ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭಾರತೀಯ ಜನತಾ ಪಕ್ಷದ ಯುವ ಮುಖಂಡ ಪ್ರವೀಣ್ ಹತ್ಯೆ ಆದ ನಂತರ ಜನ ಹಾಗೂ ಕಾರ್ಯಕರ್ತರು ವ್ಯಕ್ತ ಮಾಡಿರುವ ಆಕ್ರೋಶದ ಹಿನ್ನೆಲೆಯಲ್ಲಿ ಆತ್ಮಸಾಕ್ಷಿಯಾಗಿ ನಿರ್ಣಯ ಕೈಗೊಂಡು ಬ್ಯಾಂಕ್ವೆಟ್ ಹಾಲಿನಲ್ಲಿ ಮತ್ತು ಪಕ್ಷದ ವತಿಯಿಂದ ದೊಡ್ಡಬಳ್ಲಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

Also read: ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಹಿನ್ನೆಲೆ ಪವಿತ್ರಾ ರಾಮಯ್ಯ ಸ್ಥಳ ಪರಿಶೀಲನೆ
ಇಂದಿಗೆ ಬಿಜೆಪಿ ಆಡಳಿತದ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಗೂ ಕಳೆದ ಒಂದು ವರ್ಷ ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಜನರಿಗೆ ಒಂದು ವರ್ಷ ಏನು ಮಾಡಿದ್ದೇವೆ ಎಂದು ಹೇಳುವುದು ನಮ್ಮ ಕರ್ತವ್ಯ ಹಾಗೂ ಉತ್ತರದಾಯಿತ್ವ. ಈ ಸಂದರ್ಭದಲ್ಲಿ ಮಾಡಬಹುದಾದ ಇನ್ನಷ್ಟು ಕಲ್ಯಾಣ ಕಾರ್ಯಕ್ರಮಗಳನ್ನು ತಿಳಿಸುವ ಸಂದರ್ಭವಿದು ಎಂದರು.

ಬದ್ಧತೆಯುಳ್ಳ ಸಚಿವ ಸಂಪುಟ:
ನಮ್ಮದು ಒಂದು ತಂಡ. ಸಚಿವ ಸಂಪುಟದಲ್ಲಿ ಅತ್ಯಂತ ದಕ್ಷ ಆಡಳಿತಗಾರಿದ್ದಾರೆ, ಸೇವಾ ಮನೋಭಾವವಿರುವವರು, ಯುವಕರಿದ್ದಾರೆ. ಒಟ್ಟಾರೆ ಬದ್ಧತೆ ಇರುವ ಸಚಿವ ಸಂಪುಟ ನಮ್ಮದು. ಇವರೆಲ್ಲರ ಪಾಲು ಒಂದು ವರ್ಷದ ಸಾಧನೆಯಲ್ಲಿ ಇದೆ. ಕೋವಿಡ್ ಸಾಂಕ್ರಾಮಿಕ ಒಂದು ಹಂತಕ್ಕೆ ಬಂದಂಥ ಸಂದರ್ಭದಲ್ಲಿ ಅಧಿಕಾರ ವಹಿಸಿಕೊಳ್ಳಲಾಯಿತು. 2 ವರ್ಷ ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ನವರು ಅತ್ಯಂತ ಸಮರ್ಥವಾಗಿ, ಸಚಿವ ಸಂಪುಟದ ಸಚಿವರು, ಸಹಕಾರ ನೀಡಿದರು. ವಿಶೇಷವಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದರು.

ಆಡಳಿತ ಯಾರ ಪರವಾಗಿದೆ ಎನ್ನುವುದು ಮುಖ್ಯ. ನಮ್ಮ ನಿರ್ಣಯಗಳ ಮುಖಾಂತರ ಒಟ್ಟಾರೆ ಜನಪರವಾಗಿರುವ ಆಡಳಿತ ನೀಡುವುದು, ರಾಜ್ಯ ಸಮಗ್ರ ಅಭಿವೃದ್ಧಿ ಹೊಂದಿ ಎಲ್ಲರಿಗೂ ಪಾಲುದಾರಿಕೆ ಮತ್ತು ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸುವ ಆಡಳಿತವನ್ನು ನೀಡಿದ್ದೇವೆ ಎಂದು ನುಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post