ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀ ಅಖಿಲ ಹವ್ಯಕ ಮಹಾಸಭೆಯು Havyaka Mahasabhe ನೀಡುವ ವಾರ್ಷಿಕ ಹವ್ಯಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು ಮೇ 1 ಭಾನುವಾರ ನಡೆಯುವ 79 ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ಭಾನುವಾರ ಸಂಜೆ 4 ಗಂಟೆಗೆ ಸಂಸ್ಥಾಪನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಸಚ್ಚಿದಾನಂದಮೂರ್ತಿ, ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ಜಿ. ಎಲ್ ಹೆಗಡೆ ಅಭ್ಯಾಗತರಾಗಿ ಆಗಮಿಸುತ್ತಿದ್ದು, ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಆನಂತರ ‘ವೇಣು ನಿನಾದ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಹವ್ಯಕ ವಿಶೇಷ ಪ್ರಶಸ್ತಿ 2022 : ಆಯ್ಕೆಯಾಗಿರುವ ಸಾಧಕರು
ಹವ್ಯಕ ವಿಭೂಷಣ:
ಡಾ: ಗಜಾನನ ಶರ್ಮ – ಶಿವಮೊಗ್ಗ – ಸಾಹಿತ್ಯ
ಹವ್ಯಕ ಭೂಷಣ :
ಡಾ. ಉದಯಕುಮಾರ್ ನೂಜಿ – ಕಾಸರಗೋಡು – ಸಮಾಜಸೇವೆ,
ಬಳ್ಕೂರು ಕೃಷ್ಣ ಯಾಜಿ – ಉ. ಕ. – ಯಕ್ಷಗಾನ,
ನಾರಾಯಣ ದಾಸರು – ಉ. ಕ. – ಹರಿಕಥೆ
ಹವ್ಯಕ ಶ್ರೀ:
ಅಶ್ವಿನೀ ಭಟ್ – ದ. ಕ. – ಕ್ರೀಡೆ,
ರಾಜಾರಾಮ ಸಿ. ಜಿ. – ದ. ಕ. – ಕೃಷಿ ಉದ್ಯಮ,
ಅಶ್ವಿನಿ ಕುಮಾರ್ ಭಟ್ – ಉ. ಕ. ಪರಿಸರ
ಹವ್ಯಕ ಸೇವಾಶ್ರೀ:
ತ್ರಿಯಂಬಕ ಗಣೇಶ ಹೆಗಡೆ – ವ್ಯವಸ್ಥಾಪಕರು – ಹವ್ಯಕ ಮಹಾಸಭೆ
Also read: ಏ.30ರಂದು ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಲೋಕಕಲಾಣಾರ್ಥ ‘ಶ್ರೀ ರುದ್ರಹೋಮ’
ಪ್ರಶಸ್ತಿ ಆಯ್ಕೆ ಹೇಗೆ?
ಸಮಾಜದ ಅರ್ಹ ಸಾಧಕರನ್ನು ಗುರುತಿಸಿ, ಆಯ್ಕೆಯ ಮಾನದಂಡಗಳ ಅನ್ವಯ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಮಹಾಸಭೆಯ ಸದಸ್ಯರುಗಳು ಪ್ರಶಸ್ತಿಗೆ ಹೆಸರುಗಳನ್ನು ಸೂಚಿಸಬಹುದಾಗಿದ್ದು; ಸ್ವಯಂ ಅಭ್ಯರ್ಥಿಗಳೇ ಪ್ರಶಸ್ತಿಗಾಗಿ ಅರ್ಜಿಸಲ್ಲಿಸಲು ಅವಕಾಶವಿರುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post