ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಉತ್ತರ ರಾಜಾಜಿನಗರ ಬ್ರಾಹ್ಮಣ ಸಭೆಯ #North Rajajinagar Brahmin Sabha ಸಂಸ್ಥಾಪನ ದಿನಾಚರಣೆಯ ಅಂಗವಾಗಿ ನಗರದ ಸುಬ್ರಹ್ಮಣ್ಯ ನಗರದ ಶ್ರೀ ಬಾಲಾಜಿ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು #Pratibha Puraskara and scholarship ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಿಸಲಾಯಿತು. ನ್ಯಾಷನಲ್ ಹೈಸ್ಕೂಲು ಗಣಿತ ಶಿಕ್ಷಕ ಎಸ್. ನಾಗರಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತವಚನ ನೀಡಿ, ಪರಿಶ್ರಮ, ಶಿಸ್ತು ಮತ್ತು ಗುರಿಯೊಂದಿಗೆ ಶಿಕ್ಷಣವನ್ನು ಮುಂದುವರಿಸುವಂತೆ ಸಲಹೆ ನೀಡಿದರು.
ಸಭೆಯ ನಡೆದು ಬಂದ ದಾರಿಯ ಕುರಿತು ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಮಾಜಿ ಕಾರ್ಯದರ್ಶಿ ಹೆಚ್.ಪಿ. ಸುಬ್ರಮಣ್ಯ ಮಾತನಾಡಿದರು. ಉತ್ತರ ರಾಜಾಜಿನಗರ ಬ್ರಾಹ್ಮಣ ಸಭೆಯ ಅಧ್ಯಕ್ಷ ಎಸ್.ಬಿ. ರಾಜೇಶ್, ಕಾರ್ಯದರ್ಶಿ ಭಾನುಪ್ರಕಾಶ್ ಹೆಚ್.ಪಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
