No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್

ಕರ್ನಾಟಕ ಸರ್ಕಾರ ಮತ್ತು AIGF ಸಹಭಾಗಿತ್ವದಲ್ಲಿ ಉದ್ಘಾಟನೆ

kalpa News by kalpa News
March 19, 2025
in ಬೆಂಗಳೂರು ನಗರ
0
ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಡಿಜಿಟಲ್ ಡಿಟಾಕ್ಸ್ ಸೆಂಟರ್ ಬಿಯಾಂಡ್ ಸ್ಕ್ರೀನ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |             

ಜವಾಬ್ದಾರಿಯುತವಾಗಿ ಡಿಜಿಟಲ್ ಸಾಧನಗಳನ್ನು ಬಳಸುವುದು ಮತ್ತು ಯೋಗಕ್ಷೇಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮತ್ತು ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ (AIGF) ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಡಿಜಿಟಲ್ ಡಿಟಾಕ್ಸ್ ಕಾರ್ಯಕ್ರಮ ಬಿಯಾಂಡ್ ಸ್ಕ್ರೀನ್ಸ್ ಅನ್ನು ಸ್ಥಾಪಿಸಿದೆ. ಈ ತಿಂಗಳು ಆರಂಭಗೊಂಡ ಈ ಕಾರ್ಯಕ್ರಮವು ಭಾರತದಲ್ಲೇ ಮೊಟ್ಟ ಮೊದಲ ಬಾರಿಗೆ ಉದ್ಯಮದ ನೇತೃತ್ವದಲ್ಲಿ ಡಿಜಿಟಲ್ ಅವಲಂಬನೆಯನ್ನು ಎದುರಿಸುವ ಪ್ರಯತ್ನ ನಡೆಸಲಾಗಿದ್ದು, ಇದಕ್ಕಾಗಿ ರಚನಾತ್ಮಕ ಮಧ್ಯಪ್ರವೇಶ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಈ ಧ್ಯೇಯವನ್ನು ಇನ್ನೂ ಮುಂದಿನ ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ, ಕರ್ನಾಟಕ ಸರ್ಕಾರದ ಗೌರವಯುತ ಐಟಿ ಮತ್ತು ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಬಿಯಾಂಡ್ ಸ್ಕ್ರೀನ್ಸ್ ಡಿಜಿಟಲ್ ಡಿಟಾಕ್ಸ್ ಸೆಂಟರ್ ಮತ್ತು ಅಧಿಕೃತ ವೆಬ್‌ಸೈಟ್ ಅನ್ನು ಉದ್ಘಾಟಿಸಿದ್ದಾರೆ. ಡಿಜಿಟಲ್ ವ್ಯಸನದ ವಿರುದ್ಧ ಹೋರಾಟ ನಡೆಸುವಲ್ಲಿ ಇದು ಮಹತ್ವದ ಮೈಲಿಗಲ್ಲಾಗಿದೆ. ಡಿಜಿಟಲ್ ವ್ಯಸನವನ್ನು ತಪ್ಪಿಸಲು ಅಗತ್ಯವಿರುವ ಸಂಪನ್ಮೂಲಗಳು, ಆಪ್ತ ಸಲಹೆ ಮತ್ತು ಮಧ್ಯಪ್ರವೇಶದಂತಹ ಕಾರ್ಯಕ್ರಮಗಳಿಗೆ ಈ ಕೇಂದ್ರವು ಮಹತ್ವದ ಸ್ಥಳವಾಗಿರಲಿದ್ದು, ಆರೋಗ್ಯಕರ ಡಿಜಿಟಲ್ ಹವ್ಯಾಸಗಳನ್ನು ಇದು ಪ್ರೋತ್ಸಾಹಿಸಲಿದೆ.
ಡಿಜಿಟಲ್ ಯೋಗಕ್ಷೇಮ ಸೌಲಭ್ಯಗಳಿಗೆ ತುರ್ತು ಅಗತ್ಯವಿರುವುದನ್ನು ಗಮನಿಸಿರುವ ಕರ್ನಾಟಕ ಸರ್ಕಾರ ಮತ್ತು AIGF ಜಂಟಿಯಾಗಿ ಒಂದು ಮಹತ್ವದ ರೂಪುರೇಷೆಯನ್ನು ಅಭಿವೃದ್ಧಿಪಡಿಸಿದೆ. ಈ ಕಾರ್ಯಯೋಜನೆಯು ಸ್ಪಷ್ಟ ಮತ್ತು ಕ್ರಿಯಾತ್ಮಕ ಗುರಿಯನ್ನು ಹೊಂದಿದೆ. ಬಿಯಾಂಡ್ ಸ್ಕ್ರೀನ್ಸ್‌ ಒಂದು ಸಮಗ್ರ ಸಂಪನ್ಮೂಲ ಕೇಂದ್ರವಾಗಿ ಕೆಲಸ ಮಾಡುತ್ತದೆ. ಡಿಜಿಟಲ್ ವ್ಯಸನದಿಂದ ಬಳಲುತ್ತಿರುವ ವ್ಯಕ್ತಿಗೆ ಇದು ನೆರವಾಗುತ್ತದೆ.

ಶಿಕ್ಷಣ, ಬೆಂಬಲ ಮತ್ತು ಸಬಲೀಕರಣದ ಮೇಲೆ ಹೆಚ್ಚಿನ ಗಮನ ಹರಿಸಲಾಗಿದ್ದು, ಸಣ್ಣ, ಮಧ್ಯಮ ಮತ್ತು ದೀರ್ಘಕಾಲೀನ ಕಾರ್ಯಕ್ರಮಗಳ ಮೂಲಕ ರಚನಾತ್ಮಕ ಪರಿಹಾರವನ್ನು ಒದಗಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ. ಜವಾಬ್ದಾರಿಯುತವಾಗಿ ತಂತ್ರಜ್ಞಾನ ಬಳಕೆ ಮತ್ತು ಡಿಜಿಟಲ್ ಯೋಗಕ್ಷೇಮದ ಕುರಿತು ಮಾರ್ಗದರ್ಶನವನ್ನು ಬಯಸುವವರಿಗೆ ಈ ಡಿಜಿಟಲ್ ಡಿಟಾಕ್ಸ್ ಸೆಂಟರ್ ಮತ್ತು ವೆಬ್‌ಸೈಟ್ ಒಂದು ಪ್ರಮುಖ ತಾಣವಾಗಿ ಕೆಲಸ ಮಾಡುತ್ತದೆ.
ಜಿಎಎಫ್‌ಎಕ್ಸ್‌ 2025 ರ ಪ್ರೇಕ್ಷಕ ವರ್ಗವನ್ನು ಉದ್ದೇಶಿಸಿ ಮಾತನಾಡಿದ ಗೌರವಯುತ ಪ್ರಿಯಾಂಕ್ ಖರ್ಗೆಯವರು, ಡಿಜಿಟಲ್ ಯೋಗಕ್ಷೇಮದ ಬಗ್ಗೆ ಸರ್ಕಾರ ಎಷ್ಟು ಬದ್ಧವಾಗಿದೆ ಎಂಬುದನ್ನು ಒತ್ತಿ ಹೇಳಿದರು. ಅವರು ಮಾತನಾಡುತ್ತಾ, “ನಮ್ಮ ಡಿಜಿಟಲ್ ಜೀವನದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವ ಬಗ್ಗೆ ಅಪಾರ ನಂಬಿಕೆಯನ್ನು ಹೊಂದಿರುವ ನಾನು, ‘ಸ್ಕ್ರೀನ್‌ ಲೈಟ್ ನೋಡುವುದಕ್ಕಿಂತ ಮೊದಲು ಸನ್ ಲೈಟ್ ನೋಡಿ’ ಎಂದು ಹೇಳುತ್ತೇನೆ. ಜವಾಬ್ದಾರಿಯುತವಾಗಿ ಡಿಜಿಟಲ್ ಸಾಧನಗಳನ್ನು ಬಳಕೆ ಮಾಡುವುದು ಮತ್ತು ನಮ್ಮ ನಾಗರಿಕರ ಯೋಗಕ್ಷೇಮದ ಬಗ್ಗೆ ನಾವು ಎಷ್ಟು ಬದ್ಧವಾಗಿದ್ದೇವೆ ಎಂಬುದಕ್ಕೆ ಈ ಬಿಯಾಂಡ್ ಸ್ಕ್ರೀನ್ಸ್ ಕಾರ್ಯಕ್ರಮವು ಒಂದು ಸಾಕ್ಷಿಯಾಗಿದೆ. ಒಂದು ರಚನಾತ್ಮಕ ಬೆಂಬಲವನ್ನು ಒದಗಿಸುವುದು, ಜಾಗೃತಿಯನ್ನು ಮೂಡಿಸುವುದು ಮತ್ತು ಮುಖ್ಯವಾಹಿನ ಆರೋಗ್ಯ ಸೇವೆಗೆ ಡಿಜಿಟಲ್ ಯೋಗಕ್ಷೇಮವನ್ನು ಅಳವಡಿಸುವ ಮೂಲಕ ಡಿಜಿಟಲ್ ವ್ಯಸನ ಎಂಬ ಸವಾಲನ್ನು ನಾವು ಎದುರಿಸಲಿದ್ದೇವೆ.”

ಜವಾಬ್ದಾರಿಯುತ ಗೇಮಿಂಗ್‌ನಲ್ಲಿ AIGF ಹೊಂದಿರುವ ಪರಿಣಿತಿಯ ಪ್ರಾಮುಖ್ಯತೆಯನ್ನೂ ಅವರು ಇದೇ ವೇಳೆ ಶ್ಲಾಘಿಸಿದರು. “AIGF ನಮ್ಮ ಪ್ರಮುಖ ಪಾಲುದಾರರಾಗಿದ್ದು, ಜವಾಬ್ದಾರಿಯುತ ಗೇಮಿಂಗ್‌ಗೆ ಅವರ ಪರಿಣಿತಿಯು ಅತ್ಯಂತ ಮಹತ್ವದ್ದಾಗಿದೆ. ನಿಮ್ಮ ಸಾಧನದ ಬಗ್ಗೆ ಒಂದು ಗಡಿಯನ್ನು ಗುರುತಿಸುವುದಾಗಿರಲಿ ಅಥವಾ ಯಾವುದೇ ಪಶ್ಚಾತ್ತಾಪದ ಭಾವವಿಲ್ಲದೇ ವ್ಯಸನದಿಂದ ಮುಕ್ತಿ ಪಡೆಯುವುದನ್ನು ಕಲಿಯುವುದಾಗಿರಲಿ, ಈ ಪ್ರಕ್ರಿಯೆಯ ಪ್ರತಿ ಹಂತದಲ್ಲೂ ನಾವು ಸಹಾಯ ಮಾಡುತ್ತೇವೆ. ತಂತ್ರಜ್ಞಾನದ ಜೊತೆಗೆ ಆರೋಗ್ಯಕರ ಸಂಬಂಧವನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಇದು ಅತ್ಯಂತ ಮಹತ್ವದ ಹೆಜ್ಜೆಯಾಗಿದ್ದು, ಈ ಮೂಲಕ ನಮ್ಮ ಜನರು ಆನ್‌ಲೈನ್‌ನಲ್ಲಿ ಮತ್ತು ಆಫ್‌ಲೈನ್‌ನಲ್ಲಿ ಆರೋಗ್ಯಕರವಾಗಿರಬಹುದು.”
ಜವಾಬ್ದಾರಿಯುತ ಗೇಮಿಂಗ್ ಮತ್ತು ಡಿಜಿಟಲ್ ತೊಡಗಿಸಿಕೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಉದ್ಯಮದ ಪ್ರಮುಖ ಸಂಸ್ಥೆಯಾಗಿರುವ AIGF ಈ ಕಾರ್ಯಕ್ರಮವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಸಂಸ್ಥೆಯ ಬದ್ಧತೆಯ ಬಗ್ಗೆ ವಿವರಣೆ ನೀಡಿದ AIGF ಸಿಇಒ ರೋಲ್ಯಾಂಡ್ ಲ್ಯಾಂಡರ್ಸ್, ಭಾರತದಲ್ಲಿ ಆನ್‌ಲೈನ್ ಗೇಮಿಂಗ್‌ಗೆ ಅತಿ ಹಳೆಯ ಮತ್ತು ಅತಿದೊಡ್ಡ ಉದ್ಯಮವಾಗಿರುವ AIGF ಹಿಂದಿನಿಂದಲೂ ಸುರಕ್ಷಿತ, ಜವಾಬ್ದಾರಿಯುತ ಮತ್ತು ಸುಸ್ಥಿರ ಡಿಜಿಟಲ್ ಪರಿಸರ ವ್ಯವಸ್ಥೆಯನ್ನು ಪೋಷಿಸಲು ಬದ್ಧವಾಗಿದೆ. ಡಿಜಿಟಲ್ ಯೋಗಕ್ಷೇಮದ ವಿಷಯದಲ್ಲಿ ಒಂದು ಪ್ರಮುಖ ಉಪಕ್ರಮವಾಗಿರುವ ಬಿಯಾಂಡ್ ಸ್ಕ್ರೀನ್ಸ್ ಅನ್ನು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರದ ಬೆಂಬಲ ಸಿಕ್ಕಿರುವುದು ನಮಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ. ಡಿಜಿಟಲ್ ತೊಡಗಿಸಿಕೊಳ್ಳುವಿಕೆಯಲ್ಲಿ ಸಮತೋಲಿತ ಮತ್ತು ಜವಾಬ್ದಾರಿಯುತ ಕಾರ್ಯವಿಧಾನವನ್ನು ಪ್ರೋತ್ಸಾಹಿಸುವಲ್ಲಿ ಇದು ಅತ್ಯಂತ ಮಹತ್ವದ ಪ್ರಥಮ ಹೆಜ್ಜೆಯಾಗಿದೆ.”

“ಜವಾಬ್ದಾರಿಯುತ ಗೇಮಿಂಗ್ ಮತ್ತು ಮಾನಸಿಕ ಯೋಗಕ್ಷೇಮಕ್ಕೆ AIGF ಬದ್ಧತೆಯನ್ನು ಡಿಜಿಟಲ್ ಡಿಟಾಕ್ಸ್ ಉಪಕ್ರಮದ ಉದ್ಘಾಟನೆ ಖಾತ್ರಿಪಡಿಸುತ್ತದೆ. ಡಿಜಿಟಲ್ ಉದ್ಯಮಕ್ಕೆ ಮಾನದಂಡವನ್ನು ನಿಗದಿಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜೊತೆಗೆ ಈ ಸಹಭಾಗಿತ್ವವು ಮಹತ್ವದ ಹೆಜ್ಜೆಯಾಗಿದೆ.”
ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಯೋಟೆಕ್ನಾಲಜಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ (AIGF) ಸಹಭಾಗಿತ್ವದಲ್ಲಿ ಬಿಯಾಂಡ್ ಸ್ಕ್ರೀನ್ಸ್ ಅನ್ನು ರೂಪಿಸಲಾಗಿದೆ. ಈ ಯೋಜನೆಯು ದೇಶಾದ್ಯಂತ ಚಳವಳಿಯಾಗಿ ಹೊರಹೊಮ್ಮಲಿದ್ದು, ಡಿಜಿಟಲ್ ಡಿಟಾಕ್ಸ್ ಕಾರ್ಯತಂತ್ರವನ್ನು ಸಾರ್ವಜನಿಕ ಆರೋಗ್ಯ ಉಪಕ್ರಮಗಳಲ್ಲಿ ಸೇರಿಸಲಾಗುತ್ತಿದೆ ಮತ್ತು ತಮ್ಮ ಡಿಜಿಟಲ್ ಯೋಗಕ್ಷೇಮದ ಉಸ್ತುವಾರಿ ವಹಿಸಿಕೊಳ್ಳಲು ಜನರನ್ನು ಸಬಲೀಕರಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: AIGFBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

286 ದಿನಗಳ ತ್ರಿಶಂಕು ವಾಸದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ ಸುನೀತಾ ವಿಲಿಯಮ್ಸ್

Next Post

ಮೈಸೂರು | ವಿಜಯನಗರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

kalpa News

kalpa News

Next Post
ಮೈಸೂರು | ವಿಜಯನಗರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಮೈಸೂರು | ವಿಜಯನಗರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL