No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೋವಿಡ್ -19 ನಿರ್ವಹಣೆ: ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಗೆ ಮುಖ್ಯಮಂತ್ರಿ ಮೆಚ್ಚುಗೆ

kalpa News by kalpa News
June 9, 2021
in ಬೆಂಗಳೂರು ನಗರ
0
ಕೋವಿಡ್ -19 ನಿರ್ವಹಣೆ: ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಗೆ ಮುಖ್ಯಮಂತ್ರಿ ಮೆಚ್ಚುಗೆ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮುಕ್ತ ಕಂಠದಿಂದ ಶ್ಲಾಘಿಸಿದರು.

ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಗಮನಿಸಿ, ಕೋವಿಡ್ 19 ಎರಡನೇ ಅಲೆಯ ಪರಿಹಾರ ಪ್ಯಾಕೇಜ್ ನಡಿ 3 ಸಾವಿರ ರೂ. ಸಹಾಯಧನ ಘೋಷಿಸಿರುವುದಾಗಿ ತಿಳಿಸಿದರು.

ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಅವರ ಆರೋಗ್ಯದ ಸ್ಥಿತಿ ಗತಿ, ಕಾರ್ಯ ನಿರ್ವಹಣೆ, ಅವರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ವಿವರ, ಸಾರ್ವಜನಿಕರು, ಮೇಲಾಧಿಕಾರಿಗಳ ಸಹಕಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.

ಕೋವಿಡ್ ನಿರ್ವಹಣೆಯ ಸಂದರ್ಭದಲ್ಲಿ ಮೊದಲಿಗೆ ಸಾರ್ವಜನಿಕರು ಭಯ ಭೀತರಾಗಿದ್ದರು. ಪರೀಕ್ಷೆ ಮಾಡಿಸಲು, ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದರು. ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಾಗಲು ಭಯ ಪಡುತ್ತಿದ್ದರು. ಆದರೆ ಇದೀಗ ಸಹಕರಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಲಸಿಕೆ ಹಾಕಿಸಲು ತಮ್ಮ ಗ್ರಾಮದ ಜನರ ಮನವೊಲಿಸಿ, ಮೇಲಾಧಿಕಾರಿಗಳ ಸಹಾಯದಿಂದ ವಾಹನ ವ್ಯವಸ್ಥೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಿದ್ದನ್ನು ಸ್ಮರಿಸಿಕೊಂಡರು.

ಕೋವಿಡ್ ಪೀಡಿತರಾಗಿದ್ದ ಶಿವಮೊಗ್ಗ ಜಿಲ್ಲೆ ಮುಂಬಾರಿನ ಕೆ.ವಿ. ಶಾರದಾ ಕೋವಿಡ್ ಕೇರ್ ಸೆಂಟರಿನಿಂದಲೇ ಸಂವಾದದಲ್ಲಿ ಪಾಲ್ಗೊಂಡರು. ಕಳೆದ 15 ದಿನಗಳ ವರೆಗೆ ತಮ್ಮ ಗ್ರಾಮ ಕೋವಿಡ್ ಮುಕ್ತವಾಗಿತ್ತು. ಇದೀಗ ಏಳು ಪ್ರಕರಣಗಳು ಕಂಡು ಬಂದಿವೆ. ಇಬ್ಬರು ಹೋಂ ಐಸೊಲೇಷನ್ ನಲ್ಲಿದ್ದು, ಉಳಿದವರು ಕೋವಿಡ್ ಕೇರ್ ಸೆಂಟರಿನಲ್ಲಿ ದಾಖಲಾಗಿದ್ದಾರೆ ಎಂದು ವಿವರಿಸಿದರು.

ಜನರು ಲಸಿಕೆಯ ಸುರಕ್ಷತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ, ತಮ್ಮ ಪತಿಗೇ ಮೊದಲಿಗೆ ಲಸಿಕೆ ಕೊಡಿಸಿ, ಜನರಲ್ಲಿ ವಿಶ್ವಾಸ ಮೂಡಿಸಿದ ಅನುಭವವನ್ನು ರಾಮನಗರದ ಶಿವಲಿಂಗಮ್ಮ ಹಂಚಿಕೊಂಡರು.

ವಿಜಯಪುರ ಜಿಲ್ಲೆಯ ದೀಪಾ ಬಜ್ಜನವರ ಅವರು ಕೋವಿಡ್ ಕೇರ್ ಸೆಂಟರಿಗೆ ದಾಖಲಾಗಲು ಜನರು ಹಿಂದೇಟು ಹಾಕಿದ ಅನುಭವವನ್ನು ವಿವರಿಸಿದರು.

ಸಬ್ಬಮಂಗಲದ ರತ್ನಮ್ಮ ಅವರು, ಮನೆ ಮನೆಗೆ ಭೇಟಿ ನೀಡಿ, ಅರಿವು ಮೂಡಿಸುವುದರೊಂದಿಗೆ ಸೋಂಕಿತರಿಗೆ ಪೌಷ್ಟಿಕ ಆಹಾರ ಸೇವಿಸುವಂತೆ ಮನವರಿಕೆ ಮಾಡುತ್ತಿರುವುದಾಗಿ ತಿಳಿಸಿದರು.

ಕೊಪ್ಪಳ ಜಿಲ್ಲೆ ನವಲಿ ಗ್ರಾಮದ ಲಕ್ಷ್ಮವ್ವ ನಾಯಕ್, ತಮ್ಮ ಗ್ರಾಮದಲ್ಲಿ 60 ವರ್ಷ ಮೇಲ್ಪಟ್ಟ 120 ಜನರಲ್ಲಿ 115 ಜನರಿಗೆ ಲಸಿಕೆ ಹಾಕಿಸಿರುವುದಾಗಿ ತಿಳಿಸಿದರು.

ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಬಡಜನರ ಚಿಕಿತ್ಸೆಗೆ ದಾನಿಗಳಿಂದ ನೆರವು ದೊರಕಿಸುವ ಪ್ರಯತ್ನ ಮಾಡಿರುವುದನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಸಂವಾದದ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಗ್ರಾಮಸ್ಥರಿಗೆ ಕೋವಿಡ್ ಲಸಿಕೆ ಸುರಕ್ಷಿತ ಎಂಬುದನ್ನು ಮನವರಿಕೆ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಬೇಕು. ಜೊತೆಗೆ, ಐ ಎಲ್ ಐ, ಸಾರಿ ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ಕೂಡಲೇ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಒದಗಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದರು.

ಧಾರವಾಡ ಜಿಲ್ಲೆ ಅಮ್ಮಿನಭಾವಿಯ ಪ್ರೇಮಾ ಪ್ರಕಾಶ್ ಕಬ್ಬೂರು, ದಕ್ಷಿಣ ಕನ್ನಡ ಜಿಲ್ಲೆ ಸುಲ್ಕೇರಿಯ ಹೇಮಲತಾ, ರಾಮನಗರ ಜಿಲ್ಲೆಯ ದೊಡ್ಡಗಂಗವಾಡಿಯ ಶಿವಲಿಂಗಮ್ಮ, ವಿಜಯಪುರ ಜಿಲ್ಲೆ ಕಂಬಾಗಿಯ ದೀಪಾ ಬಜ್ಜನವರ್, ಬೆಂಗಳೂರು ನಗರ ಜಿಲ್ಲೆ ಸಬ್ಬಮಂಗಲದ ರತ್ನಮ್ಮ, ಬಳ್ಳಾರಿ ಜಿಲ್ಲೆ ದಬ್ಬೂರಿನ ಪರಿಮಳಾ, ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ., ಕೊಪ್ಪಳ ಜಿಲ್ಲೆ ನವಲಿಯ ಲಕ್ಷ್ಮವ್ವ ನಾಯಕ್, ರಾಯಚೂರು ಜಿಲ್ಲೆ ಗಣಮೂರಿನ ಇಂದಿರಾ, ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಮುಖ್ಯಮಂತ್ರಿಯವರೊಂದಿಗೆ ಸಂವಾದ ನಡೆಸಿದರು.

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ವಿ. ತ್ರಿಲೋಕಚಂದ್ರ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: #Covid19VaccineBangaloreCM BS YadiyurappaCovid VaccineKannada NewsKannada News LiveKannada News OnlineKannada News WebsiteKannada WebsiteLatest News KannadaMinister SudhakarNews in KannadaNews KannadaState Newsಕೋವಿಡ್ ಕೇರ್ ಸೆಂಟರ್ಕೋವಿಡ್ ಲಸಿಕೆಕೋವಿಡ್-19ಬೆಂಗಳೂರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಸಚಿವ ಡಾ. ಕೆ. ಸುಧಾಕರ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾನಗಲ್ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

Next Post

ಉಡುಪಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳು ದೋಷಿ

kalpa News

kalpa News

Next Post
ಉಡುಪಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳು ದೋಷಿ

ಉಡುಪಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳು ದೋಷಿ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL