Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬಹುರೂಪಿ ಯೋಜನೆಗಳ ಮೂಲಕ ನಶಾಮುಕ್ತ ಭಾರತದ ಕನಸನ್ನು ಸಾಕರಗೊಳಿಸುತ್ತಿರುವ ಗೃಹಮಂತ್ರಿ ಅಮಿತ್ ಶಾ

April 5, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭಾರತವನ್ನು ಮಾದಕ ನಶೆ ಮುಕ್ತಿಯೆಡೆಗೆ ಕರೆದೊಯ್ಯಲು ಗೃಹಮಂತ್ರಿ ಅಮಿತ್ ಶಾರವರು Home Minister Amith Shah ತೆಗೆದುಕೊಂಡ ಬಹುರೂಪಿ ಯೋಜನೆಗಳ ಫಲ ಕೊಡುತ್ತಿವೆ. ಸ್ವಾತಂತ್ರ್ಯೋತ್ಸವದ ಈ ಅಮೃತ ಘಳಿಗೆಯಲ್ಲಿ ಈ ಯೋಜನೆಗಳು ನರೇಂದ್ರ ಮೋದಿಯವರ ‘ನಶಾಮುಕ್ತ ಭಾರತ’ದ ಕನಸನ್ನು ಸಾಕಾರಗೊಳಿಸಲಿವೆ.

ಅಧಿಕೃತ ಮಾಹಿತಿಗಳ ಆಧಾರದ ಮೇಲೆ 2014-2022 ರಿಂದ ಇಲಾಖೆ ವಶಪಡಿಸಿಕೊಂಡ ಮಾದಕ ದ್ರವ್ಯಗಳ ಒಟ್ಟು ಮೌಲ್ಯ 22,000 ಕೋಟಿ ರೂಪಾಯಿಗಳು. 2006-2013 ಕಾಲಘಟ್ಟದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕಾಲಾವಧಿಗಿಂತ 30 ಪಟ್ಟು ಹೆಚ್ಚು ಮಾದಕದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕೇಸ್‌ಗಳಲ್ಲಿ ಬಂಧಿಸಲಾದ ಅಪರಾಧಿಗಳ ಸಂಖ್ಯೆ ಮೂರು ಪಟ್ಟು ಹೆಚ್ಚಾದರೆ, ವಶಪಡಿಸಿಕೊಂಡ ಮಾದಕವಸ್ತುಗಳು (ಸುಮಾರು 3.73 ಲಕ್ಷ ಕೆ.ಜಿ) ದುಪ್ಪಟ್ಟಾಗಿವೆ. 2014-2022ರ ಅವಧಿಯಲ್ಲಿ 3,544 ಕೇಸ್‌ಗಳು ದಾಖಾಲಾಗಿದ್ದು, ಇದು ಕೂಡ 2006-2013 ರ ಯುಪಿಎ ಅವಧಿಗಿಂತ ದುಪ್ಪಟ್ಟು.
ಮಾದಕದ್ರವ್ಯ ವ್ಯಸನ ದೇಶದ ಪ್ರಮುಖ ಸಮಸ್ಯೆಗಳಲ್ಲೊಂದು. ಈ ವ್ಯಸನದಿಂದ ನಮ್ಮ ಯುವ ಜನಾಂಗ ಕೆಲಸ-ಕಾರ್ಯಗಳನ್ನು ತೊರೆದು ಸಮಾಜಕ್ಕೆ ಹೊರೆಯಾಗುತ್ತಿದ್ದಾರೆ. ಹಾಗೇ ಈ ಮಾದಕವಸ್ತುಗಳ ಸಾಗಾಣಿಕೆಯಿಂದ ಗಳಿಸಿದ ಹಣ ಎಷ್ಟೋ ಭಾರಿ ಭಯೋತ್ಪಾದಕ ಕಾರ್ಯಗಳಲ್ಲಿ ಬಳಕೆಯಾಗಿ ದೇಶದ ಸುರಕ್ಷತೆಗೆ ದೊಡ್ಡ ಸವಾಲು ಉಂಟು ಮಾಡುತ್ತದೆ.

ಮಾದಕ ದ್ರವ್ಯಗಳ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿ ಅಳವಡಿಸಿಕೊಂಡ ಅಮಿತ್ ಶಾ ನೇತೃತ್ವದ ಗೃಹ ಇಲಾಖೆ ಇದರ ತೆಡೆಗೆ ತ್ರಿಕೋನ ಸೂತ್ರಗಳನ್ನು ರೂಪಿಸಿದೆ. ಸಾಂಸ್ಥಿಕ ರಚನೆಯನ್ನು ಬಲಪಡಿಸಿ ಕೇಂದ್ರ ಮತ್ತು ರಾಜ್ಯಗಳ ನಾರ್ಕೋಟಿಕ್ಸ್ ಏಜೆನ್ಸಿಗಳ ಮಧ್ಯೆ ಉತ್ತಮ ಸಮನ್ವಯ ಬೆಳಸಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ (NCB) ನೂತನ ರೂಪುರೇಷೆ ನೀಡಿತು. ಎನ್‌ಸಿಬಿಗೆ ಒಂದು ವಿಸ್ತಾರವಾದ ರಾಷ್ಟ್ರೀಯ ಡೇಟಾಬೇಸ್ ತಯಾರಿಸಲು ಸೂಚನೆ ನೀಡಿದ್ದು, ಮಾದಕ ದ್ರವ್ಯಗಳ ಹಣಬಲ ಮತ್ತು ಅದಕ್ಕೆ ಸಂಬಂಧಿತ ಭಯೋತ್ಪಾದಕ ಸಂಘಟನೆಗಳ ಮಾಹಿತಿ ಕೂಡ ಸಂಗ್ರಹಣೆ ಮಾಡಲದೆ. ಹಾಗೆ ಇದು ಮಾದಕ ದ್ರವ್ಯ ಕಳ್ಳಸಾಗಾಣಿಕೆಯ ನವೀನ ರೀತಿಗಳು ಮತ್ತು ಅಪರಾಧಿಗಳನ್ನು ವಿಶ್ಲೇಷಣೆ ಮಾಡಲಿದೆ.
ದೇಶದೊಳಗೆ ಬರುವ ಸುಮಾರು 60-70% ಪ್ರತಿಶತ ಮಾದಕ ದ್ರವ್ಯಗಳು ಸಮುದ್ರ ಮಾರ್ಗವಾಗಿಯೇ ಬರುತ್ತವೆ. ಸಮುದ್ರ ಮಾರ್ಗದಿಂದ ಒಳನುಸಳುವ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತೆಡೆಗೆ ಗೃಹಮಂತ್ರಿಗಳು ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯಲಯದಲ್ಲಿ ಉನ್ನತ ಮಟ್ಟದದಲ್ಲಿ ಒಂದು ಟಾಸ್ಕ್ ಫೋರ್ಸ್ ಸೃಷ್ಟಿಸಿದ್ದಾರೆ. ಈ ಟಾಸ್ಕ್ ಫೋರ್ಸ್‌ನಲ್ಲಿ ಬಂದರು ಮತ್ತು ಜಲಮಾರ್ಗ ಸಚಿವಾಲಯ, ನೌಕಾಪಡೆ, ಕರಾವಳಿ ರಕ್ಷಣಾ ಪಡೆ ಮತ್ತು ಪರೋಕ್ಷ ತೆರಿಗೆ ಮತ್ತು ಸುಂಕಗಳ ಕೇಂದ್ರಗಳ ಪ್ರತಿನಿಧಿಗಳಿರಲಿದ್ದಾರೆ.ಮಾದಕ ವಸ್ತುಗಳ ಕಳ್ಳಸಾಗಾಣಿಕೆ ಹಣದ ಪತ್ತೆ ಹಚ್ಚುವುದರ ಜೊತೆಗೆ, ಅಮಿತ್ ಶಾರವರು ‘ಸಂಪೂರ್ಣ ಡ್ರಗ್ ಜಾಲಗಳ ನಕ್ಷೆ ಮತ್ತು ಅವುಗಳ ಮೂಲಗಳನ್ನು ಪತ್ತೆ’ ಹಚ್ಚುವಂತೆ ಸಚಿವಾಲಕ್ಕೆ ಸೂಚನೆ ನೀಡಿದ್ದಾರೆ.

ತಮ್ಮ ಎರಡನೇ ಕಾರ್ಯತಂತ್ರದ ಭಾಗವಾಗಿ, ಗೃಹ ಸಚಿವಾಲಯವು “ಸರ್ಕಾರದ ಸಂಪೂರ್ಣ ವಿಧಾನದ” ಅಡಿಯಲ್ಲಿ, ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ನಾರ್ಕೋ(NARCO) ಏಜೆನ್ಸಿಗಳ ನಡುವೆ ಉತ್ತಮ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ಸರಣಿ ಕ್ರಮಗಳನ್ನು ತೆಗೆದುಕೊಂಡಿದ್ದು, ಇದರಿಂದಾಗಿ ಈ ಸಂಸ್ಥೆಗಳು ಸಮನ್ವಯ ಮತ್ತು ಹೊಣೆಗಾರಿಕೆಯೊಂದಿಗೆ ಒಟ್ಟಾಗಿ ಈ ಮಾರಿಯ ವಿರುದ್ಧ ಹೋರಾಡಲಿವೆ. ಗೃಹಮಂತ್ರಿಗಳ ಆದೇಶದ ಮೇರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ‘ಮಾದಕ ದ್ರವ್ಯ ವಿರೋಧಿ ಪಡೆ’ಗಳನ್ನು (ANTF) ರಚಿಸಲಾಗಿದೆ.
Kalahamsa Infotech private limitedಅಕ್ರಮ ಮಾದಕವಸ್ತು ವ್ಯಾಪಾರದಲ್ಲಿ ಡಾರ್ಕ್ ನೆಟ್ ಮತ್ತು ಕ್ರಿಪ್ಟೋಕರೆನ್ಸಿಯ ಬಳಕೆಯನ್ನು ನಿಲ್ಲಿಸಲು ಕೂಡ ಸಚಿವಾಲಯವೂ ಕೆಲಸ ಮಾಡುತ್ತಿದೆ. ಸಚಿವಾಲಯದ ಮೂರನೇ ತಂತ್ರ, ಡ್ರಗ್ಸ್ ಬಳಕೆಯ ವಿರುದ್ಧ ಸಾಮಾನ್ಯ ಜನರನ್ನು ಸಂವೇದನಾಶೀಲಗೊಳಿಸುವ ಅಭಿಯಾನ ಪ್ರಚಂಡ ಪ್ರತಿಕ್ರಿಯೆಯನ್ನು ಪಡೆದಿದೆ. ಎನ್‌ಸಿಬಿ(NCB) ಆರಂಭಿಸಿದ “ಡ್ರಗ್-ಫ್ರೀ ಇಂಡಿಯಾ” ಪ್ರತಿಜ್ಞೆ ಅಭಿಯಾನದ ಅಡಿಯಲ್ಲಿ 30 ಲಕ್ಷಕ್ಕೂ ಹೆಚ್ಚು ಜನರು ಡ್ರಗ್ಸ್ ವಿರುದ್ಧ ಕಾರ್ಯನಿರ್ವಹಿಸಲು ಪ್ರತಿಜ್ಞೆ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಡ್ರಗ್ ಮಾಫಿಯಾವನ್ನು ನಿಯಂತ್ರಿಸುವ ಗುರಿಯನ್ನು ಸಾಧಿಸಲು, ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟ್ರೇಷನ್ (ಡಿಇಎ), ಆಸ್ಟ್ರೇಲಿಯನ್ ಫೆಡರಲ್ ಪೊಲೀಸ್ (ಎಎಫ್‌ಪಿ), ಮತ್ತು ರಾಯಲ್ ಕೆನಡಿಯನ್ ಮೌಂಟೇನ್ ಪೊಲೀಸ್ (ಆರ್‌ಸಿಎಂಪಿ) ನಂತಹ ಅಂತರರಾಷ್ಟ್ರೀಯ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಅಮಿತ್ ಶಾ ಖಚಿತಪಡಿಸಿದ್ದಾರೆ. ಈಗಾಗಲೇ ಅಂತಹ ಸಮನ್ವಯಗಳು ಫಲಿತಾಂಶಗಳನ್ನು ನೀಡುತ್ತಿರುವಾಗಲೇ, 44 ದೇಶಗಳೊಂದಿಗೆ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಅಕ್ರಮ ಮಾದಕ ದ್ರವ್ಯಗಳ ಕೃಷಿಯನ್ನು ತಡೆಗಟ್ಟಲು, ಕಳೆದ ಮೂರು ವರ್ಷಗಳಲ್ಲಿ ಎನ್‌ಸಿಬಿ(NCB) ಸುಮಾರು 36,000 ಎಕರೆ ಪಾಪಿ(poppy) ಕೃಷಿ ಮತ್ತು 82,769 ಎಕರೆ ಗಾಂಜಾ ಕೃಷಿಯನ್ನು ನಾಶಪಡಿಸಿದೆ. ದೂರದ ಗುಡ್ಡಗಾಡು ಪ್ರದೇಶಗಳಲ್ಲಿ ಸಾಗುವಳಿ ಮಾಡುತ್ತಿರುವ ಅಕ್ರಮ ಬೆಳೆಗಳ ನಕ್ಷೆ ಮತ್ತು ನಾಶಪಡಿಸಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHome Minister Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಗೃಹಮಂತ್ರಿ ಅಮಿತ್ ಶಾಬೆಂಗಳೂರು
Previous Post

ಪಕ್ಷ ಅಧಿಕಾರಕ್ಕೆ ತರಲು ಯುವ ಶಕ್ತಿಯಿಂದ ಅವಿರತ ಪ್ರಯತ್ನ: ಎಚ್.ಡಿ. ಕುಮಾರಸ್ವಾಮಿ

Next Post

ಚುನಾವಣಾ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ವಾಹನ ವಶ: ದೂರು ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚುನಾವಣಾ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ವಾಹನ ವಶ: ದೂರು ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!