No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹಿರಿಯ ಕಾಂಗ್ರೆಸ್‌ ನಾಯಕ ಆಸ್ಕರ್‌ ಗೆ ಕೆಪಿಸಿಸಿ ಆತ್ಮೀಯ ವಿದಾಯ : ಡಿಕೆಶಿ ಮುಂದಾಳತ್ವಕ್ಕೆ ಶ್ಲಾಘನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 21, 2021
in ಬೆಂಗಳೂರು ನಗರ
0
ಹಿರಿಯ ಕಾಂಗ್ರೆಸ್‌ ನಾಯಕ ಆಸ್ಕರ್‌ ಗೆ ಕೆಪಿಸಿಸಿ ಆತ್ಮೀಯ ವಿದಾಯ : ಡಿಕೆಶಿ ಮುಂದಾಳತ್ವಕ್ಕೆ ಶ್ಲಾಘನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜಕೀಯ ನಾಯಕರು ನಿಧನರಾದಾಗ ಅವರ ಕುರಿತು ಒಂದಷ್ಟು ಗುಣಗಾನ ಮಾಡಿ, ಸಂತಾಪ ಸೂಚಿಸಿ ತಮ್ಮ ಕೆಲಸ ಆಲ್ಲಿಗೆ ಮುಗಿದಿದೆ ಎಂದುಕೊಳ್ಳುವುದು ಬಹುತೇಕ ರಾಜಕೀಯ ನಾಯಕರು ಯೋಚಿಸುವ ರೀತಿ. ಇದು ಇತ್ತೀಚಿನ ದಿನಗಳಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ನಡೆದುಕೊಂಡು ಬರುತ್ತಿರುವ ವಾಡಿಕೆಯೂ ಹೌದು.



ಆದರೆ, ಇದಕ್ಕೆ ವ್ಯತಿರಿಕ್ತವಾಗಿ, ನಿಧನರಾದ ಒಬ್ಬ ನಾಯಕರಿಗೆ ಪಕ್ಷದಿಂದ ಯಾವ ರೀತಿ ಗೌರವ ಸಲ್ಲಿಸಬಹುದು ಎಂಬುದು ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸದಸ್ಯರಾಗಿದ್ದ ಆಸ್ಕರ್ ಫರ್ನಾಂಡೀಸ್ ಅವರ ವಿಚಾರದಲ್ಲಿ ಸಾಬೀತಾಗಿದೆ. ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೇ ಮುಂದೆ ನಿಂತಿ ಅಂತಿಮ ವಿಧಿ-ವಿಧಾನಗಳಿಗೆ ಬೇಕಾದ ಏರ್ಪಾಟುಗಳನ್ನು ಮಾಡುವ ಮೂಲಕ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದ್ದಾರೆ.

ಸುಮಾರು ಎರಡು ತಿಂಗಳ ಸುದೀರ್ಘ ಚಿಕಿತ್ಸೆ ನಡವೆ ಸೆ. 9ರಂದು ಮಂಗಳೂರಿನ ಎನೆಪೋಯಾ ಆಸ್ಪತ್ರೆಯಲ್ಲಿ ನಿಧನರಾದ ಆಸ್ಕರ್ ಫರ್ನಾಂಡೀಸ್ ಅವರ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆದುಕೊಂಡ ರೀತಿ ಆಸ್ಕರ್ ಕುಟುಂಬಸ್ಥರಿಂದ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.


ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರವನ್ನು ಅವರ ಹುಟ್ಟೂರಿಗೆ ಕೊಂಡೊಯ್ಯಲಾಗಿತ್ತು. ಆಸ್ಕರ್ ನಿಧನದ ಮಾಹಿತಿ ತಿಳಿಯುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಅಲ್ಲಿಂದ ನೇರವಾಗಿ ಉಡುಪಿಗೆ ತೆರಳಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಅಷ್ಟೇ ಅಲ್ಲ, ಆಸ್ಕರ್ ಅವರಿಗೆ ಪಕ್ಷದ ವತಿಯಿಂದ ಸಕಲ ರೀತಿಯಲ್ಲಿ ಗೌರವ ಸಲ್ಲಿಸಲಾಗುವುದು. ಆದ್ದರಿಂದ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಗೆ ಬೆಂಗಳೂರಿನಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬಸ್ಥರಿಗೆ ತಿಳಿಸಿದರು.

ಬೆಂಗಳೂರಿಗೆ ವಾಪಸಾದ ಬಳಿಕ ತಮ್ಮ ರಾಜಕೀಯ ಕೆಲಸಗಳ ಜತೆಗೆ ಆಸ್ಕರ್ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಗೆ ಬೇಕಾದ ಸಿದ್ಧತೆಗಳ ಉಸ್ತುವಾರಿ ನೋಡಿಕೊಂಡರು. ಉಡುಪಿಯಿಂದ ಪಾರ್ಥೀವ ಶರೀರವನ್ನು ಏರಿ ಲಿಫ್ಟ್ ಮಾಡಿಸಲು ವ್ಯವಸ್ಥೆ ಮಾಡಿದರು.

