ಕಲ್ಪ ಮೀಡಿಯಾ ಹೌಸ್
ಬೆಂಗಳೂರು: 2020-21 ನೇ ಸಾಲಿನ ಉನ್ನತ ಸುರಕ್ಷತಾ ಪುರಸ್ಕಾರ ಪ್ರಶಸ್ತಿಯನ್ನು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಗೆ ಇಂದು ರಾಷ್ಟ್ರೀಯ ಸುರಕ್ಷತಾ ಮಂಡಳಿ ವತಿಯಿಂದ ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ಸಭಾಂಗಣದಲ್ಲಿ ನೀಡಿ ಗೌರವಿಸಲಾಯಿತು.
ರಾಷ್ಟೀಯ ಸುರಕ್ಷತಾ ಮಂಡಳಿ ಕರ್ನಾಟಕ ಚಾಪ್ಟರ್ ಇವರು ಪ್ರತಿ ಎರಡು ವರ್ಷಕ್ಕೊಮ್ಮೆ ಈ ಕಾರ್ಯಕ್ರಮವನ್ನು ಆಯೋಜಿಸಿ ರಾಜ್ಯದಲ್ಲಿರುವ ಕಾರ್ಖಾನೆಗಳನ್ನು ಗುರುತಿಸಿ ಅವುಗಳ ವಸ್ತು ಸ್ಥಿತಿಯನ್ನು ಆಡಿಟ್ ಮಾಡುವುದರ ಮೂಲಕ ಉತ್ತಮ, ಉನ್ನತ ಮತ್ತು ಅತ್ಯುತ್ತಮ ಸುರಕ್ಷ ಪುರಸ್ಕಾರ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಾರೆ.
ಈ ನಿಟ್ಟಿನಲ್ಲಿ ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಉತ್ತರ ಕರ್ನಾಟಕ ಭಾಗದಲ್ಲಿ ಸುರಕ್ಷತೆ, ಕಾರ್ಮಿಕರ ಆರೋಗ್ಯ ಮತ್ತು ಪರಿಸರಕ್ಕೆ ಹೆಚ್ಚಿನ ಗಮನ ನೀಡಿ ಕಾರ್ಯ ನಿರ್ವಹಿಸುತ್ತಿದೆ. ಮತ್ತು ಸಿ ಎಸ್ ಆರ್ ಯೋಜನೆಯ ಮೂಲಕ ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿ, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಗಮನವನ್ನು ನೀಡಿ ಅಭಿವೃದ್ಧಿ ಮಾಡುತ್ತ ಬಂದಿದೆ.
1993 ರಲ್ಲಿ ಪ್ರಾರಂಭವಾದ ಈ ಕಾರ್ಖಾನೆ ಸತತವಾಗಿ 2017 ರಲ್ಲಿ ಉತ್ತಮ ಸುರಕ್ಷ ಪುರಸ್ಕಾರ ಪ್ರಶಸ್ತಿ, 2019 ರಲ್ಲಿ ಉನ್ನತ ಸುರಕ್ಷ ಪ್ರಶಸ್ತಿಯನ್ನು ಗಳಿಸಿ, ಪ್ರಸ್ತುತ 2021ರಲ್ಲಿ ಮತ್ತೆ ಉನ್ನತ ಸುರಕ್ಷತ ಪ್ರಶಸ್ತಿ ಗಳುಸುವ ಮೂಲಕ ಮೆಚ್ಚುಗೆ ಪಡೆದಿದೆ.
ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ವಿ ಗುಮಾಸ್ತೆ ಮಾತನಾಡಿ, ನಮ್ಮ ಸಂಸ್ಥೆಯು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪರಮೇನಹಳ್ಳಿಯ ಮೆ: ವಿ ಎಸ್ ಎಲ್ ಸ್ಟೀಲ್ಸ್ ಕಾರ್ಖಾನೆಯನ್ನು ಖರೀದಿಸಿ, ದುರಸ್ತಿ ಪಡಿಸಿ ಕಾರ್ಖಾನೆಯನ್ನು ಪ್ರಾರಂಭಿಸಿ ಸುರಕ್ಷತೆಗೆ ಮತ್ತು ಪರಿಸರಕ್ಕೆ ಹೆಚ್ಚಿನ ಗಮನ ನೀಡಿ ಕಾರ್ಖಾನೆಯ ಬೆಳವಣಿಗೆಗೆ ಶ್ರಮಿಸಲಾಗುತ್ತದೆ. ಈ ಸಂದರ್ಭದಲ್ಲಿ ನಮ್ಮ ಪರಮೇನಹಳ್ಳಿಯಲ್ಲಿ ಸ್ಥಾಪಿಸಲಾಗಿರುವ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಗೂ ಸಹ ಪ್ರಶಂಸಾ ಸುರಕ್ಷತಾ ಪುರಸ್ಕಾರ ಪ್ರಶಸ್ತಿ ನೀಡಿರುತ್ತಾರೆ. ಇದಕ್ಕೆ ಕಾರಣಕರ್ತರಾದ ನಮ್ಮ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಹಂತದ ಕಾರ್ಮಿಕರಿಗೆ ಮತ್ತು ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದರು.
