No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೂರು ತಿಂಗಳು ದಣಿವರಿಯದೇ ಕೆಲಸ ಮಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

kalpa News by kalpa News
February 16, 2023
in ಬೆಂಗಳೂರು ನಗರ
0
ಮೂರು ತಿಂಗಳು ದಣಿವರಿಯದೇ ಕೆಲಸ ಮಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮಾರ್ಚ್ 1 ರಿಂದ ಬಿಜೆಪಿ ರಥಯಾತ್ರೆ ಆರಂಭವಾಗಲಿದ್ದು, ಮೂರು ತಿಂಗಳು ಎಲ್ಲರೂ ದಣವರಿಯದೇ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಪಕ್ಷದ ಪ್ರಭಾರಿಗಳಿಗೆ ಹೇಳಿದ್ದಾರೆ.

ಇಂದು ನಗರದ ಖಾಸಗಿ ಹೋಟೇಲ್ ನಲ್ಲಿ ಬಿಜೆಪಿಯ ವಿಧಾನಸಭಾ ಕ್ಷೇತ್ರಗಳ ಪ್ರಭಾರಿಗಳ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚುನಾವಣಾ ಸಮಯದಲ್ಲಿ ಜನರನ್ನು ಸೆಳೆಯಲು ಪ್ರತಿ ಕ್ಷೇತ್ರದಲ್ಲಿ ಎಸ್ಸಿ, ಎಸ್ಟಿ, ಒಬಿಸಿ, ಮಹಿಳಾ, ಯುವಕ, ರೈತ ಮೋರ್ಚಾಗಳ ವತಿಯಿಂದ ತಾಲ್ಲೂಕು ಮಟ್ಟದ ಸಮ್ಮೇಳನ ಮಾಡಬೇಕು. ರಾಜ್ಯ ಸರ್ಕಾರದ ಯೋಜನೆಗಳನ್ನು ಕ್ಷೇತ್ರಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಮಾಡಿ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡುವಂತೆ ಸೂಚಿಸಿದರು.

ಮುಂದಿನ ಮೂರುವರೆ ತಿಂಗಳು ಕರ್ನಾಟಕದ ಚುನಾವಣೆಗೆ ಪ್ರಮುಖ ಪಾತ್ರ ವಹಿಸುವವರೆಲ್ಲರೂ ಒಂದೆಡೆ ಸೇರಿದ್ದೇವೆ. ಒಂದು ವಿಧಾನಸಭಾ ಕ್ಷೇತ್ರ ಗೆಲ್ಲಲು ಯಾವ ರೀತಿ ರಣನೀತಿಯನ್ನು ರೂಪಿಸಬೇಕು ಎನ್ನುವ ಗುರುತರವಾದ ಜವಾಬ್ದಾರಿ ನಿಮ್ಮ ಮೇಲಿದೆ. ನರೇಂದ್ರ ಮೋದಿಯವರ ನಾಯಕತ್ವವಿರುವ ಕೇಂದ್ರ ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಕಳೆದ 8 ವರ್ಷದಿಂದ ನೀಡುತ್ತ ಬಂದಿದೆ. ರಾಜ್ಯದಲ್ಲಿ 2019ರಲ್ಲಿ ಯಡಿಯೂರಪ್ಪನವರು ಸಿಎಂ ಆದ ಮೇಲೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಕೋವಿಡ್ ನ್ನು ಅತ್ಯಂತ ಸಮರ್ಪಕವಾಗಿ ಎದುರಿಸಿದ್ದೇವೆ. ನಾನು ಮುಖ್ಯಮಂತ್ರಿಯಾದ ಮೇಲೆ ಪ್ರವಾಹ ನಿರ್ವಹಣೆ ಮಾಡಿ. ಜನರಿಗೆ ಹಲವು ಹೊಸ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಈ ಎಲ್ಲ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸಿ ಮನದಟ್ಟು ಮಾಡುವ ಅವಶ್ಯಕತೆಯಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ರಾಜ್ಯದಲ್ಲಿ ಬೇರೆ ಪಕ್ಷಗಳು ನಕಾರಾತ್ಮಕ ಮತ ಪಡೆಯಲು ಪ್ರಯತ್ನ ಸದಾಕಾಲ ಮಾಡುತ್ತಿರುತ್ತಾರೆ. ಆದರೆ ನಾವು ಜನಪರ ಕೆಲಸ ಮಾಡಿ, ಅವರ ಜೀವನಗುಣಮಟ್ಟವನ್ನು ಎತ್ತರಕ್ಕೇರಿಸಲು ಎಲ್ಲ ಸಹಕಾರ ಮಾಡೋಣ. ಅದರ ವರದಿಯನ್ನು ಜನರ ಮುಂದೆ ಇಟ್ಟು ನಾವು ನಮ್ಮ ಪಕ್ಷಕ್ಕೆ ಮತ ಕೇಳುಬೇಕು ಎನ್ನುವುದು ನಮ್ಮ ಪಕ್ಷದ ಧೋರಣೆಯಾಗಿದೆ. ಹೀಗಾಗಿ ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದಾಗ ಕೇವಲ ಸ್ವಾರ್ಥ, ಸ್ವಜನಪಕ್ಷಪಾತ, ಭ್ರಷ್ಟಾಚಾರ, ಇನ್ನೊಬ್ಬರ ಅವಹೇಳನ ಮಾಡಿಕೊಂಡು ನಕಾರಾತ್ಮಕವಾಗಿ ಮತಗಳನ್ನು ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತವೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಐದು ವರ್ಷ ಅಧಿಕಾರ ನಡೆಸಿತು. ಆದರೆ ಆ ಸಮಯದಲ್ಲಿ ರಾಜ್ಯ ಎಲ್ಲ ರಂಗದಲ್ಲಿಯೂ ಹಿಂದುಳಿದಿತ್ತು. ಕೇಂದ್ರ ಸರ್ಕಾರ ಕೊಟ್ಟಿರುವ ಕಾರ್ಯಕ್ರಮಗಳಿಗೆ ತಮ್ಮ ಹೆಸರನ್ನು ಕೊಟ್ಟು ಜನರಿಗೆ ನಿರಂತರವಾಗಿ ದಾರಿ ತಪ್ಪಿಸುವ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ಅನ್ನಭಾಗ್ಯ ಯೋಜನೆಗೆ 30 ರೂ. ಕೇಂದ್ರದಿಂದ ಪಡೆದುಕೊಂಡು, ಕೇವಲ 3 ರೂ ಕೊಟ್ಟು ಇಡೀ ಪಡಿತರ ವಿತರಣೆಯನ್ನು ನಾವೇ ಕೊಟ್ಟಿದ್ದೇವೆ ಎಂದು ಹೇಳಿಕೊಂಡರು. ಕಾಂಗ್ರೆಸ್ ನವರು ಅಧಿಕಾರಕ್ಕೆ ಬರುವ ಮುಂಚೆಯೇ 30 ಕೆ.ಜಿ ಅಕ್ಕಿಯನ್ನು ಒಂದು ಕುಟುಂಬಕ್ಕೆ ನಮ್ಮ ಸರ್ಕಾರದ ಸಮಯದಲ್ಲಿ ಕೆ.ಜಿ ಮೂರು ರೂ.ಗೆ ನೀಡುತ್ತಿದ್ದರು ಎಂದರು.
ಕರ್ನಾಟಕದಲ್ಲಿ ಯಾವುದಾದರೂ ಸರ್ಕಾರ ದಾಖಲೆಯ ಭ್ರಷ್ಟಾಚಾರ ಮಾಡಿದ್ದರೆ, ಅದು ಕಾಂಗ್ರೆಸ್ ಸರ್ಕಾರ. ಅಕ್ಕಿಯಲ್ಲಿ, ಹಾಸಿಗೆ-ದಿಂಬು, ಬಿಡಿಎ, ಸಣ್ಣ ನೀರಾವರಿ, ಬೃಹತ್ ನೀರಾವರಿ, ಸೋಲಾರ್ ಸೇರಿದಂತೆ ಎಲ್ಲದರಲ್ಲೂ ಭ್ರಷ್ಟಾಚಾರ ನಡೆಸಿದರು. ಭ್ರಷ್ಟಾಚಾರ ಮುಚ್ಚಿ ಹಾಕಲು ಸಂವಿಧಾನಬದ್ಧವಾದ ಲೋಕಾಯುಕ್ತವನ್ನು ಬಂದ್ ಮಾಡಿ ಎಸಿಬಿ ರಚನೆ ಮಾಡಿದರು. ಅನೇಕ ಪ್ರಕರಣಗಳನ್ನು ಮುಚ್ಚಿ ಹಾಕುವ ಕೆಲಸ ಮಾಡಿದ್ದಾರೆ. ನ್ಯಾಯಾಲಯದ ಆದೇಶದ ಮೇಲೆ ನಾವು ಮತ್ತೆ ಲೋಕಾಯುಕ್ತವನ್ನು ಪ್ರಾರಂಭ ಮಾಡಿದ್ದೇವೆ. ಅವರ ಮೇಲಿನ ಆರೋಪಗಳು ಒಂದೊಂದಾಗಿ ಲೋಕಾಯುಕ್ತಕ್ಕೆ ಹೋಗುತ್ತಿದ್ದಾವೆ. ಕಾಂಗ್ರೆಸ್ ನವರು ತಮ್ಮ ಮೇಲಿನ ಆರೋಪಗಳಿಗೆ ಉತ್ತರ ಕೊಡಬೇಕು. ದಾಖಲೆ ಸಮೇತವಾಗಿ ದೂರುಗಳು ದಾಖಲಾಗಿದೆ. ಅದರ ಬಗ್ಗೆ ಕಾಂಗ್ರೆಸ್ ನವರು ಮಾತನಾಡುವುದಿಲ್ಲ. ಲೋಕಾಯುಕ್ತದಿಂದ ತನಿಖೆಯಾದರೆ ಅವರ ಕರ್ಮಕಾಂಡ ಹೊರಗೆ ಬರುತ್ತದೆ ಎಂದು ಸುಪ್ರೀಂ ಕೊರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸುವಂತೆ ಒತ್ತಾಯ ಮಾಡುತ್ತಾರೆ. ಇದನ್ನು ನಾವು ಜನರ ಮುಂದೆ ತೆಗೆದುಕೊಂಡು ಹೋಗಬೇಕು ಎಂದರು.

Also read: ಶ್ರೀ ಧ್ಯಾನಯೋಗಿ ಶಿವನಮೂರ್ತಿ ಹಾಗೂ ಮಾನಸಮೌನ ಪಿರಮಿಡ್ ಧ್ಯಾನ ಮಂದಿರ ಲೋಕಾರ್ಪಣೆ

ನಮ್ಮ ಮೇಲಿನ ಆರೋಪಕ್ಕೆ ಯಾವುದೇ ಒಂದು ಪುರಾವೆ ಕೊಟ್ಟರೆ, ನಿಸ್ಪಕ್ಷವಾಗಿ ನಾವು ತನಿಖೆ ಮಾಡಿಸುತ್ತೇವೆ. ಭ್ರಷ್ಟಾಚಾರ ತಡೆಯಲು ಟೆಂಡರ್ ಪರಿಶೀಲನಾ ಸಮಿತಿ ರಚನೆ ಮಾಡಿದ್ದೇವೆ. ಅಲ್ಲಿ ಅದರ ಪರಿಶೀಲನೆ ಆಗುತ್ತದೆ. ಪಾರದರ್ಶಕವಾಗಿ ನಾವು ವ್ಯವಸ್ಥೆಗಳನ್ನು ನಾವು ರೂಪಿಸಿದ್ದೇವೆ. ನೀರಾವರಿ ನಿಗಮದಲ್ಲಿ ನಾವು ರಚನೆ ಮಾಡಿದ್ದ ಸಮಿತಿಗಳನ್ನು ರದ್ದು ಮಾಡಿ ಭ್ರಷ್ಟಾಚಾರಕ್ಕೆ ರಹದಾರಿ ಮಾಡಿದ್ದೀರಿ ಎಂದು ಕಾಂಗ್ರೆಸ್ ಗೆ ಸಿಎಂ ಬೊಮ್ಮಾಯಿ ಪ್ರಶ್ನೆ ಮಾಡಿದರು.

ಇದುವರೆಗೂ ಯಾವ ಪ್ರಧಾನಿಯು ಮನೆ ಮನೆಗೆ ನೀರು ಕೊಡುವ ಧೈರ್ಯ ಮಾಡಿರಲಿಲ್ಲ. ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲರ ಮನೆಗೂ ಜಲಜೀವನ್ ಮಿಷನ್ ಜಾರಿಗೆ ತಂದಿದ್ದಾರೆ. ಎಲ್ಲರ ಮನೆಗೆ ನೀರು ಕೊಡುವ ಕೆಲಸ ಮಾಡಿದ್ದೇವೆ. ಇದೊಂದು ದಾಖಲೆ, 75 ವರ್ಷದಲ್ಲಿ ಆಗದೇ ಇರುವುದನ್ನು 2 ವರ್ಷದಲ್ಲಿ ಮಾಡಿ ತೋರಿಸಿದ್ದೇವೆ. ಇದನ್ನು ಮತದಾರರ ಮನೆಗೆ ಹೊಗಿ ತಿಳಿಸುವ ಕೆಲಸ ಮಾಡಬೇಕು ಎಂದರು.

ನಮ್ಮ ರಾಜ್ಯ ಸರ್ಕಾರ ಯಡಿಯೂರಪ್ಪ ಸಿಎಂ ಆದಾಗ ರೈತರ ಪಂಪ್ ಸೆಟ್ ಗಳಿಗೆ 10 ಎಚ್ ಪಿ ವರೆಗೂ ಉಚಿತ ವಿದ್ಯುತ್ ನೀಡಿದ್ದಾರೆ. ಯಡಿಯೂರಪ್ಪನವರು ಎರಡನೆಯ ಬಾರಿಗೆ ಸಿಎಂ ಆದಾಗ ಕಿಸಾನ್ ಸಮ್ಮಾನ ಯೋಜನೆಗೆ ರಾಜ್ಯದಿಂದ 4000 ಕೊಡುವ ಕೆಲಸ ಮಾಡಿದರು. ನಾವು ಬಂದ ಮೇಲೆ ರೈತ ವಿದ್ಯಾನಿಧಿ ಯೋಜನೆ ಮಾಡಿದ್ದೇವೆ. ಈಗಾಗಲೇ 11 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಇದರ ಪ್ರಯೊಜನವಾಗಿದೆ. ಕೇವಲ ರೈತರ ಮಕ್ಕಳಿಗೆ ಮಾತ್ರವಲ್ಲ, ಕಾರ್ಮಿಕರು, ನೇಕಾರರ ಮಕ್ಕಳಿಗೂ ವಿದ್ಯಾನಿಧಿ ವಿಸ್ತರಿಸಿದ್ದೇವೆ. ದುಡಿಯುವ ವರ್ಗಕ್ಕೆ ಬಲವನ್ನು ತುಂಬಲು ಕಾಯಕ ಯೋಗಿ ಯೋಜನೆ ಮಾಡಿ, ಅವರಿಗೆ 50 ಸಾವಿರ ರೂ ನೀಡುವ ಕೆಲಸವನ್ನು ಮಾಡುತ್ತಿದ್ದೇವೆ. ಸರ್ಕಾರದ ಈ ಎಲ್ಲ ಯೋಜನೆಗಳ ಬಗ್ಗೆ ಚರ್ಚೆ ಮಾಡಿದರೆ, ಸಾಕಷ್ಟು ಜನರು ಅಭಿಮಾನಿಗಳಾಗಿ, ಕಾರ್ಯಕರ್ತರಾಗಿ ಪರಿವರ್ತನೆ ಆಗುತ್ತಾರೆ ಎಂದರು.

