ಕಲ್ಪ ಮೀಡಿಯಾ ಹೌಸ್ | ಬೆಂಗಳೂರು ಕೊಡಿಗೆಹಳ್ಳಿ |
ಮೆಡಿಕವರ್ ಆಸ್ಪತ್ರೆಯು #Medicover Hospital ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ, ಹಾಗೂ ಬಸ್ ಚಾಲಕರಿಗೆ ಜೀವ ರಕ್ಷಣೆ ತರಬೇತಿಯನ್ನು #Life Saving Training ಯಶಸ್ವಿಯಾಗಿ ನಡೆಸಲಾಯಿತು.
ಮೆಡಿಕವರ್ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯಸ್ಥ ಡಾ. ಕುಶಾಲ್ ಅವರ ನೇತೃತ್ವದಲ್ಲಿ ನಡೆಸಲಾದ ಈ ತರಬೇತಿಯಲ್ಲಿ, CPR , First Aid, ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಜೀವ ಉಳಿಸುವ ತಂತ್ರಗಳನ್ನು ಮಕ್ಕಳಿಗೆ ಕಲಿಸಲಾಯಿತು. 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ ಈ ಕಾರ್ಯಕ್ರಮವು, ಪ್ರಾಯೋಗಿಕವಾಗಿ ನಡೆಯಿತು.
ಶಾಲೆಯ ವೈಸ್ ಪ್ರಿನ್ಸಿಪಾಲ್ ಕವಿತಾ ಅವರು ಮಾತನಾಡಿ, ಈ ರೀತಿಯ ತರಬೇತಿ ಶಾಲಾ ಮಕ್ಕಳಿಗೆ ಹಾಗೂ ಸಿಬ್ಬಂದಿಗೆ ತುರ್ತು ಸಮಯದಲ್ಲಿ ಆತ್ಮವಿಶ್ವಾಸದಿಂದ ನಿಲ್ಲಲು ಸಹಾಯಮಾಡುತ್ತದೆ ಎಂದು ಮೆಡಿಕವರ್ ಆಸ್ಪತ್ರೆಯ ಈ ಪ್ರಚೋದನೆಗೆ ಕೃತಜ್ಞತೆ ಸಲ್ಲಿಸಿದರು.
ಈ ತರಬೇತಿಗಳು ಸಮುದಾಯದ ವೈದ್ಯಕೀಯ ತುರ್ತು ಪರಿಸ್ಥಿತಿಗಳ ವಿರುದ್ಧ ಸಮರ್ಪಕ ಪ್ರತಿಕ್ರಿಯೆ ನೀಡಲು ಸಜ್ಜು ಮಾಡುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post