ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಅಭಿಮಾನಿಗಳ ಒತ್ತಾಯದ ಮೇರೆಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಾದಾಮಿ ಕ್ಷೇತ್ರದಿಂದ ನೂರಾರು ಸಂಖ್ಯೆಯಲ್ಲಿ ಬಂದಿದ್ದ ಅಭಿಮಾನಿಗಳು ಇಂದು ಅವರನ್ನು ಭೇಟಿಯಾಗಿ, ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ವಿಧಾನಸಭೆ ಚುನಾವಣೆ ವೇಳೆ ನಾಮಪತ್ರ ಸಲ್ಲಿಸಿ ಒಂದು ದಿನ ಮಾತ್ರ ಪ್ರಚಾರ ಕೈಗೊಂಡಿದ್ದೆ. ಆದರೂ ಕ್ಷೇತ್ರದ ಜನತೆ ಅಭಿಮಾನದಿಂದ ಗೆಲ್ಲಿಸಿದ್ದಾರೆ. ಅವರ ಈ ಋಣವನ್ನು ಮರೆಯಲು ಸಾಧ್ಯವೇ ಇಲ್ಲ. ಬಾದಾಮಿ ಕ್ಷೇತ್ರದ ಶಾಸಕನಾಗಿ ನನ್ನ ಕರ್ತವ್ಯ ನಿಭಾಯಿಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ಅಭಿವೃದ್ಧಿ ಕೆಲಸದ ವಿಷಯದಲ್ಲಿ ಹಿಂದೆ ಬೀಳುವುದಿಲ್ಲ. ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸಾವಿರಾರು ಕೋಟಿ ರೂ. ವೆಚ್ಚದ ಕಾಮಗಾರಿಗಳು ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದರು.

ನೀವು ಬಾದಾಮಿ ಕ್ಷೇತ್ರದಿಂದಲೇ ಗೆದ್ದು ಶಾಸಕರಾಗಬೇಕು. ಮುಖ್ಯಮಂತ್ರಿಯೂ ಆಗಬೇಕು ಎಂದು ಅಭಿಮಾನಿಗಳು ಹಾರೈಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post