No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

ಸಚಿವರ ಎಚ್ಚರಿಕೆ ಹಿನ್ನೆಲೆ - ರಾಜ್ಯದಲ್ಲಿ ಒಂದೇ ತಿಂಗಳಲ್ಲಿ 150 ಕೋಟಿ ಅನುದಾನ ಬಳಕೆ.

kalpa News by kalpa News
March 26, 2021
in Small Bytes, ಬೆಂಗಳೂರು ನಗರ
0
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ತಿಂಗಳ ಹಿಂದೆ ಪ್ರಗತಿ ಪರಿಶೀಲನಾ ಸಭೆ ನಡೆಸಿದಾಗ 1150 ಕೋಟಿ ರೂ. ಅನುದಾನ ಪಿಡಿ ಖಾತೆಯಲ್ಲಿರುವುದು ಗಮನಕ್ಕೆ ಬಂದಿತ್ತು. ಅನುದಾನ ಬಳಕೆಯಾಗದೆ ಇರುವುದಕ್ಕೆ ಗರಂ ಆಗಿದ್ದ ಸಚಿವರು ತಿಂಗಳ ಗಡವು ನೀಡಿದ್ದರು. ಇಂದು ಮತ್ತೆ ಸಭೆ ನಡೆಸಿದಾಗ ಒಂದೇ ತಿಂಗಳಲ್ಲಿ ಜಿಲ್ಲಾಧಿಕಾರಿಗಳು 150 ಕೋಟಿ ರೂ. ಅನುದಾನ ವೆಚ್ಚ ಮಾಡಿರುದು ಗಮನಕ್ಕೆ ಬಂದಿದೆ. ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಿದ್ದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಕಾಸ ಸೌಧದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿಪರಿಶೀಲನಾ ಸಭೆ ನಡೆಸಿದ ಸಚಿವರು, ಅಧಿಕಾರಿಗಳು ಜಾಗೃತೆಯಿಂದ ಕೆಲಸ ಮಾಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು. ಆದರೆ ಕೆಲ ಜಿಲ್ಲೆಯ ಪ್ರಗತಿ ಇನ್ನೂ ವೇಗವಾಗಬೇಕು ಎಂದು ಹೇಳಿದರು. ಮೈಸೂರು ಸೇರಿದಂತೆ ಕೆಲವು ಜಿಲ್ಲೆಯ ಜಿಲ್ಲಾಧಿಕಾರಿಗಳು ಸ್ಪಷ್ಟ ಮಾಹಿತಿಯೊಂದಿಗೆ ಸಭೆಗೆ ಬಂದಿಲ್ಲ. ಮತ್ತೆ ಹೀಗಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಅನುದಾನ ಬಳಕೆಯಲ್ಲಿ ಹಾಸನ ಜಿಲ್ಲೆ ಪ್ರಥಮ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಶೇ. 68 ರಷ್ಟು ಅನುದಾನ ಬಳಕೆ ಮಾಡಿದ್ದಾರೆ. ಉಡುಪಿ ಎರಡನೆ ಸ್ಥಾನದಲ್ಲಿದ್ದು 63 ರಷ್ಟು ಅನುದಾನ ವೆಚ್ಚ ಮಾಡಿದ್ದಾರೆ. 61 ರಷ್ಟು ಅನುದಾನ ಉಪಯೋಗಿಸಿರುವ ಚಿಕ್ಕಮಗಳೂರು 3 ನೇ ಸ್ಥಾನದಲ್ಲಿದೆ. ಅತ್ಯುತ್ತಮ ಕೆಲಸ ಮಾಡಿರುವ ಜಿಲ್ಲಾಧಿಕಾರಿಗಳನ್ನು ಸಚಿವರು ಅಭಿನಂದಿಸಿದರು. ಅಲ್ಲದೆ ಒಂದು ವರ್ಷದೊಳಗೆ ಇದೆ ರೀತಿಯಲ್ಲಿ ಕೆಲಸ ಮಾಡುವ ಜಿಲ್ಲಾಧಿಕಾರಿಗಳನ್ನ ವಿಧಾನ ಸೌಧಕ್ಕೆ ಕರೆದು ಗೌರವಿಸುತ್ತೇನೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಜಿಲ್ಲಾಧಿಕಾರಿಗಳನ್ನು ಸನ್ಮಾನಿಸುತ್ತೇನೆ ಎಂದು ಸಚಿವರು ಹೇಳಿದರು.

ಶಾಸಕರ ಅನುದಾನ ಹೊರತುಪಡಿಸಿ, ಇಲಾಖೆಯಿಂದ ನೀಡಿರುವ ಅನುದಾನ ಪಿಡಿ ಖಾತೆಯಲ್ಲಿ ಇದ್ದು, ಅನುದಾನ ಬಳಕೆಗಾಗಿ 2017 ರಲ್ಲೇ ಅನುಮೋದನೆ ನೀಡಲಾಗಿತ್ತು. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾಮಗಾರಿ ನಡೆಸಲು ಅನುಮೋದನೆ ನೀಡಲಾಗಿತ್ತು. ಆದರೆ ಇನ್ನೂ ಸಮರ್ಪಕ ರೀತಿಯಲ್ಲಿ ಬಳಕೆಯಾಗದಿರುವುದಕ್ಕೆ ಸಚಿವರು ಜಿಲ್ಲಾಧಿಕಾರಿಗಳ ಮೇಲೆ ಗರಂ ಆದರು. ತಕ್ಷಣ ಕಾಮಗಾರಿ ಮುಗಿಸಿ, ವರದಿ ನೀಡಿ ಎಂದು ಸಚಿವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಎರಡು ವರ್ಷಕ್ಕಿಂತ ಹಳೆಯ ಕಾಮಗಾರಿ ಮುಗಿಸಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನದ ಅಡಿ ಎರಡು ವರ್ಷಗಳಿಂದ ಕಾಮಗಾರಿಗಳನ್ನೇ ಆರಂಭಿಸಿಲ್ಲ. ಏನು ಸಮಸ್ಯೆ ಎಂದು ಸಚಿವರು ಜಿಲ್ಲಾಧಿಕಾರಿಗಳನ್ನ ಪ್ರಶ್ನಿಸಿದರು. ತಕ್ಷಣ ಕೆಲಸ ಆರಂಭವಾಗಬೇಕು. ಇಲ್ಲದಿದ್ದಲ್ಲಿ ಅಂತಹ ಕಾಮಗಾರಿಗಳನ್ನು ರದ್ದುಪಡಿಸಿ, ಹಣವನ್ನು ವಾಪಸ್ ಪಡೆಯುವುದಾಗಿ ಎಚ್ಚರಿಕೆ ನೀಡಿದರು.
ಪ್ರಸಕ್ತ ವರ್ಷ 1 ಕೋಟಿ ರೂ. ಮಾತ್ರ ಅನುದಾನಕ್ಕೆ ಅನುಮೋದನೆ

ಕೊರೊನಾ ಕಾರಣದಿಂದ ಆರ್ಥಿಕ ಸಮಸ್ಯೆ ಇದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಅನುಮೋದನೆ ನೀಡುವಾಗ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. 2019-20 ನೇ ಸಾಲಿಗೆ ಪ್ರತಿ ಶಾಸಕರ ಅನುದಾನದಲ್ಲಿ 2 ಕೋಟಿ ರೂ. ಗೆ ಮಾತ್ರ ಅನುಮೋದನೆ ನೀಡಬೇಕು. ಪ್ರಸಕ್ತ ಸಾಲಿಗೆ ಕೇವಲ 1 ಕೋಟಿ ರೂ. ಗೆ ಮಾತ್ರ ಅನುಮೋದನೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಕ್ರಿಯಾ ಯೋಜನೆಯನ್ನೇ ನೀಡದ ಶಾಸಕರು

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಅನುದಾನ ಬಳಕೆಗೆ ಆಯಾ ಶಾಸಕರು ಕ್ರಿಯಾಯೋಜನೆ ನೀಡಬೇಕು. ಅದರ ಅನ್ವಯ ಪಿಡಿ ಖಾತೆಯಿಂದ ಅನುದಾನ ಬಿಡುಗಡೆಯಾಗುತ್ತದೆ. ಆದರೆ ಶಾಸಕರೇ ತಮ್ಮ ಕ್ಷೇತ್ರಕ್ಕೆ ಕೆಲಸ ಅನುದಾನ ಬಳಕೆ ಮಾಡಿಕೊಳ್ಳುವಲ್ಲಿ ಹಿಂದುಳಿದಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು ನೀಡಿರುವ ಮಾಹಿತಿ ಅನ್ವಯ 2019-20 ನೇ ಸಾಲಿನಲ್ಲಿ ಕೇವಲ 45 ಶಾಸಕರು ಮತ್ತು 6 ಜನ ವಿಧಾನಪರಿಷತ್ ಸದಸ್ಯರು ಕ್ರಿಯಾಯೋಜನೆ ಕೊಟ್ಟಿದ್ದಾರೆ. 2020- 21 ನೇ ಸಾಲಿನಲ್ಲೂ ಶಾಸಕರ ನಿರಾಸಕ್ತಿ ಮುಂದುವರೆದಿದೆ. 53 ಶಾಸಕರು, 8 ಜನ ಎಮ್ಮೆಲ್ಸಿಗಳು ಮಾತ್ರ ಕ್ರಿಯಾಯೋಜನೆ ಕೊಟ್ಟಿದ್ದಾರೆ.

ಒಟ್ಟಾರೆಯಾಗಿ ರಾಜ್ಯದಲ್ಲಿ ಶಾಸಕರ ಸ್ಥಳೀಯಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಕೇವಲ ಶೇ. 32 ರಷ್ಟು ಮಾತ್ರ ಬಳಕೆಯಾಗಿದೆ. ಎಪ್ರಿಲ್ ಅಂತ್ಯದೊಳಗೆ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿ ಮುಗಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreHasanaKannada News WebsiteLatest News KannadaLocal NewsPolitical NewsState Newsಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿಪರಿಶೀಲನಾ ಸಭೆಪ್ರದೇಶಾಭಿವೃದ್ದಿ ಅನುದಾನಬೆಂಗಳೂರುಯುವ ಸಬಲೀಕರಣ ಮತ್ತು ಕ್ರೀಡೆಯೋಜನೆಸಚಿವ ಡಾ. ನಾರಾಯಣಗೌಡ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ: ಮಾರ್ಚ್ 27 ಮತ್ತು 28 ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಎರವಲು ಸೇವೆ ಮೇಲೆ ತೆರಳಿದ ಸಿಬ್ಬಂದಿ ಮಾತೃ ಇಲಾಖೆಗೆ ಹಿಂಪಡೆಯಲು ಕ್ರಮ : ಸಚಿವ ಪ್ರಭು ಚವ್ಹಾಣ್

kalpa News

kalpa News

Next Post
ಎರವಲು ಸೇವೆ ಮೇಲೆ ತೆರಳಿದ ಸಿಬ್ಬಂದಿ ಮಾತೃ ಇಲಾಖೆಗೆ ಹಿಂಪಡೆಯಲು ಕ್ರಮ : ಸಚಿವ ಪ್ರಭು ಚವ್ಹಾಣ್

ಎರವಲು ಸೇವೆ ಮೇಲೆ ತೆರಳಿದ ಸಿಬ್ಬಂದಿ ಮಾತೃ ಇಲಾಖೆಗೆ ಹಿಂಪಡೆಯಲು ಕ್ರಮ : ಸಚಿವ ಪ್ರಭು ಚವ್ಹಾಣ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL