನದಲ್ಲಿ ಯಾವಾಗಲೂ ಕೇಂದ್ರ ಸ್ಥಾನದಲ್ಲೇ ಉಳಿಯಲಿದೆ. ಕೋರಮಂಗಲ ಮತ್ತು ಬಳ್ಳಾರಿಯಲ್ಲಿರುವ ನಮ್ಮ ಘಟಕಗಳು ವಿಶ್ವದರ್ಜೆಯ ಸಂತಾನ ಸಾಫಲ್ಯ ಸೌಕರ್ಯಗಳನ್ನು ಎಲ್ಲರಿಗೂ ಸಮೀಪದ ಸ್ಥಳದಲ್ಲೇ ಲಭಿಸುವಂತೆ ಮಾಡುವ ಗುರಿಗೆ ನಿದರ್ಶನಗಳಾಗಿವೆ,” ಎಂದರು.
ಖ್ಯಾತ ಸ್ತ್ರೀರೋಗ ತಜ್ಞೆ ದಿವಂಗತ ಡಾ. ಸುಲೋಚನಾ ಗುಣಶೀಲ ಹಾಗೂ ಸರ್ಜನ್ ಡಾ. ಮಾವಹಳ್ಳಿ ಗುಣಶೀಲ ಅವರಿಂದ 1975ರಲ್ಲಿ ಸ್ಥಾಪಿತವಾದ ಗುಣಶೀಲ ಆಸ್ಪತ್ರೆಯು ಇಂದು ಸಂತಾನೋತ್ಪತ್ತಿ (ಐ.ವಿ.ಎಫ್) ಮತ್ತು ಸ್ತ್ರೀರೋಗ ಚಿಕಿತ್ಸೆಗಳಲ್ಲಿ ದೇಶದಾದ್ಯಂತ ಪ್ರಸಿದ್ದಿ ಪಡೆದಿದೆ. 1988 ರಲ್ಲಿ ಗುಣಶೀಲ ಆಸ್ಪತ್ರೆಯು ದಕ್ಷಿಣ ಭಾರತದ ಮೊದಲ ಪ್ರನಾಳ ಶಿಶುವಿನ ಜನನಕ್ಕೆ ಕಾರಣವಾಗುವುದರೊಂದಿಗೆ ದೇಶದಲ್ಲೇ ಐತಿಹಾಸಿಕ ದಾಖಲೆಗೆ ಸಾಕ್ಷಿಯಾಗಿತ್ತು. ಅಲ್ಲಿಂದ ಮೊದಲ್ಗೊಂಡು ಸಂತಾನ ಸಾಫಲ್ಯ ಚಿಕಿತ್ಸೆಗಳಲ್ಲಿ ಗುಣಶೀಲ ಆಸ್ಪತ್ರೆ ತನ್ನ ಪ್ರಸಿದ್ಧಿಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿತು.

ಸಾಧನೆ: ಕಳೆದ ಐದು ದಶಕಗಳಲ್ಲಿ ಐದು ದಶಕಗಳಲ್ಲಿ ಗುಣಶೀಲ ಆಸ್ಪತ್ರೆಯು ಸಂತಾನ ಸಾಫಲ್ಯ ಚಿಕಿತ್ಸೆಗಳಲ್ಲಿ ಹಲವು ಪ್ರಥಮಗಳನ್ನು ಸಾಧಿಸಿದೆ. ಭಾರತದ ಮೊದಲ ಇನ್-ಹೌಸ್ ಫರ್ಟಿಲಿಟಿ ಜೆನೆಟಿಕ್ಸ್ ಪ್ರಯೋಗಾಲಯ ಪ್ರಾರಂಭವಾಗಿದ್ದು ಇದೇ ಆಸ್ಪತ್ರೆಯಲ್ಲಿ. ಈ ಪ್ರಯೋಗಾಲಯದಲ್ಲಿ ಐ.ವಿ.ಎಫ್ ಚಿಕಿತ್ಸೆಗೂ ಮೊದಲು ಸುಧಾರಿತ ವಂಶವಾಹಿ ಪರೀಕ್ಷೆ ನಡೆಸಲಾಗುತ್ತದೆ. ಕ್ಯಾನ್ಸರ್ ರೋಗಿಗಳಲ್ಲಿ ಸಂತಾನ ಸಾಮರ್ಥ್ಯ ಕಾಯ್ದಿರಿಸುವ ಸೌಕರ್ಯವನ್ನು ಸಮಾಜ ಸೇವೆಯ ಸ್ವರೂಪದಲ್ಲಿ ಆಸ್ಪತ್ರೆಯು ಒದಗಿಸುತ್ತ ಬಂದಿದೆ. 2004ರಲ್ಲಿ ಗುಣಶೀಲ ಆಸ್ಪತ್ರೆಯಲ್ಲಿ ಭಾರತದ ಮೊದಲ ಇನ್ ವಿಟ್ರೋ ಮ್ಯಾಚುರೇಷನ್ (ಐ.ವಿ.ಎಂ) ಚಿಕಿತ್ಸೆಯಾಧಾರಿತ ಶಿಶು ಜನಿಸಿದ್ದು ಕೂಡಾ ಮಹತ್ವದ ಮೈಲುಗಲ್ಲಾಗಿದೆ. 2013 ರಲ್ಲಿ ಎಂಬ್ರಿಯೋಸ್ಕೋಪ್ ತಂತ್ರಜ್ಞಾನದ ಮೂಲಕ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಗರ್ಭಧಾರಣೆ ಆಯಿತು. ಈ ತಾಯಿಗೆ ಅವಳಿ ಮಕ್ಕಳು ಜನಿಸಿದವು. 2016ರಲ್ಲಿ ಪ್ರೀ ಇಂಪ್ಲಾಂಟೇಷನ್ ಜೆನೆಟಿಕ್ ಸ್ಕ್ರೀನಿಂಗ್ (ಪಿ.ಜಿ.ಎಸ್) ಮೂಲಕ 24 ಗಂಟೆಗಳಲ್ಲಿ ಶೀತಲೀಕೃತ ಭ್ರೂಣ ಬಳಸಿ ಭಾರತದಲ್ಲೇ ಮೊದಲ ಗರ್ಭಧಾರಣೆಯನ್ನು ಗುಣಶೀಲ ಆಸ್ಪತ್ರೆಯಲ್ಲಿ ಮಾಡಲಾಯಿತು. ಇದರಲ್ಲಿನ ನಿಖರತೆ ಮತ್ತು ವೇಗ ಒಂದು ದಾಖಲೆಯಾಗಿದೆ. ಗುಣಶೀಲ ಆಸ್ಪತ್ರೆಯು ತನ್ನ ಐದು ದಶಕಗಳ ಯಾನದಲ್ಲಿ 2.72 ಲಕ್ಷಕ್ಕೂ ಹೆಚ್ಚು ಸಂತಾನಹೀನ ದಂಪತಿಗಳಿಗೆ ಚಿಕಿತ್ಸೆ ನೀಡಿದೆ. ತನ್ಮೂಲಕ ಪ್ರಸೂತಿ (ಹೆರಿಗೆ ಮೂಲಕ) ಮತ್ತು ಸಂತಾನೋತ್ಪತ್ತಿ ಚಿಕಿತ್ಸೆಗಳ ಮೂಲಕ 4.68 ಲಕ್ಷ ಶಿಶುಗಳ ಜನನಕ್ಕೆ ನೆರವಾಗಿದೆ. ಮನೆಗೊಂದು ಮಗು ಬೇಕು ಎಂದು ಕನಸು ಕಾಣುವ ದಂಪತಿಗಳಿಗೆ ಜಾಗತಿಕ ದರ್ಜೆಯ ತಂತ್ರಜ್ಞಾನ ಮತ್ತು ಚಿಕಿತ್ಸೆಗಳಿಂದ ನಂಬಿಕೆ, ಭರವಸೆ ಮೂಡಿಸುವ ಮೂಲಕ ಭವಿಷ್ಯವನ್ನು ಸುಂದರವಾಗಿಸುವ ಕಾಯಕವನ್ನು ಗುಣಶೀಲ ಆಸ್ಪತ್ರೆ ನಿರಂತರವಾಗಿ ನಡೆಸಿಕೊಂಡು ಹೋಗಲಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಗುಣಶೀಲ ಆಸ್ಪತ್ರೆ, ಬಸವನಗುಡಿ, ಬೆಂಗಳೂರು, ದೂ: 080-46462600.
ಗುಣಶೀಲ ಸರ್ಜಿಕಲ್ ಮತ್ತು ಮೆಟರ್ನಿಟಿ ಆಸ್ಪತ್ರೆ ಕುರಿತು:

1975ರಲ್ಲಿ 10 ಹಾಸಿಗೆಗಳ ಆಸ್ಪತ್ರೆಯಾಗಿ ಆರಂಭಗೊಂಡ ಗುಣಶೀಲ ಆಸ್ಪತ್ರೆ, ಇಂದು ಭಾರತದ ಅತ್ಯಾಧುನಿಕ ಸಂತಾನಸಾಫಲ್ಯ ಕೇಂದ್ರ ಮತ್ತು ಸ್ತ್ರೀರೋಗ ಚಿಕಿತ್ಸೆಗಳ ಆಸ್ಪತ್ರೆಗಳಲ್ಲಿ ಒಂದಾಗಿದೆ. ಸಂತಾನೋತ್ಪತ್ತಿ ಚಿಕಿತ್ಸೆಗಳಲ್ಲದೇ, ಆಸ್ಪತ್ರೆಯು ಸ್ತ್ರೀರೋಗ ಚಿಕಿತ್ಸೆ, ಹೈ ರಿಸ್ಕ್ ಗರ್ಭಧಾರಣೆ ನಿರ್ವಹಣೆ, ಋತುಬಂಧ ಸಂಬಂಧಿ ಚಿಕಿತ್ಸೆ ಮತ್ತು ಎಂಬ್ರಿಯಾಲಜಿಸ್ಟ್‌ಗಳಿಗೂ ತರಬೇತಿ ನೀಡುವ ಕೇಂದ್ರವಾಗಿಯೂ ಗುಣಶೀಲ ಹೆಸರು ಗಳಿಸಿದೆ. ಆಸ್ಪತ್ರೆಯ ಪ್ರಯೋಗಾಲಯದಲ್ಲಿ ತಪ್ಪುಗಳನ್ನು ತಪ್ಪಿಸಲು ಆರ್.ಎಫ್.ಐ.ಡಿ., ಟ್ರೈ-ಗ್ಯಾಸ್ ಇನ್‍ಕ್ಯುಬೇಟರ್ ಹಾಗೂ ಕ್ಲೀನ್-ರೂಮ್ ಐ.ವಿ.ಎಫ್ ಪ್ರಯೋಗಾಲಯದ ತಂತ್ರಜ್ಞಾನಗಳನ್ನು ಬಳಸುವ ಮೂಲ್ಕ ಗುಣಶೀಲ ಆಸ್ಪತ್ರೆಯು ಸುರಕ್ಷತೆ ಮತ್ತು ಚಿಕಿತ್ಸೆಗಳ ಯಶಸ್ಸಿಗೆ ಸಂಬಂಧಿಸಿದಂತೆ ಜಾಗತಿಕ ಗುಣಮಟ್ಟವನ್ನು ಕಾಯ್ದುಕೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

  

Tags: BangaloreGunasheela HospitalKannada NewsKannada News LiveKannada News OnlineKannada News WebsiteKannada WebsiteLatest News KannadaMinister Dinesh GunduraoNews in KannadaNews Kannadaಗುಣಶೀಲ ಆಸ್ಪತ್ರೆಬೆಂಗಳೂರುಸಚಿವ ದಿನೇಶ್ ಗುಂಡೂರಾವ್
Share196Tweet123Send
Previous Post

Train Update | ಈ ಕೆಳಗಿನ ರೈಲುಗಳ ಸಂಚಾರ ಬದಲಾವಣೆ

Next Post

ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘ಐಐಎಸ್ ಸಿಖಾಯೇಗ’ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘ಐಐಎಸ್ ಸಿಖಾಯೇಗ’ ಆರಂಭ

ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ 'ಐಐಎಸ್ ಸಿಖಾಯೇಗ' ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL