ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್ವುಡ್ ನಟ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈಗ್ಗೆ ಕೆಲವು ಸಮಯದ ಹಿಂದೆ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದರೂ, ಅಧಿಕೃತ ಮೂಲಗಳು ಖಚಿತಪಡಿಸಿಲ್ಲ.
ಭಜರಂಗಿ 2 ಚಿತ್ರ ವೀಕ್ಷಿಸುತ್ತಿದ್ದ ಶಿವರಾಜ್ ಕುಮಾರ್ ಕುಟುಂಬಸ್ಥರು ಹಾಗೂ ಡಾ.ರಾಜ್ ಕುಟುಂಬಸ್ಥರು ವಿಷಯ ತಿಳಿದಾಕ್ಷಣ ಅರ್ಧಕ್ಕೆ ನಿಲ್ಲಿಸಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಇನ್ನು, ವಿಕ್ರಂ ಆಸ್ಪತ್ರೆಯ ಸುತ್ತಲೂ ಹಾಗೂ ಅದಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಬ್ಯಾರಿಕೇಟ್ ಹಾಕಿ ಬಂದ್ ಮಾಡಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಆಸ್ಪತ್ರೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿದ್ದು, ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.
ವಿಷಯ ತಿಳಿದಾಕ್ಷಣ ಕ್ರೇಜಿಸ್ಟಾರ್ ರವಿಚಂದ್ರನ್ ಸೇರಿದಂತೆ ಚಿತ್ರರಂಗ ಗಣ್ಯರು, ನಟ ನಟಿಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದು, ಆನಂತರವಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post