ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಹಾಲಕ್ಷ್ಮೀಪುರದ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದಲ್ಲಿ ನಡೆದ ಮಹಾಲಕ್ಷ್ಮೀಪುರ ಬ್ರಾಹ್ಮಣ ಸಭಾದ 18ನೇ ವಾರ್ಷಿಕೋತ್ಸವದ ಅಂಗವಾಗಿ ದುರ್ಗಾ ದೀಪ ನಮಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಕೆ. ಗೋಪಾಲಯ್ಯ ಅವರು ಮಾತನಾಡಿದರು.
ಕಳೆದ 14 ವರ್ಷಗಳಿಂದ ಬ್ರಾಹ್ಮಣಸಭಾದ ದುರ್ಗಾ ದೀಪ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.

Also read: Job fair in last week of January | Group of ministers to be formed: Chief Minister Siddaramaiah
ಜನವರಿ 21, 22 ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಂಘ ಹಾಗೂ ಮಹಾಲಕ್ಷ್ಮಿ ಲೇಔಟ್ ಒಳಗೊಂಡಂತೆ ಒಂದು ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಕಾರ್ಯಕ್ರಮಕ್ಕೆ ಎಲ್ಲರೂ ಕುಟುಂಬ ಸಮೇತರಾಗಿ ಆಗಮಿಸಬೇಕು ಎಂದು ಹೇಳಿದರು.
ಬ್ರಾಹ್ಮಣ ಸಭಾ ಹಾಗೂ ತಮ್ಮೆಲ್ಲರ ಸಹಕಾರದೊಂದಿಗೆ ನಾಲ್ಕು ಬಾರಿ ಶಾಸಕನಾಗಿದ್ದೇನೆ ಎಂದರು.

ಇದೇ ವೇಳೆ ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಅಶೋಕ ಹಾರನಹಳ್ಳಿ, ಡಾ ಐ.ಎಸ್. ರಾಘವೇಂದ್ರ ಭಟ್, ಆನಂದ ಪದ್ಮನಾಭ ಕೃಷ್ಣಮೂರ್ತಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು









Discussion about this post