ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ Chamarajapete Idga Maidan ಸರ್ಕಾರದಿಂದಲೇ ಧ್ವಜಾರೋಹಣ ನಡೆಸಲು ನಿರ್ಧರಿಸಲಾಗಿದ್ದು, ಯಾವುದೇ ಸಂಘ-ಸಂಸ್ಥೆಗಳಿಗೆ ಇಲ್ಲಿ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ R Ashok ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಹತ್ವದ ನಿರ್ಧಾರ ಪ್ರಕಟಿಸಿದ ಅವರು, ಈ ಮೈದಾನ ಕಂದಾಯ ಇಲಾಖೆಗೆ ಸೇರಿರುವ ಹಿನ್ನೆಲೆಯಲ್ಲಿ ಆ.15ರಂದು ಸರ್ಕಾರದ ವತಿಯಿಂದಲೇ ಧ್ವಜಾರೋಹಣ ನಡೆಯಲಿದ್ದು, ಇಲ್ಲಿನ ಉಪವಿಭಾಗಾಧಿಕಾರಿ ಧ್ವಜ ಹಾರಿಸಲಿದ್ದಾರೆ. ಇವರ ಹೊರತಾಗಿ ಸ್ಥಳೀಯ ಶಾಸಕ ಜಮೀರ್ ಅಹಮದ್, ಸಂಸದ ಪಿ.ಸಿ. ಮೋಹನ್ ಸೇರಿದಂತೆ ಬೇರೆ ಯಾರಿಗೂ ಹಾಗೂ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿರುವುದಿಲ್ಲ ಎಂದಿದ್ದಾರೆ.
ಅಂದಿನ ಕಾರ್ಯಕ್ರಮದ ವೇದಿಕೆಯಲ್ಲಿ ಸ್ಥಳೀಯ ಶಾಸಕರು, ಸಂಸದರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮಾತ್ರ ಅವಕಾಶವಿರುತ್ತದೆ. ಒಂದೇ ಮಾತರಂ, ಭಾರತ ಮಾತಾಕೀ ಜೈ ಹಾಗೂ ಸ್ವತಂತ್ರ ಸೇನಾನಿಗಳ ಹೆಸರನ್ನು ಮಾತ್ರ ಘೋಷಣೆ ಕೂಗಬಹುದಾಗಿದೆ. ಇದರ ಹೊರತಾಗಿ ಬೇರೆ ಯಾವುದೇ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ ಎಂದರು.
Also read: ಸ್ವತಂತ್ರ ಹೋರಾಟಗಾರ ಶತಾಯುಷಿ ನರಹರಿ ಮಠದ್ ಅವರಿಗೆ ಶಾಸಕ ಸುರೇಶ್ ಕುಮಾರ್ ಗೌರವ ಸಲ್ಲಿಕೆ
ಸರ್ಕಾರದ ಈ ಮಹತ್ವದ ನಿರ್ಧಾರದ ಹಿನ್ನೆಲೆಯಲ್ಲಿ ಚಾಮರಾಜ ಪೇಟೆಯ ಮೈದಾನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post