No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Wednesday, May 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಯಾವುದೇ ತಾರತಮ್ಯ, ಹಸ್ತಕ್ಷೇಪ ಇಲ್ಲದೇ ಅತಿ ಸಣ್ಣ ಗುತ್ತಿಗೆದಾರರಿಗೂ ಹಣ ಬಿಡುಗಡೆ: ಸಚಿವ ಭೋಸರಾಜು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 19, 2025
in ಬೆಂಗಳೂರು ನಗರ
0
ಯಾವುದೇ ತಾರತಮ್ಯ, ಹಸ್ತಕ್ಷೇಪ ಇಲ್ಲದೇ ಅತಿ ಸಣ್ಣ ಗುತ್ತಿಗೆದಾರರಿಗೂ ಹಣ ಬಿಡುಗಡೆ: ಸಚಿವ ಭೋಸರಾಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್

ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ/ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ತಾರತಮ್ಯ ಹಾಗೂ ಹಸ್ತಕ್ಷೇಪ ಹೇಗೆ ಸಾಧ್ಯ? ಈ ನಿಟ್ಟಿನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆಧಾರ ರಹಿತ ಆರೋಪ ಮಾಡಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ, ರಾಜ್ಯ ಗುತ್ತಿಗೆದಾರರಲ್ಲಿ ಉಂಟಾಗಿದ್ದ ಗೊಂದಲಗಳನ್ನು ಪರಿಹರಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.

ಗುರುವಾರ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.
2023 – 24 ನೇ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾದ ಅನುದಾನದ ವಿವರ:

2023-24 ನೇ ಆರ್ಥಿಕ ವರ್ಷದಲ್ಲಿ ನಾವು ಬಿಜೆಪಿ ಸರಕಾರ, ಹಣಕಾಸಿನ ಲಭ್ಯತೆ ಇಲ್ಲದೇ ಇದ್ದರೂ ಪ್ರಾರಂಭಿಸಿದ್ದ, 12,693 ಕೋಟಿ ರೂಪಾಯಿ ಮೌಲ್ಯದ 15,549 ಕಾಮಾಗಾರಿಗಳನ್ನು ಮುಂದುವರೆಸಿದ್ದೇವೆ. ಈ ವರ್ಷದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸದೆ, ಹಳೆಯ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದೇವೆ.

ಬಿಜೆಪಿ ಸರಕಾರ ಬಿಟ್ಟು ಹೋಗಿದ್ದ ಅಗಾಧ ಪ್ರಮಾಣದ ಕಾಮಗಾರಿಗಳನ್ನು ನಿಭಾಯಿಸಲು ಹಾಗೂ ಹಣಕಾಸಿನ ಲಭ್ಯತೆ ಇಲ್ಲದೇ ತೊಂದರೆ ಅನುಭವಿಸುತ್ತಿದ್ದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮಾಡಿಕೊಂಡ ಮನವಿಯ ಮೇರೆಗೆ ನಮ್ಮ ಇಲಾಖೆಗೆ ಹೆಚ್ಚಿನ ಅನುದಾನ ಮಂಜೂರು ಮಾಡಲಾಯಿತು.

ಹಿಂದಿನ ಸರಕಾರ ಹಣಕಾಸಿನ ಲಭ್ಯತೆಯನ್ನು ತೋರಿಸದೇ, ಅವೈಜ್ಞಾನಿಕವಾಗಿ ಅನುಮತಿ ನೀಡಲಾಗಿದ್ದ ಕಾಮಗಾರಿಗಳನ್ನು ಮುಂದುವರೆಸಲು ಹಾಗೂ ತೊಂದರೆಯಲ್ಲಿದ್ದ ಗುತ್ತಿಗೆದಾರರನ್ನು ಕಾಪಾಡುವ ನಿಟ್ಟಿನಲ್ಲಿ 2000 ಗುತ್ತಿಗೆದಾರರಲ್ಲಿ, 639 ಗುತ್ತಿಗೆದಾರರಿಗೆ ಬಾಕಿ ಇದ್ದ ಸಂಪೂರ್ಣ ಹಣವನ್ನು ಬಿಡುಗೆಡೆ ಮಾಡಲಾಗಿದೆ. ಉಳಿದ 1361 ಗುತ್ತಿಗೆದಾರರಿಗೆ ಭಾಗಶಃ ಹಣವನ್ನು ಬಿಡುಗಡೆ ಮಾಡಲಾಗಿದೆ.

ಪ್ರತಿಯೊಬ್ಬ ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ತಾರತಮ್ಯ ಹಾಗೂ ಹಸ್ತಕ್ಷೇಪದ ಪ್ರಶ್ನೆ ಎಲ್ಲಿಂದ ಸಾಧ್ಯ ಎನ್ನುವುದರ ಬಗ್ಗೆ ಗುತ್ತಿಗೆದಾರರನ್ನು ಪ್ರಶ್ನಿಸಿದ್ದಾಗಿ ಸಚಿವರು ತಿಳಿಸಿದರು.
2024-25 ನೇ ಆರ್ಥಿಕ ವರ್ಷದಲ್ಲಿ ಅನುದಾನ ಬಿಡುಗಡೆ:

2024-25 ನೇ ಆರ್ಥಿಕ ವರ್ಷದಲ್ಲಿ 9,974.34 ಕೋಟಿ ರೂಪಾಯಿ ಮೌಲ್ಯದ 13,913 ಸ್ಪಿಲ್ ಓವರ್ (ಮುಂದುವರೆದ) ಕಾಮಗಾರಿಗಳು ಚಾಲ್ತಿಯಲ್ಲಿದ್ದವು. ಕಾಮಗಾರಿಗಳ ಅಗಾಧದತೆ ಹಾಗೂ ಗುತ್ತಿಗೆದಾರರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚುವರಿ ಅನುದಾನ ಮಂಜೂರಾಯಿತು.

ಫೆಬ್ರವರಿ 2025 ಕ್ಕೆ ಬಾಕಿಯಿದ್ದ ಬಿಲ್ ಹಣ 3,352.06 ಕೋಟಿ ರೂಪಾಯಿಗಳು. ಒಟ್ಟಾರೆಯಾಗಿ ಕೈಗೊಳ್ಳಲಾಗಿದ್ದ ಕಾಮಗಾರಿಗಳು 3,176 ಇದರಲ್ಲಿ 267 ಗುತ್ತಿಗೆದಾರರಿಗೆ ಬಾಕಿಯಿದ್ದ ಸಂಪೂರ್ಣ ಹಣವನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲಾಯಿತು.

ಲಭ್ಯವಿದ್ದ ಅನುದಾನದಲ್ಲಿ 2,909 ಕಾಮಾಗಾರಿಗಳಿಗೆ ಭಾಗಶಃ ಹಣ ಬಿಡುಗಡೆ ಮಾಡಲಾಗಿದೆ. ಒಟ್ಟಾರೆಯಾಗಿ 3,176 ಕಾಮಗಾರಿಗಳಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ.

http://kalpa.news/wp-content/uploads/2025/03/PES-Video.mp4

ಮಾರ್ಚ್ 2025 ರಲ್ಲಿ ಬಿಡುಗಡೆಯಾದ ಹಣಕಾಸಿನ ವಿವರ:

ಒಟ್ಟಾರೆಯಾಗಿ 2637 (211 ಗುತ್ತಿಗೆದಾರರು ಹಾಗೂ 2426 ಕಾಮಗಾರಿ) ಕೆಲಸಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ 660 (603 ಕಾಮಗಾರಿ ಹಾಗೂ 57 ಗುತ್ತಿಗೆದಾರರಿಗೆ) ಬಾಕಿಯಿದ್ದ ಸಂಪೂರ್ಣ ಹಣವನ್ನು ಬಿಡುಗಡೆ ಮಾಡಲಾಗಿದೆ. 1977 (1823 ಕಾಮಗಾರಿ ಹಾಗೂ 154 ಗುತ್ತಿಗೆದಾರರಿಗೆ) ಭಾಗಶಃ ಹಣ ಬಿಡುಗಡೆ ಮಾಡಲಾಗಿದೆ. 2637 ಕಾಮಾಗಾರಿಗಳಿಗೂ ಹಣ ಬಿಡುಗಡೆ ಮಾಡಲಾಗಿದೆ.

ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಹೆಚ್ಚಿನ ಆದ್ಯತೆ:

ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹೆಚ್ಚಾಗಿ ಕಾಮಗಾರಿಗಳನ್ನ ಕೈಗೊಳ್ಳುವಂತಹ ಎಂಓಟಿ (ಕೆರೆಗಳ ಅಧುನಿಕರಣ) ಮತ್ತು ಏಪಿಬಿ (ಅಣೆಕಟ್ಟು ಪಿಕ್ಅಪ್) ಯ ಹೆಡ್ ಆಫ್ ಅಕೌಂಟ್ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಎಂಓಟಿ (ಕೆರೆಗಳ ಅಧುನಿಕರಣ) ಲೆಕ್ಕಶೀರ್ಷಿಕೆಗೆ ಆಯವ್ಯದಲ್ಲಿ ಹಂಚಿಕೆ ಮಾಡಲಾದ ಹಣ 100 ಕೋಟಿ ರೂಪಾಯಿಗಳು ಹೆಚ್ಚುವರಿಯಾಗಿ 210 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಲಾಗಿದೆ.

ಏಪಿಬಿ (ಅಣೆಕಟ್ಟು ಪಿಕ್ಅಪ್) ಲೆಕ್ಕಶೀರ್ಷಿಕೆಗೆ ಆಯವ್ಯಯದಲ್ಲಿ ಹಂಚಿಕೆ ಮಾಡಲಾದ ಹಣ 120 ಕೋಟಿ ರೂಪಾಯಿಗಳು ಹೆಚ್ಚುವರಿಯಾಗಿ 335 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಲಾಗಿದೆ.

ಎಲ್ಐಎಸ್ – ಏತನೀರಾವರಿ ಲೆಕ್ಕಶೀರ್ಷಿಕೆಗೆ ಆಯವ್ಯಯದಲ್ಲಿ 650 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 252.50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.

ಪಶ್ಚಿಮವಾಹಿನಿ ಲೆಕ್ಕಶೀರ್ಷಿಕೆಗೆ ಆಯವ್ಯಯದಲ್ಲಿ 100 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.

ಇದನ್ನ ಗಮನಿಸಿದರೆ, ಸಣ್ಣ ಹಾಗೂ ಮಧ್ಯಮ ಗುತ್ತಿಗೆದಾರರು ಹೆಚ್ಚಾಗಿರುವಂತಹ ಲೆಕ್ಕಶೀರ್ಷಿಕೆಗಳಿಗೆ ಹೆಚ್ಚುವರಿಯಾಗಿ ಲಭ್ಯವಾದ ಹಣದಲ್ಲಿ ಶೇಕಡಾ 55 ಕ್ಕೂ ಹೆಚ್ಚು ಭಾಗವನ್ನು ಮೀಸಲಿಡಲಾಗಿದೆ.

ಅಲ್ಲದೇ, ಎಂಓಟಿ (ಕೆರೆಗಳ ಆಧುನೀಕರಣ) ಲೆಕ್ಕಶೀರ್ಷಿಕೆಯಲ್ಲಿ ಇರುವ ಎಲ್ಲಾ ಕಾಮಗಾರಿಗಳ/ಗುತ್ತಿಗೆದಾರರಿಗೆ ಡಿಸೆಂಬರ್ ಮತ್ತು ಮಾರ್ಚ್ ತಿಂಗಳಲ್ಲಿ ಒಟ್ಟಾರೆಯಾಗಿ ಶೇಕಡಾ 25 ರಷ್ಟು, ಏಪಿಬಿ – ಅಣೆಕಟ್ಟು ಪಿಕಪ್ ಲೆಕ್ಕಶೀರ್ಷಿಕೆಯಲ್ಲಿ ಇರುವ ಎಲ್ಲಾ ಕಾಮಗಾರಿಗಳ/ಗುತ್ತಿಗೆದಾರರಿಗೆ ಡಿಸೇಂಬರ್ ಮತ್ತು ಮಾರ್ಚ್ ತಿಂಗಳಲ್ಲಿ ಶೇಡಕಾ 31 ರಷ್ಟು, ಎಸ್ಸಿಪಿ, ಟಿಎಸ್ಪಿ ಹಾಗೂ ನಬಾರ್ಡ್ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವಂತಹ ಕಾಮಗಾರಿಗಳ ಬಾಕಿ ಬಿಲ್ಲಿನ ಶೇಕಡಾ 100 ರಷ್ಟು ಹಣವನ್ನು ನೀಡಲಾಗಿದೆ.

ನಮ್ಮ ಇಲಾಖೆಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿರುವಂತಹ ಎಲ್ಲಾ ಅಂದರೆ ಶೇಕಡಾ 100 ರಷ್ಟು ಕಾಮಗಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಯಾವುದೇ ಒಬ್ಬ ಗುತ್ತಿಗೆದಾರರು/ಕಾಮಗಾರಿಗೆ ಹಣ ಬಿಡುಗಡೆ ಆಗಿಲ್ಲ ಎನ್ನುವುದನ್ನ ತೋರಿಸಲಿ ಎಂದು ಸಚಿವರು ಸವಾಲ್ ಹಾಕಿದರು.

ನಮ್ಮ ಇಲಾಖೆಯಲ್ಲಿ ಹಸ್ತಕ್ಷೇಪದ ಸಾಧ್ಯತೆಯೇ ಇಲ್ಲ. ಕಾಮಗಾರಿಗಳು ಸಕಾಲದಲ್ಲಿ ಮುಗಿಯಬೇಕು ಹಾಗೂ ಗುತ್ತಿಗೆದಾರರು ಗುಣಮಟ್ಟದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎನ್ನುವ ಉದ್ದೇಶದಿಂದ ನಾವು ಅನುದಾನದ ಲಭ್ಯತೆಯನ್ನು ನೋಡಿಕೊಂಡು ಹಣ ಬಿಡುಗಡೆ ಮಾಡುತ್ತಿದ್ದೇವೆ.

ಬಾಕಿ ಇರುವ ಎಲ್ಲಾ ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಜೇಷ್ಠತೆಯ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಜೇಷ್ಠತೆಯ ಆಧಾರದಲ್ಲಿ ಹಣ ಬಿಡುಗಡೆ ಮಾಡಿದ್ದಲ್ಲಿ ಇದುವರೆಗೂ ಲಭ್ಯವಾದಂತಹ ಹಣಕಾಸಿನ ಲಭ್ಯತೆಯಲ್ಲಿ ಕೇವಲ ಕೆಲವೇ ಗುತ್ತಿಗೆದಾರರು/ಕಾಮಗಾರಿಗೆ ಮಾತ್ರ ಹಣ ನೀಡಲು ಸಾಧ್ಯವಾಗುತ್ತಿತ್ತು. ಯಾವುದೇ ತಾರತಮ್ಯ ವಿಲ್ಲದೇ ಪಾರದರ್ಶಕತೆಯಿಂದ, ನಮ್ಮನ್ನು ಭೇಟಿಯಾದ ಹಾಗೂ ಭೇಟಿಯಾಗದೇ ಇರುವಂತಹ ಎಲ್ಲಾ ಗುತ್ತಿಗೆದಾರರಿಗೂ ಸಮಾನವಾಗಿ ಹಣ ಬಿಡುಗಡೆ ಆಗಿದೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಅಂತಹ ಘಟನೆಗಳು ಇದ್ದಲ್ಲಿ ಸಕ್ಷಮ ಪ್ರಾಧಿಕಾರದಲ್ಲಿ ದೂರು ಸಲ್ಲಿಸುವಂತೆಯೂ ತಿಳಿಸಲಾಗಿದೆ ಎಂದರು.

ನಿನ್ನೆ ನಡೆದ ಸಭೆಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಲ್ಲಿ ಇದ್ದಂತಹ ಎಲ್ಲಾ ಗೊಂದಲಗಳನ್ನು ನಿವಾರಿಸಲಾಗಿದೆ. ಜೇಷ್ಠತೆ ಆಧಾರದಲ್ಲಿ ಬಾಕಿ ಇರುವಂತಹ ಎಲ್ಲಾ ಬಿಲ್ ಗಳನ್ನು ಪಾವತಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿಕೊಂಡರು. ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಟೆಂಡರ್‌ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮನವಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಲಾಗಿದೆ.

ನನ್ನ ಇಲಾಖೆಯಲ್ಲಿ ಯಾರದ್ದೂ ಹಸ್ತಕ್ಷೇಪ ಇಲ್ಲ, ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರ ಹಿತರಕ್ಷಣೆಯ ಜೊತೆಯಲ್ಲಿಯೇ ಕಾಮಗಾರಿಗಳು ಸುಗಮವಾಗಿ ಮುಂದುವರೆಯುಂತಹ ಕ್ರಮಗಳನ್ನು ಅಳವಡಿಸಿಕೊಂಡಿದ್ದೇವೆ. ಇದರ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಗುತ್ತಿಗೆದಾರರು ಈ ಸಣ್ಣ ನೀರಾವರಿ ಇಲಾಖೆಯಲ್ಲಿ ಹಣಕಾಸಿನ ಬಿಡುಗಡೆಯ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಸಹಮತಿ ವ್ಯಕ್ತಪಡಿಸಿದ್ದಾರೆ. ಮಾಹಿತಿ ಇಲ್ಲದೇ ಅನಗತ್ಯ ಹೇಳಿಕೆ ನೀಡುವ ಮೂಲಕ ಗೊಂದಲ ಉಂಟುಮಾಡುವುದನ್ನು ಕೈಬಿಡುವಂತೆಯೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿಗಳಾದ ರಾಘವನ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಬೀದರ್ ಪತ್ರಕರ್ತನ ಮೇಲೆ ಹಲ್ಲೆ | ಅರಣ್ಯ ಸಿಬ್ಬಂದಿ ಅಮಾನತ್ತು | ಸಚಿವರ ಕ್ರಮಕ್ಕೆ ಕೆಯುಡಬ್ಲ್ಯೂಜೆ ಸ್ವಾಗತ

Next Post

ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ರಾಘವೇಶ್ವರ ಶ್ರೀ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ರಾಘವೇಶ್ವರ ಶ್ರೀ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL