Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದುಡಿಯುವ ವರ್ಗದಿಂದ ದೇಶದ ಆರ್ಥಿಕತೆ ಮುನ್ನಡೆ: ಮುಖ್ಯಮಂತ್ರಿ ಬೊಮ್ಮಾಯಿ

May 13, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಈ ದೇಶದ ಆರ್ಥಿಕತೆಯನ್ನು ಬಂಡವಾಳಶಾಹಿಗಳು ಮುನ್ನಡೆಸುತ್ತಿಲ್ಲ. ದುಡಿಯುವ ವರ್ಗ ದೇಶದ ಆರ್ಥಿಕತೆಯನ್ನು ಮುನ್ನಡೆಸುತ್ತಿದೆ. ಪಿರಾಮಿಡ್ ನ ತಳಹಂತದಲ್ಲಿರುವವರು ದೇಶವನ್ನು ನೈಜವಾಗಿ ಮುನ್ನಡೆಸುವವರು. ಅದಕ್ಕಾಗಿ ದುಡಿಯುವ ವರ್ಗಕ್ಕೆ ಅತಿ ಹೆಚ್ವಿನ ಕಾರ್ಯಕ್ರಮ ಹಾಗೂ ಅನುದಾನವನ್ನು ನನ್ನ ಸರ್ಕಾರ ಒದಗಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.

ಅವರು ಇಂದು Intellectual Forum – MAC, Karnataka, and National Intellectual Forum , MAC, ವಿಶಾಖಪಟ್ಟಣಂ, ಇವರ ವತಿಯಿಂದ ಆಯೋಜಿಸಿದ್ದ 4 ನೇ ವಿಶ್ವ ಮಾದಿಗ ದಿನಾಚರಣೆ ಹಾಗೂ ಮಾದಿಗ ಸಮುದಾಯದ ಚಿಂತಕರ ಮತ್ತು ಬುದ್ದಿಜೀವಿಗಳ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಷ್ಟಪಡುವ ಸಮುದಾಯಗಳಲ್ಲಿ ಬೆಳವಣಿಗೆ ತರುವ ಕೆಲಸ ಮಾಡುತ್ತಿದ್ದೇವೆ. ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಅವರಲ್ಲಿ ಬದಲಾವಣೆ ತರಲು ಸಾಧ್ಯ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಸೈದ್ಧಾಂತಿಕವಾಗಿ ಕಾರ್ಯಕ್ರಮ ಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.

Also read: ಬಿಜೆಪಿ ಸರ್ಕಾರದಿಂದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮಂಜೂರು

ಸಾಮಾಜಿಕ ವ್ಯವಸ್ಥೆ ಯಾವಾಗಲೂ ಯಥಾಸ್ಥಿತಿ ಕಾಪಾಡುವ ಪ್ರಯತ್ನ ಮಾಡುತ್ತದೆ. ಯಾವುದೇ ಬದಲಾವಣೆ ಆಗದಂತೆ ನೋಡಿಕೊಳ್ಳುವ ಹಿತಾಸಕ್ತಿ ವ್ಯವಸ್ಥೆ ಇದೆ. ಸ್ವಾತಂತ್ರ್ಯ ಪೂರ್ವದಲ್ಲಿ ಇದು ಪ್ರಬಲವಾಗಿತ್ತು. ಈ ವರ್ಗೀಕರಣದ ವ್ಯವಸ್ಥೆಯಲ್ಲಿ ಎಣಿ ಇರಲಿಲ್ಲ. ಕೆಳಗಿದ್ದವರಿಗೆ ಮೇಲಿರುವ ಅವಕಾಶಗಳಿರಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಸಂವಿಧಾನಕಾರರು ಇದನ್ನು ಗಮನಿಸಿ ಇದಕ್ಕೆ ಚಲನಾ ಶಕ್ತಿಯನ್ನು ನೀಡಲು ಸಂವಿಧಾನದಲ್ಲಿ ಹಲವಾರು ಅವಕಾಶಗಳನ್ನು ಕಲ್ಪಿಸಿದರು. ಈ ವರ್ಗಗಳೂ ಸಹ ಮಾನವನ ಸಹಜ ಗುಣವಾದ ಅಭಿವೃದ್ಧಿ ಹೊಂದಬೇಕು ಎಂದು ಸಂವಿಧಾನದ ಹಕ್ಕನ್ನು ನೀಡಲಾಗಿದೆ. ಸಂವಿಧಾನದ ಸದುದ್ದೇಶಗಳು ಎಷ್ಟರಮಟ್ಟಿಗೆ ಸಾಕಾರಗೊಳ್ಳುತ್ತದೆ ಎನ್ನುವುದು ಸಂವಿಧಾನವನ್ನು ಅನುಷ್ಠಾನ ಗೊಳಿಸುವವರ ಮೇಲೆ ಅವಲಂಬಿಸಿದೆ ಎಂದರು.

ಶ್ರೇಷ್ಠ ಸಂವಿಧಾನ:
ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ, ಎಲ್ಲಾ ರಂಗಗಳ ಆಗುಹೋಗುಗಳ ತಕ್ಕ ಹಾಗೆ ನಾವು ಅದನ್ನು ಬದಲಾವಣೆ ಮಾಡುವ ಕ್ರಿಯಾಶೀಲತೆ ಸಂವಿಧಾನದಲ್ಲಿದೆ ಎಂದರು.

ದುಡಿಯುವ ವರ್ಗದ ಭವಿಷ್ಯ ರೂಪಿಸಲು ವೇದಿಕೆ ಚಿಂತಿಸಬೇಕು:
ಜಾಗತೀಕರಣ,ಉದಾರೀಕರಣ, ಖಾಸಗೀಕರಣವಾದಾಗ ಮಾರುಕಟ್ಟೆ ನಿಯಂತ್ರಣದ ನೀತಿಗಳು ಅಸ್ತಿತ್ವಕ್ಕೆ ಬಂದಿತು. ಮಾರುಕಟ್ಟೆಯ ವ್ಯವಸ್ಥೆಯಲ್ಲಿ ಸಮಾನತೆ ಪಡೆಯಲು ಸಾಧ್ಯವಿಲ್ಲ. ಬಲಿಷ್ಠರು ಮಾತ್ರ ಅದರ ಲಾಭವನ್ನು ಪಡೆಯುತ್ತಾರೆ. ದಿನನಿತ್ಯ ದುಡಿಯುವ ದೊಡ್ಡ ವರ್ಗಕ್ಕೆ ಮಾರ್ಗದರ್ಶನ ಅಗತ್ಯವಿದೆ. ದುಡಿಯುವ ವರ್ಗದ ಭವಿಷ್ಯವನ್ನು ಯಾವ ರೀತಿ ರೂಪಿಸಬೇಕೆಂಬ ಚಿಂತನೆ ಮಾಡುವ ವೇದಿಕೆ ಅಗತ್ಯವಿತ್ತು . ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಗೆ ತಕ್ಕ ಹಾಗೆ ಸಮಾಜವನ್ನು ಸಿದ್ಧಪಡಿಸುವ ಕೆಲಸಕ್ಕೆ ಈ ವೇದಿಕೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮುಖ್ಯವಾಹಿನಿಗೆ ಬರಬೇಕು:
ಶಿಕ್ಷಣ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತಳ ಸಮುದಾಯ ಬರಬೇಕಾಗಿದೆ. ಅದರಿಂದ ನಿಮ್ಮ ಹಕ್ಕುಗಳ ಬಗ್ಗೆ ತಿಳಿಯುತ್ತದೆ, ಅವಕಾಶಗಳು ಸಿಗುತ್ತದೆ, ಉದ್ಯೋಗ ದೊರೆತು, ಸ್ವಾವಲಂಬನೆಯ , ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ. ಡಾ: ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರು ನಮಗೆಅ ದನ್ನು ತಿಳಿಸಿಕೊಟ್ಟಿರುವುದು. ಸಂವಿಧಾನದ ಮೂಲಕ ಸಮಾನ ಹಕ್ಕುಗಳನ್ನು ನೀಡಿದ ಮಹಾ ಚೇತನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತೊಂದೆಡೆ ದೇಶದಲ್ಲಿ ಅನ್ನಕ್ಕೆ ಕೊರತೆ ಉಂಟಾದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ಅನ್ನ ಕೊಟ್ಟು ದೇಶವನ್ನು ಸ್ವಾವಲಂಬಿ, ಸ್ವಾಭಿಮಾನಿ ದೇಶವನ್ನಾಗಿಸಿದ ಬಾಬು ಜಗಜೀವನ್ ರಾಮ್. ಇವರಿಗಿಂತ ದೊಡ್ಡ ಪ್ರೇರಣೆಯನ್ನು ಪಡೆಯಲು ಸಾಧ್ಯವಿಲ್ಲ ಎಂದರು. ಇವರಿಂದ ಪ್ರೇರಣೆಯನ್ನು ಪಡೆದಿದ್ದೇನೆ. ಅಂಥ ಒಂದು ಸಮುದಾಯಕ್ಕೆ ಸೇರಿರುವುದಕ್ಕೆ ಅಭಿಮಾನ ಪಡಬೇಕು ಎಂದರು.

ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು:
ಮಾಕ್ಯ್ -ಕರ್ನಾಟಕ ಶಾಖೆಯು ಮೆದುಳು, ಸಮಾಜದ ಗುರುಗಳು ಹೃದಯ ಉಳಿದವರು ಶಕ್ತಿ ಕೊಡುವ ಕೈಗಳು. ಇವೆಲ್ಲಾ ಒಂದಾಗಿ ಸಮಾಜದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು. ಹಲವಾರು ವರ್ಷಗಳ ಆಂತರಿಕ ಮೀಸಲಾತಿಯ ಬೇಡಿಕೆ ಇದೆ. ಈ ಈ ವೇದಿಕೆ ಸಮಾಜಕ್ಕೆ ಮೀಸಲಾತಿಯೂ ಸೇರಿದಂತೆ ಮುಂದಿನ ದಾರಿಯನ್ನು ತೋರಬೇಕು. ಯಾರಿಗೂ ಅನ್ಯಾಯವಾಗದಂತೆ ಯಾವ ರೀತಿ ಮಾಡಬಹುದು ಎನ್ನುವುದರ ಬಗ್ಗೆ ಮಾರ್ಗದರ್ಶನ ಮಾಡಿದರೆ ಸಾಮಾಜಿಕ ಸಾಮರಸ್ಯದಿಂದ ನ್ಯಾಯ ಕೊಡುವ ಕೆಲಸವನ್ನು ಮಾಡುತ್ತೇವೆ ಎಂದರು.

ಸರ್ಕಾರ ನಿಮ್ಮೊಂದಿಗಿದೆ:
ಶೈಕ್ಷಣಿಕವಾಗಿ ಔದ್ಯಮಿಕವಾಗಿ ಅವಕಾಶ ನೀಡಬೇಕೆನ್ನುವುದು ನನ್ನ ಗಮನದಲ್ಲಿದೆ. ಸರ್ಕಾರದ ಕಾರ್ಯಕ್ರಮಗಳಲ್ಲದೆ ಏನು ಮಾಡಬೇಕೆಂದು ಸಲಹೆ ನೀಡಿದರೆ ಅನುಷ್ಠಾನಕ್ಕೆ ಸಿದ್ದ. ಇದಕ್ಕೆ ನಮ್ಮ ಮನೆ ಮತ್ತು ಹೃದಯದ ಬಾಗಿಲುಗಳು ತೆರೆದಿದೆ. ಸರ್ಕಾರ ನಿಮ್ಮೊಂದಿಗಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಬಿಜೆಪಿ ಸರ್ಕಾರದಿಂದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮಂಜೂರು

Next Post

ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕುವೆಂಪು ವಿವಿ ಪ್ರಾಧ್ಯಾಪಕ ಪ್ರೊ.‌ ತಿಪ್ಪೇಸ್ವಾಮಿಗೆ ಆಹ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕುವೆಂಪು ವಿವಿ ಪ್ರಾಧ್ಯಾಪಕ ಪ್ರೊ.‌ ತಿಪ್ಪೇಸ್ವಾಮಿಗೆ ಆಹ್ವಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!