No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಮಜನ್ಮಭೂಮಿಗಾಗಿ ಹೋರಾಡಿದವರ ವಿರುದ್ಧ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಆರ್.ಅಶೋಕ ಆರೋಪ

kalpa News by kalpa News
January 1, 2024
in ಬೆಂಗಳೂರು ನಗರ
0
ಕರೆಂಟ್ ಬಿಲ್‌ ಕಟ್ಟಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತೆ: ಮಾಜಿ ಸಚಿವ ಅಶೋಕ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ Ayodhya Ramamandira ಉದ್ಘಾಟನೆಯಾಗುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ CMSiddaramaiah ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದ್ದು, ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ RAshok ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ಕಚೇರಿ ಪೂಜೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಾಂಗ್ರೆಸ್ ಮತ್ತೆ ದ್ವೇಷದ ರಾಜಕಾರಣ ಆರಂಭಿಸಿದೆ. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕಗ್ಗೊಲೆಯಾಗಿತ್ತು. ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಯಾಗುತ್ತಿರುವ ಐತಿಹಾಸಿಕ ಕ್ಷಣಕ್ಕೆ ಜನರು ಕಾಯುತ್ತಿದ್ದು, ಕಾಂಗ್ರೆಸ್ ಮಾತ್ರ ಇದನ್ನು ಭಯವೆಂಬಂತೆ ಬಿಂಬಿಸುತ್ತಿದೆ. ಇದೇ ವೇಳೆ ಹುಬ್ಬಳ್ಳಿಯಿಂದ ರಾಮಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡ ಇಬ್ಬರನ್ನು 30 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಜೈಲಿಗೆ ಕಳುಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ ಉದ್ಘಾಟನೆಯ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿರುವ ಸಂದರ್ಭದಲ್ಲಿ ಇಂತಹ ಕ್ರಮವನ್ನು ಸರ್ಕಾರ ಕೈಗೊಂಡಿದೆ. ನಾನು ಕೂಡ ಆಗ ಹೋರಾಟದಲ್ಲಿ ಭಾಗವಹಿಸಿದ್ದು, ನನ್ನನ್ನೂ ಬಂಧಿಸುತ್ತೀರಾ? ಅಷ್ಟು ಧೈರ್ಯ ಇದೆಯಾ? ಎಂದು ಪ್ರಶ್ನೆ ಮಾಡಿದರು.

Also read: ದೇಶದ ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಶ್ಲಾಘನೀಯ: ಶಾಸಕ ಚನ್ನಬಸಪ್ಪ ಅಭಿಪ್ರಾಯ

ಕಾರ್ಯಕರ್ತರ ಮೇಲೆ ಹಾಕಿದ ಕೇಸು ವಾಪಸ್ ಪಡೆಯಬೇಕು. ಹಳೆಯ ಪ್ರಕರಣ ಹೊರತೆಗೆದು ಬಂಧಿಸಲು ಪೊಲೀಸ್ ಇಲಾಖೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಇಂತಹ ದ್ವೇಷ ರಾಜಕಾರಣದ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗುವುದು‌ ಎಂದು ಎಚ್ಚರಿಕೆ ನೀಡಿದರು‌.
ಟಿಪ್ಪು ಜಯಂತಿ ಮಾಡುತ್ತಾರೆ, ಶ್ರೀ ರಾಮನನ್ನು ಪೂಜಿಸಲ್ಲ
ಸಿಎಂ ಸಿದ್ದರಾಮಯ್ಯನವರು ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅವರಿಗೆ ಕೇಸರಿ ಕಂಡರೆ ಆಗಲ್ಲ, ನಾಮ ಹಚ್ಚಿದರೆ ಸಮಸ್ಯೆ ಕಂಡುಬರುತ್ತದೆ. ಆದರೆ ಮಸೀದಿಯಲ್ಲಿ ಟೋಪಿ ಹಾಕಿಕೊಳ್ಳುತ್ತಾರೆ. ವೋಟಿಗಾಗಿ ಧರ್ಮ, ಜಾತಿ ಒಡೆಯುವುದು ಅವರ ಗುಣ. ಅವರ ರಕ್ತದ ಕಣದಲ್ಲೂ ಒಡೆಯುವ ಗುಣ ಇದೆ. ಬ್ರಿಟಿಷರ ಒಡೆಯುವ ಗುಣ ಕಾಂಗ್ರೆಸ್ ನ ಎಲ್ಲರಲ್ಲೂ ಇದೆ. ಈ ಹಿಂದೆ ವೀರಶೈವ ಲಿಂಗಾಯತರನ್ನು ಒಡೆಯುವ ಕೆಲಸ ಮಾಡಿದ್ದರು‌ ಎಂದು ನೆನಪಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ನ ಶಾಸಕರೇ ಹೇಳಿದ್ದಾರೆ. ಶಾಸಕರು ಕ್ಷೇತ್ರಕ್ಕೆ ಹೋದರೆ ಜನರು ಬಯ್ಯುತ್ತಿದ್ದಾರೆ. ಹೀಗಾಗಿ ಸರ್ಕಾರದಲ್ಲಿ ಭಿನ್ನಾಭಿಪ್ರಾಯ, ಒಡಕು ಬಂದಿದೆ. ಮುಖ್ಯಮಂತ್ರಿಯವರ ಬದಲಾವಣೆಯೂ ಆಗಬಹುದು. ಡಿ.ಕೆ.ಶಿವಕುಮಾರ್ ಅವರೇ ಸಿಎಂ ಬದಲಾವಣೆಯ ಸುಳುಹು ನೀಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ದೊಡ್ಡ ಬದಲಾವಣೆಗಳನ್ನು ಜನರು ನಿರೀಕ್ಷೆ ಮಾಡಬಹುದು‌. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರಿಂದ ಅನುಭವದ ಆಧಾರದಲ್ಲಿ ಈ ಬಗ್ಗೆ ಹೇಳಿದ್ದಾರೆ ಎಂದರು‌.
ಮುಖ್ಯಮಂತ್ರಿಯವರು ಆರ್ಥಿಕ ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ. ಯಾರು ಸರ್ಕಾರದ ವಿರುದ್ಧ ಮಾತಾಡುತ್ತಾರೋ ಅವರಿಗೆ ಬೇಗ ಉನ್ನತ ಹುದ್ದೆ ಸಿಗುವುದು ಸಹಜ. ರಮೇಶ್ ಕುಮಾರ್ ಅವರಿಗೂ ಹಿಂದೆ ಹೀಗೆಯೇ ಹುದ್ದೆ ಸಿಕ್ಕಿತ್ತು. ಇದು ಕಾಂಗ್ರೆಸ್ ನಲ್ಲಿರುವ ಚಾಳಿ‌‌ ಎಂದು ವ್ಯಂಗ್ಯವಾಡಿದರು.

ಹೊಸ ವರ್ಷದಲ್ಲಿ ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸಾಗಲಿ. ಕಳೆದ ಏಳು ತಿಂಗಳಿಂದ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮರು ಚಾಲನೆ ದೊರೆಯಲಿ ಎಂದು ಆಶಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: Ayodhya RamamandiraBangaloreCMSiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRAshokಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಆರ್. ಅಶೋಕಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಶ್ಲಾಘನೀಯ: ಶಾಸಕ ಚನ್ನಬಸಪ್ಪ ಅಭಿಪ್ರಾಯ

Next Post

ವಿಧಾನ ಪರಿಷತ್ ಸದಸ್ಯರನ್ನು ಶಾಸಕರೆಂದು ಸಂಬೋಧಿಸಿ

kalpa News

kalpa News

Next Post
ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ನಾಳೆ ಬಿಜೆಪಿ ಸೇರ್ಪಡೆ

ವಿಧಾನ ಪರಿಷತ್ ಸದಸ್ಯರನ್ನು ಶಾಸಕರೆಂದು ಸಂಬೋಧಿಸಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL