ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಟ, ರಾಜಕಾರಣಿ ಕೆ. ಶಿವರಾಮ್ K Shivram ಅವರು ನಿಧನರಾಗಿದ್ದಾರೆ ಎಂಬ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ವರದಿಗಳು ಸತ್ಯಕ್ಕೆ ದೂರವಾಗಿದ್ದು, ಅವರು ಬದುಕಿದ್ದಾರೆ ಎಂದು ಒಡನಾಡಿಗಳು ಸ್ಪಷ್ಟಪಡಿಸಿದ್ದಾರೆ.
ನಿನ್ನೆ ಹೃದಯಾಘಾತಕ್ಕೆ ಒಳಗಾಗಿದ್ದ ಶಿವರಾಂ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಶಿವರಾಂ ಅವರ ಬೆಂಬಲಿಗರು ಹಂಚಿಕೊAಡು ಮಾಹಿತಿಯನ್ವಯ ರಾಜ್ಯ ಹಾಗೂ ರಾಷ್ಟಿçÃಯ ಮಾಧ್ಯಮಗಳಲ್ಲೂ ಸಹ ನಿಧನ ಎಂದು ಸುದ್ದಿ ಪ್ರಕಟವಾಗಿತ್ತು.
ಆದರೆ, ಮಧ್ಯಾಹ್ನದ ವೇಳೆಗೆ ಶಿವರಾಂ ಅವರ ನಿಟಕವರ್ತಿಗಳು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಶಿವರಾಂ ಅವರು ಬದುಕಿದ್ದಾರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರು ಅವರಿಗೆ ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದು, ಅವರನ್ನು ಉಳಿಸಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.
Also read: ಸೂಲಿಬೆಲೆಗೆ ಸಾಂವಿಧಾನಿಕ ಜಯ | ಚಿತ್ತಾಪುರ ಕಾರ್ಯಕ್ರಮಕ್ಕೆ ಹೇರಿದ್ದ ನಿರ್ಬಂಧ ಕೋರ್ಟ್’ನಿಂದ ರದ್ದು
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವರಾಂ ಅವರು ಆದಷ್ಟು ಶೀಘ್ರ ಚೇತರಿಸಿಕೊಳ್ಳಲಿ ಎಂದು ಕಲ್ಪ ಮೀಡಿಯಾ ಹೌಸ್ ಪ್ರಾರ್ಥಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















