No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆರೋಗ್ಯ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ತರಲು ಮುನ್ನೆಚ್ಚರಿಕೆ ಕ್ರಮ ಅವಶ್ಯ: ಸಚಿವ ಸುಧಾಕರ್‌

kalpa News by kalpa News
December 17, 2022
in ಬೆಂಗಳೂರು ನಗರ
0
ಆರೋಗ್ಯ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ತರಲು ಮುನ್ನೆಚ್ಚರಿಕೆ ಕ್ರಮ ಅವಶ್ಯ: ಸಚಿವ ಸುಧಾಕರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಆರೋಗ್ಯ ವ್ಯವಸ್ಥೆಯಲ್ಲಿ ಹೆಚ್ಚು ಸುಧಾರಣೆ ತರಲು ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿದೆ. ಇದಕ್ಕಾಗಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಇದರ ಜೊತೆಗೆ ಅಸಾಂಕ್ರಾಮಿಕ ರೋಗಗಳ ಕುರಿತ ಅಂಕಿ ಅಂಶ ಸಂಗ್ರಹಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Minister Sudhakar ಹೇಳಿದರು.

KRSSDI ನಿಂದ ಆಯೋಜಿಸಿದ್ದ ಮಧುಮೇಹ ಕುರಿತ ರಾಜ್ಯ ಸಮ್ಮೇಳನದಲ್ಲಿ ಸಚಿವರು ಮಾತನಾಡಿದರು.

ಆಧುನಿಕ ತಂತ್ರಜ್ಞಾನಗಳ ಬಳಕೆಯ ಮೂಲಕ ಆಸ್ಪತ್ರೆ ಆರೈಕೆಯಿಂದ ಮನೆ ಆರೈಕೆಗೆ ಆರೋಗ್ಯ ವ್ಯವಸ್ಥೆಯನ್ನು ಬದಲಿಸಬೇಕಿದೆ. ವೈದ್ಯ ಕೇಂದ್ರಿತದಿಂದ ರೋಗಿ ಕೇಂದ್ರಿತ ವ್ಯವಸ್ಥೆಗೆ ಬದಲಾಗಬೇಕಿದೆ. ಆರೋಗ್ಯ ವ್ಯವಸ್ಥೆಯಲ್ಲಿ ಇನ್ನಷ್ಟು ಸುಧಾರಣೆ ತರಲು ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಅವಶ್ಯವಾಗಿವೆ. ಮಾಹಿತಿ, ಶಿಕ್ಷಣ, ಸಂವಹನವಿದ್ದರೆ ಜನರಿಗೆ ಹೆಚ್ಚು ಉಪಯೋಗವಾಗುತ್ತದೆ. ಆರೋಗ್ಯದಲ್ಲಿ ಕರ್ನಾಟಕ ಪ್ರಗತಿ ಸಾಧಿಸಿದರೂ, ಮಾತೃ ಮರಣ, ಶಿಶು ಮರಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಅರಿವು ಕಾರ್ಯಕ್ರಮ ಅಗತ್ಯ ಎಂದರು.
ರಾಜ್ಯದಲ್ಲಿ 8 ಸಾವಿರಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆ ಹೆಚ್ಚಿಸಲಾಗಿದೆ. ಈ ಮೂಲಕ ಸರಿಯಾದ ದತ್ತಾಂಶ ಸಂಗ್ರಹಿಸಲಾಗುತ್ತಿದೆ. ವೈದ್ಯರು ಕೂಡ ಸರಿಯಾದ ಅಂಕಿ ಅಂಶಗಳ ಸಂಗ್ರಹಕ್ಕೆ ಸಹಕಾರ ನೀಡಬೇಕು. ವ್ಯಾಯಾಮ, ವಾಕಿಂಗ್‌ ಮೊದಲಾದ ಚಟುವಟಿಕೆಗಳು ಎಷ್ಟು ಅಗತ್ಯ ಎಂಬುದು ಅನೇಕರಿಗೆ ಅರಿವಿಲ್ಲ. ಇದರಿಂದ ಮಧುಮೇಹ ಹೆಚ್ಚಾಗುತ್ತಿದೆ ಎಂದರು.

Also read: ಕಾರು-ಲಾರಿ ಮುಖಾಮುಖಿ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ

ನಿದ್ದೆಯಲ್ಲಿ ವ್ಯತ್ಯಾಸ, ನಿಯಮಿತ ವ್ಯಾಯಾಮ ಹಾಗೂ ಉತ್ತಮ ಆಹಾರ ಪದ್ಧತಿ ಇಲ್ಲದಿದ್ದರೆ, ಮಧುಮೇಹ ಉಂಟಾಗುತ್ತದೆ. ಭಾರತ ಈಗ ಮಧುಮೇಹಿಗಳ ಕೇಂದ್ರವಾಗಿರುವುದು ಬಹಳ ಬೇಸರದ ಸಂಗತಿ. ಈಗಿನ ಕಾಲದಲ್ಲಿ ಆಹಾರ ಪದ್ಧತಿಯಲ್ಲಿ ಬಹಳ ಬದಲಾವಣೆ ಉಂಟಾಗಿದೆ. ಅಭಿವೃದ್ಧಿ ಉತ್ತಮವಾಗಿ ಆಗುತ್ತಿದ್ದರೂ, ಆರೋಗ್ಯ ದೃಷ್ಟಿಯಿಂದ ಇದನ್ನು ನೋಡಿದರೆ ನಾವು ಹಿಮ್ಮುಖವಾಗಿ ಚಲಿಸುತ್ತಿದ್ದೇವೆ ಎಂದೆನಿಸುತ್ತದೆ ಎಂದರು.
ಗರಿಷ್ಠ ವಯೋಮಾನ ಈಗ 60 ವರ್ಷಕ್ಕಿಂತ ಹೆಚ್ಚಿರುವುದು ಆರೋಗ್ಯ ಮೂಲಸೌಕರ್ಯದಲ್ಲಿ ಉಂಟಾದ ಪ್ರಗತಿಯನ್ನು ತೋರಿಸುತ್ತದೆ. ಆದರೆ ಎಷ್ಟು ದೀರ್ಘ ಬದುಕಿದ್ದೇವೆ ಎನ್ನುವುದಕ್ಕಿಂತ ಎಷ್ಟು ಉತ್ತಮವಾಗಿ ಬದುಕಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ. 10 ವರ್ಷಕ್ಕೂ ಅಧಿಕ ಕಾಲ ಡಯಾಲಿಸಿಸ್‌ ಮಾಡಿಕೊಂಡೇ ಬದುಕಿದರೆ ಅದರಿಂದ ಏನು ಲಾಭ ಎಂದು ಚಿಂತಿಸಬೇಕಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ದಿನ 30 ಸಾವಿರ ಇದ್ದ ಪ್ರಕ್ರಿಯೆಯನ್ನು 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಖಾಸಗಿಯೂ ಸೇರಿದರೆ 1 ಲಕ್ಷಕ್ಕೂ ಅಧಿಕ ಪ್ರಕ್ರಿಯೆ ನಡೆಯುತ್ತಿದೆ ಎನ್ನಬಹುದು. ಇದು ಎಚ್ಚರಿಕೆಯ ಸಂಖ್ಯೆಯಾಗಿದೆ. ಈ ಎಲ್ಲಾ ಕಾರಣಗಳಿಂದ ಅಸಾಂಕ್ರಾಮಿಕ ರೋಗಗಳ ನಿರ್ವಹಣೆಗೆ ಆದ್ಯತೆ ನೀಡಲಾಗಿದೆ ಎಂದರು.

ಈ ಸಮ್ಮೇಳನದಲ್ಲಿ ಮಧುಮೇಹದ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸರ್ಕಾರಕ್ಕೆ ಸಲಹೆ ನೀಡಬಹುದು. ಇದರಿಂದ ಕಾರ್ಯಕ್ರಮಗಳನ್ನು ಜಾರಿ ಮಾಡಲು ನೆರವಾಗುತ್ತದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaಬೆಂಗಳೂರುಸಚಿವ ಡಾ. ಕೆ ಸುಧಾಕರ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಓರ್ವನಿಗೆ ಗಂಭೀರ ಗಾಯ

Next Post

Healthcare system should move towards preventive-oriented approach: Health Minister Dr K Sudhakar

kalpa News

kalpa News

Next Post
Healthcare system should move towards preventive-oriented approach: Health Minister Dr K Sudhakar

Healthcare system should move towards preventive-oriented approach: Health Minister Dr K Sudhakar

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL