Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕಾನೂನು ಅನುಷ್ಠಾನವಾಗದಿದ್ದಾಗ ಪ್ರತಿಭಟನೆ ನಡೆಯುತ್ತವೆ: ಬಸವರಾಜ ಬೊಮ್ಮಾಯಿ

December 30, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಖವಾಗಿದ್ದು. ಕನ್ನಡ ಹೋರಾಟಗಾರರಿಗೆ ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಅಭಿಪ್ರಾಯ ಪಟ್ಟಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವು. ನಾಮಪಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.
ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೇವು. ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷಗಳಾಗಿವೆ. ಕನ್ನಡ ನಾಡಿನಲ್ಲಿ ಕನ್ನಡದ ಅನುಷ್ಟಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಆದರೆ, ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಕಾನೂನು ಅನುಷ್ಠಾನ ಮಾಡದಿದ್ದರೆ ಅದು ದುರ್ದೈವ. ಕನ್ನಡ ಅನುಷ್ಠಾನ ಆಗದಿದ್ದರಿಂದ ಕನ್ನಡ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವುದಿಲ್ಲವೋ ಈ ರೀತಿಯ ಘಟನೆಗಳು ನಡೆಯುತ್ತವೆ ಎಂದು ಹೇಳಿದರು.

Also read: ಸೌತ್ ಏಷಿಯನ್ ಏರೋಬಿಕ್ಸ್ ಹಿಪ್‌ಹಾಪ್ ಸ್ಪರ್ಧೆ: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ನಾನು ಮುಖ್ಯಮಂತ್ರಿ ಇದ್ದಾಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿಕೃತಗೊಳಿಸುವ ಪ್ರಯತ್ನ ಮಾಡಿದ್ದರು. ಆದರೆ, ನಾನು ಸುವರ್ಣ ಸೌಧದ ಮುಂದೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಹಾಗೂ ಗಾಂಧಿ ಅವರ ಪ್ರತಿಮೆ ನಿಲ್ಲಿಸುವ ಕೆಲಸ ಮಾಡಿದ್ದೇನೆ ಎಂದರು.
ಕನ್ನಡ ನಿತ್ಯ ನಿರಂತರವಾಗಿರಬೇಕೆಂದರೆ ಕನ್ನಡಡಿಗರು ಜಾಗೃತರಾಗಿರಬೇಕು. ಜಗತ್ತು ಬದಲಾಗುತ್ತಿದೆ. ಸವಾಲುಗಳನ್ನ ಎದುರಿಸಲು ನಮ್ಮ ಮಕ್ಕಳನ್ನು ಸಿದ್ದಪಡಿಸಬೇಕಿದೆ. ಇಲ್ಲಿ ಐಟಿ ಬಿಟಿ ಯಾಕೆ ಅಭಿವೃದ್ಧಿಯಾಗಿದೆ ಎಂದರೆ. ಇಲ್ಲಿನ ಮಕ್ಕಳು ಜ್ಞಾನವಂತರಿದ್ದಾರೆ. ಸಾಧನೆ ಮಾಡಿದ್ದಾರೆ. ಅದೇ ಕಾರಣಕ್ಕೆ ಐಟಿ ಬಿಟಿಯವರು ಇಲ್ಲಿಗೆ ಬಂದಿದ್ದಾರೆ ಎಂದರು.

ಕುವೆಂಪು ವಿಶ್ವಮಾನವ
ಕುವೆಂಪು ಅವರು ಅಪರೂಪದ ವ್ಯಕ್ತಿತ್ವ ಒಂದು ರೀತಿಯಲ್ಲಿ ಅವರು ಯುಗಪುರುಷರು ಅಂತ ಹೇಳಲು ಬಯಸುತ್ತೇನೆ. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ.
ತಮ್ಮ ವಿಚಾರಧಾರೆಗಾಗಿ ಜಗತ್ತನ್ನು ಎದುರು ಹಾಕಿಕೊಳ್ಳುವ ಸ್ವಭಾವ ಅವರದಿತ್ತು. ಅವರು ಯಾವತ್ತೂ ಮುಲಾಜಿಗೆ ಬಿದ್ದು ಸಾಹಿತ್ಯ ರಚನೆ ಮಾಡಿಲ್ಲ. ಕರ್ನಾಟಕದ ಏಕೀಕರಣ ಆಗಬೇಕು ಎಂದು ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟ ನಡೆಯುತ್ತಿದ್ದಾಗ. ದಕ್ಷಿಣ ಭಾಗದಲ್ಲಿ ಆಕ್ಷೇಪ ವ್ಯಕ್ತವಾದಾಗ ಕನ್ನಡದ ಮನಸುಗಳು ಒಂದಾಗಬೇಕು ಎಂದು ಮೊದಲು ನಿಲುವು ತೆಗೆದುಕೊಂಡವರು ಕುವೆಂಪು ಅವರು, ಆ ಕಾಲದಲ್ಲಿ ಏಕೀಕರಣಕ್ಕೆ ಒತ್ತು ಕೊಟ್ಟವರು ಕುವೆಂಪು ಅವರು. ಕುವೆಂಪು ಅವರ ನಿಲುವನ್ನು ಎಲ್ಲರೂ ಒಪ್ಪಿಕೊಂಡರು. ಈಗ ಕನ್ನಡದ ಮನಸುಗಳು ಒಂದಾಗಿವೆ. ಒಂದಾಗುವ ಸಾಹಿತ್ಯವನ್ನೂ ರಚಿಸಿದ್ದಾರೆ. ಅದಕ್ಕಾಗಿ ಕುವೆಂಪು ಬಹಳ ಶ್ರೇಷ್ಟ. ವೈಚಾರಿಕತೆಯನ್ನು ಬಹಳ ಸರಳವಾಗಿ ಯೋಚಿಸುವ ಗುಣ ಕುವೆಂಪು ಅವರಿಗೆ ಇತ್ತು. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಕುವೆಂಪು ವಿಶ್ವ ಮಾನವರಾಗಲು ಕಾರಣವಾಯಿತು ಎಂದು ಹೇಳಿದರು.
ವೈಚಾರಿಕತೆಯಲ್ಲಿ ಅವರು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಹೀಗಾಗಿ ಈಗಲೂ ಕುವೆಂಪು ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಹಾಗೂ ಮತ್ತಿತರರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBasavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಸವರಾಜ ಬೊಮ್ಮಾಯಿಬೆಂಗಳೂರು
Previous Post

ಸೌತ್ ಏಷಿಯನ್ ಏರೋಬಿಕ್ಸ್ ಹಿಪ್‌ಹಾಪ್ ಸ್ಪರ್ಧೆ: ಜೈನ್ ಪಬ್ಲಿಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

Next Post

ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರವನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರವನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!