ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋಲಾರ ಜಿಲ್ಲೆಯ #ಕೆ.ಜಿ.ಎಫ್ ನಲ್ಲಿ Integrated Township ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿಯನ್ನು ತಯಾರಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್. ಸುರೇಶ ರವರು #Minister Byrathi Suresh ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧಿಕಾರಿಗಳು, ಕೆ.ಜಿ.ಎಫ್ ಮತ್ತು ಬಂಗಾರಪೇಟೆ ತಹಶೀಲ್ದಾರ್ ಹಾಗೂ ಕೆ.ಜಿ.ಎಫ್ ನಗರಾಭಿವೃದ್ಧಿ ಆಯುಕ್ತರು ಹಾಗೂ ಕೆ.ಜಿ.ಎಫ್ ನಗರ ಯೋಜನಾ ಆಯುಕ್ತರನ್ನು ಒಳಗೊಂಡಂತೆ ಸಚಿವರಾದ ಬೈರತಿ ಸುರೇಶ ರವರು ಸಭೆ ನಡೆಸಿದರು.

Also read: ಸೆಮಿಕಂಡಕ್ಟರ್ ಕ್ಷೇತ್ರದಲ್ಲಿನ ಅಭಿವೃದ್ಧಿಗೆ 8,400 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ
ಕೆ.ಜಿ.ಎಫ್ Integrated Township ನಿರ್ಮಾಣಕ್ಕಾಗಿ ಬಿ.ಜಿ.ಎಂ.ಎಲ್ ಸುಪರ್ಧೀಯಲ್ಲಿರುವ ರಾಜ್ಯ ಸರ್ಕಾರದ ಸುಮಾರು 960 ಎಕರೆ ಜಮೀನು ಇದ್ದು, ಇದರಲ್ಲಿ ಕೆ.ಜಿ.ಎಫ್ ತಾಲ್ಲೂಕಿನಲ್ಲಿ ಬಂಗಾರದ ಗಣಿ ಗ್ರಾಮದ ಸರ್ವೆ ನಂ. 3 ರಲ್ಲಿ 294 ಎಕರೆ ಜಾಗವನ್ನು ಗುರುತಿಸಲಾಗಿದೆ.

ಚೆನೈ-ಬೆಂಗಳೂರು ಎಕ್ಸ್ಪ್ರೇಸ್ ಹೆದ್ದಾರಿ ಕೆ.ಜಿ.ಎಫ್ ಮೂಲಕ ಹಾದು ಹೋಗಿದ್ದು, Integrated Township ನಿರ್ಮಾಣ ಮಾಡಲು ಉದ್ದೇಶಿಸಿರುವ ಜಾಗದಿಂದ 2.5 ಕಿ.ಮೀ ಅಂತರದಲ್ಲಿದೆ. ಎಕ್ಸ್ಪ್ರೇಸ್ ಹೆದ್ದಾರಿಯಿಂದ Township ಗೆ ನೇರ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂಬುವುದನ್ನು ಪರಿಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರಾದ ಬೈರತಿ ಸುರೇಶ ಸೂಚಿಸಿದರು.
ಎಕ್ಸ್ಪ್ರೇಸ್ ಹೆದ್ದಾರಿಯ ಮೂಲಕ Integrated Township ಗೆ ನೇರ ರಸ್ತೆ ಕಲ್ಪಿಸಲು ಸಾಧ್ಯವಾಗದಿದ್ದಲ್ಲಿ, ಸರ್ವಿಸ್ ರಸ್ತೆ, ಎತ್ತರಿಸಿದ (Elevated) ರಸ್ತೆ ಅಥವಾ ಮ್ಯಾಜಿಕ್ ಬಾಕ್ಸ್ ಮೂಲಕ ರಸ್ತೆ ನಿರ್ಮಾಣ ಮಾಡಲು ಸಾಧ್ಯವಿದೆಯೇ ಎನ್ನುವುದನ್ನು ಸಮೀಕ್ಷೆ ಮಾಡಿ ಅದಷ್ಟು ಬೇಗ ವರದಿ ನೀಡುವಂತೆ ಕೆ.ಜಿ.ಎಫ್ ನಗರ ಯೋಜನಾ ಪ್ರಾಧಿಕಾರದ ಆಯುಕ್ತರಿಗೆ ಸಚಿವ ಬೈರತಿ ಸುರೇಶ ಸೂಚಿಸಿದರು.
ಕೆ.ಜಿ.ಎಫ್ ನಲ್ಲಿ Integrated Township ನಿರ್ಮಾಣ ಮಾಡಲು ತಗಲುವ ವೆಚ್ಚ ಎಷ್ಟಾಗುತ್ತದೆ ಎನ್ನುವುದರ ಬಗ್ಗೆ ವಿಸ್ತೃತ ವರದಿಯನ್ನು ನೀಡಲು ಮತ್ತು Integrated Township ನಿರ್ಮಾಣದ ಬಗ್ಗೆ ವಿಸ್ತೃತ ವರದಿಯನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಮೂಲಕ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ಸೂಚಿಸಿದರು. ಇದಕ್ಕಾಗಿ ಖಾಸಗಿ ಕಂಪನಿಗಳನ್ನು ಆಹ್ವಾನಿಸಲು ಟೆಂಡರ್ ಕರೆಯಲು ಸಹ ಸಚಿವ ಬೈರತಿ ಸುರೇಶ ಸೂಚಿಸಿದರು.
ವಸತಿ ಯೋಜನೆ, ಕೈಗಾರಿಕೆಗಳು, ಆರೋಗ್ಯ ಘಟಕಗಳು ಶೈಕ್ಷಣಿಕ ಸಂಸ್ಥೆಗಳು, ವಾಣಿಜ್ಯ ಮುಂಗಟ್ಟುಗಳು, ಬ್ಯಾಂಕ್ಗಳು, ಉದ್ಯಾನವನ, ಮನೋರಂಜನ ತಾಣಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ, ಸದರಿ ಯೋಜನೆಯಿಂದಾಗಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಮತ್ತು ಉತ್ತಮ ವಸತಿ ಯೋಜನೆಯ ವಿಭಿನ್ನ ಹಾಗೂ ವಿಶಿಷ್ಟವಾದ Integrated Township ಅನ್ನು ಕೆ.ಜಿ.ಎಫ್ ನಲ್ಲಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧ ಹಾಗೂ ಹಣಕಾಸು ನಿಗಮದ ಅಧ್ಯಕ್ಷರು ಹಾಗೂ ಬಂಗಾರಪೇಟೆ ಶಾಸಕರಾದ ಎಸ್. ಎನ್. ನಾರಾಯಣಸ್ವಾಮಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಎಂ. ದೀಪ, ಕೆ.ಯು.ಐ.ಡಿ.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕರು ಬಿ. ಶರತ್, ಮುಖ್ಯ ಅಭಿಯಂತರ ನಂದೀಶ್ ಕುಮಾರ್, ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಹಶೀಲ್ದಾರ್, ಕೆ.ಜಿ.ಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 
	    	

 Loading ...
 Loading ... 
							



 
                
Discussion about this post