Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಚಾಮರಾಜಪೇಟೆಯ ಅವಿಚ್ಛಿನ್ನ ಪರಂಪರಾ ಕೂಡ್ಲಿ ಶೃಂಗೇರಿ ಮಠಕ್ಕೆ ಪೀಠಾಧಿಪತಿ ನೇಮಕ

ವೇದವಿದ್ವಾನ್ ಪಂಡಿತ ಜನಾರ್ಧನ ಶಾಸ್ತ್ರಿ ಜೋಶಿ ಶ್ರೀಮಠದ ಮುಂದಿನ ಪೀಠಾಧಿಪತಿ...

July 5, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಅದ್ವೈತ ಸಿದ್ಧಾಂತ ಪ್ರತಿಪಾದಕ ಶಂಕರ ಭಗವತ್ಪಾದರ ತತ್ವ ಸಿದ್ಧಾಂತ, ಸಂದೇಶಗಳನ್ನು ಇಡೀ ಮನುಕುಲಕ್ಕೆ ಪ್ರಚುರಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಶತಮಾನಗಳ ಇತಿಹಾಸವುಳ್ಳ ಚಾಮರಾಜಪೇಟೆಯಲ್ಲಿರುವ ಅವಿಚ್ಛಿನ್ನ ಪರಂಪರಾ ಶ್ರೀ ಕೂಡ್ಲಿ-ಶೃಂಗೇರಿ ಮಠಕ್ಕೆ ಬೃಹ್ಮೀಭೂತ ಶ್ರೀ ವಿದ್ಯಾಭಿನವ ಶಂಕರ ಭಾರತಿ ಅವರ ಲಿಖಿತ ಅಧಿಕೃತ ಆದೇಶ ಹಾಗೂ ಅಪೇಕ್ಷೆಯಂತೆ ಭಾರತದಾದ್ಯಂತ ಮನ್ನಣೆ ಪಡೆದಿರುವ ವೇದ, ಉಪನಿಷತ್ತು ಹಾಗೂ ಸಂಸ್ಕøತ ಭಾಷಾ ಬೆಳವಣಿಗೆಗೆ ಅಪಾರ ಸೇವೆ ಸಲ್ಲಿಸಿರುವ ಪಂಡಿತ ಪ್ರಕಾಂಡ ಬ್ರಹ್ಮಶ್ರೀ ಭಾಲಚಂದ್ರ ಶಾಸ್ತ್ರಿಗಳ ಪೌತ್ರರಾಗಿರುವ ಯುವ ಸಂಸ್ಕøತ ವಿದ್ವಾಂಸ ಹಾಗೂ ವೇದವಿದ್ವಾನ್ ಪಂಡಿತ ಜನಾರ್ಧನ ಶಾಸ್ತ್ರಿ ಜೋಶಿಯವರನ್ನು ಶ್ರೀಮಠದ ಮುಂದಿನ ಪೀಠಾಧಿಪತಿಗಳನ್ನಾಗಿ ಇಂದು ನಡೆದ ಶ್ರೀಮಠದ ಭಕ್ತರ ಹಾಗೂ ಆಡಳಿತ ಮಂಡಳಿಯ ಸಭೆಯಲ್ಲಿ ಸರ್ವಾನುಮತದಿಂದ ನೇಮಕ ಮಾಡಲಾಗಿದೆ.

ಶ್ರೀಮಠದ ಪ್ರಾಂಗಣದಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಮಠದ ಹಲವಾರು ಭಕ್ತರ ಹಾಗೂ ಆಡಳಿತ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇಂದಿನಿಂದಲೇ ಶ್ರೀಮಠದ ಎಲ್ಲ ವ್ಯವಹಾರ ನಿರ್ವಹಣೆ ಹಾಗೂ ಶ್ರೀಮಠದ ಧಾರ್ಮಿಕ ಕೈಂಕರ್ಯಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.
ಮಹಾನಗರ ಪಾಲಿಕೆಯ ಅಧಿಕೃತ ಅನುಮತಿಯೊಂದಿಗೆ ಕೋವಿಡ್‍ನ ಎಲ್ಲ ನಿಯಮಾವಳಿಗಳನ್ನು ಪರಿಪಾಲಿಸಿ ನಡೆಸಲಾದ ಸಭೆ, ವೇದ, ಘೋಷಗಳೊಂದಿಗೆ ಆರಂಭವಾಯಿತು. ಆಡಳಿತ ಮಂಡಳಿಯ ಅಧ್ಯಕ್ಷ ರವಿ ದೇಶಪಾಂಡೆ, ಪೂಜ್ಯ ಶ್ರೀಗಳ ಬ್ರಹ್ಮೈಕ್ಯದ ನಂತರ ನಡೆದ ಎಲ್ಲ ವಿದ್ಯಮಾನಗಳನ್ನು ಸಭೆಯ ಮುಂದಿಟ್ಟರು. ಅಲ್ಲದೇ ನೂತನ ಪೀಠಾಧಿಪತಿಗಳ ನೇಮಕ ಕುರಿತಂತೆ ಪ್ರಸ್ತಾವನೆ ಮಂಡಿಸಿದರು.

ಈ ಸಂದರ್ಭದಲ್ಲಿ ಹಿಂದಿನ ಶ್ರೀಗಳು ಒಂದು ವರ್ಷದ ಹಿಂದೆಯೇ ಮುಂದಿನ ಪೀಠಾಧಿಪತಿ ನೇಮಕ ಕುರಿತು ಸಿದ್ಧಪಡಿಸಿದ್ದ ಅಧಿಕೃತ ಪತ್ರ ಹಾಗೂ ನಿಯೋಜಿತ ಪೀಠಾಧಿಪತಿಯವರ ತಂದೆ ತಾಯಿಗೆ ಶ್ರೀಗಳೇ ಖುದ್ದಾಗಿ ಬರೆದ ಪತ್ರವನ್ನು ಸಭೆಯ ಮುಂದಿಟ್ಟರು. ಶ್ರೀಕ್ಷೇತ್ರ ಹೆಬ್ಬಳ್ಳಿಯ ಚೈತನ್ಯಾಶ್ರಮದ ಪರಮ ಪೂಜ್ಯ ದತ್ತಾವಧೂತ ಮಹಾರಾಜರೊಂದಿಗೆ ಪೂಜ್ಯ ಸ್ವಾಮಿಗಳು, ವಿದ್ವಾನ್ ಜನಾರ್ಧನ ಶಾಸ್ತ್ರಿ ಜೋಶಿಯವರೇ ಮುಂದಿನ ಪೀಠಾಧಿಪತಿ ಎಂದು ಘೋಷಿಸಿದ್ದ ದೂರವಾಣಿ ಸಂಭಾಷಣೆಯನ್ನು ಸಭೆಯಲ್ಲಿ ಪ್ರಸಾರ ಮಾಡಲಾಯಿತು.
ಪೀಠಾಧಿಪತಿ ನೇಮಕ ಕುರಿತಂತೆ ನರೇಗಲ್ಲದ ಭಕ್ತರಾದ ಸಂಜೀವ ಕುಲಕರ್ಣಿ ಹಾಗೂ ಕೋಳಿವಾಡದ ಶ್ರೀನಿವಾಸ ಕುಲಕರ್ಣಿ, ಪೂಜ್ಯ ಶ್ರೀಗಳ ಅಪೇಕ್ಷೆಯಂತೆಯೇ ಹಾಗೂ ದಾಖಲೆಯಂತೆ ಜನಾರ್ಧನ ಶಾಸ್ತ್ರಿ ಜೋಶಿಯವರನ್ನೇ ಶ್ರೀಮಠದ ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿ ಬ್ರಹ್ಮೈಕ್ಯ ಶ್ರೀಗಳ ಮಹದಾಸೆ ಈಡೇರಿಸಲು ತಾವು ಸೂಚಿಸುವುದಾಗಿ ಹೇಳಿದರು.

ಬೆಂಗಳೂರಿನ ಅಶ್ವಥನಾರಾಯಣ ಶೆಟ್ಟಿ, ರವೀಂದ್ರ ಡಂಬಳ ಹಾಗೂ ಚಂದ್ರಮೌಳಿ ಸಿಂಧಗಿ ಹಿಂದಿನ ಶ್ರೀಗಳ ಅಪೇಕ್ಷೆಯಂತೆಯೇ ಕೂಡಲೇ ಜನಾರ್ಧನ ಶಾಸ್ತ್ರಿಯವರಿಗೆ ಸಂನ್ಯಾಸ ದೀಕ್ಷೆ ಹಾಗೂ ಪೀಠಾರೋಹಣ ಕಾರ್ಯ ನಡೆಸಬೇಕು ಎಂಬ ಸೂಚಕರ ಹೇಳಿಕೆಯನ್ನು ಅನುಮೋದಿಸಿದರು.

ಅವಿಚ್ಛಿನ್ನ ಪರಂಪರಾ ಕೂಡ್ಲಿ-ಶೃಂಗೇರಿ ಮಠಕ್ಕೆ ವಿದ್ವಾನ್ ಜನಾರ್ಧನ ಶಾಸ್ತ್ರಿ ಜೋಶಿಯವರನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡುವುದಕ್ಕೆ ಸಭೆ ಸರ್ವಾನುಮತದ ನಿರ್ಣಯ ಸ್ವೀಕರಿಸಿತು. ಈ ಸಂದರ್ಭದಲ್ಲಿ ಹೆಬ್ಬಳ್ಳಿಯ ಚೈತನ್ಯಾಶ್ರಮದ ಪರಮ ಪೂಜ್ಯ ದತ್ತಾವಧೂತ ಮಹಾರಾಜರು ವ್ಹಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಪಾಲ್ಗೊಂಡು, ಹಿಂದಿನ ಶ್ರೀಗಳ ಅಪೇಕ್ಷೆಯಂತೆ ನೂತನ ಪೀಠಾಧಿಪತಿಗಳನ್ನು ನೇಮಕ ಮಾಡುವ ಶ್ರೀಮಠದ ಭಕ್ತರ ಹಾಗೂ ಆಡಳಿತ ಮಂಡಳಿಯ ಸದಸ್ಯರ ಒಕ್ಕೊರಲ ನಿರ್ಣಯಕ್ಕೆ, ಸಂತಸ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು ಸಭೆಯಲ್ಲಿ ಶ್ರೀಮಠದ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಶ್ರೀಮದ್ ಜಗದ್ಗುರು ಪಾಠಶಾಲೆಯ ಮುಖ್ಯಸ್ಥರಾದ ಪಂಡಿತ ರಾಜೇಶ್ವರ ಶಾಸ್ತ್ರಿ ಜೋಶಿ, ಪಂಡಿತರಾದ ನಾಗೇಶ ಶಾಸ್ತ್ರಿ, ಡಾ. ವೇಣಿ ಮಾಧವ ಶಾಸ್ತ್ರಿ, ನಾರಾಯಣ ಜೋಯಿಸ್, ಶ್ರೀಧರ ಇನಾಮದಾರ, ಶ್ರೀಮಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಮಹೇಶ ವಾಳ್ವೇಕರ, ಕಾರ್ಯದರ್ಶಿ ಅಶ್ವಥ ನಾರಾಯಣ ಕುಮಾರ, ನಿನಾದ ಕಾಶಿಕರ, ನವನೀತ ಜೋಶಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಶ್ರೀ ಪ್ರಕಾಶ ನಾಡಿಗೇರ, ಹಾಗೂ ರಮಾದೇವಿ ಜೋಶಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಶ್ರೀಮಠದ ಭಕ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಅಶ್ವಥನಾರಾಯಣ ಕುಮಾರ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBBMPChamarajapete Koodli Shringere MuttKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಚಾಮರಾಜಪೇಟೆ ಕೂಡ್ಲಿ ಶೃಂಗೇರಿ ಮಠಬೆಂಗಳೂರುಬೆಂಗಳೂರು ಮಹಾನಗರ ಪಾಲಿಕೆ
Previous Post

ಶಾಲಾ ದಾಖಲಾತಿಗೆ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಾತಿ ಮಾಡದಿರಿ: ಡಿಡಿಪಿಐ

Next Post

ಬೇರೆ-ಬೇರೆ ಮನೆಯ ಮದುವೆ ಸಂಬಂಧ: ಮಂಡ್ಯದಲ್ಲಿ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೇರೆ-ಬೇರೆ ಮನೆಯ ಮದುವೆ ಸಂಬಂಧ: ಮಂಡ್ಯದಲ್ಲಿ ಅವಳಿ ಸಹೋದರಿಯರು ಆತ್ಮಹತ್ಯೆಗೆ ಶರಣು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!