ರಾಷ್ಟ್ರೀಯ ಸುರಕ್ಷತಾ ಮಂಡಳಿ (ಎನ್ ಎಸ್ ಸಿ) ನೀಡುವ ಸುರಕ್ಷ ಪ್ರಶಸ್ತಗೆ ಭಾಜನರಾಗಿದ್ದು ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕಂಪನಿಯ ಅಧಿಕಾರಿಗಳು ಪ್ರಶಸ್ತಿಯನ್ನು ಸ್ವೀಕರಿಸಿದರು.
ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಪಿ. ನಾರಾಯಣ್ ಮಾತನಾಡಿ, ಕಂಪನಿಯ ಕಾರ್ಯಾಚರಣೆ, ಉತ್ಪಾದನೆ ಚಟುವಟಿಕೆಗಳಲ್ಲಿ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಅಂಗವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು, ಕಾರ್ಮಿಕರಿಗೆ ಸುರಕ್ಷತಾ ಸಾಧನ-ಸಲಕರಣೆಗಳು ಕಾಲಕಾಲಕ್ಕೆ ನೀಡುವುದು ಮತ್ತು ಅವುಗಳನ್ನು ಧರಿಸಿ ಕೆಲಸ ಮಾಡುವ ರೂಢಿಯನ್ನು ಕಾರ್ಮಿಕರಲ್ಲಿ ತರುವ ನಿಟ್ಟಿನಲ್ಲಿ ಕಂಪನಿ ತರಬೇತಿ ನೀಡುವುದರ ಮೂಲಕ ಚಾಚೂತಪ್ಪದೆ ನಿರ್ವಹಿಸಿಕೊಂಡು ಬಂದಿದೆ. ಅಪಘಾತ ಸಂಭವಿಸಿದರೆ ನಷ್ಟದ ಜೊತೆಗೆ ಕಂಪನಿಯ ಉತ್ಪಾದನೆಗೆ ದಕ್ಕೆ ಯಾಗುತ್ತದೆ, ಸುರಕ್ಷತಾ ತರಬೇತಿ ನೀಡುವಲ್ಲಿ ಕಂಪನಿ ಶ್ರಮಿಸುತ್ತಿದೆ ವಿಶೇಷ ಸಂದರ್ಭಗಳಲ್ಲಿ ಕಾರ್ಮಿಕರಿಗೆ ರಸಪ್ರಶ್ನೆ ಪ್ರಬಂಧ ಸ್ಪರ್ಧೆಯ ಮೂಲಕ ಮಾಹಿತಿ ನೀಡಲಾಗುತ್ತಿದೆ. ನಿಯಮಿತವಾಗಿ ಸುರಕ್ಷತಾ ಕ್ರಮಗಳ ಬಗ್ಗೆ ಸಭೆ ನಡೆಸುವುದು ಮತ್ತು ಆಡಳಿತ ಮಂಡಳಿಗೆ ಜೊತೆ ಚರ್ಚಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮ ಸಾಧನೆ ಗುರುತಿಸಿದ ನ್ಯಾಷನಲ್ ಸೇಫ್ಟಿ ಕೌನ್ಸಿಲ್ (ರಾಷ್ಟ್ರೀಯ ಸುರಕ್ಷತಾ ಮಂಡಳಿ) ಕರ್ನಾಟಕ ಚಾಪ್ಟರ್ ಇವರು 2020 21 ನೇ ಸಾಲಿನ ಉನ್ನತ ಸುರಕ್ಷತಾ ಪುರಸ್ಕಾರ ಪ್ರಶಸ್ತಿಯನ್ನು ನೀಡಿದೆ ಇದು ಪ್ರತಿಯೊಬ್ಬ ಕೆಲಸಗಾರರ ಕಾರ್ಮಿಕರ ಕಾರ್ಮಿಕರ ಶ್ರಮದ ಪ್ರತಿಫಲ ಎಂದು ತಿಳಿಸಿದರು.
ಸುರಕ್ಷತಾ ಹಿರಿಯ ಅಧಿಕಾರಿ ಮುರಳಿಧರ್ ನಾಡಿಗೇರ್ ಮಾತನಾಡಿ, ಕಾರ್ಖಾನೆಯಲ್ಲಿ ಕೆಲಸಗಾರರು ಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯ ಇವುಗಳನ್ನು ಪರೀಕ್ಷಿಸಿ ತಪಾಸಣೆ ಮಾಡಿ ಸುರಕ್ಷತಾ ವಾತಾವರಣ ಸುರಕ್ಷತಾ ತರಬೇತಿ ಕಾರ್ಯಕ್ರಮಗಳು ಪ್ರದರ್ಶನ ಮತ್ತು ಅಪಘಾತಗಳ ಅಂಕಿ-ಅಂಶಗಳೂ ಕೆಲಸಗಳಲ್ಲಿ ಕೆಲಸಗಾರರ ಸುರಕ್ಷತೆಯ ನೀತಿ ನಿಯಮ ಪಾಲನೆ ಸುರಕ್ಷತಾ ಸಾಧನ ಸಾಮಗ್ರಿಗಳ ಬಳಕೆ ಇವುಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಶಸ್ತಿಯನ್ನು ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ಸಭಾಂಗಣದಲ್ಲಿ ಕಂಪನಿಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಬೇವಿನಹಳ್ಳಿ ಕಾರ್ಖಾನೆಯ ಪರವಾಗಿ ಬೀಡುಕಬ್ಬಿಣ ವಿಭಾಗದ ಸೀನಿಯರ್ ಜನರಲ್ ಮ್ಯಾನೇಜರ್ ಎಂ. ಶಿವಕುಮಾರ್ ಮತ್ತು ಫೌಂಡ್ರೀ ವಿಭಾಗದ ಸೀನಿಯರ್ ಜನರಲ್ ಮ್ಯಾನೇಜರ್ ವಿ.ಎಸ್ ಕೋರಿ ಹಾಗೂ ಸುರಕ್ಷತಾ ವಿಭಾಗದ ಹಿರಿಯ ಅಧಿಕಾರಿ ಎಂ.ಎಂ ನಾಡಿಗೇರ್ ಅವರು ಮತ್ತು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಪರಮೇನಹಳ್ಳಿ ಪರವಾಗಿ ಬೀಡು ಕಬ್ಬಿಣ ವಿಭಾಗದ ಜನರಲ್ ಮ್ಯಾನೇಜರ್ ಮನೋಹರಬಾಬು ಮತ್ತು ಸುರಕ್ಷತಾ ವಿಭಾಗದ ಹಿರಿಯ ಅಧಿಕಾರಿ ಎಂ.ಎಂ. ನಾಡಿಗೇರ್ ರವರು ಪ್ರಶಸ್ತಿಯನ್ನು ಕಾಯರ್ಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ, ಕಾರ್ಖಾನೆ ಮತ್ತು ಬಾಯ್ಲರ್ ಗಳ ಇಲಾಖೆ, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಥ್ಯ ಇಲಾಖೆ, ಕರ್ನಾಟಕ ರಾಜ್ಯ ನಿರ್ದೇಶಕರಾದ ಕೆ. ಶ್ರೀನಿವಾಸ ಹಾಗೂ ಡೈರೆಕ್ಟರ್ ಅಫ್ ಜನರಲ್ ನ್ಯಾಷನಲ್ ಸೇಪ್ಟಿ ಕೌನ್ಸಿಲ್ ಭಾರತ ಸರ್ಕಾರ, ಮುಂಭೈ ಲಲಿತ್ ಆರ್ ಗವಾನೆ, ನ್ಯಾಷನಲ್ ಸೇಫ್ಟಿ ಕೌನ್ಸಿಲ್ ಕರ್ನಾಟಕ ಚಾಪ್ಟರ್ ಅಧ್ಯಕ್ಷರಾದ ಶ್ರೀ.ವಿ.ಎ. ಗುಂಡಪ್ಪ ಮತ್ತು ಕಾರ್ಯದರ್ಶಿಪಿ.ಸಿ. ವೆಂಕಟೇಶ್ವರಲು ಇವರಿಂದ ಸ್ವೀಕರಿಸಿದರು.
ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post