No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Saturday, February 7, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಇದು ನೀವು ಈವರೆಗೂ ಕೇಳಿರದ ಅಪರೂಪದ ಶಸ್ತ್ರಚಿಕಿತ್ಸೆ! ಏನಿದು?

ಟ್ರಸ್ಟ್ ವೆಲ್ ಆಸ್ಪತ್ರೆಯ ತಜ್ಞ ಡಾ. ಸತೀಶ್ ಅವರಿಂದ ಅತಿ ಅಪರೂಪದ ಶಸ್ತ್ರಚಿಕಿತ್ಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2021
in Small Bytes, ಬೆಂಗಳೂರು ನಗರ
0
ಇದು ನೀವು ಈವರೆಗೂ ಕೇಳಿರದ ಅಪರೂಪದ ಶಸ್ತ್ರಚಿಕಿತ್ಸೆ! ಏನಿದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: 53 ವರ್ಷದ ರಾಜೇಶ್ (ಹೆಸರನ್ನು ಬದಲಾಯಿಸಲಾಗಿದೆ) ಬೆಂಗಳೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಎರಡು ತಿಂಗಳ ಹಿಂದೆ ಅವರಿಗೆ ನಾಲಗೆಯ ಮೇಲೆ ಸಣ್ಣ ಹುಣ್ಣು ಕಾಣಿಸಿಕೊಂಡಿತು. ತಂಬಾಕು ಸೇವನೆಯ ಅಭ್ಯಾಸ ಇಲ್ಲದೇ ಇರೋದ್ರಿಂದ ಹುಣ್ಣಿನ ಬಗ್ಗೆ ಅವರು ಹೆಚ್ಚೇನೂ ತಲೆ ಕೆಡಿಸಿಕೊಳ್ಳಲಿಲ್ಲ. ಆದ್ರೆ ಕೆಲವು ವಾರಗಳವರಗೆ ನಾನಾ ಬಗೆಯ ಔಷಧಗಳನ್ನು ತೆಗೆದುಕೊಂಡರೂ ಅವರ ಬಾಯಿಯ ಹುಣ್ಣು ಸ್ವಲ್ಪವೂ ಕಡಿಮೆಯಾಗಲೇ ಇಲ್ಲ. ಕೊನೆಗೆ ಪರಿಚಿತರ ಸೂಚನೆಯಂತೆ ಟ್ರಸ್ಟ್ ವೆಲ್ ಆಸ್ಪತ್ರೆಯ ಡಾ ಸತೀಶ್ ಅವರರನ್ನು ಭೇಟಿಯಾದರು.

ಆಸ್ಪತ್ರೆಯ ಕನ್ಸಲ್ಟೆಂಟ್ ಸರ್ಜಿಕಲ್ ಆಂಕೊಲಾಜಿಸ್ಟ್ ಆಗಿರುವ ಡಾ ಸಿ. ಸತೀಶ್, ನಾಲಗೆಯ ಬಯಾಪ್ಸಿ ಮತ್ತು ಸಿಟಿ ಸ್ಕ್ಯಾನ್ ಮಾಡಲು ತಿಳಿಸಿದರು. ಆಗ ರಾಜೇಶ್ ಅವರ ಅರ್ಧದಷ್ಟು ನಾಲಗೆ ಮತ್ತು ಕುತ್ತಿಗೆಯ ಲಿಂಫ್ ನೋಡ್ಗಳಿಗೆ ಕ್ಯಾನ್ಸರ್ ಹರಡಿರುವುದು ತಿಳಿಯಿತು. ಅದು ಇನ್ನಷ್ಟು ಹರಡದಂತೆ ತಡೆಯಲು ಮುಕ್ಕಾಲು ಭಾಗ (ಶೇ.75ರಷ್ಟು) ನಾಲಗೆ ಮತ್ತು ಕುತ್ತಿಗೆಯ ಎರಡೂ ಬದಿಯ ಲಿಂಫ್ ನೋಡ್ಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದು ಹಾಕಲಾಯಿತು. ಇದಾದ ನಂತರ ಮಾರ್ಚ್ 5, 2021ರಂದು ನಾಲಗೆಯ ಪುನರ್ ನಿರ್ಮಾಣದ ವಿಶಿಷ್ಟ ಶಸ್ತ್ರಚಿಕಿತ್ಸೆಯನ್ನು ಡಾ ಸತೀಶ್ ಸಿ ನೇತೃತ್ವದಲ್ಲಿ ಮಾಡಲಾಯಿತು.
ಅತಿ ಅಪರೂಪದ ಪುನರ್ ನಿರ್ಮಾಣದ ಶಸ್ತ್ರಚಿಕಿತ್ಸೆ ನಿರ್ವಹಿಸಿದ ಟ್ರಸ್ಟ್‌ವೆಲ್ ಹಾಸ್ಪಿಟಲ್‌ನ ಕನ್ಸಲ್ಟೆಂಟ್ ಸರ್ಜಿಕಲ್ ಆಂಕೊಲಾಜಿಸ್ಟ್ ಆಗಿರುವ ಡಾ. ಸತೀಶ್ ಮಾತನಾಡಿ, ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ ಬದಲಿ ನಾಲಗೆಯನ್ನು ಜೋಡಿಸುವಾಗ ದೇಹದ ಹೊರಭಾಗದ ಚರ್ಮವನ್ನು ಪಡೆದು ಅದನ್ನು ನಾಲಗೆಯ ಹೊರಮೈಗೆ ಜೋಡಿಸಲಾಗುತ್ತದೆ. ಇಂಥಾ ನಾಲಗೆ ಇದ್ದಾಗ ಚರ್ಮದ ಮೇಲ್ಭಾಗದಲ್ಲಿ ಕೂದಲು ಬೆಳೆದು ರೋಗಿ ಬಾಯಿ ತೆರೆದಾಗ ಅಸಹ್ಯವಾಗಿ ಕಾಣುತ್ತದೆ. ಅಲ್ಲದೇ ಚರ್ಮ ಸದಾ ಒಣಗಿದಂತೆ ಇರುವುದರಿಂದ ರೋಗಿಗೆ ಯಾವಾಗಲೂ ಬಾಯಾರಿಕೆ ಎನಿಸುತ್ತಿರುತ್ತದೆ. ನಾಲಗೆಯ ಮೇಲೆ ತೇವಾಂಶ ಇರುವುದರಿಂದಲೇ ಮಾತನಾಡಲು ಸಾಧ್ಯ, ಅದೇ ಇಲ್ಲದಿದ್ದಾಗ ಮಾತು ಕೂಡಾ ಕಷ್ಟವಾಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ನಾವು ವಿಭಿನ್ನವಾದ ಪರಿಹಾರ ಕಂಡುಕೊಂಡೆವು. ರೋಗಿಯ ಜಠರದ ಪದರವನ್ನು ತೆಗೆದು ಅದನ್ನೇ ನಾಲಗೆಯ ಆಕಾರಕ್ಕೆ ಬದಲಿಸಿದೆವು. ಜಠರದ ಒಳಮೈಯ ಭಾಗವನ್ನು ನಾಲಗೆಯ ಮೇಲ್ಪದರವಾಗಿ ಇರಿಸಿ ಜೋಡಿಸಿದೆವು. ಇದರಿಂದಾಗಿ ಹೊಸಾ ನಾಲಗೆಯ ಮೇಲ್ಪದರ ಹಿಂದಿನಂತೆಯೇ ತೇವದಿಂದ ಕೂಡಿದ್ದು, ರೋಗಿ ಮೊದಲಿನಂತೆಯೇ ಮಾತನಾಡಲು ಹಾಗೂ ಊಟವನ್ನು ನುಂಗಲು ಸಾಧ್ಯವಾಗುತ್ತಿದೆ ಎಂದರು.
ಟ್ರಸ್ಟ್‌ವೆಲ್ ಹಾಸ್ಪಿಟಲ್‌ನ ಸಿಎಂಡಿ ಡಾ. ಹೆಚ್.ವಿ. ಮಧುಸೂಧನ್ ಮಾತನಾಡಿ, ಈಗಾಗಲೇ ಉಳಿದಿದ್ದ ರೋಗಿಯ ನಾಲಗೆಯ ಶೇ.25ರಷ್ಟು ಭಾಗಕ್ಕೆ ಹೊಸ ಭಾಗವನ್ನು ಜೋಡಿಸಲಾಗಿದೆ. 8 ಗಂಟೆಗಳಿಗಿಂತ ಹೆಚ್ಚು ಕಾಲ ನಡೆದ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯಿಂದ ರೋಗಿ ಆರಾಮಾಗಿ ಮಾತನಾಡಲು ಮತ್ತು ಊಟಮಾಡಲು ಸಾಧ್ಯವಾಗಿದೆ. ಅರಿವಳಿಕೆ ತಂಡ ಮತ್ತು ಶಸ್ತ್ರಚಿಕಿತ್ಸೆಯ ನಂತರದ ಐಸಿಯು ಆರೈಕೆ ರೋಗಿಯನ್ನು ಚೆನ್ನಾಗಿ ಚೇತರಿಸಿಕೊಳ್ಳಲು ಸಹಾಯ ಮಾಡಿದೆ. ಕರ್ನಾಟಕದಲ್ಲಿ ಈ ರೀತಿಯ ಮೊಟ್ಟಮೊದಲ ಶಸ್ತ್ರಚಿಕಿತ್ಸೆ ಇದಾಗಿದೆ. ಈ ಪ್ರಕರಣದ ಮೂಲಕ ಟ್ರಸ್ಟ್‌ವೆಲ್ ಹಾಸ್ಪಿಟಲ್‌ನ ಡಾ. ಸತೀಶ್ ಮತ್ತು ತಂಡವು ಇದೇ ಬಗೆಯ ಸಮಸ್ಯೆಗಳಿಂದ ಬಳಲುವ ಹಲವಾರು ರೋಗಿಗಳಿಗೆ ಭರವಸೆ ಮೂಡಿಸಿದ್ದಾರೆ ಎಂದರು.
ಇಂತಹ ಅಪರೂಪದ ಶಸ್ತ್ರಚಿಕಿತ್ಸೆಯಿಂದ ಹೊಸ ನಾಲಿಗೆಯನ್ನು ಪಡೆದ ಆಟೋ ಡ್ರೈವರ್ ರಾಜೇಶ್ (ಹೆಸರು ಬದಲಿಸಲಾಗಿದೆ) ಮಾತನಾಡಿ, ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ನನಗೆ ಟ್ರಸ್ಟ್ ವೆಲ್ ಆಸ್ಪತ್ರೆಯಿಂದ ಬಹಳಷ್ಟು ನೆರವಾಗಿದೆ. ಇಂತಹ ಅಪರೂಪದ ಶಸ್ತ್ರಚಿಕಿತ್ಸೆಯಿಂದ ನಾನು ಈಗ ಮಾತನಾಡಲು ಸಾಧ್ಯವಾಗಿದೆ. ಇಲ್ಲದಿದ್ದರೆ ಬಹಳ ತೊಂದರೆಗೆ ಸಿಲುಕಿಕೊಳ್ಳಬೇಕಾಗುತ್ತಿತ್ತು ಎಂದರು.
ಈ ಸಂಧರ್ಭದಲ್ಲಿ ಟ್ರಸ್ಟ್ ವೆಲ್ ಆಸ್ಪತ್ರೆಯ ನಿರ್ದೇಶಕರಾದ ಡಾ ದೀಪಕ್ ಹಲ್ದೀಪುರ್, ಡಾ ಎನ್ ಎಸ್ ಚಂದ್ರಶೇಖರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaoncologistOperationTrust Well Hospitalಆಂಕೊಲಾಜಿಸ್ಟ್ಟ್ರಸ್ಟ್ ವೆಲ್ ಆಸ್ಪತ್ರೆಬೆಂಗಳೂರುಶಸ್ತ್ರಚಿಕಿತ್ಸೆ
Share196Tweet123Send
Previous Post

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಮೇಶ್ವರ ಜಾತ್ರೆ ಸಂಪನ್ನ

Next Post

ಕಬ್ಜ ಚಿತ್ರೀಕರಣ ವೇಳೆ ನಟ ಉಪೇಂದ್ರ ತಲೆಗೆ ಪೆಟ್ಟು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಗ್ರರನ್ನು ಮಟ್ಟ ಹಾಕಲು ನಟ ಉಪೇಂದ್ರ ಸೂಚಿಸಿದ ಐಡಿಯಾ ಏನು ಗೊತ್ತಾ?

ಕಬ್ಜ ಚಿತ್ರೀಕರಣ ವೇಳೆ ನಟ ಉಪೇಂದ್ರ ತಲೆಗೆ ಪೆಟ್ಟು!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಹುಗಲವಳ್ಳಿ ಚಿನ್ನೇಗೌಡ ನಿಧನ

ಹುಗಲವಳ್ಳಿ ಚಿನ್ನೇಗೌಡ ನಿಧನ

February 7, 2026
ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

February 7, 2026
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

February 7, 2026
ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

February 7, 2026
ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

February 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL