ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ನಾಟಕ ಅಕಾಡೆಮಿ ಘೋಷಿಸಿರುವ ವಾರ್ಷಿಕ ಪ್ರಶಸ್ತಿಯನ್ನು ಖ್ಯಾತ ನಟ ಪ್ರಕಾಶ್ ರಾಜ್ #Prakash Raj ನಿರಾಕರಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ನಾನು ಈಗಷ್ಟೇ ರಂಗಭೂಮಿಗೆ ಮರಳಿ ಬಂದಿದ್ದೇನೆ. ಮಾಡಬೇಕಾದ ಕೆಲಸ ಬೆಟ್ಟದಷ್ಟಿದೆ. ನನಗಿಂತಲೂ ಅರ್ಹರೂ ರಂಗಭೂಮಿಯಲ್ಲಿರುವುದರಿಂದ, ಈ ಪುರಸ್ಕಾರ ಸ್ವೀಕರಿಸಲು ಮನಃಸಾಕ್ಷಿ ಒಪ್ಪುತ್ತಿಲ್ಲ. ಕ್ಷಮಿಸಿ, ಅಭಿನಂಧಿಸಿ ಸಹೃದಯರಿಗೆ ಧನ್ಯವಾದಗಳು ಎಂದಿದ್ದಾರೆ.
Also read: ಅಬ್ಬಬ್ಬಾ! ಒಂದೇ ದಿನದಲ್ಲಿ ಬೆಂಗಳೂರು ಮೆಟ್ರೋದಲ್ಲಿ ಸಂಚರಿಸಿದ ಪ್ರಯಾಣಿಕರ ಸಂಖ್ಯೆ ಎಷ್ಟು ಗೊತ್ತಾ?
ಪ್ರಕಾಶ್ ರಾಜ್ ಅವರ ಈ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ತನಗಿಂತಲೂ ಅರ್ಹರಿಗೆ ಮೊದಲು ಈ ಪ್ರಶಸ್ತಿ ಸಲ್ಲಬೇಕು ಅನ್ನುವ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದಿದ್ದಾರೆ.
ಪ್ರಕಾಶ್ ರಾಜ್, ಹಿರಿಯ ನಟಿ ಉಮಾಶ್ರೀ, ಅಚ್ಯುತ್ ಕುಮಾರ್ ಸೇರಿದಂತೆ 93 ಗಣ್ಯರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post