ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೊಲ್ಲೂರು ಮೂಕಾಂಬಿಕಾ ದೇವಾಲಯದ Kolluru Mookaambika Temple ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಪಟ್ಟಂತೆ ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ High Court ಆದೇಶ ನೀಡಿದೆ.
ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಿಸಲು ಭೂಸ್ವಾಧೀನಕ್ಕೆ ಸೂಚಿಸಲಾಗಿದೆ. ಕೊಲ್ಲೂರಿನ ಗುರುಪ್ರಸಾದ್ ಎಂಬುವರು ಇದನ್ನು ಪ್ರಶ್ನಿಸಿ ಪಿಐಎಲ್ ಅರ್ಜಿ ಸಲ್ಲಿಸಿದ್ದ ಹಿನ್ನೆಲೆ ಸಿಜೆ ಪಿ.ಎಸ್. ದಿನೇಶ್ ಕುಮಾರ್, ನ್ಯಾ. ಟಿ.ಜಿ. ಶಿವಶಂಕರೇಗೌಡರಿದ್ದ ಪೀಠ ವಿಚಾರಣೆಗೆ ಕೈಗೆತ್ತಿಕೊಂಡು ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ.
Also read: ಇವರಿಗೆ ಮಾತ್ರ ನನ್ನ ಪಕ್ಷದ ಬೆಂಬಲ: ನಟ ಕಮಲ್ ಹಾಸನ್
ಯೋಜನೆಯ ಪ್ರಕಾರ, ಕಾಮಗಾರಿ ನಡೆದರೆ ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು 15 ಸಾವಿರ ವಾಹನಗಳು ಹಾದುಹೋಗಲಿದ್ದು, ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯವಿದೆ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post