Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಿ.14ರಂದು ಏಕ ಕಾಲಕ್ಕೆ ರಾಜ್ಯದ ವಿವಿಧೆಡೆ 114 ನಮ್ಮ ಕ್ಲಿನಿಕ್‌ಗಳು ಲೋಕಾರ್ಪಣೆ: ಸಚಿವ ಸುಧಾಕರ್‌

December 13, 2022
in ಬೆಂಗಳೂರು ನಗರ
0 0
0
File image

File image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳು ಡಿಸೆಂಬರ್‌ 14 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಾರ್ಪಣೆಯಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Minister Sudhakar ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್‌ಗಳು ಏಕ ಕಾಲಕ್ಕೆ, ಏಕ ಸಮಯದಲ್ಲಿ ಲೋಕಾರ್ಪಣೆಯಾಗಲಿದೆ. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಕಾರ್ಯಚರಣೆ ಮಾಡಲಿದ್ದು, ಜನವರಿ ಎರಡನೇ ವಾರದೊಳಗೆ ಇವುಗಳು ಜನ ಸೇವೆಗೆ ಲಭ್ಯವಾಗುವಂತೆ ಕೆಲಸ ನಡೆಯುತ್ತಿದ್ದು, ಕನಿಷ್ಠ 150 ಕ್ಲಿನಿಕ್‌ಗಳು ಜನರ ಸೇವೆಗೆ ಲಭ್ಯವಿರುವುದು ಖಚಿತ. ಈ ಕ್ಲಿನಿಕ್‌ಗಳಿಂದ ದುರ್ಬಲ ವರ್ಗದವರಿಗೆ, ಶ್ರಮಕರಿಗೆ, ಕೂಲಿ ಕಾರ್ಮಿಕರಿಗೆ ಸೇರಿದಂತೆ ಹಲವರಿಗೆ ಆರೋಗ್ಯ ಸೇವೆ ಸಿಗಲಿದೆ. 10 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿದೆ ಎಂದು ಹೇಳಿದರು.

ನಮ್ಮ ಕ್ಲಿನಿಕ್‌ಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯ ಇರಲಿದೆ. ತಲಾ ಒಬ್ಬ ವೈದ್ಯಾಧಿಕಾರಿ, ನರ್ಸಿಂಗ್‌ ಸ್ಟಾಫ್‌, ಲ್ಯಾಬ್‌ ಟೆಕ್ನಿಷಿಯನ್‌, ಡಿ ದರ್ಜೆ ನೌಕರರು ಇಲ್ಲಿ ಇರಲಿದ್ದಾರೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರಯದವರಿಗೆ ಸೇವೆಗಳು, ಸಾರ್ವತ್ರಿಕ ಲಸಿಕಾಕರಣದ ಸೇವೆಗಳು, ಕುಟುಂಬ ಕಲ್ಯಾಣ ಗರ್ಭ ನಿರೋಧಕ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಕಾಯಿಲೆಗಳಿಗೆ ಸೇವೆ, ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ , ಸಕ್ಕರೆ ಕಾಯಿಲೆ, ದೀರ್ಘಾವಧಿ ಕಾಯಿಲೆಗಳು, ಬಾಯಿ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್‌, ಬಾಯಿಯ ಆರೋಗ್ಯ ಸಮಸ್ಯೆಗಳು ಮತ್ತು ಸೇವೆಗಳು, ಕಣ್ಣಿನ ತಪಾಸಣೆ, ಮೆಂಟಲ್‌ ಹೆಲ್ತ್‌ಗೆ ಸಂಬಂಧಿಸಿದ ಮೂಲಭೂತ ಸೇವೆಗಳು ಸೇರಿದಂತೆ ಬೇರೆ ಆಸ್ಪತ್ರೆಗಳಿಗೆ ರೆಫರಲ್‌ ಸೇವೆಗಳು ಇಲ್ಲಿ ಲಭ್ಯವಾಗಲಿದೆ ಎಂದರು.
ವೃದ್ಧಾಪ್ಯ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಔಷಧಗಳು ಸಂಪೂರ್ಣ ಉಚಿತವಾಗಿರಲಿದೆ. 14 ಪ್ರಯೋಗ ಶಾಲಾ ಪರೀಕ್ಷೆಗಳು ಇಲ್ಲಿ ಲಭ್ಯವಿದ್ದು ಟೆಲಿ ಕನ್ಸಲ್ಟೇಷನ್‌ ಸರ್ವೀಸಸ್‌, ಕ್ಷೇಮ ಚಟುವಟಿಕೆಗಳು ಕೂಡ ಉಚಿತವಾಗಿವೆ. ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 9 ರಿಂದ ಸಂಜೆ 4.30ರ ತನಕ ಈ ಸೇವೆ ಲಭ್ಯವಿದ್ದು ಭಾನುವಾರ ರಜೆ ಇರಲಿದೆ. ಬಡಾವಣೆಯ ವ್ಯಾಪ್ತಿಯಲ್ಲಿ ಈ ಕ್ಲಿನಿಕ್‌ಗಳು ತಲೆ ಎತ್ತುವುದರಿಂದ ಸುಲಭವಾಗಿ ಆರೋಗ್ಯ ಸೇವೆ ಸಿಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಮಯದಲ್ಲಿ 100ಕ್ಕೂ ಹೆಚ್ಚು ಕ್ಲಿನಿಕ್‌ಗಳು ಉದ್ಘಾಟನೆ ಆಗುತ್ತಿರುವುದು ಸಾರ್ವಕಾಲಿಕ ದಾಖಲೆಯಾಗಲಿದೆ ಎಂದರು.

Also read: ವಿಶ್ವಾಸ, ಶ್ರದ್ದೆಯಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಒಟ್ಟು 150 ಕೋಟಿ ರೂಪಾಯಿ ಮೊತ್ತದ ಯೋಜನೆ ಇದಾಗಿದ್ದು ಬಹುತೇಕ ಕ್ಲಿನಿಕ್‌ಗಳು ಸರ್ಕಾರಿ ಕಟ್ಟಡಗಳಲ್ಲೇ ಕಾರ್ಯ ಆರಂಭಿಸಲಿದೆ. ಈಗಾಗಲೇ 300 ವೈದ್ಯರ ನೇಮಕವಾಗಿದ್ದು, ಕೆಲವೆಡೆ ವೈದ್ಯರ ಕೊರತೆ ಇದೆ. ಅಂತಹ ಕಡೆ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ 80-100 ವೈದ್ಯರನ್ನು ಅಲ್ಲಿಗೆ ನೇಮಿಸಲಾಗಿದೆ ಎಂದು ತಿಳಿಸಿದರು.
ಎಲ್ಲಿ, ಎಷ್ಟು ಕ್ಲಿನಿಕ್‌ಗಳು?
ಬಾಗಲಕೋಟೆ 18, ಬಳ್ಳಾರಿ 11, ವಿಜಯನಗರ 6, ಬೆಳಗಾವಿ 21, ಬೆಂಗಳೂರು ಗ್ರಾಮಾಂತರ 9, ಬೀದರ್‌ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ದಾವಣಗೆರೆ 1, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರ್ಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3, ಬಿಬಿಎಂಪಿ ವ್ಯಾಪ್ತಿಯಲ್ಲಿ 243

ಝಿಕಾ ವೈರಸ್‌:
ಪುಣೆ ಲ್ಯಾಬ್‌ ರಿಪೋರ್ಟ್‌ ಪ್ರಕಾರ ರಾಜ್ಯದಲ್ಲಿ 5 ವರ್ಷದ ಒಂದು ಹೆಣ್ಣು ಮಗುವಿಗೆ ಝಿಕಾ ವೈರಸ್‌ ಇರುವುದು ಖಚಿತವಾಗಿದ್ದು, ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ರಾಜ್ಯದಲ್ಲಿ ಇದು ಮೊದಲ ಪ್ರಕರಣವಾಗಿದ್ದು ಸರ್ಕಾರ ಇದನ್ನು ಬಹಳ ಎಚ್ಚರದಿಂದ ಗಮನಿಸುತ್ತಿದೆ ಮತ್ತು ಅದನ್ನು ನಿರ್ವಹಿಸಲು ಸಜ್ಜಾಗಿದೆ ಎಂದು ಸಚಿವರು ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaಬೆಂಗಳೂರುಸಚಿವ ಡಾ. ಕೆ ಸುಧಾಕರ್
Previous Post

ವಿಶ್ವಾಸ, ಶ್ರದ್ದೆಯಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

Next Post

ಭದ್ರಾವತಿಯ ಖ್ಯಾತ, ಹಿರಿಯ ಆಡಿಟರ್ ಶ್ರೀಪಾದ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯ ಖ್ಯಾತ, ಹಿರಿಯ ಆಡಿಟರ್ ಶ್ರೀಪಾದ್ ವಿಧಿವಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!