ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಂಶೋಧನೆ, ಸಾಹಿತ್ಯ ಹಾಗೂ ಸಾಮಾಜಿಕವಾಗಿ ಗಣನೀಯ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಡಾ. ಕೆ.ಜಿ ಲಕ್ಷ್ಮಿ ನಾರಾಯಣಪ್ಪನವರಿಗೆ ಅವರಿಗೆ ಚಿನ್ನದ ಪದಕದೊಂದಿಗೆ ‘ಕರ್ನಾಟಕ ಭೂಷಣ ‘ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ನಡೆದ ವೈಭವದ ವಿಶಿಷ್ಟ ವರ್ಣ ರಂಜಿತ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
Also read: ದೈವಿ ಚಿಂತನೆಯ ಕ್ರಿಯಾತ್ಮಕ ಸಾಂಸ್ಕೃತಿಕ ನೃತ್ಯ ಪ್ರಸ್ತುತಿ ಶ್ಲಾಘನೀಯ: ಶ್ರೀ ಸುಗುಣೇಂದ್ರ ತೀರ್ಥರು
ಸಮಾರಂಭದಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಡಾ. ಗುಣವಂತ ಮಂಜು , ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಡಾ.ಮನು ಬಳಿಗಾರ, ಡಾ. ಆರೂಢ ಭಾರತೀ ಸ್ವಾಮೀಜಿಗಳು, ವಿಶೇಷ ಅತಿಥಿಗಳಾಗಿ , ಚಿತ್ರನಟಿ ಕುಮಾರಿ ಸಿರಿ ಅವರು ಹಾಗೂ ಅನೇಕ ಗಣ್ಯ ವ್ಯಕ್ತಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post