Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದಾಬಸ್ ಪೇಟೆ- ದೊಡ್ಡಬಳ್ಳಾಪುರ ಮಧ್ಯೆ ತಲೆ ಎತ್ತಲಿದೆ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ

ಮಹತ್ತ್ವಾಕಾಂಕ್ಷಿ 'ಕ್ವಿನ್ ಸಿಟಿ' ಯೋಜನೆಗೆ ಮುಖ್ಯಮಂತ್ರಿ ಚಾಲನೆ

September 27, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಮೀಪದ ಡಾಬಸಪೇಟೆ ಮತ್ತು ದೊಡ್ಡಬಳ್ಳಾಪುರದ ನಡುವೆ, ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಯ ಆಸುಪಾಸಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಮೊದಲನೆಯ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಚಾಲನೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇದರ ಅಂಗವಾಗಿ ಸಮಾರಂಭ ಏರ್ಪಡಿಸಲಾಗಿತ್ತು. ಇದರಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, #D K Shivakumar ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೇರಿದಂತೆ ಸಚಿವ ಸಂಪುಟದ ಹಲವು ಮಂತ್ರಿಗಳು ಮತ್ತು ಹಿರಿಯ ಜನಪ್ರತಿನಿಧಿಗಳು ಹಾಗೂ ಗಣ್ಯ ಉದ್ಯಮಿಗಳು ಉಪಸ್ಥಿತರಿದ್ದರು.
ಯೋಜನೆಗೆ ನಾಂದಿ ಹಾಡಿ ಮಾತನಾಡಿದ ಮುಖ್ಯಮಂತ್ರಿಗಳು, `ಕರ್ನಾಟಕವು ದೇಶದ ಜ್ಞಾನಾಧಾರಿತ ಆರ್ಥಿಕತೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕ್ವಿನ್ ಸಿಟಿಯು ಕರ್ನಾಟಕ ಮತ್ತು ಭಾರತದ ಪಾಲಿಗೆ ಹೊಸ ಭಾಷ್ಯ ಬರೆಯಲಿದೆ. ಇಲ್ಲಿ ಜಾಗತಿಕ ಮಟ್ಟದ ಸಹಭಾಗಿತ್ವ ಮತ್ತು ನಾವೀನ್ಯತೆಗಳಿಗೆ ಆದ್ಯತೆ ಇರಲಿದ್ದು, `ಸ್ಮಾರ್ಟ್ ಲಿವಿಂಗ್’ ಪರಿಕಲ್ಪನೆಗೆ ಒತ್ತು ಕೊಡಲಾಗುವುದು. ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು, ಸುಸ್ಥಿರ ಬೆಳವಣಿಗೆ ಸಾಧಿಸಲಾಗುವುದು’ ಎಂದರು.

Also read: ಮುಡಾ ಹಗರಣ | ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ಬೆಂಗಳೂರಿನ ಕೈಗಾರಿಕಾ ಬೆಳವಣಿಗೆಗೆ ಹೇರಳ ಅವಕಾಶಗಳಿದ್ದು, ಇದನ್ನು ಸಾಧಿಸಲು ಸರಕಾರ ಬದ್ಧವಾಗಿದೆ. ಎರಡು ವಾರಗಳಲ್ಲಿ ಕಾವೇರಿ 5ನೇ ಹಂತದ ಕುಡಿವ ನೀರು ಪೂರೈಕೆ ಆರಂಭವಾಗಲಿದ್ದು, 20 ವರ್ಷಗಳ ಕಾಲ ನೀರಿನ ಕೊರತೆ ಇರುವುದಿಲ್ಲ. ಹಾಗೆಯೇ, ಇಲ್ಲಿ ವಿದ್ಯುತ್ ತೊಂದರೆ ಕೂಡ ಇಲ್ಲ. ಸಂಚಾರ ವ್ಯವಸ್ಥೆಯಲ್ಲಿ ತುಸು ಸಮಸ್ಯೆ ಇರುವುದು ನಿಜ. ಅದನ್ನು ಕ್ಷಿಪ್ರಗತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಇಲ್ಲಿರುವಷ್ಟು ಪ್ರತಿಭಾನ್ವಿತ ಮಾನವ ಸಂಪನ್ಮೂಲ ಕೈಗಾರಿಕೆಗಳಿಗೆ ಇನ್ನೆಲ್ಲೂ ಸಿಕ್ಕುವುದಿಲ್ಲ’ ಎಂದರು.

ವೈಶಿಷ್ಟ್ಯಪೂರ್ಣ ಯೋಜನೆ

ಸಚಿವ ಎಂ ಬಿ ಪಾಟೀಲ ಮಾತನಾಡಿ, `ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ ಶೇ 40ರಷ್ಟು ಜಾಗವನ್ನು ಉದ್ಯಾನಗಳಿಗೆ ಮೀಸಲಿಡಲಾಗಿದೆ. ಜೊತೆಗೆ 0.69 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಕ್ಕೆ 465 ಎಕರೆ, ವರ್ಷಕ್ಕೆ 7 ಸಾವಿರ ಟನ್ ಹಣ್ಣು-ತರಕಾರಿ ಬೆಳೆಯಲು 200 ಎಕರೆ, ಶೇಕಡ 50ರಿಂದ 70ರಷ್ಟು ಜಲ ಮರುಪೂರಣ ವ್ಯವಸ್ಥೆ ಇರಲಿದೆ’ ಎಂದರು.

ಉದ್ದೇಶಿತ ನಗರದಲ್ಲಿ ಮೊದಲಿಗೆ ಅತ್ಯುತ್ತಮ ಗುಣಮಟ್ಟದ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುವುದು. ಜತೆಗೆ ಜಗತ್ತಿನ ಅಗ್ರ 500 ವಿ.ವಿ.ಗಳು ತಮ್ಮ ಕ್ಯಾಂಪಸ್ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಉತ್ಕೃಷ್ಟ ದರ್ಜೆಯ ಆಸ್ಪತ್ರೆಗಳು, ವೈದ್ಯಕೀಯ ಸಂಶೋಧನಾ ಸಂಸ್ಥೆಗಳು ಮತ್ತು ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಒಟ್ಟಿನಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆಯ ಯೋಜನೆಯಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಯೋಜನೆಯ ವೈಶಿಷ್ಟ್ಯಗಳನ್ನು ವಿವರಿಸಿದರು.
ಕ್ವಿನ್ ಸಿಟಿಯು #KWIN City ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಮತ್ತು ಶ್ರೇಷ್ಠತೆಗೆ ಮಾನದಂಡವಾಗಿ ಹೊರಹೊಮ್ಮಲಿದೆ. ಬೆಂಗಳೂರಿನಲ್ಲಿರುವ ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ನವೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಗಳ ಕಾರ್ಯ ಪರಿಸರವನ್ನು ಇದಕ್ಕೆ ಪೂರಕವಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಳು ನಾಲ್ಕು ಪ್ರಮುಖ ವಲಯಗಳಾಗಿದ್ದು, ಮುಂಬರುವ ದಿನಗಳ ಸ್ಮಾರ್ಟ್ ಸಿಟಿಗಳಿಗೆ ಮೇಲ್ಪಂಕ್ತಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್ ಕೆ ಪಾಟೀಲ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಚೆಲುವರಾಯಸ್ವಾಮಿ, ಡಾ.ಎಂ ಸಿ ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎನ್ ರಾಜಣ್ಣ, ಶರಣಬಸಪ್ಪ ದರ್ಶನಾಪುರ, ಮಂಕಾಳ ವೈದ್ಯ, ಬೋಸರಾಜು, ಶಿವಾನಂದ ಪಾಟೀಲ, ಮಧು ಬಂಗಾರಪ್ಪ, ರಹೀಂ ಖಾನ್ ಮತ್ತು ಆರ್ ಬಿ ತಿಮ್ಮಾಪುರ, ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಉದ್ಯಮಿಗಳಾದ ಪ್ರಶಾಂತ್ ಪ್ರಕಾಶ್, ಗೀತಾಂಜಲಿ ಕಿರ್ಲೋಸ್ಕರ್, ರಂಗೇಶ್ ರಾಘವನ್, ವೈದ್ಯ ಡಾ.ವಿವೇಕ ಜವಳಿ ಉಪಸ್ಥಿತರಿದ್ದರು.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಯೋಜನೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಕೆಐಎಡಿಬಿ ಸಿಇಒ ಡಾ,ಮಹೇಶ್ ಉಪಸ್ಥಿತರಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸ್ವಾಗತಿಸಿದರು. ಕೆಐಎಡಿಬಿ ಸಿಇಒ ಡಾ.ಮಹೇಶ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreCM SiddaramaiahD K ShivakumarKannada News WebsiteKannada_NewsKannada_News_LiveKannada_News_OnlineKannada_WebsiteKWIN CityLatest News KannadaNews_in_KannadaNews_Kannadaಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಕ್ವಿನ್ ಸಿಟಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಮುಡಾ ಹಗರಣ | ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು

Next Post

ರಂಭಾಪುರಿ ಶ್ರೀಗಳ ಶರನ್ನವರಾತ್ರಿ ಉತ್ಸವಕ್ಕೆ ದಿನಗಣನೆ | ಎಷ್ಟು ದಿನ? ಎಲ್ಲಿ ನಡೆಯಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಂಭಾಪುರಿ ಶ್ರೀಗಳ ಶರನ್ನವರಾತ್ರಿ ಉತ್ಸವಕ್ಕೆ ದಿನಗಣನೆ | ಎಷ್ಟು ದಿನ? ಎಲ್ಲಿ ನಡೆಯಲಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025

Wife Donates Kidney to Save Husband’s Life

October 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನವುಲೆ ಕೆಎಸ್’ಸಿಎ ಕ್ರೀಡಾಂಗಣದಲ್ಲಿ ಅ.25ರಿಂದ 28 ರಣಜಿ ಟ್ರೋಫಿ ಪಂದ್ಯಾವಳಿ

October 23, 2025

ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ

October 23, 2025

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

October 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!