ಪರಿಶಿಷ್ಟ ಜಾತಿ/ ಪಂಗಡದವರ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದೇವೆ. ಸ್ವತಂತ್ರ ಬಂದ ಮೇಲೆ ಎಸ್.ಸಿ, ಎಸ್.ಟಿಗೆ ಎಲ್ಲರೂ ಜಾತಿಗಳನ್ನು ಸೇರಿಸುವ ಕೆಲಸ ಮಾಡಿದ್ದರು. ಆದರೆ ಅವರ ಮೀಸಲಾತಿ ಹೆಚ್ಚಳವನ್ನು ಕರ್ನಾಟಕದ ನಮ್ಮ ಬಿಜೆಪಿ ಸರ್ಕಾರ ದಿಟ್ಟ ಕ್ರಮವನ್ನು ನಾವು ತೆಗೆದುಕೊಂಡಿದ್ದೇವೆ. ಲಂಬಾಣಿ ಸಮುದಾಯವದರಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಮೀನುಗಾರರು, ಕುರಿಗಾಹಿಗಳಿಗೆ ದೊಡ್ಡ ಪ್ರಮಾಣದ ಸಹಾಯವನ್ನು ಮಾಡುತ್ತಿದ್ದೇವೆ ಎಂದರು.
ಭಾರತದಲ್ಲೇ ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ 2ನೇ ಸ್ಥಾನದಲ್ಲಿದೆ. ಸೋರಿಕೆ ತಡೆಗಟ್ಟಿ ನಮ್ಮ ಗುರಿಗಿಂತ 23% ಸಂಗ್ರಹ ಹೆಚ್ಚಳ ಮಾಡಿದ್ದೇವೆ. ಯಾವುದೇ ಸಮಸ್ಯೆಗೂ ಹಿಂದೇಟು ಹಾಕದೇ ಅವುಗಳನ್ನು ಎದುರಿಸಿದ್ದೇವೆ. ಬೆಳೆ ನಾಶಕ್ಕೆ ಎರಡು ಪಟ್ಟು ಪರಿಹಾರ ಕೊಟ್ಟಿದ್ದೇವೆ. ಮಳೆಯಿಂದ ಮನೆ ಬಿದ್ದರೆ 5 ಲಕ್ಷ ರೂ. ಕೊಡುತ್ತಿದ್ದೇವೆ. ಬಡವರ ಸಂಕಷ್ಟಕ್ಕೆ ನಾವು ಧಾವಿಸಿ ಹೋಗಿದ್ದೇವೆ. ಪ್ರಾಣಿಗಳಿಂದ ಮನುಷ್ಯರಿಗೆ ತೊಂದರೆ ಆದಾಗ ಪರಿಹಾರ 2 ಪಟ್ಟು ಮಾಡಿದ್ದೇವೆ. ವಯಸ್ಸಾದವರಿಗೆ ಕಣ್ಣಿನ ತಪಾಸಣೆ, ಕಿವುಡರಿಗೆ ವಿಶೇಷ ಯಂತ್ರ, ಆಸಿಡ್ ದಾಳಿಯಾದ ಮಹಿಳೆಯರಿಗೆ ಸಹಾಯಧನ ಹೆಚ್ಚಳ, ಡಯಾಲಿಸಿಸ್ ಮತ್ತು ಕಿಮೊಥೆರಪಿ ಸೈಕಲ್ ಹೆಚ್ಚಳ ಮಾಡಿದ್ದೇವೆ. ಇದೆಲ್ಲವನ್ನು ನಾವು ಲಿಖಿತ ರೂಪದಲ್ಲಿ ನೀಡುತ್ತೇನೆ. ಇದರ ಅಭಿಯಾನವನ್ನು ತಾವು ಮಾಡಬೇಕು ಎಂದರು.

ಇದು ಚುನಾವಣೆಯ ಸಮಯ, ದಣಿವರಿಯದೆ ಕೆಲಸ ಮಾಡಬೇಕು. ಮಾರ್ಚ್ 1 ರಿಂದ ನಮ್ಮ ರಥಯಾತ್ರೆ ಆರಂಭವಾಗಲಿದೆ. ಅಲ್ಲಿ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಸೇರಿಸಿ ಮತ್ತೆ ಬಿಜೆಪಿ ಸರ್ಕಾರವನ್ನು ತರುವ ಕೆಲಸ ಮಾಡಬೇಕು. ಈ ಚುನಾವಣೆಯ ಸಾರಥಿಗಳು ನೀವು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹಾಗೂ ಇತರರು ಉಪಸ್ಥಿತರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)      

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ಧ್ಯಾನಯೋಗಿ ಶಿವನಮೂರ್ತಿ ಹಾಗೂ ಮಾನಸಮೌನ ಪಿರಮಿಡ್ ಧ್ಯಾನ ಮಂದಿರ ಲೋಕಾರ್ಪಣೆ

Next Post

ನೆಹರೂ ಕ್ರೀಡಾಂಗಣದ ಅವ್ಯವಸ್ಥೆ ಹಿನ್ನೆಲೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ಭೇಟಿ, ಪರಿಶೀಲನೆ

kalpa News

kalpa News

Next Post
ನೆಹರೂ ಕ್ರೀಡಾಂಗಣದ ಅವ್ಯವಸ್ಥೆ ಹಿನ್ನೆಲೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ಭೇಟಿ, ಪರಿಶೀಲನೆ

ನೆಹರೂ ಕ್ರೀಡಾಂಗಣದ ಅವ್ಯವಸ್ಥೆ ಹಿನ್ನೆಲೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ಭೇಟಿ, ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL