Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ

ತೆಲಂಗಾಣದಲ್ಲಿ ಕಾಂಗ್ರೆಸ್ಸಿನ ಬರ ನೀಗಿಸಲು ಮಂತ್ರಿಗಳು ದುಡಿಯುತ್ತಿದ್ದಾರೆ | ಖಜಾನೆ ಖಾಲಿ ಆಗಿಲ್ಲ ಎಂದಾದರೆ ಪರಿಹಾರ ಬಿಡುಗಡೆ ಮಾಡಲಿ

November 28, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ Opposition Leader RAshok ಹೇಳಿದ್ದಾರೆ.

ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರಕಾರ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹರಿಹಾಯ್ದರು.
ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದರು.

Also read: ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಲೆಕ್ಕಪತ್ರ ಮಂಡಿಸಲಿ
ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ದುಪ್ಪಟ್ಟು ಪರಿಹಾರ ನೀಡಿದ್ದೆವು. ನಂತರ ಕೇಂದ್ರದ ನೆರವು ಖಜಾನೆಗೆ ಬಂತು. ಆ ಕೆಲಸ ಮಾಡಲು ಇವರಿಗೇನು ದಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಟಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಕೇಳಿದರೆ ಎಲ್ಲದಕ್ಕೂ ಲಂಚ ಕೊಡಬೇಕು, ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ರೈತರು ದೂರು ನೀಡುತ್ತಿದ್ದಾರೆ ಎಂದರು.

ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎನ್ನುತ್ತಾರೆ, ಅದು ನಿಜವೇ ಆಗಿದ್ದಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಇವರು ಮಾಡಿರುವ ಖರ್ಚು ವೆಚ್ಚ ಮತ್ತು ಹಣಕಾಸಿನ ಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಆಗ್ರಹಿಸಲಾಗುವುದು ಎಂದರು.

http://kalpa.news/wp-content/uploads/2023/11/VID-20231128-WA0027.mp4

 

ಬೋಗಸ್ ದರ್ಶನ
ಮುಖ್ಯಮಂತ್ರಿಯವರ ಜನತಾದರ್ಶನ ಕಾರ್ಯವನ್ನು ಬೋಗಸ್ ದರ್ಶನ ಎಂದು ಲೇವಡಿ ಮಾಡಿದ ಅಶೋಕ್ ಅವರು, ನೆಟ್ಟಗೆ ಕೆಲಸ ಮಾಡದ ಮಂತ್ರಿಗಳನ್ನು ಕರೆಯಿಸಿ ಮೊದಲು ಅವರ ದರ್ಶನ ಮಾಡಬೇಕಿತ್ತು. ಯಾರ್ಯಾರು ಏನು ಕೆಲಸ ಮಾಡಿದ್ದಾರೆ ಎಂದು ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಖುರ್ಚಿ, ಮೇಜು ಹಾಕಿಸಿ ಮನವಿ ಪತ್ರ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸಿಎಂ ಸೇರಿದಂತೆ ಎಲ್ಲ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಜನತಾದರ್ಶನ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡಿದಿದ್ದರೆ ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಅದನ್ನು ಬಿಟ್ಟು ಸಿಎಂ ಅವರು ಸೀಮಿತ ಸಂಖ್ಯೆ ಜನರ ಅಹವಾಲು ಕೇಳಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
Kalahamsa Infotech private limitedನಿದ್ದೆಯಿಂದ ಇವತ್ತು ಎದ್ದಿದೆ
ದಿಢೀರ್ ಎಂದು ಸಿಎಂ ಅವರು ಜನತಾದರ್ಶನ ಮಾಡುತ್ತಿದ್ದಾರೆ ಎಂದರೆ ಇವತ್ತು ದೀರ್ಘ ಕಾಲದ ನಿದ್ದೆಯಿಂದ ಎದ್ದಿದ್ದಾರೆ ಎಂದು ಅರ್ಥ. ಏಕೆಂದರೆ ಆಡಳಿತ ಸಂಪೂರ್ಣ ನೆಲಕಚ್ಚಿದ್ದು ಅಧಿಕಾರಶಾಹಿ ಜನರ ಶೋಷಣೆಯಲ್ಲಿ ನಿರತವಾಗಿದೆ. ಇದನ್ನು ಗಮನಿಸಿ ಸರಿಪಡಿಸಬೇಕಿದ್ದ ಸಚಿವರು ತೆಲಂಗಾಣ ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಕ್ರಾಂತಿ ಆಗಿದೆ ಎಂದು ಬುರುಡೆ ಭಾಷಣ ಬಿಗಿಯುತ್ತಿದ್ದಾರೆ. ಅಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಡಿದಿರುವ ಬರಗಾಲ ನಿವಾರಣೆಗಾಗಿ ಸಿದ್ದರಾಮಯ್ಯ ಎಲ್ಲಾ ಸಚಿವರನ್ನು ಅಲ್ಲಿಗೆ ನಿಯೋಜಿಸಿದ್ದಾರೆ. ಇಲ್ಲಿ ಜನ ತತ್ತರಿಸುತ್ತಿದ್ದರೂ ಕೇಳುವವರು ದಿಕ್ಕಿಲ್ಲ ಎಂದು ಕಿಡಿಕಾರಿದರು.

ಮೊದಲು ಪಕ್ಷದ ಸಿದ್ಧಾಂತ ಅರಿತುಕೊಳ್ಳಲಿ
ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ, ಅವರು ಈಗಾಗಲೇ ಮೂರು ಪಕ್ಷಗಳಿಗೆ ಪಕ್ಷಾಂತರ ಮಾಡಿದ್ದಾರೆ. ಹೀಗಾಗಿ ಪಕ್ಷಗಳ ಸಂಸ್ಥಾಪಕ ಅಧ್ಯಕ್ಷರು ಯಾರ್ಯಾರು ಎಂಬುದನ್ನೇ ತಿಳಿದುಕೊಂಡಿಲ್ಲ. ಕಾಂಗ್ರೆಸ್ ಸ್ಥಾಪಕ ಅಧ್ಯಕ್ಷ ಬ್ರಿಟಿಷ್‌ ಎಂಬುದೂ ಗೊತ್ತಿಲ್ಲ. ಅವರ ಪರಂಪರೆಯೇ ಕಾಂಗ್ರೆಸ್ ನಲ್ಲಿ ಮುಂದುವರೆಯುತ್ತಿದೆ. ಯುಪಿಎ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರಿಗೆ ಕಾಸು ಕೊಟ್ಟು ಕಲ್ಲು ಹೊಡೆಸುತ್ತಿದ್ದರು. ಅವರೆಲ್ಲರೂ ಈಗ ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ಜನಜೀವನ ಸಹಜಸ್ಥಿತಿಗೆ ಮರಳಿದೆ. ಇದಕ್ಕೆ ಮೋದಿ ಸರಕಾರದ ಕಠಿಣ ಕ್ರಮಗಳು ಕಾರಣ ಎಂದೂ ಅಶೋಕ್ ವಿವರಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaOpposition LeaderR Ashokಆರ್. ಅಶೋಕ್ಪ್ರತಿಪಕ್ಷ ನಾಯಕಬೆಂಗಳೂರುಶ್ವೇತಪತ್ರ
Previous Post

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!