ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಧ್ವನವಮಿ ನಿಮಿತ್ತ ಇಂದು ಬೆಂಗಳೂರಿನ ವಿದ್ಯಾರಣ್ಯಪುರದ ಗುರುರಾಯರ ಮಠದಲ್ಲಿ ಮಧ್ವೇಶಾನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಆಚಾರ್ಯರ ಸಮ್ಮುಖದಲ್ಲಿ ಧಾರ್ಮಿಕ ಚಿಂತಕರು ಮತ್ತು ಆಧ್ಯಾತ್ಮಿಕ ಅಂಕಣಕಾರರಾದ ಡಾ. ಗುರುರಾಜ ಪೋಶಟ್ಟಿಹಳ್ಳಿ ಅವರು ಹಿರಿಯ ಪತ್ರಕರ್ತ ಹನುಮೇಶ್ ಕೃ ಯಾವಗಲ್ ಅವರಿಗೆ ಮಧ್ವೇಶಾನುಗ್ರಹ ಪ್ರಶಸ್ತಿ ನೀಡಿ, ಸನ್ಮಾನಿಸಿದರು.
ಗ್ಲೋಬಲ್ ಮಧ್ವಮತ ವೆಲ್ಫೇರ್ ಅಸೋಸಿಯೇಷನ್ ನ ಸಂಸ್ಥಾಪಕ ಅಧ್ಯಕ್ಷ ವೆಂಕೋಬರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















