No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Sunday, February 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಯಲ್ಲಿ ಬೃಹತ್ ಹಗರಣ | ಡಿಸಿಎಂ ವಿರುದ್ಧ ಶಾಸಕ ಮುನಿರತ್ನ ರಾಜ್ಯಪಾಲರಿಗೆ ದೂರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 15, 2025
in ಬೆಂಗಳೂರು ನಗರ
0
ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಯಲ್ಲಿ ಬೃಹತ್ ಹಗರಣ | ಡಿಸಿಎಂ ವಿರುದ್ಧ ಶಾಸಕ ಮುನಿರತ್ನ ರಾಜ್ಯಪಾಲರಿಗೆ ದೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್

‘ಬಿಬಿಎಂಪಿ #BBMP ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ₹2,000 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DCM D K Shivakumar ಅವರು ಶೇ 15ರಷ್ಟು ಕಮಿಷನ್‌ ಪಡೆದಿದ್ದಾರೆ’ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ #MLA Muniratna ಅವರು  ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ  ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಭಾನುವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ #Governor Thawarchand Gehlot ಅವರನ್ನು ಖುದ್ದಾಗಿ ಭೇಟಿ ಮಾಡಿದ ಮುನಿರತ್ನ ಅವರು, ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ವಿರುದ್ದ ಕೆಲವು ದಾಖಲೆಗಳನ್ನು ಸಲ್ಲಿಸಿ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ #Under the Prevention of Corruption Act ದೂರು ದಾಖಲಿಸಿ ಅವರನ್ನು ತನಿಖೆಗೆ ಒಳಪಡಿಸಬೇಕು. ಇದೊಂದು ಬೃಹತ್ ಭ್ರಷ್ಟಾಚಾರದ ಪ್ರಕರಣವಾಗಿರುವುದರಿಂದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ವಿವಿಧ ಕಾಮಗಾರಿಗಳ ಗುತ್ತಿಗೆ ನೀಡಲು ಟೆಂಡರ್‌ ಕರೆಯದೆ, ಪ್ರಕ್ರಿಯೆ ನಡೆಸಲಾಗುತ್ತಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರ ಸಂಬಂಧಿಗಳಿಗೆ ಗುತ್ತಿಗೆ ನೀಡಲು ಮುಂದಾಗಿದ್ದು, ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಯುವ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ್ ಗೌಡ ಗುತ್ತಿಗೆದಾರರಿಂದ ಶೇ 15ರಷ್ಟು ಕಮಿಷನ್‌ ಈಗಾಗಲೇ ಪಡೆದಿದ್ದಾರೆ ಎಂದು ದೂರಿದ್ದಾರೆ.

‘ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಸಹ ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ರಾಜ್ಯದ ಗುತ್ತಿಗೆದಾರರ ಬಿಡ್‌ಗಳನ್ನು ಅನಗತ್ಯವಾಗಿ ತಿರಸ್ಕರಿಸುತ್ತಿದ್ದಾರೆ. ಕೆಲವು ಕಾಮಗಾರಿಗಳಲ್ಲಿ ತಮ್ಮದೇ ಬೇನಾಮಿ ಕಂಪನಿಗಳ ಮೂಲಕ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು, ಗುತ್ತಿಗೆ ಪಡೆದಿದ್ದಾರೆ’ ಎಂದು ಆರೋಪಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಸ್ಟಾರ್‌ ಚಂದ್ರು ಅವರ ಸ್ಟಾರ್‌ ಬಿಲ್ಡರ್ಸ್‌ಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ₹232 ಕೋಟಿ ಮೊತ್ತದ ಕಾಮಗಾರಿಗಳ ಗುತ್ತಿಗೆ ನೀಡಿದ್ದಾರೆ. ಈ ಎಲ್ಲ ಅಕ್ರಮಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಬೇಕು’ ಎಂದು ಕೋರಿದ್ದಾರೆ.

http://kalpa.news/wp-content/uploads/2025/03/PES-Video.mp4

ಶಿವಕುಮಾರ್ ನಡೆಸುತ್ತಿರುವ ಭ್ರಷ್ಟಾಚಾರ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ. ಬೆಂಗಳೂರು ನಗರಕ್ಕೆ ಎರಡು ಸಾವಿರ ಕೋಟಿ ರು. ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ವಿಶ್ವಬ್ಯಾಂಕ್‌ನಿಂದ ಸಾಲ ರೂಪದಲ್ಲಿ ₹1700 ಕೋಟಿ ಪಡೆಯಲಾಗಿದೆ ಮತ್ತು ಸಾರ್ವಜನಿಕ ತೆರಿಗೆ ₹300 ಕೋಟಿ ಅನುದಾನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಶಾಸಕ ಎಸ್‌.ಟಿ. ಸೋಮಶೇಖರ್‌ ಬಿಜೆಪಿಯ ಶಾಸಕರಾಗಿದ್ದರೂ ಕಾಂಗ್ರೆಸ್‌ನ ಶಾಸಕರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕ್ಷೇತ್ರದ ವ್ಯಾಪ್ತಿಗೆ ಬಿಬಿಎಂಪಿಯ ಕೇವಲ ಐದು ವಾರ್ಡ್‌ಗಳಿದ್ದರೂ ಸುಮಾರು ₹232 ಕೋಟಿ ಹಂಚಿಕೆ ಮಾಡಲಾಗಿದೆ. ಇನ್ನು, ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ ಕಾಂಗ್ರೆಸ್‌ನ ಸ್ಟಾರ್‌ ಚಂದ್ರು ಮಾಲೀಕತ್ವದ ಸ್ಟಾರ್‌ ಬಿಲ್ಡರ್ಸ್‌ ಕಂಪನಿಗೆ ಯಶವಂತಪುರ ಕ್ಷೇತ್ರಕ್ಕೆ ಹಂಚಿಕೆಯಾಗಿರುವ ಅನುದಾನದಲ್ಲಿ ನೀಡಲು ತೀರ್ಮಾನಿಸಲಾಗಿದೆ ಎಂದು ದೂರಿದ್ದಾರೆ.
ಹಿಂದಿನ ಸರ್ಕಾರಗಳು ರಾಜ್ಯದ ಗುತ್ತಿಗೆದಾರರು ಟೆಂಡರ್‌ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಆದರೆ, ಹೊರರಾಜ್ಯದ ಆಂಧ್ರಪ್ರದೇಶದ ಬಲಿಷ್ಠ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ₹200 ಕೋಟಿ ಪ್ಯಾಕೇಜ್‌ ಅನುದಾನಗಳಿಗೆ ಟೆಂಡರ್‌ ಪ್ರಕ್ರಿಯೆಯನ್ನು ಮಾಡಲಾಗಿದ್ದು, ಇದರಿಂದ ರಾಜ್ಯದ ಗುತ್ತಿಗೆದಾರರು ಬೇರೆ ರಾಜ್ಯದ ಶ್ರೀಮಂತ ಗುತ್ತಿಗೆದಾರಿಗೆ ಗುಲಾಮರಾಗುತ್ತಿದ್ದಾರೆ. ಈ ಭ್ರಷ್ಟಾಚಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒಂದು ಭಾಗವಾದರೆ, ಮತ್ತೊಂದು ಭಾಗಕ್ಕೆ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ ಸುರೇಶ್  ಕಾರಣಕರ್ತರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಚಂದ್ರಬಾಬು ನಾಯ್ಡು ಇವರ ಸರ್ಕಾರದಲ್ಲಿ ಶಾಸಕರಾಗಿರುವ ಮತ್ತು ಸಂಬಂಧಿಯೊಬ್ಬರ ಜೆ.ಎಂ.ಸಿ ಕನ್‌ಷ್ಟಕ್ಷನ್ಸ್ ಹೆಸರಿಗೆ ಹಾಗೂ ಇವರ ಜೊತೆಯಲ್ಲಿರುವ ಆಂಧ್ರ ಪ್ರದೇಶದ ಗುತ್ತಿಗೆದಾರರಿಗೆ 1768 ಕೋಟಿ ರೂಪಾಯಿಗಳ ಪ್ಯಾಕೆಜ್‌ನ ಕಾರ್ಯಾದೇಶವನ್ನು ನೀಡಲು ಉದ್ದೇಶಿಸಲಾಗಿದೆ. ಅಲ್ಲದೇ ಗುತ್ತಿಗೆದಾರ ಆರ್.ಎನ್.ಶೆಟ್ಟಿ ಜೊತೆಯಲ್ಲಿ ಸಹ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸುಮಾರು ಶೇ 15 ರಷ್ಟು ಕಮಿಷನ್ ಹಣದ ಮುಂಗಡವನ್ನು ತಲುಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಗುತ್ತಿಗೆದಾರರಿಗೆ ನೇರವಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದಂತೆ ಬಾಹ್ಯ ಒತ್ತಡ ಹಾಕಿ ಮೌಖಿಕವಾಗಿ ಸೂಚಿಸಿದ್ದಾರೆ. ನಮ್ಮ ರಾಜ್ಯದ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದರೆ ಇವರಿಗೆ ಲಂಚ ಕೇಳಲು ಹಾಗೂ ಪಡೆಯಲು ಆಗುವುದಿಲ್ಲ ಹಾಗಾಗಿ ತಾಂತ್ರಿಕ ದೋಷದ ಕಾರಣ ಒಡ್ಡಿ ಟೆಂಡರ್ ಪ್ರಕ್ರಿಯೆಯಲ್ಲಿ Disqualify ಆಗುವಂತೆ ನೋಡಿಕೊಳ್ಳುತ್ತಾರೆ. ಅಲ್ಲದೇ ಇವರು ಸಹ ಇಂತಹ ಕೆಲವು ಅಕ್ರಮ ಟೆಂಡರ್ ಪ್ರಕ್ರಿಯೆಯಲ್ಲಿ ನೇರವಾಗಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆಲವು ಅಧಿಕಾರಿ ವರ್ಗದವರನ್ನು ಅನುಕೂಲಕ್ಕೆ ತಕ್ಕಂತೆ ಬಳಕೆ ಮಾಡಿಕೊಂಡು ತಾವೇ ಕೆಲವು (Dummy) ಗುತ್ತಿಗೆದಾರರನ್ನು ಟೆಂಡರ್‌ನಲ್ಲಿ ಭಾಗವಹಿಸುವಂತೆ ಸೂಚಿಸಿ, ತಮಗೆ ಬೇಕಾದ ಹೊರರಾಜ್ಯದ ಗುತ್ತಿಗೆದಾರರಿಗೆ ಕಾರ್ಯದೇಶವನ್ನು ನೀಡಲು ಸಂಚು ಮಾಡಿದ್ದು, ಈ ಎಲ್ಲಾ ಅವ್ಯವಹಾರಗಳು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ಬರದಂತೆ ನೋಡಿಕೊಂಡಿರುತ್ತಾರೆ. ಈ ಅಕ್ರಮಕ್ಕೆ ಯಾವುದೇ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರುಗಳ ಪಾತ್ರ ಇರುವುದಿಲ್ಲ. ಇದನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ನೇರವಾಗಿ ನಿರ್ವಹಣೆಯನ್ನು ಮಾಡುತ್ತಿದ್ದಾರೆ. ಇದರೊಂದಿಗೆ ಕೂಡಲೇ LOC ಪಡೆಯಲು ಶೇ.15% ಹಣವನ್ನು ಸಂದಾಯ ಮಾಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸುಮಾರು 20 ನಿಮಿಷಗಳ ಕಾಲ ದೂರು ಆಲಿಸಿರುವ ರಾಜ್ಯಪಾಲರು ಕಾನೂನು ತಜ್ಞರು ಹಾಗೂ ಸಂಬಂಧಪಟ್ಡವರಿಂದ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ನೀಡಿದ್ದಾರೆ.

ನಂತರ ರಾಜಭವನದ ಹೊರಗಡೆ ಸುದ್ದಿಗಾರರ ಜೊತೆ ಮಾತನಾಡಿದ ಮುನಿರತ್ನ ಅವರು, ಬೆಂಗಳೂರಿನಲ್ಲಿ ಒಟ್ಟು 16 ವರ್ಕ್ ಆರ್ಡರ್ ಕೊಟ್ಟಿದ್ದಾರೆ.ನಮ್ಮ ಕ್ಷೇತ್ರದಲ್ಲಿ 216 ಕೋಟಿ ಮೊತ್ತದ ಕಾಮಗಾರಿಗಳನ್ನು ಬಿಎಸ್‌ಆರ್ ಕಂಪೆನಿಗೆ ಟೆಂಡರ್ ನೀಡಿದ್ದಾರೆ.ವರ್ಲ್ಡ್ ಬ್ಯಾಂಕ್ ನಿಂದ ರಾಜಾಕಾಲುವೆ ಕಾಮಗಾರಿಗಳಿಗೆ ಅಂತ 2 ಸಾವಿರ ಕೋಟಿ ಸಾಲ ತಂದಿದ್ದಾರೆ ಎಂದು ಹೇಳಿದರು.
ಇದರ ಟೆಂಡರ್ ಅನ್ನು ಅನರ್ಹ ಕಂಪೆನಿಗಳಿಗೆ ಕೊಡುತ್ತಿದ್ದಾರೆ.ಇದರಲ್ಲಿ 400 ಕೋಟಿ ರೂ ಕಮೀಷನ್  ಹೊಡೆಯಲಾಗಿದೆ.ಟೆಂಡರ್ ನಿಯಮಗಳನ್ನು ಬದಲಾಯಿಸಿದ್ದಾರೆ, ಕೆಟಿಟಿಪಿ ಕಾಯ್ದೆ ಉಲ್ಲಂಘಿಸಿದ್ದಾರೆ.ಮುಕ್ತವಾಗಿ ಟೆಂಡರ್ ಕರೆದು ಕಾಮಗಾರಿಗಳನ್ನು ಕೊಡುತ್ತಿಲ್ಲ‌ ಎಂದು ಆಪಾದಿಸಿದರು.

ನಿರ್ದಿಷ್ಟ ಗುತ್ತಿಗೆದಾರ ಕಂಪೆನಿಗಳಿಗೆ ಮಾತ್ರ ಕಮೀಷನ್ ಹೊಡೆಯಲು ಟೆಂಡರ್  ಕೊಡುತ್ತಿದ್ದಾರೆ.ಇದರಲ್ಲಿ ಕೆಟಿಪಿಪಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ರಾಜಕಾಲುವೆಗಳ ಟೆಂಡರ್ ಕೊಟ್ಟಿದ್ದಾರೆ.ಗ್ಲೋಬಲ್ ಟೆಂಡರ್ ಕರೆಯದೇ ಅಕ್ರಮ ಎಸಗಲಾಗಿದೆ.ಇದನ್ನು ತಡೆಗಟ್ಟಿದರೆ ಸರ್ಕಾರಕ್ಕೆ 400 ಕೋಟಿ ಉಳಿಯಲಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಇದೇ ಮೊದಲು  ಇಂತಿಂಥ ಗುತ್ತಿಗೆದಾರರಿಗೇ ಇಂತಿಥ ಕಾಮಗಾರಿ ಎಂದು ನಿಗಧಿ ಮಾಡಿಕೊಂಡು ಟೆಂಡರ್ ಕೊಡುತ್ತಿದ್ದಾರೆ.

ಮಂಗಳವಾರ ಇದರ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ ಹಾಕಲಾಗುವುದು. ಈ ಹಗರಣದ ನೇರ ಹೊಣೆ ಡಿಕೆಶಿ, ಡಿ ಕೆ ಸುರೇಶ್ ಎಂದು ಮುನಿರತ್ನ ಗಂಭೀರ ಆರೋಪ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreBBMPDCM D K ShivakumarGovernor Thawarchand GehlotKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMLA MuniratnaNews_in_KannadaNews_KannadaUnder the Prevention of Corruption Actಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಬಿಬಿಎಂಪಿಬೆಂಗಳೂರುಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ಶಾಸಕ ಮುನಿರತ್ನ
Share196Tweet123Send
Previous Post

ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪ

Next Post

ಹಾಸನ | ನ್ಯಾಯಾಧೀಶರ ಮಾಲೀಕತ್ವದ ಮನೆಯಲ್ಲಿ ಕಳ್ಳತನಕ್ಕೆ ಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಹಾಸನ | ನ್ಯಾಯಾಧೀಶರ ಮಾಲೀಕತ್ವದ ಮನೆಯಲ್ಲಿ ಕಳ್ಳತನಕ್ಕೆ ಯತ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL