No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಡಿ.1ರಂದು ಅಭಿಜಾತ ಕಲಾವಿದೆ ಶ್ರೀನಿಧಿ ಹೆಗಡೆ ರಂಗಪ್ರವೇಶ

ವಿದುಷಿ ಸುಪರ್ಣಾ ವೆಂಕಟೇಶ್ ಶಿಷ್ಯೆ | ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 30, 2024
in ಬೆಂಗಳೂರು ನಗರ
0
ಬೆಂಗಳೂರು | ಡಿ.1ರಂದು ಅಭಿಜಾತ ಕಲಾವಿದೆ ಶ್ರೀನಿಧಿ ಹೆಗಡೆ ರಂಗಪ್ರವೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಖ್ಯಾತ ಕಲಾವಿದೆ ಕರ್ನಾಟಕ ಕಲಾ ಡಾ. ಸುಪರ್ಣಾ ವೆಂಕಟೇಶ್ ಅವರ ಹೆಮ್ಮೆಯ ಶಿಷ್ಯೆ ಶ್ರೀನಿಧಿ ಹೆಗಡೆ ಅವರು ಡಿ.
1ರಂದು ಭರತನಾಟ್ಯ ರಂಗ ಪ್ರವೇಶಕ್ಕೆ ಅಣಿಯಾಗಿದ್ದಾರೆ.

ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಸಂಸ್ಥೆ ನಗರದ ವೈಯಾಳಿ ಕಾವಲಿನಲ್ಲಿರುವ ತೆಲುಗು ವಿಜ್ಞಾನ ಸಮಿತಿಯ ಶ್ರೀ ಕೃಷ್ಣದೇವರಾಯ ರಂಗಮಂದಿರದಲ್ಲಿ ಭಾನುವಾರ ಸಂಜೆ 5ಕ್ಕೆ ಶ್ರೀನಿಧಿ ಹೆಗಡೆ ರಂಗಾರೋಹಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದೆ, ಕರ್ನಾಟಕ ಕಲಾಶ್ರೀ ಸುನಂದಾದೇವಿ, ಪ್ರಖ್ಯಾತರಂಗ ಕಲಾವಿದ ಪ್ರಸಾದ್ , ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಡೀನ್ ಪಿ. ವಿನಯ್ , ತಾಂತ್ರಿಕ ನಿರ್ದೇಶಕ ಸಾಯಿ ವೆಂಕಟೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಡಾ. ಮಧುರ ಹೆಗಡೆ ಮತ್ತು ಗಂಗಾಧರ ಹೆಗಡೆ ಉಪಸ್ಥಿತರಿರಲಿದ್ದಾರೆ.

ಬಹುಮುಖಿ ಕಲಾವಿದೆ:

ವೃತ್ತಿಯಲ್ಲಿ ಡ್ರಗ್ ಅನಾಲಿಸ್ಟ್ ಆಗಿರುವ ಶ್ರೀನಿಧಿ ಬಹುಮುಖ ಪ್ರತಿಭೆಯ ಅಭಿಜಾತ ಕಲಾವಿದೆ. ಕುಟುಂಬದ ಸುಸಂಸ್ಕೃತ ಪರಿಸರದಲ್ಲಿ ಬೆಳೆದ ಈ ವಿದ್ಯಾರ್ಥಿನಿ, ಗುರು ಸುಪರ್ಣಾ ಅವರಲ್ಲಿ ಕಳೆದ ಒಂದು ದಶಕದಿಂದ ಭರತನಾಟ್ಯ ಅಭ್ಯಾಸ ಮಾಡಿ, ನೃತ್ಯದ ಪಟ್ಟುಗಳನ್ನು ಸಮರ್ಥವಾಗಿ ಕರಗತ ಮಾಡಿಕೊಂಡಿದ್ದಾರೆ. ಜೂನಿಯರ್ ಮತ್ತು ಸೀನಿಯರ್ ಭರತನಾಟ್ಯ ಪರೀಕ್ಷೆಗಳನ್ನು ಅತ್ಯುನ್ನತ ಶ್ರೇಣಿಯಲ್ಲಿ ಪೂರ್ಣಗೊಳಿಸಿರುವ ಶ್ರೀನಿಧಿ, ಅಖಿಲ ಭಾರತೀಯ ಗಂಧರ್ವ ಮಹಾವಿದ್ಯಾಲಯದ ಕಥಕ್ ಮತ್ತು ಹಿಂದೂಸ್ತಾನಿ ಸಂಗೀತ ಪರೀಕ್ಷೆಯ
ಮೂರು ಹಂತಗಳನ್ನು ಅತ್ಯುತ್ತಮ ಅಂಕದೊಂದಿಗೆ ಪೂರ್ಣಗೊಳಿಸಿರುವುದು ವಿಶೇಷ.
ಹಲವು ಬಹುಮಾನ:

ಅಂತರ ಕಾಲೇಜು ಸಂಗೀತ ಮತ್ತು ನೃತ್ಯ ಸ್ಪರ್ಧೆಗಳಲ್ಲಿ ಹತ್ತಾರು ಬಹುಮಾನ ಪಡೆದಿರುವ ಈ ಪ್ರತಿಭಾನ್ವಿತೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಕಲಾಪ್ರದರ್ಶನ ಮಾಡುವ ಯೋಗವೂ ದೊರಕಿರುವುದು ಗಮನಾರ್ಹ ಸಂಗತಿ.

ಕಲಾ ಪ್ರಸ್ತುತಿ:

ಸಾಯಿ ನಿತ್ಯೋತ್ಸವ, ಬಿಎಂಐ ಟೈಟಾನ್ ಪಂದ್ಯಾವಳಿ, ಇಸ್ಕಾನ್ ಬ್ರಹ್ಮರಥೋತ್ಸವ, ಗುರುವಾಯೂರು ಮತ್ತು ಸಾಯಿ ದೇಗುಲಗಳಲ್ಲಿ ಕಲಾ ಪ್ರದರ್ಶನ , ಮೈಸೂರು ದಸರಾ ಯುವ ಸಂಭ್ರಮದಲ್ಲಿ ನರ್ತನ, ನಂದಿ ಬೆಟ್ಟದ ಶಿವರಾತ್ರಿ ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾ ಪ್ರೌಢಿಮೆ ಜನ ಮನ್ನಣೆ ಗಳಿಸಿವೆ. ಅನೇಕ ಕಾರ್ಪೊರೇಟ್ ವಲಯಗಳು ಸೇರಿ ದೇಶದ ಹಲವು ವೇದಿಕೆಗಳಲ್ಲಿ ಗುರುವಿನೊಂದಿಗೆ ಶ್ರೀನಿಧಿ ಹೆಜ್ಜೆ ಹಾಕಿರುವುದು ಮಹತ್ವದ ಸಂಗತಿ.
ಭರತನಾಟ್ಯದೊಂದಿಗೆ ಕಥಕ್ ನೃತ್ಯ ಪ್ರಕಾರದಲ್ಲೂ ಆಸಕ್ತಿ ಹೊಂದಿರುವ ಶ್ರೀನಿಧಿ, ಕಳೆದ ನಾಲ್ಕು ವರ್ಷಗಳಿಂದ ಕಥಕ್ ನೃತ್ಯ ಅಭ್ಯಾಸದಲ್ಲಿ ವಿಶೇಷ ಪಟ್ಟುಗಳನ್ನು ಕಲಿಯುವಲ್ಲಿ ಆಸಕ್ತಿ ತೋರಿದ್ದಾರೆ. ಬಹುಮುಖಿ ಕಲಾವಿದೆಯಾದ ಶ್ರೀನಿಧಿಗೆ ಅನೇಕ ಪ್ರಶಸ್ತಿ- ಪುರಸ್ಕಾರಗಳು ಅಲಂಕರಿಸಿವೆ. ಕರ್ನಾಟಕ ರಾಜ್ಯ ಶಿಕ್ಷಕರ ಸಂಘದಿಂದ ನಾಟ್ಯಕಲಾರತ್ನ, ರಾಜ್ಯ ವಕೀಲರ ಸಂಘದಿಂದ ಇಂಡೋ ಇಂಟರ್ನ್ಯಾಷನಲ್ ಪ್ರಭ ಪ್ರಶಸ್ತಿಗೆ ಈಕೆ ಭಾಜನವಾಗಿರುವುದು ಕಲಾಸಕ್ತಿಗೆ ಸಾವಿರಪಟ್ಟು ಚೈತನ್ಯ ನೀಡಿವೆ.

ಗುರು ಸುಪರ್ಣಾ ವೆಂಕಟೇಶ್, ಕಲಾ ಪ್ರೇಮಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಕ ಸಾಯಿ ವೆಂಕಟೇಶ್ ಅವರ ಅನಂತ ಅಭಿಮಾನ, ವಿಶ್ವಾಸ ಮತ್ತು ಶಿಷ್ಯ ವಾತ್ಸಲ್ಯದ ಪ್ರತೀಕವಾಗಿ ಕಲಾ ಸೇವೆಯಲ್ಲಿ ಶ್ರೀ ನಿಧಿ ಭರವಸೆಯ ಹೆಜ್ಜೆ ಇಡುತ್ತ ಇದ್ದಾರೆ. ತಾಯಿ ಡಾ. ಮಧುರಾ ಹೆಗಡೆ ಮತ್ತು ತಂದೆ ಗಂಗಾಧರ ಹೆಗಡೆಯವರು ನಿರಂತರವಾದ ಪ್ರೋತ್ಸಾಹವನ್ನು ನೀಡಿ ಮಗಳಿಗೆ ಕಲಾಕ್ಷೇತ್ರದ ಮೈಲಿಗಲ್ಲುಗಳನ್ನು ಸಾಧಿಸಲು ಪ್ರೇರಕ ಮತ್ತು ಪೂರಕವಾಗಿರುವುದು ಬಹಳ ವಿಶೇಷ.

ಹಿಮ್ಮೇಳ:

ಶ್ರೀನಿಧಿ ಹೆಗಡೆಯವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮಕ್ಕೆ ರಂಗು ಏರಿಸಲು ನಟವಾಂಗದಲ್ಲಿ ಗುರು ಡಾ. ಸುಪರ್ಣಾ, ಗಾಯನದಲ್ಲಿ ನಂದಕುಮಾರ್ ಉನ್ನಿ ಕೃಷ್ಣನ್, ಮೃದಂಗದಲ್ಲಿ ಶ್ರೀಹರಿ , ವೀಣೆಯಲ್ಲಿ ಆರ್. ಪಿ. ಪ್ರಶಾಂತ್, ರಿದಂ ಪ್ಯಾಡ್ ನಲ್ಲಿ ಕಾರ್ತಿಕ್ ವಿದ್ಯಾರ್ಥಿ ಸಹಕಾರ ನೀಡಲು ಸಿದ್ಧರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಗುರುವಿನಲ್ಲಿ ಜನನಿಯನ್ನು ಕಂಡ ಕಲಾವಿದೆ | ಡಿ.1ರಂದು ಭರವಸೆಯ ನೃತ್ಯತಾರೆ ಅಶ್ವಿನಿ ಭರತನಾಟ್ಯ ರಂಗಪ್ರವೇಶ

Next Post

ಡಿ. 2-20 | ಗೀತಾ ಜಯಂತಿ ಪ್ರಯುಕ್ತ ಉತ್ತರಾದಿ ಮಠದಲ್ಲಿ “ಗೀತಾ ಜ್ಞಾನ ಯಜ್ಞ”

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುಜರಾತ್: 6 ರಿಂದ 12ನೇ ತರಗತಿ ಪಠ್ಯದಲ್ಲಿ ಭಗವದ್ಗೀತೆ ಪರಿಚಯ

ಡಿ. 2-20 | ಗೀತಾ ಜಯಂತಿ ಪ್ರಯುಕ್ತ ಉತ್ತರಾದಿ ಮಠದಲ್ಲಿ "ಗೀತಾ ಜ್ಞಾನ ಯಜ್ಞ"

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

June 2, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

June 2, 2026
ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

ಕ್ರೈಸ್ಟ್ ಕಿಂಗ್: ಮಕ್ಕಳಿಗೆ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲೆ ಪ್ರಾರಂಭ

June 2, 2026
Mysore – Shivamogga Express Big Update on this Date | Must Read

ಈ ದಿನಗಳು ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ರದ್ದು, ತಾಳಗುಪ್ಪ, ತುಮಕೂರು ಸೇರಿ 10 ರೈಲುಗಳ ಬಿಗ್ ಅಪ್ಡೇಟ್

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL