No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪತ್ರಕರ್ತರ ಮಾಸಾಶನ ಹೆಚ್ಚಳ : ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 25, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಪತ್ರಕರ್ತರ Journalist ಮಾಸಾಶನ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಭರವಸೆ ನೀಡಿದರು.

ಅವರು ಇಂದು ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪತ್ರಕರ್ತರ ಹಲವಾರು ಬೇಡಿಕೆಗಳಿವೆ. ಪತ್ರಕರರಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಭದ್ರತೆಯ ಅವಶ್ಯಕತೆ ಇದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ನೀಡುವ ಸಮಿತಿ ರಚಿಸಲು ನಾಳೆಯೇ ಆದೇಶ ಹೊರಡಿಸಲಾಗುವದು.ಅದಕ್ಕಿರುವ ನಿಯಮಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ತಿಳಿಸಿದರು.

ವಿಧಾನಸಭೆಯ ಹತ್ತಿರವೇ ಪ್ರೆಸ್ ಕ್ಲಬ್ ಇದೆ. ಪತ್ರಕರ್ತರು ಶಕ್ತಿಸ್ಥಳ ಭಾಗ. ನಾಡು ಕಟ್ಟಲು ನಿಮ್ಮ ಶಕ್ತಿ ಬಳಕೆಯಾಗಲಿ. ಹೊಗಳಿಕೆ ತೆಗಳಿಕೆಗಳನ್ನು ಸಮಾನವಾಗಿ ಸ್ವೀಕರಿಸುವ ಸ್ಥಿತಪ್ರಜ್ಞತೆ ಇದ್ದಾಗ ರಾಜಕಾರಣಿ ಯಶಸ್ವಿಯಾಗಲು ಸಾಧ್ಯ. ಇವೆರಡರ ಮಧ್ಯೆ ಇರುವ ಸತ್ಯವನ್ನು ಕಂಡುಕೊಂಡು ಮುಂದೆ ಸಾಗಬೇಕು. ಇಂಥ ಕಾರ್ಯಕ್ರಮಗಳನ್ನು ಪ್ರೆಸ್ ಕ್ಲಬ್ ಹೆಚ್ಚಾಗಿ ಮಾಡಬೇಕು ಎಂದರು.
ಪ್ರೆಸ್ ಕ್ಲಬ್ ಸಾಮಾನ್ಯವಾಗಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದವರನ್ನು ಗುರುತಿಸುತ್ತಾರೆ. ಬ್ಯುಸಿನೆಸ್ ಐಕಾನ್ ಅವಾರ್ಡ್ ಕೊಡುತ್ತಾರೆ ಎಂದಾಗ ಆಶ್ಚರ್ಯವಾಯಿತು. ಪ್ರೆಸ್ ಕ್ಲಬ್ ತನ್ನ ಸಾಮಾಜಿಕ ಹೊಣೆಗಾರಿಕೆ ಯನ್ನು ಹೆಚ್ಚಿಸಿಕೊಂಡಿದೆ. ಬ್ಯುಸಿನೆಸ್ ನಲ್ಲಿ ವಿಶೇಷ ಸಾಧನೆ ಮಾಡಿರುವವರನ್ನು ಗುರುತಿಸಿ ಅವಾರ್ಡ್ ಕೊಡುವುದು ವಿಶೇಷ ಎಂದು ತಿಳಿಸಿ ಪ್ರಶಸ್ತಿ ಪಡೆದವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಇದು ವಿಶೇಷ ಪ್ರಶಸ್ತಿ. ಟೀಕೆಗಾರರಿಂದ ಪ್ರಶಸ್ತಿ ಪಡೆಯುವುದು ಸುಲಭವಲ್ಲ. ಅವರಿಂದ ಪ್ರಶಸ್ತಿ ಪಡೆದಿರುವುದು ನಿಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದೀರಿ ಎಂದು ನಿರೂಪಿಸುತ್ತದೆ ಎಂದರು.

ಅವಿನಾಭಾವ ಸಂಬಂಧ
ರಾಜಕಾರಣಿಗಳಿಗೂ ಮಾಧ್ಯಮದವರಿಗೂ ಅವಿನಾಭಾವ ಸಂಬಂಧ. ಅವರನ್ನು ಬಿಟ್ಟು ನಾವು, ನಮ್ಮನ್ನು ಬಿಟ್ಟು ಅವರು ಇರಲಾಗುವುದಿಲ್ಲ. ನಾವು ಮಾಡಿರುವ ಕೆಲಸಗಳು ಜನರಿಗೆ ತಿಳಿಯಲು ನಿಮ್ಮ ಅಗತ್ಯವಿದೆ. ಮಾಧ್ಯಮಗಳಿಲ್ಲದೆ ಜನರಿಗೆ ನಾವು ತಲುಪಲು ಸಾಧ್ಯವಿಲ್ಲ. ಹೀಗಾಗಿ ನಮ್ಮ ನಿಮ್ಮ ಅನ್ಯೋನ್ಯ ಸಂಬಂಧ ಅವಶ್ಯಕ ಮತ್ತು ಅನಿವಾರ್ಯ ಎಂದರು. ಹಾಗಂತ ಅದು ಒಂದೇ ಮಾರ್ಗದ ಟ್ರಾಫಿಕ್ ಅಲ್ಲ. ನಮ್ಮನ್ನು ಬಿಟ್ಟರೆ ನಿಮಗೆ ಸುದ್ದಿಗಳಿಲ್ಲ. ನೀವು ಕ್ರೀಡೆ, ಸಿನಿಮಾ ಎಂದು ಸುದ್ದಿ ಹಾಕಿದರೂ ಮೊದಲ ಪುಟದಲ್ಲಿ ನಾವೇ ಬೇಕು. ರಾಜಕಾರಣವೇ ಇಲ್ಲದ ದಿನವನ್ನು ಕಲ್ಪಿಸಿಕೊಳ್ಳಲೂ ಅಸಾಧ್ಯ.ವಾಹಿನಿಗಳ ಟಿ.ಆರ್.ಪಿಗಳು ಹಾಗೂ ರಾಜಕಾರಣಿಗಳ ಮಹತ್ವ ಕಡಿಮೆಯಾಗುತ್ತದೆ ಎಂದರು. ನಾವು ಹೇಳಿ ಮಾಡಿಸಿದ ಜೋಡಿ. ಒಟ್ಟಿಗೇ ಬಾಳಬೇಕೆಂದು ತಿಳಿಸಿದರು.
ಅಂತ:ಕರಣದಿಂದ ಕೆಲಸ ಮಾಡಿ
ಕಾಲ ಬದಲಾಗಿದೆ. ತಂತ್ರಜ್ಞಾನ ಮುಂದುವರೆದಿದೆ. ಜ್ಞಾನ, ವಿಜ್ಞಾನ, ತಂತ್ರಜ್ಞಾನ, ಈಗ ತಂತ್ರಾಂಶ ಜ್ಞಾನ ವಾಗಿದೆ. ಡಿಜಿಟಲ್ ಪ್ರಪಂಚಕ್ಕೆ ಬಂದಿದ್ದೇವೆ. ಡಿಜಿಟಲ್ ಪ್ರಪಂಚಕ್ಕೆ ಹೊರತಾಗಿ ಯಾರೂ ಇಲ್ಲ. ಹಳ್ಳಿಯ ಜನರಿಂದ ಹಿಡಿದು ಆಡಳಿಗಾರರಿಗೆ, ಉನ್ನತ ಮಟ್ಟದವರೆಗೂ ಡಿಜಿಟಲ್ ಜ್ಞಾನದ ಅವಶ್ಯಕತೆ ಇದೆ. ಈ ಸಂದರ್ಭದಲ್ಲಿ ನಾವು ಕೆಲವು ಮೂಲಭೂತ ವಿಷಯ ಮರೆಯಬಾರದು. ತತ್ವಜ್ಞಾನ ದಿಂದ ತಂತ್ರಾಂಶ ಜ್ಞಾನಕ್ಕೆ ಬದಲಾವಣೆ ಆಗಿದೆ. ಆದರೆ ತತ್ವಜ್ಞಾನದ ಮಾರ್ಗದರ್ಶನ ಹಾಗೂ ಅದರ ಮಹತ್ವವನ್ನು ಮರೆಯಬಾರದು. ಖಾಸಗೀಕರಣ, ಉದಾರೀಕರಣ ಹಾಗೂ ಜಾಗತೀಕರಣವಾಗಿದೆ. ಇವುಗಳ ಮಧ್ಯೆ ಅಂತ:ಕರಣವನ್ನು ಕಡಿಮೆಯಾಗಿದೆ. ಅಂತ:ಕರಣವನ್ನು ಇಟ್ಟುಕೊಂಡು ನಾವು ಕೆಲಸ ಮಾಡಬೇಕು. ಬಡವರಿಗಾಗಿ, ಮನಮಿಡಿಯುವ ಕೆಲಸಗಳನ್ನು ಮಾಡಬೇಕು. ನಮ್ಮ ಬದುಕಿನಲ್ಲಿ ಹಿಂತಿರುಗಿ ನೋಡಿದಾಗ ಯಾವ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದೇವೆ, ಯಾವ ಸಾಧನೆಯ ಕುರುಹುಗಳನ್ನು ಬಿಟ್ಟು ಹೋಗಿದ್ದೆವು ಎನ್ನುವುದು ಬಹಳ ಮುಖ್ಯ. ಸ್ವಾಮಿ ವಿವೇಕಾನಂದರು ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನು ಸಾಧಕ ಎಂದಿದ್ದಾರೆ. ಬದುಕು ಎಷ್ಟು ಉತ್ಕೃಷ್ಟವಾಗಿರಬೇಕೆಂದರೆ, ನೀವು ದೈಹಿಕವಾಗಿ ಇಲ್ಲದಿದ್ದರೂ ನಿಮ್ಮ ಸಾಧನೆಗಳ ಬಗ್ಗೆ ಸದಾ ಕಾಲ ಜಗತ್ತು ಮಾತನಾಡಬೇಕು ಎಂದರು.

Also read: ಪೋಷಕರು ವಿಕಲಚೇತನ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ: ಡಾ. ಧನಂಜಯ ಸರ್ಜಿ ಸಲಹೆ

ಬದುಕು ದೊಡ್ಡದು
ಇಲ್ಲಿ ಹಲವಾರು ಸಣ್ಣ ವಯಸ್ಸಿನ ಸಾಧನೆ ಮಾಡಿರುವುದನ್ನು ನೋಡಿದ್ದೇನೆ. ಆದರೆ ಬದುಕು ಅದಕ್ಕಿಂತ ದೊಡ್ಡದಿದೆ. ಆ ದೊಡ್ಡ ಬದುಕಿಗೆ ಇನ್ನಷ್ಟು ಸಾಧನೆ ನಿಮಗೆ ಮೆರಗು ನೀಡಲಿ ಎಂದರು.
ನಿರೀಕ್ಷೆಗಳಿಲ್ಲದ ಮಾನವೀಯ ಸೇವೆ
ಪ್ರೆಸ್ ಕ್ಲಬ್ , ಬೆಂಗಳೂರಿಗೆ ಐದಾರು ದಶಕಗಳ ಇತಿಹಾಸವಿದೆ. ಇಲ್ಲಿ ಕರ್ನಾಟಕದ ಆಗುಹೋಗುಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯುತ್ತದೆ. ಬೆಳಿಗ್ಗೆ ಯಿಂದ ರಾಜಕಾರಣಿಗಳ ಕೆಲಸವನ್ನು ಇಲ್ಲಿ ರಾತ್ರಿ ಚರ್ಚೆಯಾಗುತ್ತದೆ. ಪತ್ರಕರ್ತರ ಜೀವನ ಹಲವಾರು ವಿಚಾರಗಳ ಬಗ್ಗೆ ಬರೆಯುತ್ತಾರೆ, ಸಾವಿರಾರು ಕೋಟಿ ರೂ.ಗಳ ಬಗ್ಗೆ ಬರೆಯುತ್ತಾರೆ. ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಾರೆ. ಆದರೆ ಅವರ ಕುಟುಂಬಗಳು, ನಾಟಕದಲ್ಲಿ ಶ್ರೀಮಂತನ ಪಾತ್ರ ಮಾಡಿ ಬಣ್ಣ ಒರೆಸಿಕೊಂಡಾಗ ಇರುವಂತೆ ಇರುತ್ತದೆ. ಆದರೆ ನಿಮ್ಮದು ನಿರೀಕ್ಷೆ ಗಳಿಲ್ಲದ ಮಾನವೀಯ ಸೇವೆ. ಪತ್ರಕರ್ತ ಜೀವನ ಬಹಳಷ್ಟು ಅಪಾಯಗಳನ್ನು ಎದುರಿಸುತ್ತಾರೆ. ಇದೊಂದಿ ಸಾಹಸ. ಸಾಧಿಸುವ ಹಂಬಲವಿರುತ್ತದೆ. ದೇಶಕ್ಕಾಗಿ ಸೇವೆ ಮಾಡಿರುತ್ತೀರಿ. ಪತ್ರಕರ್ತರ ವೃತ್ತಿಗೆ ಗೌರವ ಕೊಡುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiJournalistKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಪತ್ರಕರ್ತಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share196Tweet123Send
Previous Post

ವಿಶೇಷಚೇತನ ಮಕ್ಕಳಿಗೆ ಅನುಕಂಪಕ್ಕಿಂತ ಆತ್ಮಸ್ಥೈರ್ಯ ತುಂಬಿ: ಡಾ. ಧನಂಜಯ ಸರ್ಜಿ ಸಲಹೆ

Next Post

2025ಕ್ಕೆ ಜಿಲ್ಲೆಯ ಈ ಪಟ್ಟಣಗಳ ಎಲ್ಲ ಮನೆಗಳಿಗೆ ಕುಡಿಯುವ ನೀರು, ಸಮರ್ಪಕ ಯೋಜನೆಗೆ ಡಿಸಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

2025ಕ್ಕೆ ಜಿಲ್ಲೆಯ ಈ ಪಟ್ಟಣಗಳ ಎಲ್ಲ ಮನೆಗಳಿಗೆ ಕುಡಿಯುವ ನೀರು, ಸಮರ್ಪಕ ಯೋಜನೆಗೆ ಡಿಸಿ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL