No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸುಪ್ರೀಂ ಕೋರ್ಟ್ ಗೆ ತುರ್ತಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿ: ಹೆಚ್ಡಿಕೆ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 22, 2023
in ಬೆಂಗಳೂರು ನಗರ
0
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಗಂಭೀರ ಆರೋಪ ಮಾಡಿದ್ದಾರೆ.

ಕಾವೇರಿ ನೀರು ಹರಿಸುವ ಬಗ್ಗೆ ಸುಪ್ರೀಂ ಕೋರ್ಟ್ Supreme Court ತೀರ್ಪು ಹೊರಬಿದ್ದ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ನೀಡಿರುವ ಅವರು; ರಾಜ್ಯ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಡಿಎಂಕೆ ಅಂಗಪಕ್ಷವಾಗಿರುವ I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರಕಾರ ರಾಜ್ಯದ ಹಿತವನ್ನು ಬಲಿಗೊಟ್ಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ. ಹೆಜ್ಜೆಹೆಜ್ಜೆಗೂ ತಪ್ಪು ಮಾಡಿದ್ದು ರಾಜ್ಯ ಸರಕಾರ. ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಕಾವೇರಿ ಜಲ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ ಎಂದು ಅವರು ಕಿಡಿಕಾರಿದ್ದಾರೆ.
ರಾಜ್ಯ ಸರಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ತಮಿಳುನಾಡಿನ ಜತೆ ಆ ಪಕ್ಷದ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡ ಕಾರಣಕ್ಕೆ ಕಾವೇರಿ ಹಿತವನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗಿದೆ. ಆ.10ರಂದು ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆ ನಡೆಯಿತು. ಮರುದಿನ ಕಾವೇರಿ ಜಲನಿರ್ವಹಣಾ ಪ್ರಾಧಿಕಾರ ಸಭೆ ಆಯಿತು. ಮುಂದಿನ 15 ದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಿ ಎಂದು ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿತು. ತಕ್ಷಣವೇ ಸುಪ್ರೀಂಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು ಎಂದು ಅವರು ಹೇಳಿದ್ದಾರೆ.

ಸರಕಾರ ಹಾಗೆ ಮಾಡಲೇ ಇಲ್ಲ. ಸುಪ್ರೀಂಕೋರ್ಟ್ ಕಡೆ ಮುಖ ಮಾಡದೆ I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬಲು ಪ್ರಾಧಿಕಾರದ ಆದೇಶವನ್ನೇ ನೆಪ ಮಾಡಿಕೊಂಡು ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿತು. ತನ್ನ ತಲೆ ಮೇಲೆ ತಾನೇ ಚಪ್ಪಡಿ ಎಳೆದುಕೊಂಡು, ಅದೇ ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟಿತು ಎಂದು ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

http://kalpa.news/wp-content/uploads/2023/05/Jain-Public-School-Advt-5.mp4

 

ಸರಕಾರ ಎಸಗಿದ ತಪ್ಪು ಇಷ್ಟೇ ಅಲ್ಲ, ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದ ಸಭೆಗಳನ್ನು ಬಹಳ ಲಘುವಾಗಿ ಪರಿಗಣಿಸಿತು. ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಕೊಟ್ಟ ಸಲಹೆಗಳನ್ನೂ ಗಾಳಿಗೆ ತೂರಿತು. ನಮ್ಮ ಸಲಹೆಗೆ ಕವಡೆಕಾಸಿನ ಕಿಮ್ಮತ್ತೂ ಕೊಡದೆ ಕನ್ನಡಿಗರ ಹಿತವನ್ನು ತನ್ನ ರಾಜಕೀಯ ಸ್ವಾರ್ಥಕ್ಕೆ ಬಲಿ ಮಾಡಿತು ಎಂದಿದ್ದಾರೆ ಅವರು.

ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ:
ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯುವುದಿಲ್ಲ ಎಂದು ನಾನು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದೆ. ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ. ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಖರ್ಗೆ ಮೌನ ಅಚ್ಚರಿ ತಂದಿದೆ:
ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು Devegowda ತಮ್ಮ ಇಳಿ ವಯಸ್ಸಿನಲ್ಲಿಯೂ ಕಾವೇರಿ ಬಗ್ಗೆ ದನಿ ಎತ್ತಿದರು. ಮಾನ್ಯ ಸಭಾಪತಿಗಳು ಕುಳಿತೇ ಮಾತನಾಡಿ ಎಂದರೂ ಅವರು ಎದ್ದುನಿಂತು ರಾಜ್ಯದ ಪರ ಹಕ್ಕು ಮಂಡಿಸಿದರು. ಆದರೆ, ರಾಜ್ಯದ ಇತರೆ ಸದಸ್ಯರು, ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆ ಅವರು ಮೌನವಾಗಿದ್ದರು! ಅವರ ಮೌನ ನನಗೆ ಅಚ್ಚರಿ ಉಂಟು ಮಾಡಿದೆ. ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹೌದು. ಆದರೆ, ಕರ್ನಾಟಕದ ಹಿತದ ಬಗ್ಗೆ ಅವರ ನಿಲುವೇನು? ಎಂದು ಮಾಜಿ ಮುಖ್ಯಮಂತ್ರಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಮರು ಪರಿಶೀಲನಾ ಅರ್ಜಿ ಸಲ್ಲಿಸಿ:
ಸೆ. 13ರಿಂದ ನಿತ್ಯವೂ 5,000 ಕ್ಯೂಸೆಕ್ ನೀರು ಬಿಡಬೇಕು ಎಂದು ಪ್ರಾಧಿಕಾರ ಆದೇಶ ನೀಡಿದೆ. ಅದನ್ನೇ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಕೋರ್ಟ್ ಆದೇಶಕ್ಕೂ ಮೊದಲು ಪ್ರಾಧಿಕಾರ ಹೇಳಿತು ಎಂದು ವಿದ್ಯುತ್ ವೇಗದಲ್ಲಿ ನೀರು ಬಿಟ್ಟ ಸರಕಾರವು; ಈಗ ಸುಪ್ರೀಂಕೋರ್ಟ್ ಹೇಳಿದೆ, ಇನ್ನೇನು ಮಾಡುವುದು ಎಂದು ಕೈ ಚೆಲ್ಲಿದೆ. ಮರು ಪರಿಶೀಲನಾ ಅರ್ಜಿಯನ್ನು ಕೋರ್ಟಿಗೆ ತುರ್ತಾಗಿ ಸಲ್ಲಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಪ್ರಾಧಿಕಾರ ಆದೇಶ ಕೊಟ್ಟಷ್ಟು ನೀರನ್ನು ಬಿಡುವಂತೆ ಕಾನೂನು ತಜ್ಞರು ಸಲಹೆ ಮಾಡಿದ್ದರು. ಅಲ್ಲಿಗೆ ಸುಪ್ರೀಂನಲ್ಲಿ ನ್ಯಾಯ ಸಿಗಲಾರದು ಎಂದು ಅವರು ಮೊದಲೇ ಕೈ ಚಲ್ಲಿದಂತೆ ಕಾಣುತ್ತದೆ. ಕೋರ್ಟ್ ಆದೇಶ ಬರುವ ತನಕ ನೀರು ಬಿಡಲು ಸಾಧ್ಯ ಇಲ್ಲ ಎಂದು ಸರಕಾರವು ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರಕ್ಕೆ ನೇರವಾಗಿ ಹೇಳಬೇಕಿತ್ತು. ಹಾಗೆ ಹೇಳಲಿಲ್ಲ. ಪರಿಣಾಮ; ಈವರೆಗೆ ನಾವು ಸಾಕಷ್ಟು ನೀರು ಹರಿಸಬೇಕಾಯಿತು. ಮುಂದೆಯೂ ಹರಿಸಬೇಕಾದ ಅನಿವಾರ್ಯತೆ ಸೃಷ್ಟಿ ಆಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Also read: ಅರಣ್ಯ ವರ್ಕಿಂಗ್ ಪ್ಲಾನ್ ತಯಾರಿ ಮಾನದಂಡದಲ್ಲಿ ಬದಲಾವಣೆ ಅಗತ್ಯ: ಅನಂತ ಹೆಗಡೆ ಅಶೀಸರ

ಸರಕಾರ ವಕೀಲರು ಹೇಳಿದರಂತೆ ಕೇಳಿ ಜನರ ಹಿತ ಕಡೆಗಣಿಸಿದೆ. ಯಾವ ಕಾರಣಕ್ಕೂ ನೀರು ಬಿಡಬಾರದಿತ್ತು. ಕೋರ್ಟ್ ಆದೇಶಕ್ಕೆ ಕಾದು ಕ್ರಮ ಜರುಗಿಸಬೇಕಿತ್ತು. ಊರು ಕೊಳ್ಳೆ ಹೋದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ವರ್ತಿಸಿದೆ ಸರಕಾರ. ವಕೀಲರ ಮಾತುಗಳನ್ನು ಕೇಳಿಕೊಂಡು ನೀರು ಬಿಡುತ್ತಾ ಹೋದರೆ ಅದಕ್ಕೆ ಕೊನೆ ಮೊದಲು ಇರುವುದಿಲ್ಲ. ಹಾಗಾದರೆ ಸರಕಾರ ಅನ್ನೊದು ಯಾಕೆ? ವಿಷಯ ಎಲ್ಲಿ ಶುರುವಾಯಿತೋ ಮತ್ತೆ ಅಲ್ಲಿಗೆ ಬಂದು ನಿಂತಿರುವುದಕ್ಕೆ ಯಾರು ಹೊಣೆ? ಎಂದು ಅವರು ಕೇಳಿದ್ದಾರೆ.
ಸರಕಾರ ಅನುಸರಿಸಿದ ವಿಳಂಬ ರಾಜಕಾರಣ ರಾಜ್ಯದ ಹಿತಕ್ಕೆ ಪೆಟ್ಟು ನೀಡಿದೆ. ತಮಿಳುನಾಡು ಸುಪ್ರೀಂ ಕೋರ್ಟ್ ಗೆ ಹೋದ ಕೂಡಲೇ ರಾಜ್ಯವೂ ಮೊರೆ ಹೋಗಬೇಕಿತ್ತು. ಮೀನಾಮೇಷ ಎಣಿಸುತ್ತಾ ತಡ ಮಾಡಿತು. ತಡ ಮಾಡಿದ್ದಕ್ಕೆ ತಕ್ಕ ಶಾಸ್ತಿ ಆಗಿದೆ. ವಿನಾಕಾರಣ ಕನ್ನಡಿಗರಿಗೆ ಶಿಕ್ಷೆ ಆಗಿದೆ ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಾಧಿಕಾರದ ಆದೇಶ ಬಂದೊಡನೆ ಮಧ್ಯರಾತ್ರಿಯೇ ಸುಪ್ರೀಂ ಕೋರ್ಟ್ ಗೆ ಹೋಗಿ, ನಮ್ಮ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ರಾತ್ರೋರಾತ್ರಿ ಪಿಟಿಷನ್ ಹಾಕಬೇಕಿತ್ತು. ಅದನ್ನು ಮಾಡದೇ ನೀರು ಬಿಡುತ್ತಾ ಕೂತಿತು ಸರಕಾರ. ನೀರು ಇಲ್ಲ ಎನ್ನುತ್ತಿದ್ದವರೂ ಈವರೆಗೆ ಹೇಗೆ ಬಿಟ್ಟಿರಿ ಎಂದು ಕೋರ್ಟ್ ಪ್ರಶ್ನೆ ಮಾಡುತ್ತದೆ ಎನ್ನುವ ಸಾಮಾನ್ಯ ಜ್ಞಾನವೂ ಸರಕಾರಕ್ಕೆ ಇರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

http://kalpa.news/wp-content/uploads/2023/05/VID-20230516-WA0005.mp4

ಕೆಆರ್ ಎಸ್ ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು. 3 ದಿನಕ್ಕೆ ಒಂದು ಟಿಎಂಸಿ ಹರಿದು ಹೋಗುತ್ತದೆ. ದಿನಕ್ಕೆ 5,000 ಕ್ಯೂಸೆಕ್ ಹರಿದರೆ 15 ದಿನಕ್ಕೆ 7 ಟಿಎಂಸಿ ಖಾಲಿ! ಆಗ ಉಳಿಯುವುದು 13 ಟಿಎಂಸಿ!! ಇದರಲ್ಲಿ ಡೆಡ್ ಸ್ಟೋರೇಜ್ 7 ಟಿಎಂಸಿ ಇರಬೇಕು. ಇನ್ನು ಉಳಿಯೋದು ಎಷ್ಟು? ಬೆಂಗಳೂರಿಗೆ ಇನ್ನೂ 9 ತಿಂಗಳಿಗೆ ಕುಡಿಯಲಿಕ್ಕೆ ಕನಿಷ್ಠ 13 ಟಿಎಂಸಿ ಬೇಕು. ಎಲ್ಲಿಂದ ಬರುತ್ತೆ ಆ ನೀರು? ರೈತರ ಬೆಳೆಗಳ ಕಥೆ ಏನು? ಆದೇಶ ಪಾಲಿಸಲು ಕರ್ನಾಟಕ, ಅನುಭವಿಸಲು ತಮಿಳುನಾಡು ಎನ್ನುವ ಮಾತು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆಲ್ಲ ಸರಕಾರವೇ ನೇರ ಕಾರಣ ಎಂದು ದೂರಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅರಣ್ಯ ವರ್ಕಿಂಗ್ ಪ್ಲಾನ್ ತಯಾರಿ ಮಾನದಂಡದಲ್ಲಿ ಬದಲಾವಣೆ ಅಗತ್ಯ: ಅನಂತ ಹೆಗಡೆ ಅಶೀಸರ

Next Post

ಸನಾತನ ಧರ್ಮದ ವಿರುದ್ಧ ಹೇಳಿಕೆ ಹಿನ್ನೆಲೆ: ಡಿಎಂಕೆ ನಾಯಕ ಉದಯ ನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸನಾತನ ಧರ್ಮದ ವಿರುದ್ಧ ಹೇಳಿಕೆ ಹಿನ್ನೆಲೆ: ಡಿಎಂಕೆ ನಾಯಕ ಉದಯ ನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್

ಸನಾತನ ಧರ್ಮದ ವಿರುದ್ಧ ಹೇಳಿಕೆ ಹಿನ್ನೆಲೆ: ಡಿಎಂಕೆ ನಾಯಕ ಉದಯ ನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL