ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಳೆಯ ವಿದ್ಯಾರ್ಥಿ ಡಾ. ವಿಲಾಸ ವಸಂತರಾ ನಾಂದೋಡಕರ್ ಅವರು ಮಂಡಿಸಿರುವ ಕರ್ನಾಟಕದಲ್ಲಿ ಸುದ್ದಿವಾಹಿನಿಗಳ ಪತ್ರಕರ್ತರು – ಒಂದು ಅಧ್ಯಯನ ಎಂಬ ವಿಷಯದ ಕುರಿತು ಮಂಡಿಸಿರುವ ಪ್ರೌಢ ಪ್ರಬಂಧಕ್ಕೆ ಕರ್ನಾಟಕ ವಿವಿ ಪಿಹೆಚ್ಡಿ ಪದವಿ ಪ್ರದಾನ ಮಾಡಲಾಗಿದೆ.
ಡಾ.ಸಂಜಯಕುಮಾರ್ ಮಾಲಗತ್ತಿ ಮಾರ್ಗದರ್ಶನದಲ್ಲಿ ನಡೆಸಿದ ಅಧ್ಯಯನ ಪತ್ರಕರ್ತರ ಜ್ವಲಂತ ಸಮಸ್ಯೆ, ಸವಲತ್ತುಗಳ ಕೊರತೆ, ಮುಂಬರುವ ವಿದ್ಯಮಾನಗಳ ಆತಂಕಗಳ ಕುರಿತು ಬೆಳಕು ಚೆಲ್ಲಿದೆ. ಪಿಹೆಚ್ಡಿ ಪದವಿ ಪಡೆಯುವ ಮೂಲಕ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ವಿಲಾಸ್ ನಾಂದೋಡ್ಕರ್ ಅವರು ಈ ಹಿಂದೆ ಹಲವು ಖಾಸಗಿ ವಾಹಿಗಳಲ್ಲಿ ಹಾಗೂ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post