No Result
View All Result
International Yoga Day in SWR Bengaluru
English Articles

SWR | Celebrates International Yoga Day with Enthusiastic Participation

by ಕಲ್ಪ ನ್ಯೂಸ್
June 23, 2026
0

Kalpa Media House  |  Bengaluru  | The South Western Railway Bengaluru Division celebrated the 12th International Yoga Day with a...

Read moreDetails
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಯೋಡಿನ್‌ ಕೊರತೆ | ಸಾರ್ವಜನಿಕರಲ್ಲಿ ಜಾಗೃತಿ ಅವಶ್ಯಕ: ಸಚಿವ ಸುಧಾಕರ್‌

ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಆಶಿರ್ವಾದ್‌ ಸ್ಮಾರ್ಟ್‌ ಇಂಡಿಯಾ" ಕಾರ್ಯಕ್ರಮಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 2, 2024
in ಬೆಂಗಳೂರು ನಗರ
0
ಅಯೋಡಿನ್‌ ಕೊರತೆ | ಸಾರ್ವಜನಿಕರಲ್ಲಿ ಜಾಗೃತಿ ಅವಶ್ಯಕ: ಸಚಿವ ಸುಧಾಕರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಯೋಡಿನ್‌ ಕೊರತೆಯ #Iodine deficiency ಬಗ್ಗೆ ಗರ್ಭಿಣಿಯರು, ಹಾಲುಣಿಸುವ ತಾಯಂದಿರುವ ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್‌ ಆಫ್‌ ಗ್ಲೋಬಲ್‌ ಡೆವಲಪ್‌ಮೆಂಟ್‌ (ಐಜಿಡಿ) ಅವರ ವಿನೂತನ “ಆಶೀರ್ವಾದ್‌ ಸ್ಮಾರ್ಟ್‌ ಇಂಡಿಯಾ” ಕಾರ್ಯಕ್ರಮ ಹೆಚ್ಚು ಪ್ರಸ್ತುತ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ #Minister M C Sudhakar ಹೇಳಿದರು.

ಐಟಿಸಿ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ ಸಹಯೋಗದಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ “ಆಶಿರ್ವಾದ್‌ ಸ್ಮಾರ್ಟ್‌ ಇಂಡಿಯಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಯೋಡಿನ್‌ ಕೊರತೆ ಬಗ್ಗೆ ಹೆಚ್ಚು ಅರಿವಿನ ಅಗತ್ಯವಿದೆ. ಅದರಲ್ಲೂ ಗರ್ಭಿಣಿಯರು, ಹಾಲುಣಿಸುವ ತಾಯಂದಿರು ಹಾಗೂ ಮಕ್ಕಳ ಬುದ್ದಿ ಬೆಳವಣಿಗೆಗೆ ಅಯೋಡಿನ್‌ನ ಅತ್ಯವಶ್ಯಕ. ಆದರೆ, ಬಡತನದ ಹಿನ್ನೆಲೆ ಇರುವವರು ಅಯೋಡಿನ್‌, ಪ್ರೊಟಿನ್‌, ವಿಟಮಿನ್ಸ್‌ಯುಕ್ತ ಆಹಾರ ಸೇವನೆಯಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಸರ್ಕಾರವು ಈಗಾಗಲೇ ಅಜೀಂ ಪ್ರೇಮ್‌ಜೀ ಫೌಂಡೇಷನ್‌ ಸಹಕಾರದಿಂದ ವಾರದಲ್ಲಿ ಆರು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಜೊತೆಗೆ ಮಕ್ಕಳಿಗೆ ಹಾಲು ಸಹ ನೀಡಲಾಗುತ್ತಿದೆ, ಇದರಿಂದ ಮಕ್ಕಳಿಗೆ ಬೇಕಾದ ಅಯೋಡಿನ್‌ ದೊರೆಯುತ್ತಿದೆ.
ಯಾವುದೇ ಜಾಗೃತಿ ಕಾರ್ಯಕ್ರಮವೇ ಆಗಲಿ ಅದು ಶಾಲೆಗಳ ಮೂಲಕ ಮಕ್ಕಳಿಂದಲೇ ಶುರುವಾಗಬೇಕು. ಮಕ್ಕಳಿಗೆ ಅಯೋಡಿನ್‌ನ ಕೊರತೆಯಿಂದ ಆಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿದರೆ, ಅವರು ತಮ್ಮ ಕುಟುಂಬಸ್ಥರನ್ನು ಜಾಗೃತರನ್ನಾಗಿಸುತ್ತಾರೆ. ಹೀಗಾಗಿ ಐಟಿಸಿ ಅವರ ಈ ಸ್ಮಾರ್ಟ್‌ ಇಂಡಿಯಾ ಕಾರ್ಯಕ್ರಮ ಹೆಚ್ಚು ಪ್ರಸ್ತುತವೆಂದು ಹೇಳಿದರು.

ಇಂದು ಕ್ರಿಮಿನಾಶಕಗಳ ಬಳಕೆಯಿಂದ ಭೂಮಿ ತನ್ನ ಫಲವತ್ತತೆ ಕಳೆದುಕೊಂಡಿದ್ದು, ಅದರಲ್ಲಿ ಬೆಳೆಯುವ ಬೆಳೆಯಲ್ಲೂ ಅಯೋಡಿನ್‌ ಸಿಗುತ್ತಿಲ್ಲ. ಕುಡಿಯುವ ನೀರಿನಲ್ಲೂ ಸಹ ಮಿನರಲ್ಸ್‌ ಕೊರತೆಯಾಗಿದೆ. ಈ ಎಲ್ಲದರ ಪರಿಣಾಮ ಕುಡಿಯುವ ನೀರು, ಸೇವಿಸುವ ಆಹಾರದಲ್ಲಿ ಅಯೋಡಿನ್‌ ಪಡೆಯಲಾಗುತ್ತಿಲ್ಲ. ಇದಕ್ಕೆ ಸಪ್ಲಿಮೆಂಟ್‌ನ ಅವಶ್ಯಕತೆ ಇದೆ. ಹೀಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳ ಸಹಕಾರದಲ್ಲಿ ಎಲ್ಲೆಡೆ ಅಯೋಡಿನ್‌ ಕೊರತೆ ನೀಗಿಸುವ ಕುರಿತು ಜಾಗೃತಿ ಮೂಡಿಸುವ ಹೆಜ್ಜೆ ಇಡುವುದು ಅನಿವಾರ್ಯ ಎಂದು ತಿಳಿಸಿದರು.
ಐಟಿಸಿ ಲಿಮಿಟೆಡ್‌ನ ಸ್ಟೇಪಲ್ಸ್ & ಅಡ್ಜೆಸೆನ್ಸಿಸ್ ಅನುಜ್ ರುಸ್ತಗಿ ಮಾತನಾಡಿ, ITC ಲಿಮಿಟೆಡ್ ಹಾಗೂ ಇನ್‌ಸ್ಟಿಟ್ಯೂಟ್ ಆಫ್ ಗ್ಲೋಬಲ್ ಡೆವಲಪ್‌ಮೆಂಟ್ ಸಹಯೋಗದೊಂದಿಗೆ ಆಶೀರ್ವಾದ ಸ್ಮಾರ್ಟ್ ಇಂಡಿಯಾ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಈ ಉಪಕ್ರಮದ ಅಡಿಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 30 ಜಿಲ್ಲೆಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಅಯೋಡಿನ್ ಸೇವನೆ ಮತ್ತು ಸಮತೋಲಿತ ಪೋಷಣೆಯ ಪ್ರಾಮುಖ್ಯತೆಯ ಬಗ್ಗೆ ಹಾಗೂ ಅಯೋಡಿನ್ ಕೊರತೆಯ ಅಸ್ವಸ್ಥತೆಗಳ (ಐಡಿಡಿ) ಸಮಸ್ಯೆಯನ್ನು ಗುರಿಯಾಗಿಟ್ಟುಕೊಂಡು ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಗುರಿ ಹೊಂದಲಾಗಿದೆ.

“ರಾಷ್ಟ್ರೀಯ ಅಯೋಡಿನ್ ಸಮೀಕ್ಷೆಯ ಪ್ರಕಾರ, ಸುಮಾರು 50ರಷ್ಟು ವಯಸ್ಕರು ಅಯೋಡಿನ್ ಯುಕ್ತ ಉಪ್ಪಿನ ಬಗ್ಗೆ ತಿಳಿದಿಲ್ಲ. ಶೇ.31 ರಷ್ಟು ವಯಸ್ಕರು ಪ್ಯಾಕ್ನಲ್ಲಿ ದೊರೆಯುವ ಎಲ್ಲವೂ ಶುದ್ಧ ಅಯೋಡಿಕರಿಸಿದ ಉಪ್ಪು ಎಂಬ ತಪ್ಪು ಕಲ್ಪನೆಯನ್ನು ಹೊಂದಿದ್ದಾರೆ. ನಾವು ಸಾಮಾನ್ಯವಾಗಿ ಸೇವಿಸುವ ಆಹಾರದಿಂದ ಅಯೋಡಿನ್ ಅನ್ನು ಪೂರೈಸುವ ಮೂಲಕ ಅಯೋಡಿನ್ ಕೊರತೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು. ಆಶೀರ್ವಾದ್ ಸ್ಮಾರ್ಟ್ ಇಂಡಿಯಾ ಕಾರ್ಯಕ್ರಮದೊಂದಿಗೆ, ನಾವು ಅಯೋಡಿನ್ ಸೇವನೆ ಮತ್ತು ಆರೋಗ್ಯಕರ ಆಹಾರದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದ್ದೇವೆ. ನಮ್ಮ ಉಪಕ್ರಮವು ಸಮುದಾಯಗಳು, ಶಾಲೆಗಳು ಮತ್ತು ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಹೆಜ್ಜೆ ಇಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಐಜಿಡಿ ಪ್ರಾಜೆಕ್ಟ್‌ ನಿರ್ದೇಶಕ ಡಾ. ಶಾಂತನು ಶರ್ಮಾ, “ಮೆದುಳಿನ ಹಾನಿ ಮತ್ತು ಬುದ್ಧಿಮಾಂದ್ಯತೆಯು ಅಯೋಡಿನ್ ಕೊರತೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಾಗಲಿದೆ. ಅಯೋಡಿನ್‌ ಪ್ರಮುಖವಾಗಿ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ, ಚಯಾಪಚಯ ಕ್ರಿಯೆಯ ನಿಯಂತ್ರಣಕ್ಕೆ ಅಗತ್ಯವಿದೆ. ಅಯೋಡಿನ್‌ ಗರ್ಭಿಣಿ ಮತ್ತು ಶುಶ್ರೂಷಾ ತಾಯಂದಿರಿಗೆ ಇದು ಹೆಚ್ಚು ಮುಖ್ಯವಾಗಿದೆ. ಏಕೆಂದರೆ ಅಯೋಡಿನ್ ಕೊರತೆಯಿಂದ ಗರ್ಭಪಾತ ಮತ್ತು ಭ್ರೂಣಗಳ ಸಾವಿಗೆ ಕಾರಣವಾಗಬಹುದು. 1962 ರಲ್ಲಿ ಭಾರತ ಸರ್ಕಾರವು ಸಾಮಾನ್ಯ ಉಪ್ಪನ್ನು ಅಯೋಡಿಕರಿಸಿದ ಉಪ್ಪಿನೊಂದಿಗೆ ರಾಷ್ಟ್ರೀಯ ಗಾಯಿಟರ್ ನಿಯಂತ್ರಣ ಕಾರ್ಯಕ್ರಮವಾಗಿ ಉಪ್ಪು ಅಯೋಡೀಕರಣ ಕಾರ್ಯಕ್ರಮವನ್ನು ಪ್ರಾರಂಭಿಸಿತು. 2005 ರಲ್ಲಿ, ಸಾರ್ವತ್ರಿಕ ಉಪ್ಪು ಅಯೋಡೀಕರಣವನ್ನು ದೇಶದಲ್ಲಿ ಕಡ್ಡಾಯಗೊಳಿಸಲಾಯಿತು. ಆದರೂ, ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 ರ ಪ್ರಕಾರ, ಅಯೋಡಿಕರಿಸಿದ ಲವಣಗಳ ವ್ಯಾಪ್ತಿಯು ಇನ್ನೂ ಶೇ.100ರಷ್ಟು ತಲುಪಿಲ್ಲ. ಇದು ಮುಖ್ಯವಾಗಿ ಅಯೋಡಿಕರಿಸಿದ ಉಪ್ಪು ಲಭ್ಯವಿಲ್ಲದಿರುವುದು ಮತ್ತು ಅಯೋಡಿನ್ ಕೊರತೆಯ ಕಾಯಿಲೆಗಳ ಕಳಪೆ ಜ್ಞಾನದಿಂದಾಗಿ ಸಾಕಷ್ಟು ಜನರು ಅಯೋಡಿನ್‌ ಕೊರತೆಯಿಂದ ಬಳಲುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: BangaloreIodine deficiencyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister M C SudhakarNews_in_KannadaNews_Kannadaಅಯೋಡಿನ್‌ ಕೊರತೆಬೆಂಗಳೂರುಸಚಿವ ಡಾ. ಎಂ.ಸಿ. ಸುಧಾಕರ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್‌ ವಿರುದ್ಧ ಕ್ರಮ ಕೈಗೊಳ್ಳಿ: ವಿಪ ನಾಯಕ ಆರ್‌. ಅಶೋಕ

Next Post

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

ಗಾಂಧಿ ಜಯಂತಿ ಅಂಗವಾಗಿ ನ್ಯಾಯಾಲಯದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

ಪರಿಷತ್ ಚುನಾವಣೆಗೆ ಮುಕ್ತ ಮತದಾನ ಪದ್ಧತಿ ಜಾರಿಗೆ MLC ಡಿ.ಎಸ್. ಅರುಣ್ ಆಗ್ರಹ

June 23, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಬಿಪಿಎಲ್ ಕಾರ್ಡ್ ರದ್ದತಿ ವಿರುದ್ಧ ಶಾಸಕ ಚೆನ್ನಿ ಆಕ್ರೋಶ | ತಕ್ಷಣ ಮರುಪರಿಶೀಲನೆಗೆ ಸೂಚನೆ

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

June 23, 2026
Shivamogga MLC Inspection

ಶಿವಮೊಗ್ಗ | ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಕಿಡಿಕಾರಿದ ಶಾಸಕ ಚನ್ನಬಸಪ್ಪ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL