No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೃಷ್ಣಾ ಮೇಲ್ದಂಡೆ-3 ನೀರು ಸಂಗ್ರಹಿಸುವ ಮುನ್ನ ಭೂ ಪರಿಹಾರ : ಸಚಿವ ಗೋವಿಂದ ಕಾರಜೋಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 17, 2021
in ಬೆಂಗಳೂರು ನಗರ
0
ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಿ: ಡಿಸಿಎಂ ಗೋವಿಂದ ಕಾರಜೋಳ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರತಿಷ್ಠಿತ ಆಲಮಟ್ಟಿ ಅಣೆಕಟ್ಟೆಯಲ್ಲಿ 524.256 ಮೀ. ನೀರನ್ನು ಸಂಗ್ರಹಿಸುವ ಮೊದಲು ಈ ಯೋಜನೆಗೆ ಬಾಧಿತವಾಗುವ ಮತ್ತು ಮುಳುಗಡೆಯಾಗುವ ಭೂಪ್ರದೇಶದ ಸಂಪೂರ್ಣ ಪರಿಹಾರವನ್ನು ವಿತರಿಸಿಯೇ ನಂತರ ನೀರು ನಿಲ್ಲಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳರವರು ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.


ಪ್ರಶ್ನೋತ್ತರ ವೇಳೆಯಲ್ಲಿ ಹಣಮಂತ ನಿರಾಣಿಯವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸುತ್ತಿದ್ದರು. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಲ್ಲಿ ಮುಳುಗಡೆಯಾಗುವ ಇನ್ನುಳಿದ ಜಮೀನು ಕ್ಷೇತ್ರವು ಭೂಸ್ವಾಧೀನದ ವಿವಿಧ ಹಂತದಲ್ಲಿರುತ್ತದೆ ಹಾಗೂ ಹಂತ ಹಂತವಾಗಿ ಭೂಸ್ವಾಧೀನ ಪಡಿಸಿಕೊಂಡು ಭೂ ಪರಿಹಾರ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಭೂಸ್ವಾಧೀನಪಡಿಸಿಕೊಂಡ ಜಮೀನು ಮಾಲೀಕರಿಗೆ ಭೂ ಪರಿಹಾರ ವಿತರಿಸಲಾಗಿರುತ್ತದೆ ಹಾಗೂ ಏನಾದರೂ ಮಾಲೀಕತ್ವದ ಕುರಿತು ಕಾನೂನು ತೊಡಕುಗಳು ಇದ್ದ ಪಕ್ಷದಲ್ಲಿ ನಿಯಮಾನುಸಾರ ಪರಿಶೀಲಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಹ ಸಭೆಯಲ್ಲಿ ತಿಳಿಸಿದರು.


ಇಲ್ಲಿಯವರೆಗೆ 2127.79 ಕೋಟಿ ರೂ. ಪರಿಹಾರದ ಮೊತ್ತ ನೀಡಲಾಗಿದ್ದು, ಸಂತ್ರಸ್ಥರಿಗೆ 78.70 ಕೋಟಿ ರೂ. ಪರಿಹಾರ ವಿತರಿಸಬೇಕಾಗಿರುತ್ತದೆ ಎಂದು ವಿವರಗಳನ್ನು ನೀಡಿದರು. ಒಟ್ಟು 1,33,867 ಎಕರೆ ಕ್ಷೇತ್ರ ಪೈಕಿ ಇದುವರೆಗೂ ಒಟ್ಟು 23,592 ಎಕರೆ ಜಮೀನು ಭೂಸ್ವಾಧೀನತೆಗೆ ಅವಾರ್ಡ್ ಮಾಡಲಾಗಿದೆ ಎಂದು ಪ್ತಶ್ನೋತ್ತರ ವೇಳೆಯಲ್ಲಿ ಸದನಕ್ಕೆ ತಿಳಿಸಿದರು.

ಎತ್ತಿನಹೊಳೆ: ಅಧಿವೇಶನ ಮುಗಿದ ತಕ್ಷಣ ಸಭೆ
ಹಾಸನ ಜಿಲ್ಲೆಯಲ್ಲಿ ಎತ್ತಿನಹೊಳೆ ಮತ್ತು ಹೇಮಾವತಿ ಯೋಜನೆಗಳಿಂದ ಬಾಧಿತವಾದ ಸಂತ್ರಸ್ಥರಿಗೆ ಭೂ ಸ್ವಾಧೀನ ಪ್ರಕ್ರಿಯೆ ಕಾಯಿದೆ ಅನ್ವಯ ಭೂ ಪರಿಹಾರಗಳನ್ನು ವಿತರಿಸಲಾಗುತ್ತಿದ್ದು, ಅಧಿವೇಶನ ಮುಗಿದ ತಕ್ಷಣ ಈ ಕುರಿತು ಆ ಭಾಗದ ಎಲ್ಲಾ ಶಾಸಕರು ಮತ್ತು ಪ್ರಮುಖರ ಸಭೆ ಆಯೋಜಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ವಿಧಾನ ಪರಿಷತ್ತಿನಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.


ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿಯವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡುತ್ತಾ ಈಗಾಗಲೇ ಅವಾರ್ಡ್ ರಚನೆಯಾಗಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರವನ್ನು ತಕ್ಷಣ ಪಾವತಿ ಮಾಡಲು ಜಿಲ್ಲಾಧಿಕಾರಿಗಳು ಮತ್ತು ಭೂಸ್ವಾಧೀನ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆಯೆಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ವ್ಯಾಪ್ತಿಯಲ್ಲಿ ಉಪನೋಂದಣಾಧಿಕಾರಿಗಳ ಮಾರ್ಗಸೂಚಿ ಬೆಲೆಯಂತೆ ಹಾಗೂ ಹೊಸ ಭೂಸ್ವಾಧೀನ ಕಾಯಿದೆ ಕಲಂ-26 ರಿಂದ 30ರ ವರೆಗಿನ ನಿರ್ದೇಶನದಂತೆ ಆಯಾಯ ಗ್ರಾಮಗಳಿಗೆ ನಿಗದಿಪಡಿಸಲಾದ ದರದಂತೆ ಪ್ರತಿ ಎಕರೆಗೆ ಕನಿಷ್ಠ ರೂ.16 ಲಕ್ಷ ರೂ. ಗಳಿಂದ ಗರಿಷ್ಠ 26 ಲಕ್ಷ ರೂ.ಗಳವರೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ದರ ನಿರ್ಧರಣಾ ಸಲಹಾ ಸಮಿತಿ ಸಭೆಯಲ್ಲಿ ದರ ನಿಗದಿಪಡಿಸಲಾಗಿರುತ್ತದೆ ಎಂದು ಸದನದಲ್ಲಿ ಸಚಿವರು ತಿಳಿಸಿದರು.

ಈವರೆಗೆ ಒಟ್ಟು 17.29 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಭೂ ಸಂತ್ರಸ್ಥರಿಗೆ 8.51 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. 8.78 ಕೋಟಿ ರೂ. ವಿಶೇಷ ಭೂಸ್ವಾಧೀನಾಧಿಕಾರಿಗಳು, ಹಾಸನ ರವರಲ್ಲಿ ಲಭ್ಯವಿದ್ದು, ನೋಂದಣಿ ಕಾರ್ಯ ಕೈಗೊಂಡು ದಾಖಲೆ ಸಲ್ಲಿಸಿದ ಭೂಮಾಲೀಕರಿಗೆ ಪರಿಹಾರ ಪಾವತಿಸಲು ಕ್ರಮವಹಿಸಲಾಗುತ್ತಿದೆ ಎಂದೂ ಸಹ ಸದನದಲ್ಲಿ ತಿಳಿಸಿದರು.

ಮಾಂಜ್ರಾ ಯೋಜನಾ ಪ್ರದೇಶಕ್ಕೆ ಭೇಟಿ:
ಬೀದರ್ ಜಿಲ್ಲೆಯ ಮಾಂಜ್ರಾ ಸರಣಿ ಬ್ಯಾರೇಜ್ ಗಳಲ್ಲಿ ಅಳವಡಿಸಿರುವ ಗೇಟುಗಳಿಂದ ಸಮಸ್ಯೆಯಾಗಿ ನೀರು ನಿಲ್ಲದಿರುವುದರ ಬಗ್ಗೆ ಪರಿಶೀಲಿಸಲು ಮತ್ತು ಅಗತ್ಯ ಕ್ರಮ ಕೈಗೊಳ್ಳಲು ಅಧಿವೇಶನದ ನಂತರ ಯೋಜನಾ ಪ್ರದೇಶಕ್ಕೆ ಭೇಟಿ ಕೊಟ್ಟು ಖುದ್ದು ಪರಿಶೀಲನೆ ನಡೆಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ವಿಧಾನಪರಿಷತ್ತಿನಲ್ಲಿ ತಿಳಿಸಿದರು.

ರಘುನಾಥ್ ರಾವ್ ಮಲಕಾಪೂರೆ ರವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು ಇದಕ್ಕೂ ಮೊದಲು ನೀರಾವರಿ ಕಾರ್ಯದರ್ಶಿ ಮತ್ತು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಸ್ಥಳಕ್ಕೆ ಕಳುಹಿಸಿ ವರದಿ ಪಡೆಯಲಾಗುವುದು. ಗೇಟುಗಳಲ್ಲಿ ತಾಂತ್ರಿಕ ದೋಷವೇನಾದರೂ ಆಗಿದ್ದಲ್ಲಿ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದರು.

ರಾಜ್ಯ ಶ್ರೇಷ್ಠ ನ್ಯಾಯಾಲಯದಲ್ಲಿ ಈ ಕುರಿತು ದಾಖಲಾಗಿದ್ದ ಪ್ರಕರಣವು ವಜಾ ಆಗಿದೆ. 04 ಬ್ಯಾರೇಜುಗಳಲ್ಲಿ 2016ರ ಸಾಲಿನಲ್ಲಿ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಮಾಂಜ್ರಾ ನದಿಯಲ್ಲಿ ಬೃಹತ್ ಪ್ರಮಾಣದ ಅಂದರೆ ಹೆಚ್.ಎಫ್.ಎಲ್ ಗಿಂತ 1.00 ಮೀ. ರಿಂದ 4.60 ಮೀ. ಎತ್ತರಕ್ಕೆ ಬಂದ ಪ್ರವಾಹದಿಂದ ಕೆಲವು ಗೇಟುಗಳು ಹಾನಿಗೊಳಗಾಗಿದ್ದು, ಅವುಗಳನ್ನು ಮೂಲ ಗುತ್ತಿಗೆದಾರರಿಂದ ನಿಗಮಕ್ಕೆ ಹೆಚ್ಚಿನ ಆರ್ಥಿಕ ಹೊರೆ ಆಗದಂತೆ ದುರಸ್ತಿಗೊಳಿಸಿ, 2017ನೇ ಸಾಲಿನಲ್ಲಿ ಗೇಟುಗಳನ್ನು ಸಮರ್ಪಕವಾಗಿ ಅಳವಡಿಸಿ, ನೀರು ಶೇಖರಣೆ ಮಾಡಲಾಗಿರುತ್ತದೆ ಎಂದು ಪರಿಷತ್ತಿನಲ್ಲಿ ಸಚಿವರು ತಿಳಿಸಿದರು.

ಕೊಡಗು ಪ್ರವಾಹ ಪ್ರದೇಶದಲ್ಲಿ ಸಂರಕ್ಷಣಾ ಸಾಧ್ಯತೆ ಪರಿಶೀಲನೆ:
ಕೊಡಗು ಜಿಲ್ಲೆಯಲ್ಲಿ ನದಿಗಳಲ್ಲಿ ಹೂಳು ತೆಗೆಯುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಹಾರಂಗಿ ಜಲಾನಯನ ಪ್ರದೇಶ ಹಾಗೂ ನದೀ ಪುನಶ್ಚೇತನ ರಕ್ಷಣಾ ಕಾಮಗಾರಿಯನ್ನು ಪ್ರಸಕ್ತ ಸಾಲಿನಲ್ಲಿಯೇ ಕೈಗೆತ್ತಿಕೊಳ್ಳಲಾಗುವುದೆಂದು ವಿಧಾನ ಪರಿಷತ್ತಿನಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ವೀಣಾ ಅಚ್ಚಯ್ಯರವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಪ್ರಮುಖವಾಗಿ ಕಾವೇರಿ ಮತ್ತು ಹಾರಂಗಿ ನದಿಗಳಿದ್ದು ಅವುಗಳಲ್ಲಿ ಕುಶಾಲನಗರದ ಬಳಿ ಕಾವೇರಿ ನದೀ ಪಾತ್ರದಲ್ಲಿ ಎರಡು ಸ್ಥಳಗಳಲ್ಲಿ 2020-21ರಲ್ಲಿ ಹೂಳು ತೆಗೆಯಲು ಕ್ರಮಕೈಗೊಳ್ಳಲಾಗಿದೆಯೆಂದು ಸಚಿವರು ವಿವರಿಸಿದರು.

ಉಪ ನದಿಗಳಲ್ಲೂ ಇಂತಹುದೇ ಕ್ರಮ ಕೈಗೊಳ್ಳಬೇಕೆಂದು ವೀಣಾ ಅಚ್ಚಯ್ಯರವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಉಪ ನದಿಗಳೂ ಸೇರಿದಂತೆ ಎಲ್ಲಾ ರಕ್ಷಣಾತ್ಮಕ ಕಾಮಗಾರಿಗಳ ಕುರಿತು ಏನೇನು ಸಾಧ್ಯತೆಗಳು ಇವೆ ಪರಿಶೀಲಿಸೋಣವೆಂದು ವಿವರಿಸಿದರು.

ಬಳ್ಳಾರಿ ಜಿಲ್ಲೆ
ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 17 ಕೆರೆಗಳಿಗೆ ನೀರು ತುಂಬಿಸುವ ವಿಸ್ತೃತ ಯೋಜನಾವರದಿ ಸಿದ್ದವಾಗಿದೆ. ಅದಕ್ಕೆ 300 ಕೋಟಿ ರೂ. ಹಣದ ಅವಶ್ಯಕತೆ ಇದೆ. ಇದಕ್ಕೆ ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ಕ್ರಮಕೈಗೊಳ್ಳಲಾಗುವುದೆಂದು ಸಚಿವರು ಕೆ.ಸಿಕೊಂಡಯ್ಯರವರ ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Govinda KarajolaNews in KannadaNews Kannadaಕೃಷ್ಣಾ ಮೇಲ್ದಂಡೆ‌ಬೆಂಗಳೂರು:ಸಚಿವ ಗೋವಿಂದ ಕಾರಜೋಳ
Share216Tweet123Send
Previous Post

ಶಿವಮೊಗ್ಗ: ನಿವೃತ್ತ ಇಂಜಿನಿಯರ್‌ಗಳಿಂದ ವಿಶ್ವೇಶ್ವರಯ್ಯ ಜಯಂತಿ ಆಚರಣೆ

Next Post

ನಿವಾಸಿಗಳಿಗೆ ತೊಂದರೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ನಿವಾಸಿಗಳಿಗೆ ತೊಂದರೆ ಹಿನ್ನೆಲೆ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL