ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಜೆಪಿ ಕಾರ್ಯಕರ್ತ ಪವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯಸರ್ಕಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಪ್ರವೀಣ್ ಹತ್ಯೆ Praveen murder ಪ್ರಕರಣದಲ್ಲಿ ಕರ್ನಾಟಕ ಹಾಗೂ ಕೇರಳ ರಾಜ್ಯಗಳ ದುಷ್ಕರ್ಮಿಗಳ ಕೈವಾಡ ಇರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಲು ನಿರ್ಧರಿಸಿದ್ಧೇವೆ. ಮುಂದಿನ ತನಿಖೆಯನ್ನು ಅವರೇ ನಡೆಸಲಿದ್ದಾರೆ ಎಂದರು.

ಇನ್ನು ಶೀಘ್ರದಲ್ಲೇ ಎಲ್ಲಾ ಧಾರ್ಮಿಕ ಮುಖಂಡರ ಸಭೆ ಕರೆಯಲಿದ್ದು, ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಚರ್ಚಿಸಲಾಗುವುದು ಎಂದರು.









Discussion about this post