ಅದರಂತೆ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರವನ್ನು ಅವರ ಹುಟ್ಟೂರಿನಿಂದ ಮಂಗಳೂರು ಮೂಲಕ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಿಸಿ ಕೆಪಿಸಿಸಿ ಕಚೇರಿಗೆ ಕರೆತರಲಾಯಿತು. ಅಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಶಿಸ್ತುಬದ್ಧ ವ್ಯವಸ್ಥೆ ಮಾಡಲಾಗಿತ್ತು. ಕೊರೋನಾ ಮಾರ್ಗಸೂಚಿ ಪಾಲಿಸಲು ಆದ್ಯತೆ ನೀಡಲಾಯಿತು.

ಈ ಮಧ್ಯೆ ಆಸ್ಕರ್ ಅವರ ಅಂತಿಮ ದರ್ಶನಕ್ಕೆ ರಾಜ್ಯಕ್ಕೆ ಆಗಮಿಸಿದ್ದ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡು ಅವರನ್ನು ಆಸ್ಕರ್ ಅವರ ಕುಟುಂಬ ಸದಸ್ಯರ ಬಳಿ ಕರೆದೊಯ್ದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿಸಿದರು. ಆಸ್ಕರ್ ಪತ್ನಿ, ಪುತ್ರಿ, ಮೊಮ್ಮಕ್ಕಳ ಜತೆ ಸೌಜನ್ಯದ ಮಾತುಕತೆ ನಡೆಸಿದರು.

ಇದಾದ ಬಳಿಕ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜು ಬಳಿ ಇರುವ ಸೇಂಟ್ ಪ್ಯಾಟ್ರಿಕ್ಸ್ ಚರ್ಚ್ ನಲ್ಲಿ ಆಸ್ಕರ್ ಅವರ ಪಾರ್ಥೀವ ಶರೀರಕ್ಕೆ ಕ್ರೈಸ್ತ ಸಂಪ್ರದಾಯದಂತೆ ಪ್ರಾರ್ಥನೆ ಸಲ್ಲಿಸಲಾಯಿತು. ಚರ್ಚ್ ಆವರಣದಲ್ಲಿ ಪಾರ್ಥೀವ ಶರೀರವನ್ನು ಇರಿಸಿ, ಸಕಲ ಸರ್ಕಾರಿ ಗೌರವಗಳನ್ನು ಅರ್ಪಿಸಲಾಯಿತು. ಮೃತರ ಗೌರವಾರ್ಥ ಗಾಳಿಯಲ್ಲಿ ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಲಾಯಿತು. ನಂತರ ಹೊಸೂರು ರಸ್ತೆಯ ಸೇಂಟ್ ಪ್ಯಾಟ್ರಿಕ್ ಸ್ಮಶಾನದಲ್ಲಿ ಕ್ರೈಸ್ತ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಇದೆಲ್ಲದರ ಉಸ್ತುವಾರಿಯನ್ನು ಖುದ್ದು ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದರು.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಆಸ್ಕರ್ ಫರ್ನಾಂಡೀಸ್ ಅವರ ಕುಟುಂಬ ಸದಸ್ಯರು, “ಕಾಂಗ್ರೆಸ್ ಪಕ್ಷ ಮತ್ತು ಕೆಪಿಸಿಸಿ ಅಧ್ಯಕ್ಷರು ಆಸ್ಕರ್ ಅವರ ಬಗ್ಗೆ ಹೊಂದಿದ್ದ ಗೌರವಕ್ಕೆ ನಾವು ಆಭಾರಿಯಾಗಿದ್ದೇವೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಲ್ಲಾ ಸಂದರ್ಭದಲ್ಲೂ ನಮ್ಮೊಂದಿಗೆ ಇದ್ದು ಕುಟುಂಬ ಸದಸ್ಯರಂತೆ ನಮ್ಮ ನೆರವಿಗೆ ಬಂದಿದ್ದಾರೆ” ಎಂದು ಹೇಳಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDK ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaOskar FernandesState Newsಆಸ್ಕರ್ ಫರ್ನಾಂಡೀಸ್ಡಿ.ಕೆ. ಶಿವಕುಮಾರ್‌ಬೆಂಗಳೂರು:
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಮುಖ್ಯಮಂತ್ರಿ ಭೇಟಿ…

Next Post

ಕಾಂಗ್ರೆಸ್‌ನ ಹಲವು ಶಾಸಕರಿಗೆ ಬಿಜೆಪಿಯತ್ತ ಒಲವು: ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್? ಮುಖ್ಯಮಂತ್ರಿ ಯಡಿಯೂರಪ್ಪ ಏನು ಹೇಳಿದ್ದಾರೆ ಇಲ್ಲಿದೆ ಮಾಹಿತಿ!

ಕಾಂಗ್ರೆಸ್‌ನ ಹಲವು ಶಾಸಕರಿಗೆ ಬಿಜೆಪಿಯತ್ತ ಒಲವು: ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL