No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ: ಡಿ.ಕೆ. ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2022
in ಬೆಂಗಳೂರು ನಗರ, ರಾಜಕೀಯ
0
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ. ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ, ಮಂತ್ರಿಗಳು ಅದಕ್ಕೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ. ಇದು ಗಂಭೀರ ಅಪರಾಧವಾಗಿದೆ. ಚುನಾವಣಾ ಆಯೋಗವು ಈ ವಿಚಾರವನ್ನು ಡಿವಿಸಿಗೆ (ವಿಭಾಗೀಯ ಅಧಿಕಾರಿ) ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ನಾವು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ಸಮಯ ಕೇಳಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು,  ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದಾರೆ. ಆದರೆ ಈಗಾಗಲೇ ಈ ಸಂಸ್ಥೆಯ ಸುಮಾರು 7-8 ಸಾವಿರ ಸಿಬ್ಬಂದಿ ಮನೆ, ಮನೆಗೆ ಹೋಗಿ ಮತದಾರರ ಮಾಹಿತಿ ಕಲೆ ಹಾಕಿದ್ದಾರೆ. ಮತ್ತೊಂದೆಡೆ ಕೆಲವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳುತ್ತಿರುವ ವರದಿಗಳನ್ನು ಮಾಧ್ಯಮಗಳಲ್ಲಿ ನೋಡಿದೆ. ಈ ಸಂಸ್ಥೆಯ ಕಾರ್ಯವ್ಯಾಪ್ತಿ ಏನಿದೆ ಎಂದು ನಮ್ಮ ಬಳಿ ಮಾಹಿತಿ ಇದೆ. ಈ ಬಗ್ಗೆ ಅಲ್ಲಿ ಕೆಲಸ ಮಾಡುತ್ತಿದ್ದವರಿಂದಲೇ ಮಾಹಿತಿ ಕಲೆ ಹಾಕಿದ್ದೇನೆ. ಅವರು ಜನ ಪ್ರತಿನಿಧಿಗಳ ಬಳಿ ಹೋಗಿ ನಾವು ನಿಮ್ಮನ್ನು ಗೆಲ್ಲಿಸುತ್ತೇವೆ ಎಂದು ಪ್ರತಿ ವಾರ್ಡ್ ನಲ್ಲಿ ಕಾರ್ಪೊರೇಟರ್ ಬಳಿ 1 ಕೋಟಿ ಹಣ ಕೇಳಿದ ಬಗ್ಗೆ ಹಲವರು ಮಾಹಿತಿ ನೀಡಿದ್ದಾರೆ. ಈ ವಿಚಾರದಲ್ಲಿ ನಾವು ಕೂಡ ನಮ್ಮದೇ ಆದ ತನಿಖೆ ಮಾಡಿದ್ದೇವೆ.
ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಉಡಾಫೆಯಾಗಿ ಮಾತನಾಡಬಾರದು. ಮುಖ್ಯಮಂತ್ರಿಗಳು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರು ಈ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರಬೇಕು. ಯಾವ ಕ್ಷೇತ್ರಗಳಲ್ಲಿ ಎಷ್ಟು ವಾರ್ಡ್ ಗಳಲ್ಲಿ ಮಾಹಿತಿ ಕಲೆ ಹಾಕಿದ್ದಾರೆ, ಖಾಲಿ ಮನೆ, ನಿವೇಶನಗಳನ್ನು ಗುರುತಿಸಿ ಅವುಗಳ ದುರ್ಬಳಕೆಗೆ ಹೇಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಗೊತ್ತಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿ, ಈ ಸಂಸ್ಥೆಗೆ ಅನುಮತಿ ಆದೇಶ ನೀಡಿದ್ದಾರೆ. ಆದರೂ ಆಯೋಗದವರು ಯಾಕೆ ಕ್ರಮ ಕೈಗೊಂಡಿಲ್ಲ?

ನಾವು ಪೊಲೀಸ್ ಕಮಿಷನರ್ ಅವರಿಗೆ ಕೊಟ್ಟಿರುವ ದೂರಿನ ಮಾಹಿತಿಯನ್ನು ಇ ಮೇಲ್ ಮೂಲಕ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದೇವೆ. ನಾಳೆ ಮಧ್ಯಾಹ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾನು, ಸಿದ್ದರಾಮಯ್ಯ ಹಾಗೂ ಇತರ ನಾಯಕರು ಭೇಟಿ ಮಾಡಲಿದ್ದೇವೆ ಎಂದರು.
ಈ ಸಂಸ್ಥೆಗಳ ನಿರ್ದೇಶಕ ರವಿಕುಮಾರ್ ಬಿಟ್ಟು ಬಿಎಲ್ಒ ಆಗಿ ಸಮೀಕ್ಷೆ ಮಾಡಿದ ಸಿಬ್ಬಂದಿ ಮೇಲೆ ಎಫ್ಐಆರ್ ದಾಖಲಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಅವರಿಗೆ ರಕ್ಷಣೆ ನೀಡುತ್ತಿದ್ದಾರೆ. ಇದನ್ನೇ ನಾವು ಹೇಳುತ್ತಿರುವುದು. ಆ ಗುರುತಿನ ಚೀಟಿ ಮಾಡಿದವರು ಯಾರು? ಈ ಗುರುತಿನ ಚೀಟಿ ವಿತರಣೆ ಮಾಡಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಧಿಕಾರಗಳ ವಿರುದ್ಧವೂ ಎಫ್ಐಆರ್ ಆಗಬೇಕು. ಸರ್ಕಾರಿ ಹುದ್ದೆಯನ್ನು ಬೇರೆಯವರಿಗೆ ನೀಡಲು ಸಾಧ್ಯವಿಲ್ಲ. ನಾನು ಮುಖ್ಯಮಂತ್ರಿ ಹಾಗೂ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಸರ್ಕಾರವದ ಅವಧಿಯಲ್ಲಿ ನಾನು, ಅಥವಾ ಕುಮಾರಸ್ವಾಮಿ ಅಥವಾ ಬೆಂಗಳೂರಿನ ಯಾವುದೇ ಸಚಿವರು, ಶಾಸಕರು ಈ ಕೆಲಸ ಮಾಡಿದ್ದರೆ ನಮ್ಮ ವಿರುದ್ಧವೂ ಕ್ರಮ ಕೈಗೊಳ್ಳಲಿ. ಈ ವಿಚಾರದಿಂದಲೂ ದೇಶದ ಮುಂದೆ ರಾಜ್ಯದ ಮಾನ ಹರಾಜಾಗುತ್ತಿದೆ. ಮುಖ್ಯಮಂತ್ರಿಗಳು ಇದರ ಗಂಭೀರತೆ ಅರಿಯಬೇಕು. ಮತದಾನದ ಹಕ್ಕು ಮೂಲಭೂತ ಹಕ್ಕಾಗಿದ್ದು, ಅದನ್ನು ಕಸಿಯುವ ಅಕ್ರಮ ಮಾಡಲಾಗಿದೆ. ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಇಂತಹ ಅಕ್ರಮಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ, ಮತದಾರರಿಗೆ ಮಾಡಿರುವ ಅಪಮಾನ. ಈ ಸಮಯದಲ್ಲಿ ನಾನು ಜೆಡಿಎಸ್, ಕಮ್ಯುನಿಸ್ಟ್, ರೈತ ಸಂಘ ಹಾಗೂ ನಮ್ಮ ಪಕ್ಷದವರಿಗೆ ನಿಮ್ಮ ಮೂಲಕ, ನೀವೆಲ್ಲರೂ ನಿಮ್ಮ ಬೂತ್ ಗಳಿಗೆ ಹೋಗಿ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಿ. ಅನೇಕರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಅಧಿಕಾರಿಗಳು, ಬಿಎಲ್ ಒಗಳ ಮೂಲಕ ಈ ರೀತಿ ಅಕ್ರಮ ಮಾಡಲಾಗುತ್ತಿದೆ ಎಂದು ಸಂದೇಶ ನೀಡಲು ಬಯಸುತ್ತೇನೆ. ನಮ್ಮ ಪಕ್ಷದವರಿಗೆ ಪ್ರತಿ ಬೂತ್ ನಲ್ಲಿ ಏಜೆಂಟರನ್ನು ನೇಮಿಸಲು ಹಕ್ಕು ನೀಡಲಾಗಿದೆ. ನೀವು ಬಿಎಲ್ಎಗಳ ಮೂಲಕ ಮಾಹಿತಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ ಎಂದು ಹೇಳಬಯಸುತ್ತೇನೆ. 26 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, 14 ಲಕ್ಷ ಹೆಸರನ್ನು ಹೊಸದಾಗಿ ಸೇರಿಸಲಾಗಿದೆ ಎಂದು ಅವರೇ ಹೇಳಿದ್ದಾರೆ. ಯಾರ ಹೆಸರು ಕೈ ಬಿಟ್ಟು, ಯಾರ ಹೆಸರು ಸೇರಿಸಿದ್ದಾರೆ? ಪ್ರತಿ ಕ್ಷೇತ್ರದಲ್ಲೂ ಹೀಗೆ ಮಾಡಲಾಗಿದೆ. ಹೀಗಾಗಿ ಕಾರ್ಯಕರ್ತರು ಬಹಳ ಜಾಗರೂಕರಾಗಿ ಈ ಬಗ್ಗೆ ಗಮನ ಹರಿಸಬೇಕು. ಪ್ರತಿ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಇರುವ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟು, ಅಕ್ರಮವಾಗಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ’ ಎಂದು ತಿಳಿಸಿದರು.
ನಿಮ್ಮ ಸರ್ಕಾರದ ಅವಧಿಯಲ್ಲಿ ಅನುಮತಿ ನೀಡುವಾಗ ಈ ಸಂಸ್ಥೆಗಳ ಹಿನ್ನಲೆ ಪರಿಶೀಲನೆ ಮಾಡಲಿಲ್ಲವೇ ಎಂದು ಕೇಳಿದಾಗ, ‘ಇಂತಹ ತಪ್ಪನ್ನು ಯಾರೇ ಮಾಡಿದರೂ ತಪ್ಪೇ. ಅದು ಶಿವಕುಮಾರ್ ಆಗಲಿ, ಬೇರೆಯವರೇ ಆಗಲಿ. ಈ ವಿಚಾರವಾಗಿ ತನಿಖೆ ಮಾಡಿ. ಒಬ್ಬರು ತಪ್ಪು ಮಾಡಿದರು ಎಂದು ನೀನು ಅದೇ ತಪ್ಪು ಮಾಡುತ್ತೇನೆ ಎಂದು ಹೇಳುವುದು ಎಷ್ಟು ಸರಿ? ಮತದಾನದ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ನಿಮಗೆ ಅಧಿಕಾರ ಇದೆ ಎಂದು ಆ ಹಕ್ಕು ಕಸಿಯುವುದು ಎಷ್ಟು ಸರಿ?’ ಎಂದು ಕೇಳಿದರು.

ಅನಧಿಕೃತವಾಗಿ ಮಾಹಿತಿ ಕಲೆಹಾಕುವುದು ಅಪರಾಧವಾಗಿರುವಾಗ ಮಾತದಾರರ ಮಾಹಿತಿ ಕಲೆ ಹಾಕಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ, ‘ಸೋಷಿಯಲ್ ಇಂಪಾಕ್ಟ್ ಅಧ್ಯಯನಕ್ಕಾಗಿ ಅವರಿಗೆ ಅನುಮತಿ ನೀಡಲಾಗಿತ್ತು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸೋಷಿಯಲ್ ಇಂಪಾಕ್ಟ್ ಅಧ್ಯಯನಕ್ಕೆ ಅನುಮತಿ ನೀಡಿದ್ದೇ ಆಗಿದ್ದರೆ, ಕೋವಿಡ್ ಸಮಯದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಮನೆ, ಮನೆಗೆ ಕಳುಹಿಸಿದ್ದು ಏಕೆ? ಅದು ಸೋಷಿಯಲ್ ಇಂಪಾಕ್ಟ್ ಅಲ್ಲವೇ’ ಎಂದು ಕೇಳಿದರು.
ಜಾತಿ ಗಣತಿ ಮಾಡಿದ್ದೂ ತಪ್ಪೇ ಎಂಬ ಪ್ರಶ್ನೆಗೆ, ‘ತಪ್ಪಾಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ. ಆದರೆ ಮತದಾನದ ಹಕ್ಕು ನಮ್ಮ ಮೂಲಭೂತ ಹಕ್ಕು. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರವಾಗಿದ್ದರೆ ಅದನ್ನೇ ತನಿಖೆ ಮಾಡಿ ಎಂದು ಹೇಳುತ್ತಿದ್ದೇವೆ. ಇಂತಹ ವಿಚಾರ ತನಿಖೆ ಮಾಡಬೇಡಿ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲ ವಿಚಾರದಲ್ಲೂ ತನಿಖೆ ಮಾಡಲಿ. ನಾನು ಎಲ್ಲಿ ಹೋದರೂ ಶಾಸಕರ ಗುರುತಿನ ಚೀಟಿ ಕೇಳುವುದಿಲ್ಲ. ಕೇಳುವುದು ಆಧಾರ್ ಅಥವಾ ಮತದಾರರ ಗುರುತಿನ ಚೀಟಿ ಮಾತ್ರ. ಇಂತಹ ಹಕ್ಕು ಕಸಿಯುವುದು ಸರಿಯಲ್ಲ’ ಎಂದು ತಿಳಿಸಿದರು.

ಕಾಂಗ್ರೆಸಿಗರಿಗೆ ಕೆಲಸ ಇಲ್ಲದೆ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಮಾಧ್ಯಮವೊಂದು ಈ ವಿಚಾರವಾಗಿ ವರದಿ ಪ್ರಕಟಿಸಿದ ತಕ್ಷಣವೇ ಬಿಬಿಎಂಪಿ ಆಯುಕ್ತರು ಈ ಅನುಮತಿ ರದ್ದು ಮಾಡುತ್ತಾರೆ. ಆದರೆ ಬಿಬಿಎಂಪಿಯಿಂದ ಈ ಸಂಸ್ಥೆ ವಿರುದ್ಧ ಯಾಕೆ ಕ್ರಿಮಿನಲ್ ಪ್ರಕರಣ ದಾಖಲಿಸಿಲ್ಲ? ಸಾವಿರಾರು ಜನಕ್ಕೆ ಬಿಎಲ್ಒ ಎಂದು ನಕಲಿ ಗುರುತಿನ ಚೀಟಿ ನೀಡಿದ ರಿಟರ್ನಿಂಗ್ ಆಫೀಸರ್ ಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ಎಲ್ಲರನ್ನು ಬಂಧಿಸಬೇಕು. ಯಾಕೆ ಈ ಕ್ರಮ ಕೈಗೊಂಡಿಲ್ಲ’ ಎಂದು ತಿಳಿಸಿದರು.

ಇವಿಎಂ ಅಕ್ರಮಕ್ಕೂ ಇದಕ್ಕೂ ಸಂಬಂಧವಿದೆಯಾ ಎಂಬ ಪ್ರಶ್ನೆಗೆ, ‘ಈ ಸಂಸ್ಥೆಯವರೇ ನಾವು ಇವಿಎಂ ನಿರ್ವಹಣೆ ಮಾಡುತ್ತೇವೆ ಎಂದು ಹೇಳಿಕೊಂಡಿದ್ದಾರೆ. ಅವರು ಇದಕ್ಕಾಗಿ ಪರವಾನಿಗೆ ತೆಗೆದುಕೊಂಡಿದ್ದಾರಾ?’ ಎಂದು ತಿಳಿಸಿದರು.
ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, ‘ಅವರು ತಡ ಮಾಡುತ್ತಿರುವುದೇಕೆ? ಮಾನನಷ್ಟ ಮೊಕದ್ದಮೆ ಹಾಕಿಲಿ. ಈ ವಿಚಾರಗಳು ಚರ್ಚೆ ಆಗಲಿ. ಅವರಿಗೆ ಅಪಮಾನವಾಗಿದ್ದರೆ ಹಾಕಲಿ. ನಮ್ಮ ಬಳಿಯೂ ಈ ಸಂಸ್ಥೆಯ ಎಲ್ಲ ಅಖ್ರಮದ ದಾಖಲೆಗಳಿವೆ. ಕಳೆದ ಬಾರಿ ನಮ್ಮ ಪಕ್ಷದಲ್ಲಿ ಇದ್ದ ಮುನಿರತ್ನ ಅವರೆ ನಕಲಿ ಮತದಾರರ ಗುರುತಿನ ಚೀಟಿ ಮಾಡಿದ್ದರು. ಈ ವಿಚಾರವಾಗಿ ಮುನಿರಾಜು ಅವರು ಪ್ರಕರಣ ದಾಖಲಿಸಿದ್ದು, ಇಲ್ಲಿಯವರೆಗೂ ಅದನ್ನು ಹಿಂಪಡೆದಿಲ್ಲ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗ ಈ ವಿಚಾರದಲ್ಲಿ ಯಾಕೆ ಪ್ರಕರಣ ದಾಖಲಿಸಿಲ್ಲ. ಯಾರನ್ನೂ ಬಂಧಿಸಿಲ್ಲ ಯಾಕೆ? ರವಿಕುಮಾರ್ ಯಾವ ನಾಯಕರ ಜತೆ ಸಂಪರ್ಕದಲ್ಲಿದ್ದರು ಎಂದು ಪತ್ತೆಹಚ್ಚಬಹುದಲ್ಲವೇ?’ ಎಂದರು.

ಇವಿಎಂ ಹ್ಯಾಕ್ ಮಾಡುವವರು ಇದನ್ನು ಮಾಡದೇ ಇರುತ್ತಾರಾ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, ‘ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಿ ಅಥವಾ ಬಿಡಲಿ. ನಾನು ಜವಾಬ್ದಾರಿಯುತ ಪಕ್ಷದ ಅಧ್ಯಕ್ಷನಾಗಿ, ಜವಾಬ್ದಾರಿಯುತ ಮತದಾರನಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಮುಂದಿನ 24 ಗಂಟೆಗಳ ಒಳಗಾಗಿ ಅಂದರೆ ನಾಳೆ ಮಧ್ಯಾಹ್ನ 12 ಗಂಟೆ ಒಳಗೆ ಈ ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಮಾಡಿದವರು, ಮತದಾರರ ಮಾಹಿತಿ ಕಲೆಹಾಕಿ ಅಕ್ರಮ ಎಸಗಿರುವವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗವೇ ಇದರಲ್ಲಿ ಭಾಗಿಯಗಿದೆ. ಈ ವಿಚಾರವನ್ನು ಕೇವಲ ರಾಜ್ಯದಲ್ಲಿ ಮಾತ್ರವಲ್ಲ ದೆಹಲಿ ಚುನಾವಣಾ ಆಯೋಗದವರೆಗೂ ತೆಗೆದುಕೊಂಡು ಹೋಗುತ್ತೇವೆ. ರಾಜ್ಯ ಚುನಾವಣಾ ಆಯೋಗ ಈ ವಿಚಾರದ ತನಿಖೆಯನ್ನು ಡಿವಿಸಿಗೆ ನೀಡಿದ್ದಾರೆ. ಈ ಡಿವಿಸಿಯನ್ನು ಮುಖ್ಯಮಂತ್ರಿಗಳು ನೇಮಿಸಿದ್ದಾರೆ. ನಾವು ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡುತ್ತಿರುವಾಗ ಅವರ ಕೈಕೆಳಗಿನ ಅದಿಕಾರಿಗಳು ತನಿಖೆ ಮಾಡಲು ಸಾಧ್ಯವೇ? ಈ ಪ್ರಕರಣ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಈ ವಿಚಾರದಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡುತ್ತೇವೆ. ಆಕ್ಸಿಜನ್ ದುರಂತ ಪ್ರಕರಣದಲ್ಲಿ ನ್ಯಾಯಾಲಯ ಹೇಗೆ ಜವಾಬ್ದಾರಿ ತೆಗೆದುಕೊಂಡು ರಾಜ್ಯದ ಮಾನ ಕಾಪಾಡಿತೋ ಅದೇ ರೀತಿ ಈ ವಿಚಾರದಲ್ಲೂ ಜವಾಬ್ದಾರಿ ತೆಗೆದುಕೊಳ್ಳಬೇಕು. ಅವರ ನೇತೃತ್ವದಲ್ಲಿ ಎಲ್ಲ ಮತದಾರರಿಗೆ ತಮ್ಮ ಹಕ್ಕು ಸಿಗುವಂತೆ ಮಾಡಬೇಕು. ಇಂತಹ ನೀಚ ಹಾಗೂ ಭ್ರಷ್ಟ ಸರ್ಕಾರ ಹಾಗೂ ಅಧಿಕಾರಿಗಳ ಬಂಧವಾಗಬೇಕು’ ಎಂದು ಆಗ್ರಹಿಸಿದರು.

ಬೇರೆ ಪಕ್ಷದ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಬೇರೆ ಪಕ್ಷದಿಂದ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ದೊಡ್ಡ ಪಟ್ಟಿ ಇದೆ. ಇದನ್ನು ನಾನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಅವರು ಪಕ್ಷವನ್ನು ಸೇರುವ ದಿನ ಅವರ ಹೆಸರು ನಿಮಗೆ ತಿಳಿಯುತ್ತದೆ’ ಎಂದು ಸ್ಪಷ್ಟಪಡಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreD K ShivakumarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಡಿ.ಕೆ. ಶಿವಕುಮಾರ್ಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಾತಿಗಣತಿ ಸಮೀಕ್ಷೆ ಕಾಂಗ್ರೆಸ್‌ ನಿಂದ ದುರುಪಯೋಗ: ಸಚಿವ ಸುಧಾಕರ್‌ ಆರೋಪ

Next Post

ಅರಕೆರೆ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಿಂದ 5 ಲಕ್ಷ ರೂ. ಆರ್ಥಿಕ ನೆರವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅರಕೆರೆ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಿಂದ 5 ಲಕ್ಷ ರೂ. ಆರ್ಥಿಕ ನೆರವು

ಅರಕೆರೆ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಿಂದ 5 ಲಕ್ಷ ರೂ. ಆರ್ಥಿಕ ನೆರವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL