Thursday, June 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

ಸಚಿವರ ಎಚ್ಚರಿಕೆ ಹಿನ್ನೆಲೆ - ರಾಜ್ಯದಲ್ಲಿ ಒಂದೇ ತಿಂಗಳಲ್ಲಿ 150 ಕೋಟಿ ಅನುದಾನ ಬಳಕೆ.

March 26, 2021
in Small Bytes, ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ತಿಂಗಳ ಹಿಂದೆ ಪ್ರಗತಿ ಪರಿಶೀಲನಾ ಸಭೆ ನಡೆಸಿದಾಗ 1150 ಕೋಟಿ ರೂ. ಅನುದಾನ ಪಿಡಿ ಖಾತೆಯಲ್ಲಿರುವುದು ಗಮನಕ್ಕೆ ಬಂದಿತ್ತು. ಅನುದಾನ ಬಳಕೆಯಾಗದೆ ಇರುವುದಕ್ಕೆ ಗರಂ ಆಗಿದ್ದ ಸಚಿವರು ತಿಂಗಳ ಗಡವು ನೀಡಿದ್ದರು. ಇಂದು ಮತ್ತೆ ಸಭೆ ನಡೆಸಿದಾಗ ಒಂದೇ ತಿಂಗಳಲ್ಲಿ ಜಿಲ್ಲಾಧಿಕಾರಿಗಳು 150 ಕೋಟಿ ರೂ. ಅನುದಾನ ವೆಚ್ಚ ಮಾಡಿರುದು ಗಮನಕ್ಕೆ ಬಂದಿದೆ. ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಿದ್ದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಕಾಸ ಸೌಧದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿಪರಿಶೀಲನಾ ಸಭೆ ನಡೆಸಿದ ಸಚಿವರು, ಅಧಿಕಾರಿಗಳು ಜಾಗೃತೆಯಿಂದ ಕೆಲಸ ಮಾಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಆದರೆ ಕೆಲ ಜಿಲ್ಲೆಯ ಪ್ರಗತಿ ಇನ್ನೂ ವೇಗವಾಗಬೇಕು ಎಂದು ಹೇಳಿದರು. ಮೈಸೂರು ಸೇರಿದಂತೆ ಕೆಲವು ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಪಷ್ಟ ಮಾಹಿತಿಯೊಂದಿಗೆ ಸಭೆಗೆ ಬಂದಿಲ್ಲ. ಮತ್ತೆ ಹೀಗಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಅನುದಾನ ಬಳಕೆಯಲ್ಲಿ ಹಾಸನ ಜಿಲ್ಲೆ ಪ್ರಥಮ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಶೇ. 68 ರಷ್ಟು ಅನುದಾನ ಬಳಕೆ ಮಾಡಿದ್ದಾರೆ. ಉಡುಪಿ ಎರಡನೆ ಸ್ಥಾನದಲ್ಲಿದ್ದು 63 ರಷ್ಟು ಅನುದಾನ ವೆಚ್ಚ ಮಾಡಿದ್ದಾರೆ. 61 ರಷ್ಟು ಅನುದಾನ ಉಪಯೋಗಿಸಿರುವ ಚಿಕ್ಕಮಗಳೂರು 3 ನೇ ಸ್ಥಾನದಲ್ಲಿದೆ. ಅತ್ಯುತ್ತಮ ಕೆಲಸ ಮಾಡಿರುವ ಜಿಲ್ಲಾಧಿಕಾರಿಗಳನ್ನು ಸಚಿವರು ಅಭಿನಂದಿಸಿದರು. ಅಲ್ಲದೆ ಒಂದು ವರ್ಷದೊಳಗೆ ಇದೆ ರೀತಿಯಲ್ಲಿ ಕೆಲಸ ಮಾಡುವ ಜಿಲ್ಲಾಧಿಕಾರಿಗಳನ್ನ ವಿಧಾನ ಸೌಧಕ್ಕೆ ಕರೆದು ಗೌರವಿಸುತ್ತೇನೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸುತ್ತೇನೆ ಎಂದು ಸಚಿವರು ಹೇಳಿದರು.

ಶಾಸಕರ ಅನುದಾನ ಹೊರತುಪಡಿಸಿ, ಇಲಾಖೆಯಿಂದ ನೀಡಿರುವ ಅನುದಾನ ಪಿಡಿ ಖಾತೆಯಲ್ಲಿ ಇದ್ದು, ಅನುದಾನ ಬಳಕೆಗಾಗಿ 2017 ರಲ್ಲೇ ಅನುಮೋದನೆ ನೀಡಲಾಗಿತ್ತು. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾಮಗಾರಿ ನಡೆಸಲು ಅನುಮೋದನೆ ನೀಡಲಾಗಿತ್ತು. ಆದರೆ ಇನ್ನೂ ಸಮರ್ಪಕ ರೀತಿಯಲ್ಲಿ ಬಳಕೆಯಾಗದಿರುವುದಕ್ಕೆ ಸಚಿವರು ಜಿಲ್ಲಾಧಿಕಾರಿಗಳ ಮೇಲೆ ಗರಂ ಆದರು. ತಕ್ಷಣ ಕಾಮಗಾರಿ ಮುಗಿಸಿ, ವರದಿ ನೀಡಿ ಎಂದು ಸಚಿವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಎರಡು ವರ್ಷಕ್ಕಿಂತ ಹಳೆಯ ಕಾಮಗಾರಿ ಮುಗಿಸಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದ ಅಡಿ ಎರಡು ವರ್ಷಗಳಿಂದ ಕಾಮಗಾರಿಗಳನ್ನೇ ಆರಂಭಿಸಿಲ್ಲ. ಏನು ಸಮಸ್ಯೆ ಎಂದು ಸಚಿವರು ಜಿಲ್ಲಾಧಿಕಾರಿಗಳನ್ನ ಪ್ರಶ್ನಿಸಿದರು. ತಕ್ಷಣ ಕೆಲಸ ಆರಂಭವಾಗಬೇಕು. ಇಲ್ಲದಿದ್ದಲ್ಲಿ ಅಂತಹ ಕಾಮಗಾರಿಗಳನ್ನು ರದ್ದುಪಡಿಸಿ, ಹಣವನ್ನು ವಾಪಸ್ ಪಡೆಯುವುದಾಗಿ ಎಚ್ಚರಿಕೆ ನೀಡಿದರು.
ಪ್ರಸಕ್ತ ವರ್ಷ 1 ಕೋಟಿ ರೂ. ಮಾತ್ರ ಅನುದಾನಕ್ಕೆ ಅನುಮೋದನೆ

ಕೊರೊನಾ ಕಾರಣದಿಂದ ಆರ್ಥಿಕ ಸಮಸ್ಯೆ ಇದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಅನುಮೋದನೆ ನೀಡುವಾಗ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. 2019-20 ನೇ ಸಾಲಿಗೆ ಪ್ರತಿ ಶಾಸಕರ ಅನುದಾನದಲ್ಲಿ 2 ಕೋಟಿ ರೂ. ಗೆ ಮಾತ್ರ ಅನುಮೋದನೆ ನೀಡಬೇಕು. ಪ್ರಸಕ್ತ ಸಾಲಿಗೆ ಕೇವಲ 1 ಕೋಟಿ ರೂ. ಗೆ ಮಾತ್ರ ಅನುಮೋದನೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಕ್ರಿಯಾ ಯೋಜನೆಯನ್ನೇ ನೀಡದ ಶಾಸಕರು

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನ ಬಳಕೆಗೆ ಆಯಾ ಶಾಸಕರು ಕ್ರಿಯಾಯೋಜನೆ ನೀಡಬೇಕು. ಅದರ ಅನ್ವಯ ಪಿಡಿ ಖಾತೆಯಿಂದ ಅನುದಾನ ಬಿಡುಗಡೆಯಾಗುತ್ತದೆ. ಆದರೆ ಶಾಸಕರೇ ತಮ್ಮ ಕ್ಷೇತ್ರಕ್ಕೆ ಕೆಲಸ ಅನುದಾನ ಬಳಕೆ ಮಾಡಿಕೊಳ್ಳುವಲ್ಲಿ ಹಿಂದುಳಿದಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿರುವ ಮಾಹಿತಿ ಅನ್ವಯ 2019-20 ನೇ ಸಾಲಿನಲ್ಲಿ ಕೇವಲ 45 ಶಾಸಕರು ಮತ್ತು 6 ಜನ ವಿಧಾನಪರಿಷತ್ ಸದಸ್ಯರು ಕ್ರಿಯಾಯೋಜನೆ ಕೊಟ್ಟಿದ್ದಾರೆ. 2020- 21 ನೇ ಸಾಲಿನಲ್ಲೂ ಶಾಸಕರ ನಿರಾಸಕ್ತಿ ಮುಂದುವರೆದಿದೆ. 53 ಶಾಸಕರು, 8 ಜನ ಎಮ್ಮೆಲ್ಸಿಗಳು ಮಾತ್ರ ಕ್ರಿಯಾಯೋಜನೆ ಕೊಟ್ಟಿದ್ದಾರೆ.

ಒಟ್ಟಾರೆಯಾಗಿ ರಾಜ್ಯದಲ್ಲಿ ಶಾಸಕರ ಸ್ಥಳೀಯಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಕೇವಲ ಶೇ. 32 ರಷ್ಟು ಮಾತ್ರ ಬಳಕೆಯಾಗಿದೆ. ಎಪ್ರಿಲ್ ಅಂತ್ಯದೊಳಗೆ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿ ಮುಗಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreHasanaKannada News WebsiteLatest News KannadaLocal NewsPolitical NewsState Newsಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿಪರಿಶೀಲನಾ ಸಭೆಪ್ರದೇಶಾಭಿವೃದ್ದಿ ಅನುದಾನಬೆಂಗಳೂರುಯುವ ಸಬಲೀಕರಣ ಮತ್ತು ಕ್ರೀಡೆಯೋಜನೆಸಚಿವ ಡಾ. ನಾರಾಯಣಗೌಡ
Previous Post

ಗಮನಿಸಿ: ಮಾರ್ಚ್ 27 ಮತ್ತು 28 ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಎರವಲು ಸೇವೆ ಮೇಲೆ ತೆರಳಿದ ಸಿಬ್ಬಂದಿ ಮಾತೃ ಇಲಾಖೆಗೆ ಹಿಂಪಡೆಯಲು ಕ್ರಮ : ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಎರವಲು ಸೇವೆ ಮೇಲೆ ತೆರಳಿದ ಸಿಬ್ಬಂದಿ ಮಾತೃ ಇಲಾಖೆಗೆ ಹಿಂಪಡೆಯಲು ಕ್ರಮ : ಸಚಿವ ಪ್ರಭು ಚವ್ಹಾಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!