ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಮಡಿಕೇರಿ |
ರಾಜ್ಯದ ಹಲವಡೆ ಮಳೆ ಬಿರುಸುಗೊಂಡಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯಲ್ಲೂ ಸಹ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೊಡಗು ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಧಾರಾಕಾರ ಮಳೆಯುತ್ತಿದ್ದು, #Heavy Rain ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬ್ರಹ್ಮಗಿರಿ ತಪ್ಪಲಿನಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪವಿತ್ರ ಕ್ಷೇತ್ರ ಭಾಗಮಂಡಲದ ತ್ರಿವೇಣಿ ಸಂಗಮ #Thriveni Sangama ತುಂಬಿತುಳುಕುತ್ತಿದೆ. ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ಹೀಗಿ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ.
Also read: ಒಳ ಹರಿವು ಹೆಚ್ಚಳ | ಗಾಜನೂರು ಡ್ಯಾಂನಿಂದ ತುಂಗಾ ನದಿಗೆ ನೀರು ಬಿಡುಗಡೆ | ಎಷ್ಟು ಕ್ಯೂಸೆಕ್ಸ್ ಹರಿವು?
ಕೊಡಗು ಜಿಲ್ಲೆಯಲ್ಲಿ ಹಲವೆಡೆ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಅಮ್ಮತ್ತಿ ಗ್ರಾಮದಲ್ಲಿ ಮರ ಉರುಳಿ ಬಿದ್ದು ಕಾರು ಜಖಂಗೊಂಡಿದೆ. ಮರ ಬಿದ್ದಿದ್ದರಿಂದ ವಿದ್ಯುತ್ ಕಂಬ ಕೂಡ ತುಂಡಾಗಿ ಬಿದ್ದು ಕಾರು ಜಖಂಗೊಂಡಿದೆ.
ಜೂನ್ 30ರವರೆಗೂ ರಾಜ್ಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಇದರಂತೆಯೇ ಈಗ ಮಳೆ ಧಾರಾಕಾರ ಸುರಿಯುತ್ತಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ವರುಣದೇವ ಅಬ್ಬರಿಸಿದ್ದು, ಧಾರಾಕಾರ ಮಳೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















