ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆರ್’ಎಸ್’ಎಸ್ #RSS ಕುರಿತಾಗಿ ಈಗಾಗಲೇ ಸಚಿವ ಪ್ರಿಯಾಂಕ ಖರ್ಗೆ #Priyanka Kharge ಬರೆದಿರುವ ಪತ್ರ ವಿವಾದವಾದ ಬೆನ್ನಲ್ಲೇ, ಅವರೇ ಮತ್ತೊಂದು ಪತ್ರ ಬರೆದಿದ್ದು, ಹೊಸ ವಿವಾದಕ್ಕೆ ನಾಂದಿ ಹಾಡಿದೆ.
ಸರ್ಕಾರಿ ಸಂಸ್ಥೆಗಳಲ್ಲಿ ಆರ್’ಎಸ್’ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸುತ್ತೊಲೆ ಹೊರಡಿಸುವಂತೆ ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಒಂದು ಪತ್ರ ವಿವಾದ ಸೃಷ್ಠಿಯಾಗಿರುವ ಬೆನ್ನಲ್ಲೇ ಮತ್ತೊಂದು ಪತ್ರ ಬರೆದಿರುವುದು ಬಿಜೆಪಿ ಹಾಗೂ ಬಲಪಂಥೀಯರ ಕಣ್ಣನ್ನು ಕೆಂಪಾಗಿಸಿದೆ.
ಏನಿದೆ ಪ್ರಿಯಾಂಕ್ ಖರ್ಗೆ ಬರೆದ 2ನೇ ಪತ್ರದಲ್ಲಿ?
ರಾಜ್ಯ ಸರ್ಕಾರಿ ನೌಕರರು ಆರ್’ಎಸ್’ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬಂದಿದೆ.
ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು, 2021 ಅಡಿ ನಿಯಮ 5(1) ಪ್ರಕಾರ, ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ ಎಂದು ವರದಿಯಾಗಿದೆ.
ಹೀಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ. ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಸಂಬAಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post